Homeಕರ್ನಾಟಕಕಡ್ಡಾಯ ಕನ್ನಡ ನಾಮಫಲಕ ಅಭಿಯಾನ: ಬೆಂಗಳೂರಿನಲ್ಲಿ ತೀವ್ರಗೊಂಡ ಕನ್ನಡಪರ ಕಾರ್ಯಕರ್ತರ ಹೋರಾಟ

ಕಡ್ಡಾಯ ಕನ್ನಡ ನಾಮಫಲಕ ಅಭಿಯಾನ: ಬೆಂಗಳೂರಿನಲ್ಲಿ ತೀವ್ರಗೊಂಡ ಕನ್ನಡಪರ ಕಾರ್ಯಕರ್ತರ ಹೋರಾಟ

- Advertisement -
- Advertisement -

ಸರ್ಕಾರ ಹಲವು ಬಾರಿ ಎಚ್ಚರಿಕೆ ನೀಡಿದ ನಂತರವೂ ರಾಜ್ಯದ ಹಲವು ವಾಣಿಜ್ಯ ಸಂಸ್ಥೆಗಳು ಹಾಗೂ ಉತ್ತರ ಭಾರತದ ಅಂಗಡಿ ಮಾಲೀಕರು ಕನ್ನಡ ನಾಮಫಲಕ ಅಳವಡಿಸಿಕೊಂಡಿಲ್ಲ. ನಾಮಫಲಕಗಳಲ್ಲಿ ಶೇ. 60% ರಷ್ಟು ಕನ್ನಡ ಇರಬೇಕು ಎಂಬ ಆದೇಶವನ್ನು ಬಹುತೇಕರು ಪಾಲನೆ ಮಾಡುತ್ತಿಲ್ಲ. ಅನ್ಯ ರಾಜ್ಯಗಳ ಅಂಗಡಿ ಮಾಲೀಕರು ಕನ್ನಡ ವಿರೋಧಿ ನಡೆ ವಿರೊಧಿಸಿ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಇಂದು ಹೋರಾಟಕ್ಕೆ ಧುಮುಕಿದ್ದಾರೆ.

ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಹಲವು ಸಂಘಟನೆಗಳ ಕಾರ್ಯಕರ್ತರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕಬ್ಬನ್‌ ಪಾರ್ಕ್‌ ವರೆಗೆ ಅಳವಡಿಸಿರುವ ಇಂಗ್ಲಿಷ್ ನಾಮಫಲಕಗಳನ್ನು ತೆರವುಗೊಳಿಸುವ ಕೆಲಸ ಮಾಡಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿಯೂ ಕನ್ನಡಪರ ಕಾರ್ಯಕರ್ತರು ಕಡ್ಡಾಯ ಕನ್ನಡ ನಾಮಫಲಕ ಅಭಿಯಾನ ಕೈಗೊಂಡಿದ್ದಾರೆ.

ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬುಧವಾರ ನಡೆಸಿದ ಪ್ರತಿಭಟನೆ ತೀವ್ರಗೊಂಡಿದ್ದು, ತಮ್ಮ ಸೈನ್ ಬೋರ್ಡ್‌ಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆ ಬಳಸಬೇಕೆಂದು ಒತ್ತಾಯಿಸಿ, ಖಾಸಗಿ ಹೋಟೆಲ್ ಇಂಗ್ಲಿಷ್ ನಾಮಫಲಕವನ್ನು ಧ್ವಂಸಗೊಳಿಸಿದರು.

ಬೆಂಗಳೂರಿನ ಬೀದಿಗಳಲ್ಲಿ ಅಳವಡಿಸಿದ್ದ ಇಂಗ್ಲಿಷ್ ಪೋಸ್ಟರ್‌ಗಳನ್ನು ಸಹ ಹರಿದು ಹಾಕಿದರು. 2024ರ ಫೆಬ್ರವರಿ 28ರೊಳಗೆ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಬಳಸುವಂತೆ ರಾಜಧಾನಿಯ ವಾಣಿಜ್ಯ ಸಂಸ್ಥೆಗಳಿಗೆ ಬಿಬಿಎಂಪಿ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ ತೀವ್ರಗೊಂಡಿದೆ.

ಕೂಡಲೇ ಕನ್ನಡ ಭಾಷೆಯಲ್ಲಿ ಜಾಹೀರಾತು ಫಲಕಗಳನ್ನು ಹಾಕಬೇಕು ಎಂದು ಕನ್ನಡ ಪರ ಕಾರ್ಯಕರ್ತರು ಅಂಗಡಿ ಮಾಲೀಕರಿಗೆ ಈಗಾಗಲೇ ಎಚ್ಚರಿಕೆ ನೀಡಿದ್ದರು. ಎಲ್ಲ ಸಂಸ್ಥೆಗಳು ಮತ್ತು ಅಂಗಡಿಗಳು ಫೆಬ್ರವರಿ 28 ರ ಮೊದಲು ಕಡ್ಡಾಯ ಕನ್ನಡ ನಾಮಫಲಕ ಆದೇಶವನ್ನು ಪಾಲಿಸಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

‘ಕರ್ನಾಟಕದಲ್ಲಿ ಹುಟ್ಟಿ ಬೆಳೆದವರು, ಹೊರರಾಜ್ಯದಿಂದ ಇಲ್ಲಿಗೆ ಬಂದು ಬದುಕು ಕಟ್ಟಿಕೊಂಡವರನ್ನು ನಾವು “ಕನ್ನಡಿಗ”ರೇ ಎಂದು ಭಾವಿಸಿದ್ದೇವೆ. ಕನ್ನಡ ನೆಲದಲ್ಲಿ ಕನ್ನಡಕ್ಕೇ ಮೊದಲ ಪ್ರಾಶಸ್ತ್ಯ, ಅನ್ನ ಕೊಡುವ ಈ ನೆಲದ ನಿಯಮ ಪಾಲನೆ ಮಾಡಬೇಕಿರುವುದು ಪ್ರತಿಯೊಬ್ಬರ ಕರ್ತವ್ಯ ಕೂಡ. ಕನ್ನಡವನ್ನು ಉಳಿಸಿ, ಕನ್ನಡತನವನ್ನು ಬೆಳೆಸುವ ಸಲುವಾಗಿ ಬೆಂಗಳೂರಿನ ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ.60 ಕನ್ನಡ ಅಕ್ಷರಗಳ ಬಳಕೆ ಕಡ್ಡಾಯಗೊಳಿಸಲಾಗಿದೆ. ಇದಕ್ಕೆ ಫೆಬ್ರವರಿ 28 ಕಡೆಯ ದಿನವಾಗಿದ್ದು, ನಿಯಮ ಪಾಲನೆ ಮಾಡಿ “ಹೆಮ್ಮೆಯ ಕನ್ನಡಿಗ”ರಾಗಿ’ ಎಂದು ಸಿದ್ದರಾಮಯ್ಯ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ನಗರದ ಪ್ರಮುಖ ವಾಣಿಜ್ಯ ಕೇಂದ್ರವಾದ ಚಿಕ್ಕಪೇಟೆ, ಅವಿನ್ಯೂ ರಸ್ತೆ ಹಾಗೂ ಅಕ್ಕಪಕ್ಕದ ವ್ಯಾಪಾರ ಸ್ಥಳಗಳಲ್ಲಿ ಅಂಗಡಿ ತೆರೆದಿರುವ ಉತ್ತರ ಭಾರತದವರು ಕನ್ನಡ ನಾಮಫಲಕಗಳ ಬದಲಿಗೆ ಇಂಗ್ಲಿಷ್ ಬಳಸಿದ್ದಾರೆ. ಇದನ್ನು ರಕ್ಷಣಾ ವೇದಿಕೆ ಕಾರ್ಯಕರ್ತರು ಗುರುತಿಸಿ ಈಗಾಗಲೇ ಎಚ್ಚರಿಕೆ ನೀಡಿದ್ದಾರೆ. ಇತ್ತೀಚೆಗಷ್ಟೇ ಕನ್ನಡ ಪರ ಹೋರಾಟಗಾರರನ್ನು ಭೇಟಿ ಮಾಡಿದ್ದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ‘ಫೆಬ್ರವರಿ 28ರ ಮೊದಲು ಬೆಂಗಳೂರಿನ ಎಲ್ಲಾ ವಾಣಿಜ್ಯ ಸಂಸ್ಥೆಗಳು ಕನ್ನಡದಲ್ಲಿ ಫಲಕಗಳನ್ನು ಸ್ಥಾಪಿಸುವುದನ್ನು ಖಚಿತಪಡಿಸಿಕೊಳ್ಳುತ್ತೇವೆ’ ಎಂದು ಹೇಳಿದ್ದಾರೆ.

‘ಬೆಂಗಳೂರಿನಲ್ಲಿ 1,400 ಕಿ.ಮೀ. ಮತ್ತು ಎಲ್ಲ ವಾಣಿಜ್ಯ ಸಂಸ್ಥೆಗಳನ್ನು ವಲಯವಾರು ಸಮೀಕ್ಷೆ ಮಾಡಲಾಗುವುದು. ನಾಮಫಲಕಗಳಲ್ಲಿ ಕನ್ನಡ ಬಳಸದವರಿಗೆ ನಾವು ನೋಟಿಸ್ ನೀಡುತ್ತೇವೆ’ ಎಂದು ಅವರು ಹೇಳಿದರು.

ಇದನ್ನೂ ಓದಿ; ಮಣಿಪುರದಿಂದ ಮುಂಬೈ; ‘ಭಾರತ ನ್ಯಾಯ ಯಾತ್ರೆ’ ಆರಂಭಿಸಲಿರುವ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...