ಸರ್ಕಾರ ಹಲವು ಬಾರಿ ಎಚ್ಚರಿಕೆ ನೀಡಿದ ನಂತರವೂ ರಾಜ್ಯದ ಹಲವು ವಾಣಿಜ್ಯ ಸಂಸ್ಥೆಗಳು ಹಾಗೂ ಉತ್ತರ ಭಾರತದ ಅಂಗಡಿ ಮಾಲೀಕರು ಕನ್ನಡ ನಾಮಫಲಕ ಅಳವಡಿಸಿಕೊಂಡಿಲ್ಲ. ನಾಮಫಲಕಗಳಲ್ಲಿ ಶೇ. 60% ರಷ್ಟು ಕನ್ನಡ ಇರಬೇಕು ಎಂಬ ಆದೇಶವನ್ನು ಬಹುತೇಕರು ಪಾಲನೆ ಮಾಡುತ್ತಿಲ್ಲ. ಅನ್ಯ ರಾಜ್ಯಗಳ ಅಂಗಡಿ ಮಾಲೀಕರು ಕನ್ನಡ ವಿರೋಧಿ ನಡೆ ವಿರೊಧಿಸಿ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಇಂದು ಹೋರಾಟಕ್ಕೆ ಧುಮುಕಿದ್ದಾರೆ.
ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಹಲವು ಸಂಘಟನೆಗಳ ಕಾರ್ಯಕರ್ತರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕಬ್ಬನ್ ಪಾರ್ಕ್ ವರೆಗೆ ಅಳವಡಿಸಿರುವ ಇಂಗ್ಲಿಷ್ ನಾಮಫಲಕಗಳನ್ನು ತೆರವುಗೊಳಿಸುವ ಕೆಲಸ ಮಾಡಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿಯೂ ಕನ್ನಡಪರ ಕಾರ್ಯಕರ್ತರು ಕಡ್ಡಾಯ ಕನ್ನಡ ನಾಮಫಲಕ ಅಭಿಯಾನ ಕೈಗೊಂಡಿದ್ದಾರೆ.
ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬುಧವಾರ ನಡೆಸಿದ ಪ್ರತಿಭಟನೆ ತೀವ್ರಗೊಂಡಿದ್ದು, ತಮ್ಮ ಸೈನ್ ಬೋರ್ಡ್ಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆ ಬಳಸಬೇಕೆಂದು ಒತ್ತಾಯಿಸಿ, ಖಾಸಗಿ ಹೋಟೆಲ್ ಇಂಗ್ಲಿಷ್ ನಾಮಫಲಕವನ್ನು ಧ್ವಂಸಗೊಳಿಸಿದರು.
ಬೆಂಗಳೂರಿನ ಬೀದಿಗಳಲ್ಲಿ ಅಳವಡಿಸಿದ್ದ ಇಂಗ್ಲಿಷ್ ಪೋಸ್ಟರ್ಗಳನ್ನು ಸಹ ಹರಿದು ಹಾಕಿದರು. 2024ರ ಫೆಬ್ರವರಿ 28ರೊಳಗೆ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಬಳಸುವಂತೆ ರಾಜಧಾನಿಯ ವಾಣಿಜ್ಯ ಸಂಸ್ಥೆಗಳಿಗೆ ಬಿಬಿಎಂಪಿ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ ತೀವ್ರಗೊಂಡಿದೆ.
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹತ್ತಿರ ಕರ್ನಾಟಕ ರಕ್ಷಣಾ ವೇದಿಕೆಯ ಕನ್ನಡ ಕಡ್ಡಾಯ ಅಭಿಯಾನದ ಅಂಗವಾಗಿ ಕರವೇ ಘರ್ಜನೆ ಪ್ರಾರಂಭವಾಗಿದೆ.💛❤️#ಕನ್ನಡದಲ್ಲಿನಾಮಫಲಕ pic.twitter.com/zfNuxfjM6D
— Belagavi – ಬೆಳಗಾವಿ (@BelagaviKA) December 27, 2023
ಕೂಡಲೇ ಕನ್ನಡ ಭಾಷೆಯಲ್ಲಿ ಜಾಹೀರಾತು ಫಲಕಗಳನ್ನು ಹಾಕಬೇಕು ಎಂದು ಕನ್ನಡ ಪರ ಕಾರ್ಯಕರ್ತರು ಅಂಗಡಿ ಮಾಲೀಕರಿಗೆ ಈಗಾಗಲೇ ಎಚ್ಚರಿಕೆ ನೀಡಿದ್ದರು. ಎಲ್ಲ ಸಂಸ್ಥೆಗಳು ಮತ್ತು ಅಂಗಡಿಗಳು ಫೆಬ್ರವರಿ 28 ರ ಮೊದಲು ಕಡ್ಡಾಯ ಕನ್ನಡ ನಾಮಫಲಕ ಆದೇಶವನ್ನು ಪಾಲಿಸಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.
‘ಕರ್ನಾಟಕದಲ್ಲಿ ಹುಟ್ಟಿ ಬೆಳೆದವರು, ಹೊರರಾಜ್ಯದಿಂದ ಇಲ್ಲಿಗೆ ಬಂದು ಬದುಕು ಕಟ್ಟಿಕೊಂಡವರನ್ನು ನಾವು “ಕನ್ನಡಿಗ”ರೇ ಎಂದು ಭಾವಿಸಿದ್ದೇವೆ. ಕನ್ನಡ ನೆಲದಲ್ಲಿ ಕನ್ನಡಕ್ಕೇ ಮೊದಲ ಪ್ರಾಶಸ್ತ್ಯ, ಅನ್ನ ಕೊಡುವ ಈ ನೆಲದ ನಿಯಮ ಪಾಲನೆ ಮಾಡಬೇಕಿರುವುದು ಪ್ರತಿಯೊಬ್ಬರ ಕರ್ತವ್ಯ ಕೂಡ. ಕನ್ನಡವನ್ನು ಉಳಿಸಿ, ಕನ್ನಡತನವನ್ನು ಬೆಳೆಸುವ ಸಲುವಾಗಿ ಬೆಂಗಳೂರಿನ ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ.60 ಕನ್ನಡ ಅಕ್ಷರಗಳ ಬಳಕೆ ಕಡ್ಡಾಯಗೊಳಿಸಲಾಗಿದೆ. ಇದಕ್ಕೆ ಫೆಬ್ರವರಿ 28 ಕಡೆಯ ದಿನವಾಗಿದ್ದು, ನಿಯಮ ಪಾಲನೆ ಮಾಡಿ “ಹೆಮ್ಮೆಯ ಕನ್ನಡಿಗ”ರಾಗಿ’ ಎಂದು ಸಿದ್ದರಾಮಯ್ಯ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಬೆಂಗಳೂರಿನಾದ್ಯಂತ ಸಿಡಿದೆದ್ದ ಕರವೇ, ಕನ್ನಡವಿರದ ಬೋರ್ಡ್ ಗಳು ಪೀಸ್ ಪೀಸ್ .. ಬೆಳಗಾವಿಯಲ್ಲೂ ಇದೇ ತೆರನಾದ ದೊಡ್ಡ ಮಟ್ಟದ ಕನ್ನಡ ನಾಮಫಲಕ ಅಭಿಯಾನ ಶುರುವಾಗಲಿ 🔥🔥🔥#belagavika#belagavi#ಕನ್ನಡದಲ್ಲಿನಾಮಫಲಕ pic.twitter.com/BqRaUXPTb6
— Belagavi – ಬೆಳಗಾವಿ (@BelagaviKA) December 27, 2023
ನಗರದ ಪ್ರಮುಖ ವಾಣಿಜ್ಯ ಕೇಂದ್ರವಾದ ಚಿಕ್ಕಪೇಟೆ, ಅವಿನ್ಯೂ ರಸ್ತೆ ಹಾಗೂ ಅಕ್ಕಪಕ್ಕದ ವ್ಯಾಪಾರ ಸ್ಥಳಗಳಲ್ಲಿ ಅಂಗಡಿ ತೆರೆದಿರುವ ಉತ್ತರ ಭಾರತದವರು ಕನ್ನಡ ನಾಮಫಲಕಗಳ ಬದಲಿಗೆ ಇಂಗ್ಲಿಷ್ ಬಳಸಿದ್ದಾರೆ. ಇದನ್ನು ರಕ್ಷಣಾ ವೇದಿಕೆ ಕಾರ್ಯಕರ್ತರು ಗುರುತಿಸಿ ಈಗಾಗಲೇ ಎಚ್ಚರಿಕೆ ನೀಡಿದ್ದಾರೆ. ಇತ್ತೀಚೆಗಷ್ಟೇ ಕನ್ನಡ ಪರ ಹೋರಾಟಗಾರರನ್ನು ಭೇಟಿ ಮಾಡಿದ್ದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ‘ಫೆಬ್ರವರಿ 28ರ ಮೊದಲು ಬೆಂಗಳೂರಿನ ಎಲ್ಲಾ ವಾಣಿಜ್ಯ ಸಂಸ್ಥೆಗಳು ಕನ್ನಡದಲ್ಲಿ ಫಲಕಗಳನ್ನು ಸ್ಥಾಪಿಸುವುದನ್ನು ಖಚಿತಪಡಿಸಿಕೊಳ್ಳುತ್ತೇವೆ’ ಎಂದು ಹೇಳಿದ್ದಾರೆ.
VIDEO | Members of Karnataka Rakshana Vedike tear down posters in English on Bengaluru streets, warning commercial establishments to install billboards in Kannada. pic.twitter.com/LVQUUVj2DV
— Press Trust of India (@PTI_News) December 27, 2023
‘ಬೆಂಗಳೂರಿನಲ್ಲಿ 1,400 ಕಿ.ಮೀ. ಮತ್ತು ಎಲ್ಲ ವಾಣಿಜ್ಯ ಸಂಸ್ಥೆಗಳನ್ನು ವಲಯವಾರು ಸಮೀಕ್ಷೆ ಮಾಡಲಾಗುವುದು. ನಾಮಫಲಕಗಳಲ್ಲಿ ಕನ್ನಡ ಬಳಸದವರಿಗೆ ನಾವು ನೋಟಿಸ್ ನೀಡುತ್ತೇವೆ’ ಎಂದು ಅವರು ಹೇಳಿದರು.
ಇದನ್ನೂ ಓದಿ; ಮಣಿಪುರದಿಂದ ಮುಂಬೈ; ‘ಭಾರತ ನ್ಯಾಯ ಯಾತ್ರೆ’ ಆರಂಭಿಸಲಿರುವ ರಾಹುಲ್ ಗಾಂಧಿ