Homeಕರ್ನಾಟಕಕಡ್ಡಾಯ ಕನ್ನಡ ನಾಮಫಲಕ ಅಭಿಯಾನ: ಬೆಂಗಳೂರಿನಲ್ಲಿ ತೀವ್ರಗೊಂಡ ಕನ್ನಡಪರ ಕಾರ್ಯಕರ್ತರ ಹೋರಾಟ

ಕಡ್ಡಾಯ ಕನ್ನಡ ನಾಮಫಲಕ ಅಭಿಯಾನ: ಬೆಂಗಳೂರಿನಲ್ಲಿ ತೀವ್ರಗೊಂಡ ಕನ್ನಡಪರ ಕಾರ್ಯಕರ್ತರ ಹೋರಾಟ

- Advertisement -
- Advertisement -

ಸರ್ಕಾರ ಹಲವು ಬಾರಿ ಎಚ್ಚರಿಕೆ ನೀಡಿದ ನಂತರವೂ ರಾಜ್ಯದ ಹಲವು ವಾಣಿಜ್ಯ ಸಂಸ್ಥೆಗಳು ಹಾಗೂ ಉತ್ತರ ಭಾರತದ ಅಂಗಡಿ ಮಾಲೀಕರು ಕನ್ನಡ ನಾಮಫಲಕ ಅಳವಡಿಸಿಕೊಂಡಿಲ್ಲ. ನಾಮಫಲಕಗಳಲ್ಲಿ ಶೇ. 60% ರಷ್ಟು ಕನ್ನಡ ಇರಬೇಕು ಎಂಬ ಆದೇಶವನ್ನು ಬಹುತೇಕರು ಪಾಲನೆ ಮಾಡುತ್ತಿಲ್ಲ. ಅನ್ಯ ರಾಜ್ಯಗಳ ಅಂಗಡಿ ಮಾಲೀಕರು ಕನ್ನಡ ವಿರೋಧಿ ನಡೆ ವಿರೊಧಿಸಿ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಇಂದು ಹೋರಾಟಕ್ಕೆ ಧುಮುಕಿದ್ದಾರೆ.

ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಹಲವು ಸಂಘಟನೆಗಳ ಕಾರ್ಯಕರ್ತರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕಬ್ಬನ್‌ ಪಾರ್ಕ್‌ ವರೆಗೆ ಅಳವಡಿಸಿರುವ ಇಂಗ್ಲಿಷ್ ನಾಮಫಲಕಗಳನ್ನು ತೆರವುಗೊಳಿಸುವ ಕೆಲಸ ಮಾಡಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿಯೂ ಕನ್ನಡಪರ ಕಾರ್ಯಕರ್ತರು ಕಡ್ಡಾಯ ಕನ್ನಡ ನಾಮಫಲಕ ಅಭಿಯಾನ ಕೈಗೊಂಡಿದ್ದಾರೆ.

ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬುಧವಾರ ನಡೆಸಿದ ಪ್ರತಿಭಟನೆ ತೀವ್ರಗೊಂಡಿದ್ದು, ತಮ್ಮ ಸೈನ್ ಬೋರ್ಡ್‌ಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆ ಬಳಸಬೇಕೆಂದು ಒತ್ತಾಯಿಸಿ, ಖಾಸಗಿ ಹೋಟೆಲ್ ಇಂಗ್ಲಿಷ್ ನಾಮಫಲಕವನ್ನು ಧ್ವಂಸಗೊಳಿಸಿದರು.

ಬೆಂಗಳೂರಿನ ಬೀದಿಗಳಲ್ಲಿ ಅಳವಡಿಸಿದ್ದ ಇಂಗ್ಲಿಷ್ ಪೋಸ್ಟರ್‌ಗಳನ್ನು ಸಹ ಹರಿದು ಹಾಕಿದರು. 2024ರ ಫೆಬ್ರವರಿ 28ರೊಳಗೆ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಬಳಸುವಂತೆ ರಾಜಧಾನಿಯ ವಾಣಿಜ್ಯ ಸಂಸ್ಥೆಗಳಿಗೆ ಬಿಬಿಎಂಪಿ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ ತೀವ್ರಗೊಂಡಿದೆ.

ಕೂಡಲೇ ಕನ್ನಡ ಭಾಷೆಯಲ್ಲಿ ಜಾಹೀರಾತು ಫಲಕಗಳನ್ನು ಹಾಕಬೇಕು ಎಂದು ಕನ್ನಡ ಪರ ಕಾರ್ಯಕರ್ತರು ಅಂಗಡಿ ಮಾಲೀಕರಿಗೆ ಈಗಾಗಲೇ ಎಚ್ಚರಿಕೆ ನೀಡಿದ್ದರು. ಎಲ್ಲ ಸಂಸ್ಥೆಗಳು ಮತ್ತು ಅಂಗಡಿಗಳು ಫೆಬ್ರವರಿ 28 ರ ಮೊದಲು ಕಡ್ಡಾಯ ಕನ್ನಡ ನಾಮಫಲಕ ಆದೇಶವನ್ನು ಪಾಲಿಸಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

‘ಕರ್ನಾಟಕದಲ್ಲಿ ಹುಟ್ಟಿ ಬೆಳೆದವರು, ಹೊರರಾಜ್ಯದಿಂದ ಇಲ್ಲಿಗೆ ಬಂದು ಬದುಕು ಕಟ್ಟಿಕೊಂಡವರನ್ನು ನಾವು “ಕನ್ನಡಿಗ”ರೇ ಎಂದು ಭಾವಿಸಿದ್ದೇವೆ. ಕನ್ನಡ ನೆಲದಲ್ಲಿ ಕನ್ನಡಕ್ಕೇ ಮೊದಲ ಪ್ರಾಶಸ್ತ್ಯ, ಅನ್ನ ಕೊಡುವ ಈ ನೆಲದ ನಿಯಮ ಪಾಲನೆ ಮಾಡಬೇಕಿರುವುದು ಪ್ರತಿಯೊಬ್ಬರ ಕರ್ತವ್ಯ ಕೂಡ. ಕನ್ನಡವನ್ನು ಉಳಿಸಿ, ಕನ್ನಡತನವನ್ನು ಬೆಳೆಸುವ ಸಲುವಾಗಿ ಬೆಂಗಳೂರಿನ ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ.60 ಕನ್ನಡ ಅಕ್ಷರಗಳ ಬಳಕೆ ಕಡ್ಡಾಯಗೊಳಿಸಲಾಗಿದೆ. ಇದಕ್ಕೆ ಫೆಬ್ರವರಿ 28 ಕಡೆಯ ದಿನವಾಗಿದ್ದು, ನಿಯಮ ಪಾಲನೆ ಮಾಡಿ “ಹೆಮ್ಮೆಯ ಕನ್ನಡಿಗ”ರಾಗಿ’ ಎಂದು ಸಿದ್ದರಾಮಯ್ಯ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ನಗರದ ಪ್ರಮುಖ ವಾಣಿಜ್ಯ ಕೇಂದ್ರವಾದ ಚಿಕ್ಕಪೇಟೆ, ಅವಿನ್ಯೂ ರಸ್ತೆ ಹಾಗೂ ಅಕ್ಕಪಕ್ಕದ ವ್ಯಾಪಾರ ಸ್ಥಳಗಳಲ್ಲಿ ಅಂಗಡಿ ತೆರೆದಿರುವ ಉತ್ತರ ಭಾರತದವರು ಕನ್ನಡ ನಾಮಫಲಕಗಳ ಬದಲಿಗೆ ಇಂಗ್ಲಿಷ್ ಬಳಸಿದ್ದಾರೆ. ಇದನ್ನು ರಕ್ಷಣಾ ವೇದಿಕೆ ಕಾರ್ಯಕರ್ತರು ಗುರುತಿಸಿ ಈಗಾಗಲೇ ಎಚ್ಚರಿಕೆ ನೀಡಿದ್ದಾರೆ. ಇತ್ತೀಚೆಗಷ್ಟೇ ಕನ್ನಡ ಪರ ಹೋರಾಟಗಾರರನ್ನು ಭೇಟಿ ಮಾಡಿದ್ದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ‘ಫೆಬ್ರವರಿ 28ರ ಮೊದಲು ಬೆಂಗಳೂರಿನ ಎಲ್ಲಾ ವಾಣಿಜ್ಯ ಸಂಸ್ಥೆಗಳು ಕನ್ನಡದಲ್ಲಿ ಫಲಕಗಳನ್ನು ಸ್ಥಾಪಿಸುವುದನ್ನು ಖಚಿತಪಡಿಸಿಕೊಳ್ಳುತ್ತೇವೆ’ ಎಂದು ಹೇಳಿದ್ದಾರೆ.

‘ಬೆಂಗಳೂರಿನಲ್ಲಿ 1,400 ಕಿ.ಮೀ. ಮತ್ತು ಎಲ್ಲ ವಾಣಿಜ್ಯ ಸಂಸ್ಥೆಗಳನ್ನು ವಲಯವಾರು ಸಮೀಕ್ಷೆ ಮಾಡಲಾಗುವುದು. ನಾಮಫಲಕಗಳಲ್ಲಿ ಕನ್ನಡ ಬಳಸದವರಿಗೆ ನಾವು ನೋಟಿಸ್ ನೀಡುತ್ತೇವೆ’ ಎಂದು ಅವರು ಹೇಳಿದರು.

ಇದನ್ನೂ ಓದಿ; ಮಣಿಪುರದಿಂದ ಮುಂಬೈ; ‘ಭಾರತ ನ್ಯಾಯ ಯಾತ್ರೆ’ ಆರಂಭಿಸಲಿರುವ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...