Homeಮುಖಪುಟ13 ಐಪಿಎಸ್‌ ಅಧಿಕಾರಿಗಳ ಕಡ್ಡಾಯ ನಿವೃತ್ತಿ: ಕೇಂದ್ರ ಗೃಹ ಸಚಿವಾಲಯ

13 ಐಪಿಎಸ್‌ ಅಧಿಕಾರಿಗಳ ಕಡ್ಡಾಯ ನಿವೃತ್ತಿ: ಕೇಂದ್ರ ಗೃಹ ಸಚಿವಾಲಯ

ಅಮಾನತ್ತಿನಲ್ಲಿರುವ 24 ಐಪಿಎಸ್ ಅಧಿಕಾರಿಗಳ ಮಾಹಿತಿಯನ್ನು ನೀಡಲು ಕೇಂದ್ರವು ನಿರಾಕರಿಸಿದೆ.

- Advertisement -
- Advertisement -

2014 ರಿಂದ ದೇಶದಾದ್ಯಂತ 13 ಭಾರತೀಯ ಪೊಲೀಸ್ ಸೇವೆ (ಐಪಿಎಸ್‌) ಅಧಿಕಾರಿಗಳನ್ನು ಸಾರ್ವಜನಿಕ ಹಿತದೃಷ್ಟಿಯಿಂದ ಕಡ್ಡಾಯ ನಿವೃತ್ತಿ ಮಾಡಲಾಗಿದ್ದು, ಐವರು ಅಧಿಕಾರಿಗಳನ್ನು ವಜಾಗೊಳಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ಬಹಿರಂಗಪಡಿಸಿದೆ. ಆದರೆ ಅಮಾನತ್ತಿನಲ್ಲಿರುವ 24 ಐಪಿಎಸ್ ಅಧಿಕಾರಿಗಳ ಮಾಹಿತಿಯನ್ನು ನೀಡಲು ಕೇಂದ್ರವು ನಿರಾಕರಿಸಿದೆ.

ದೇಶಾದ್ಯಂತ ಐದು ಐಪಿಎಸ್‌ ಅಧಿಕಾರಿಗಳ ವಿರುದ್ಧ ಸಚಿವಾಲಯವು ಕಾನೂನು ಕ್ರಮ ಜರುಗಿಸಲು ಅನುಮತಿ ನೀಡಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ. ಸಚಿವಾಲಯವು ನಿವೃತ್ತರಾದ, ವಜಾಗೊಳಿಸಿದ ಮತ್ತು ಕಾನೂನು ಕ್ರಮ ಜರುಗಿಸಲ್ಪಟ್ಟ ಎಲ್ಲ ಅಧಿಕಾರಿಗಳ ಹೆಸರನ್ನು ಹಂಚಿಕೊಂಡಿದೆ. ಆದರೆ ಪ್ರಸ್ತುತ ಅಮಾನತುಗೊಂಡಿರುವ 24 ಐಪಿಎಸ್‌ ಅಧಿಕಾರಿಗಳ ಹೆಸರನ್ನು ಬಹಿರಂಗಪಡಿಸಿಲ್ಲ. ಹಾಗೂ ಅದರಲ್ಲಿ “ಯಾವುದೇ ಸಾರ್ವಜನಿಕ ಹಿತಾಸಕ್ತಿ ಇಲ್ಲ” ಎಂದು ತಿಳಿಸಿದೆ.

ಫೆಬ್ರವರಿ 21, 2021 ರಲ್ಲಿ ಆರ್‌ಟಿಐ ಅರ್ಜಿಯ ಮೂಲಕ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ವಕೀಲರಾದ ಹೇಮಂತ್ ಕುಮಾರ್ ಅವರು 2014 ರ ಮೇ ತಿಂಗಳಿನಿಂದ ಯಾವ ಐಪಿಎಸ್‌ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಬಗ್ಗೆ ಮಾಹಿತಿ ಕೋರಿದ್ದರು.

ಇದನ್ನೂ ಓದಿ: CAA, NRC, NPR ಕುರಿತು ಚರ್ಚೆಗೆ ಸಿದ್ಧನಿದ್ದೇನೆ: ಅಮಿತ್‌ ಶಾಗೆ ಪತ್ರಬರೆದ ಮಾಜಿ ಐಎಎಸ್‌ ಕಣ್ಣನ್‌ ಗೋಪಿನಾಥನ್‌

ಕೇಂದ್ರ ಗೃಹ ಸಚಿವಾಲಯವು ರಾಜ್ಯ ಸರ್ಕಾರಗಳು ಮತ್ತು ವಿಶೇಷ ನ್ಯಾಯಾಲಯಗಳಿಗೆ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡಿದ ಎಲ್ಲಾ ಐಪಿಎಸ್ ಅಧಿಕಾರಿಗಳ ಬಗ್ಗೆ ಮಾಹಿತಿಯನ್ನು ಅರ್ಜಿಯಲ್ಲಿ ಕೋರಲಾಗಿತ್ತು.

ಈ ಮೊದಲು ಮಾರ್ಚ್ 11 ರಂದು ಆರ್‌ಟಿಐ ಅರ್ಜಿಗೆ ಉತ್ತರವಾಗಿ, ಗೃಹ ಸಚಿವಾಲಯವು ಮಾಹಿತಿಯನ್ನು ನೀಡಲು ನಿರಾಕರಿಸಿತ್ತು. ಮಾಹಿತಿಯನ್ನು ನೀಡುವಲ್ಲಿ ಯಾವುದೇ ಸಾರ್ವಜನಿಕ ಹಿತಾಸಕ್ತಿ ಇಲ್ಲ ಮತ್ತು ಅಂತಹ ಮಾಹಿತಿಯನ್ನು ಆರ್‌‌ಟಿಐ ಕಾಯ್ದೆ, 2005 ಸೆಕ್ಷನ್ 8 (1) (ಜೆ) ಅಡಿಯಲ್ಲಿ ಒದಗಿಸಲಾಗುವುದಿಲ್ಲ ಎಂದು ಹೇಳಿತ್ತು.

ಆದಾಗ್ಯೂ, ಮೇ 10 ರಂದು, ಮಾರ್ಚ್ 11 ರ ಪತ್ರಕ್ಕೆ ಮುಂದುವರಿದ ಪತ್ರವಾಗಿ ಗೃಹ ಸಚಿವಾಲಯವು ಹೆಚ್ಚಿನ ಮಾಹಿತಿಯನ್ನು ಹಂಚಿಕೊಂಡಿದೆ.

ಅಮಾನತುಗೊಂಡಿರುವ 24 ಐಪಿಎಸ್ ಅಧಿಕಾರಿಗಳ ಹೆಸರನ್ನು ಬಹಿರಂಗಪಡಿಸಲು ಗೃಹ ಸಚಿವಾಲಯ ಏಕೆ ಹಿಂಜರಿಯುತ್ತಿದೆ ಎಂದು ಅರ್ಜಿದಾರ ಹೇಮಂತ್‌ ಕುಮಾರ್ ಪ್ರಶ್ನಿಸಿದ್ದಾರೆ.

“ಸೆಪ್ಟೆಂಬರ್ 2017 ರಲ್ಲಿ, ಗೃಹ ಸಚಿವಾಲಯವು ಅಮಾನತುಗೊಂಡ 15 ಐಪಿಎಸ್ ಅಧಿಕಾರಿಗಳ ಹೆಸರು ಮತ್ತು ವಿವರಗಳನ್ನು ನನಗೆ ಒದಗಿಸಿತ್ತು. ಆದರೆ ಈಗ ಇದೇ ರೀತಿಯ ಮಾಹಿತಿಯನ್ನು ನಿರಾಕರಿಸಲಾಗುತ್ತಿದೆ” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಲಸಿಕಾ ರಾಜಕೀಯ: ಮೇ 1 ರಿಂದ ಲಸಿಕೆ ಎಂಬುದು ನಿಜವೇ? ನಿಮಗೆ ಲಸಿಕೆ ಸಿಗಲು ಎಷ್ಟು ತಿಂಗಳು/ವರ್ಷ ಬೇಕು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅವಾಂತರ : ಎನ್ಯುಮರೇಷನ್ ಫಾರಂ ಸರಿಯಾಗಿ ತುಂಬಿಕೊಟ್ಟರೂ ಕರಡು ಪಟ್ಟಿಯಲ್ಲಿ ಹೆಸರಿಲ್ಲ; ಆತಂಕಗೊಂಡು ಮತಗಟ್ಟೆಗಳತ್ತ ಧಾವಿಸಿದ ಜನರು-ವರದಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಭಾಗವಾಗಿ ಪ್ರಕಟಗೊಂಡ ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದ ಕಾರಣ ಆತಂಕಗೊಂಡ ಜಾರ್ಖಂಡ್‌ನ ರಾಂಚಿ ನಗರದ ಜನರು ಭಾನುವಾರ (ಆ.9) ಮತಗಟ್ಟೆಗಳಿಗೆ...

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...