Homeಮುಖಪುಟ13 ಐಪಿಎಸ್‌ ಅಧಿಕಾರಿಗಳ ಕಡ್ಡಾಯ ನಿವೃತ್ತಿ: ಕೇಂದ್ರ ಗೃಹ ಸಚಿವಾಲಯ

13 ಐಪಿಎಸ್‌ ಅಧಿಕಾರಿಗಳ ಕಡ್ಡಾಯ ನಿವೃತ್ತಿ: ಕೇಂದ್ರ ಗೃಹ ಸಚಿವಾಲಯ

ಅಮಾನತ್ತಿನಲ್ಲಿರುವ 24 ಐಪಿಎಸ್ ಅಧಿಕಾರಿಗಳ ಮಾಹಿತಿಯನ್ನು ನೀಡಲು ಕೇಂದ್ರವು ನಿರಾಕರಿಸಿದೆ.

- Advertisement -
- Advertisement -

2014 ರಿಂದ ದೇಶದಾದ್ಯಂತ 13 ಭಾರತೀಯ ಪೊಲೀಸ್ ಸೇವೆ (ಐಪಿಎಸ್‌) ಅಧಿಕಾರಿಗಳನ್ನು ಸಾರ್ವಜನಿಕ ಹಿತದೃಷ್ಟಿಯಿಂದ ಕಡ್ಡಾಯ ನಿವೃತ್ತಿ ಮಾಡಲಾಗಿದ್ದು, ಐವರು ಅಧಿಕಾರಿಗಳನ್ನು ವಜಾಗೊಳಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ಬಹಿರಂಗಪಡಿಸಿದೆ. ಆದರೆ ಅಮಾನತ್ತಿನಲ್ಲಿರುವ 24 ಐಪಿಎಸ್ ಅಧಿಕಾರಿಗಳ ಮಾಹಿತಿಯನ್ನು ನೀಡಲು ಕೇಂದ್ರವು ನಿರಾಕರಿಸಿದೆ.

ದೇಶಾದ್ಯಂತ ಐದು ಐಪಿಎಸ್‌ ಅಧಿಕಾರಿಗಳ ವಿರುದ್ಧ ಸಚಿವಾಲಯವು ಕಾನೂನು ಕ್ರಮ ಜರುಗಿಸಲು ಅನುಮತಿ ನೀಡಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ. ಸಚಿವಾಲಯವು ನಿವೃತ್ತರಾದ, ವಜಾಗೊಳಿಸಿದ ಮತ್ತು ಕಾನೂನು ಕ್ರಮ ಜರುಗಿಸಲ್ಪಟ್ಟ ಎಲ್ಲ ಅಧಿಕಾರಿಗಳ ಹೆಸರನ್ನು ಹಂಚಿಕೊಂಡಿದೆ. ಆದರೆ ಪ್ರಸ್ತುತ ಅಮಾನತುಗೊಂಡಿರುವ 24 ಐಪಿಎಸ್‌ ಅಧಿಕಾರಿಗಳ ಹೆಸರನ್ನು ಬಹಿರಂಗಪಡಿಸಿಲ್ಲ. ಹಾಗೂ ಅದರಲ್ಲಿ “ಯಾವುದೇ ಸಾರ್ವಜನಿಕ ಹಿತಾಸಕ್ತಿ ಇಲ್ಲ” ಎಂದು ತಿಳಿಸಿದೆ.

ಫೆಬ್ರವರಿ 21, 2021 ರಲ್ಲಿ ಆರ್‌ಟಿಐ ಅರ್ಜಿಯ ಮೂಲಕ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ವಕೀಲರಾದ ಹೇಮಂತ್ ಕುಮಾರ್ ಅವರು 2014 ರ ಮೇ ತಿಂಗಳಿನಿಂದ ಯಾವ ಐಪಿಎಸ್‌ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಬಗ್ಗೆ ಮಾಹಿತಿ ಕೋರಿದ್ದರು.

ಇದನ್ನೂ ಓದಿ: CAA, NRC, NPR ಕುರಿತು ಚರ್ಚೆಗೆ ಸಿದ್ಧನಿದ್ದೇನೆ: ಅಮಿತ್‌ ಶಾಗೆ ಪತ್ರಬರೆದ ಮಾಜಿ ಐಎಎಸ್‌ ಕಣ್ಣನ್‌ ಗೋಪಿನಾಥನ್‌

ಕೇಂದ್ರ ಗೃಹ ಸಚಿವಾಲಯವು ರಾಜ್ಯ ಸರ್ಕಾರಗಳು ಮತ್ತು ವಿಶೇಷ ನ್ಯಾಯಾಲಯಗಳಿಗೆ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡಿದ ಎಲ್ಲಾ ಐಪಿಎಸ್ ಅಧಿಕಾರಿಗಳ ಬಗ್ಗೆ ಮಾಹಿತಿಯನ್ನು ಅರ್ಜಿಯಲ್ಲಿ ಕೋರಲಾಗಿತ್ತು.

ಈ ಮೊದಲು ಮಾರ್ಚ್ 11 ರಂದು ಆರ್‌ಟಿಐ ಅರ್ಜಿಗೆ ಉತ್ತರವಾಗಿ, ಗೃಹ ಸಚಿವಾಲಯವು ಮಾಹಿತಿಯನ್ನು ನೀಡಲು ನಿರಾಕರಿಸಿತ್ತು. ಮಾಹಿತಿಯನ್ನು ನೀಡುವಲ್ಲಿ ಯಾವುದೇ ಸಾರ್ವಜನಿಕ ಹಿತಾಸಕ್ತಿ ಇಲ್ಲ ಮತ್ತು ಅಂತಹ ಮಾಹಿತಿಯನ್ನು ಆರ್‌‌ಟಿಐ ಕಾಯ್ದೆ, 2005 ಸೆಕ್ಷನ್ 8 (1) (ಜೆ) ಅಡಿಯಲ್ಲಿ ಒದಗಿಸಲಾಗುವುದಿಲ್ಲ ಎಂದು ಹೇಳಿತ್ತು.

ಆದಾಗ್ಯೂ, ಮೇ 10 ರಂದು, ಮಾರ್ಚ್ 11 ರ ಪತ್ರಕ್ಕೆ ಮುಂದುವರಿದ ಪತ್ರವಾಗಿ ಗೃಹ ಸಚಿವಾಲಯವು ಹೆಚ್ಚಿನ ಮಾಹಿತಿಯನ್ನು ಹಂಚಿಕೊಂಡಿದೆ.

ಅಮಾನತುಗೊಂಡಿರುವ 24 ಐಪಿಎಸ್ ಅಧಿಕಾರಿಗಳ ಹೆಸರನ್ನು ಬಹಿರಂಗಪಡಿಸಲು ಗೃಹ ಸಚಿವಾಲಯ ಏಕೆ ಹಿಂಜರಿಯುತ್ತಿದೆ ಎಂದು ಅರ್ಜಿದಾರ ಹೇಮಂತ್‌ ಕುಮಾರ್ ಪ್ರಶ್ನಿಸಿದ್ದಾರೆ.

“ಸೆಪ್ಟೆಂಬರ್ 2017 ರಲ್ಲಿ, ಗೃಹ ಸಚಿವಾಲಯವು ಅಮಾನತುಗೊಂಡ 15 ಐಪಿಎಸ್ ಅಧಿಕಾರಿಗಳ ಹೆಸರು ಮತ್ತು ವಿವರಗಳನ್ನು ನನಗೆ ಒದಗಿಸಿತ್ತು. ಆದರೆ ಈಗ ಇದೇ ರೀತಿಯ ಮಾಹಿತಿಯನ್ನು ನಿರಾಕರಿಸಲಾಗುತ್ತಿದೆ” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಲಸಿಕಾ ರಾಜಕೀಯ: ಮೇ 1 ರಿಂದ ಲಸಿಕೆ ಎಂಬುದು ನಿಜವೇ? ನಿಮಗೆ ಲಸಿಕೆ ಸಿಗಲು ಎಷ್ಟು ತಿಂಗಳು/ವರ್ಷ ಬೇಕು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...