Homeಮುಖಪುಟ13 ಐಪಿಎಸ್‌ ಅಧಿಕಾರಿಗಳ ಕಡ್ಡಾಯ ನಿವೃತ್ತಿ: ಕೇಂದ್ರ ಗೃಹ ಸಚಿವಾಲಯ

13 ಐಪಿಎಸ್‌ ಅಧಿಕಾರಿಗಳ ಕಡ್ಡಾಯ ನಿವೃತ್ತಿ: ಕೇಂದ್ರ ಗೃಹ ಸಚಿವಾಲಯ

ಅಮಾನತ್ತಿನಲ್ಲಿರುವ 24 ಐಪಿಎಸ್ ಅಧಿಕಾರಿಗಳ ಮಾಹಿತಿಯನ್ನು ನೀಡಲು ಕೇಂದ್ರವು ನಿರಾಕರಿಸಿದೆ.

- Advertisement -
- Advertisement -

2014 ರಿಂದ ದೇಶದಾದ್ಯಂತ 13 ಭಾರತೀಯ ಪೊಲೀಸ್ ಸೇವೆ (ಐಪಿಎಸ್‌) ಅಧಿಕಾರಿಗಳನ್ನು ಸಾರ್ವಜನಿಕ ಹಿತದೃಷ್ಟಿಯಿಂದ ಕಡ್ಡಾಯ ನಿವೃತ್ತಿ ಮಾಡಲಾಗಿದ್ದು, ಐವರು ಅಧಿಕಾರಿಗಳನ್ನು ವಜಾಗೊಳಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ಬಹಿರಂಗಪಡಿಸಿದೆ. ಆದರೆ ಅಮಾನತ್ತಿನಲ್ಲಿರುವ 24 ಐಪಿಎಸ್ ಅಧಿಕಾರಿಗಳ ಮಾಹಿತಿಯನ್ನು ನೀಡಲು ಕೇಂದ್ರವು ನಿರಾಕರಿಸಿದೆ.

ದೇಶಾದ್ಯಂತ ಐದು ಐಪಿಎಸ್‌ ಅಧಿಕಾರಿಗಳ ವಿರುದ್ಧ ಸಚಿವಾಲಯವು ಕಾನೂನು ಕ್ರಮ ಜರುಗಿಸಲು ಅನುಮತಿ ನೀಡಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ. ಸಚಿವಾಲಯವು ನಿವೃತ್ತರಾದ, ವಜಾಗೊಳಿಸಿದ ಮತ್ತು ಕಾನೂನು ಕ್ರಮ ಜರುಗಿಸಲ್ಪಟ್ಟ ಎಲ್ಲ ಅಧಿಕಾರಿಗಳ ಹೆಸರನ್ನು ಹಂಚಿಕೊಂಡಿದೆ. ಆದರೆ ಪ್ರಸ್ತುತ ಅಮಾನತುಗೊಂಡಿರುವ 24 ಐಪಿಎಸ್‌ ಅಧಿಕಾರಿಗಳ ಹೆಸರನ್ನು ಬಹಿರಂಗಪಡಿಸಿಲ್ಲ. ಹಾಗೂ ಅದರಲ್ಲಿ “ಯಾವುದೇ ಸಾರ್ವಜನಿಕ ಹಿತಾಸಕ್ತಿ ಇಲ್ಲ” ಎಂದು ತಿಳಿಸಿದೆ.

ಫೆಬ್ರವರಿ 21, 2021 ರಲ್ಲಿ ಆರ್‌ಟಿಐ ಅರ್ಜಿಯ ಮೂಲಕ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ವಕೀಲರಾದ ಹೇಮಂತ್ ಕುಮಾರ್ ಅವರು 2014 ರ ಮೇ ತಿಂಗಳಿನಿಂದ ಯಾವ ಐಪಿಎಸ್‌ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಬಗ್ಗೆ ಮಾಹಿತಿ ಕೋರಿದ್ದರು.

ಇದನ್ನೂ ಓದಿ: CAA, NRC, NPR ಕುರಿತು ಚರ್ಚೆಗೆ ಸಿದ್ಧನಿದ್ದೇನೆ: ಅಮಿತ್‌ ಶಾಗೆ ಪತ್ರಬರೆದ ಮಾಜಿ ಐಎಎಸ್‌ ಕಣ್ಣನ್‌ ಗೋಪಿನಾಥನ್‌

ಕೇಂದ್ರ ಗೃಹ ಸಚಿವಾಲಯವು ರಾಜ್ಯ ಸರ್ಕಾರಗಳು ಮತ್ತು ವಿಶೇಷ ನ್ಯಾಯಾಲಯಗಳಿಗೆ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡಿದ ಎಲ್ಲಾ ಐಪಿಎಸ್ ಅಧಿಕಾರಿಗಳ ಬಗ್ಗೆ ಮಾಹಿತಿಯನ್ನು ಅರ್ಜಿಯಲ್ಲಿ ಕೋರಲಾಗಿತ್ತು.

ಈ ಮೊದಲು ಮಾರ್ಚ್ 11 ರಂದು ಆರ್‌ಟಿಐ ಅರ್ಜಿಗೆ ಉತ್ತರವಾಗಿ, ಗೃಹ ಸಚಿವಾಲಯವು ಮಾಹಿತಿಯನ್ನು ನೀಡಲು ನಿರಾಕರಿಸಿತ್ತು. ಮಾಹಿತಿಯನ್ನು ನೀಡುವಲ್ಲಿ ಯಾವುದೇ ಸಾರ್ವಜನಿಕ ಹಿತಾಸಕ್ತಿ ಇಲ್ಲ ಮತ್ತು ಅಂತಹ ಮಾಹಿತಿಯನ್ನು ಆರ್‌‌ಟಿಐ ಕಾಯ್ದೆ, 2005 ಸೆಕ್ಷನ್ 8 (1) (ಜೆ) ಅಡಿಯಲ್ಲಿ ಒದಗಿಸಲಾಗುವುದಿಲ್ಲ ಎಂದು ಹೇಳಿತ್ತು.

ಆದಾಗ್ಯೂ, ಮೇ 10 ರಂದು, ಮಾರ್ಚ್ 11 ರ ಪತ್ರಕ್ಕೆ ಮುಂದುವರಿದ ಪತ್ರವಾಗಿ ಗೃಹ ಸಚಿವಾಲಯವು ಹೆಚ್ಚಿನ ಮಾಹಿತಿಯನ್ನು ಹಂಚಿಕೊಂಡಿದೆ.

ಅಮಾನತುಗೊಂಡಿರುವ 24 ಐಪಿಎಸ್ ಅಧಿಕಾರಿಗಳ ಹೆಸರನ್ನು ಬಹಿರಂಗಪಡಿಸಲು ಗೃಹ ಸಚಿವಾಲಯ ಏಕೆ ಹಿಂಜರಿಯುತ್ತಿದೆ ಎಂದು ಅರ್ಜಿದಾರ ಹೇಮಂತ್‌ ಕುಮಾರ್ ಪ್ರಶ್ನಿಸಿದ್ದಾರೆ.

“ಸೆಪ್ಟೆಂಬರ್ 2017 ರಲ್ಲಿ, ಗೃಹ ಸಚಿವಾಲಯವು ಅಮಾನತುಗೊಂಡ 15 ಐಪಿಎಸ್ ಅಧಿಕಾರಿಗಳ ಹೆಸರು ಮತ್ತು ವಿವರಗಳನ್ನು ನನಗೆ ಒದಗಿಸಿತ್ತು. ಆದರೆ ಈಗ ಇದೇ ರೀತಿಯ ಮಾಹಿತಿಯನ್ನು ನಿರಾಕರಿಸಲಾಗುತ್ತಿದೆ” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಲಸಿಕಾ ರಾಜಕೀಯ: ಮೇ 1 ರಿಂದ ಲಸಿಕೆ ಎಂಬುದು ನಿಜವೇ? ನಿಮಗೆ ಲಸಿಕೆ ಸಿಗಲು ಎಷ್ಟು ತಿಂಗಳು/ವರ್ಷ ಬೇಕು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...