Homeಮುಖಪುಟ13 ಐಪಿಎಸ್‌ ಅಧಿಕಾರಿಗಳ ಕಡ್ಡಾಯ ನಿವೃತ್ತಿ: ಕೇಂದ್ರ ಗೃಹ ಸಚಿವಾಲಯ

13 ಐಪಿಎಸ್‌ ಅಧಿಕಾರಿಗಳ ಕಡ್ಡಾಯ ನಿವೃತ್ತಿ: ಕೇಂದ್ರ ಗೃಹ ಸಚಿವಾಲಯ

ಅಮಾನತ್ತಿನಲ್ಲಿರುವ 24 ಐಪಿಎಸ್ ಅಧಿಕಾರಿಗಳ ಮಾಹಿತಿಯನ್ನು ನೀಡಲು ಕೇಂದ್ರವು ನಿರಾಕರಿಸಿದೆ.

- Advertisement -
- Advertisement -

2014 ರಿಂದ ದೇಶದಾದ್ಯಂತ 13 ಭಾರತೀಯ ಪೊಲೀಸ್ ಸೇವೆ (ಐಪಿಎಸ್‌) ಅಧಿಕಾರಿಗಳನ್ನು ಸಾರ್ವಜನಿಕ ಹಿತದೃಷ್ಟಿಯಿಂದ ಕಡ್ಡಾಯ ನಿವೃತ್ತಿ ಮಾಡಲಾಗಿದ್ದು, ಐವರು ಅಧಿಕಾರಿಗಳನ್ನು ವಜಾಗೊಳಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ಬಹಿರಂಗಪಡಿಸಿದೆ. ಆದರೆ ಅಮಾನತ್ತಿನಲ್ಲಿರುವ 24 ಐಪಿಎಸ್ ಅಧಿಕಾರಿಗಳ ಮಾಹಿತಿಯನ್ನು ನೀಡಲು ಕೇಂದ್ರವು ನಿರಾಕರಿಸಿದೆ.

ದೇಶಾದ್ಯಂತ ಐದು ಐಪಿಎಸ್‌ ಅಧಿಕಾರಿಗಳ ವಿರುದ್ಧ ಸಚಿವಾಲಯವು ಕಾನೂನು ಕ್ರಮ ಜರುಗಿಸಲು ಅನುಮತಿ ನೀಡಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ. ಸಚಿವಾಲಯವು ನಿವೃತ್ತರಾದ, ವಜಾಗೊಳಿಸಿದ ಮತ್ತು ಕಾನೂನು ಕ್ರಮ ಜರುಗಿಸಲ್ಪಟ್ಟ ಎಲ್ಲ ಅಧಿಕಾರಿಗಳ ಹೆಸರನ್ನು ಹಂಚಿಕೊಂಡಿದೆ. ಆದರೆ ಪ್ರಸ್ತುತ ಅಮಾನತುಗೊಂಡಿರುವ 24 ಐಪಿಎಸ್‌ ಅಧಿಕಾರಿಗಳ ಹೆಸರನ್ನು ಬಹಿರಂಗಪಡಿಸಿಲ್ಲ. ಹಾಗೂ ಅದರಲ್ಲಿ “ಯಾವುದೇ ಸಾರ್ವಜನಿಕ ಹಿತಾಸಕ್ತಿ ಇಲ್ಲ” ಎಂದು ತಿಳಿಸಿದೆ.

ಫೆಬ್ರವರಿ 21, 2021 ರಲ್ಲಿ ಆರ್‌ಟಿಐ ಅರ್ಜಿಯ ಮೂಲಕ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ವಕೀಲರಾದ ಹೇಮಂತ್ ಕುಮಾರ್ ಅವರು 2014 ರ ಮೇ ತಿಂಗಳಿನಿಂದ ಯಾವ ಐಪಿಎಸ್‌ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಬಗ್ಗೆ ಮಾಹಿತಿ ಕೋರಿದ್ದರು.

ಇದನ್ನೂ ಓದಿ: CAA, NRC, NPR ಕುರಿತು ಚರ್ಚೆಗೆ ಸಿದ್ಧನಿದ್ದೇನೆ: ಅಮಿತ್‌ ಶಾಗೆ ಪತ್ರಬರೆದ ಮಾಜಿ ಐಎಎಸ್‌ ಕಣ್ಣನ್‌ ಗೋಪಿನಾಥನ್‌

ಕೇಂದ್ರ ಗೃಹ ಸಚಿವಾಲಯವು ರಾಜ್ಯ ಸರ್ಕಾರಗಳು ಮತ್ತು ವಿಶೇಷ ನ್ಯಾಯಾಲಯಗಳಿಗೆ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡಿದ ಎಲ್ಲಾ ಐಪಿಎಸ್ ಅಧಿಕಾರಿಗಳ ಬಗ್ಗೆ ಮಾಹಿತಿಯನ್ನು ಅರ್ಜಿಯಲ್ಲಿ ಕೋರಲಾಗಿತ್ತು.

ಈ ಮೊದಲು ಮಾರ್ಚ್ 11 ರಂದು ಆರ್‌ಟಿಐ ಅರ್ಜಿಗೆ ಉತ್ತರವಾಗಿ, ಗೃಹ ಸಚಿವಾಲಯವು ಮಾಹಿತಿಯನ್ನು ನೀಡಲು ನಿರಾಕರಿಸಿತ್ತು. ಮಾಹಿತಿಯನ್ನು ನೀಡುವಲ್ಲಿ ಯಾವುದೇ ಸಾರ್ವಜನಿಕ ಹಿತಾಸಕ್ತಿ ಇಲ್ಲ ಮತ್ತು ಅಂತಹ ಮಾಹಿತಿಯನ್ನು ಆರ್‌‌ಟಿಐ ಕಾಯ್ದೆ, 2005 ಸೆಕ್ಷನ್ 8 (1) (ಜೆ) ಅಡಿಯಲ್ಲಿ ಒದಗಿಸಲಾಗುವುದಿಲ್ಲ ಎಂದು ಹೇಳಿತ್ತು.

ಆದಾಗ್ಯೂ, ಮೇ 10 ರಂದು, ಮಾರ್ಚ್ 11 ರ ಪತ್ರಕ್ಕೆ ಮುಂದುವರಿದ ಪತ್ರವಾಗಿ ಗೃಹ ಸಚಿವಾಲಯವು ಹೆಚ್ಚಿನ ಮಾಹಿತಿಯನ್ನು ಹಂಚಿಕೊಂಡಿದೆ.

ಅಮಾನತುಗೊಂಡಿರುವ 24 ಐಪಿಎಸ್ ಅಧಿಕಾರಿಗಳ ಹೆಸರನ್ನು ಬಹಿರಂಗಪಡಿಸಲು ಗೃಹ ಸಚಿವಾಲಯ ಏಕೆ ಹಿಂಜರಿಯುತ್ತಿದೆ ಎಂದು ಅರ್ಜಿದಾರ ಹೇಮಂತ್‌ ಕುಮಾರ್ ಪ್ರಶ್ನಿಸಿದ್ದಾರೆ.

“ಸೆಪ್ಟೆಂಬರ್ 2017 ರಲ್ಲಿ, ಗೃಹ ಸಚಿವಾಲಯವು ಅಮಾನತುಗೊಂಡ 15 ಐಪಿಎಸ್ ಅಧಿಕಾರಿಗಳ ಹೆಸರು ಮತ್ತು ವಿವರಗಳನ್ನು ನನಗೆ ಒದಗಿಸಿತ್ತು. ಆದರೆ ಈಗ ಇದೇ ರೀತಿಯ ಮಾಹಿತಿಯನ್ನು ನಿರಾಕರಿಸಲಾಗುತ್ತಿದೆ” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಲಸಿಕಾ ರಾಜಕೀಯ: ಮೇ 1 ರಿಂದ ಲಸಿಕೆ ಎಂಬುದು ನಿಜವೇ? ನಿಮಗೆ ಲಸಿಕೆ ಸಿಗಲು ಎಷ್ಟು ತಿಂಗಳು/ವರ್ಷ ಬೇಕು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...