Homeಮುಖಪುಟ13 ಐಪಿಎಸ್‌ ಅಧಿಕಾರಿಗಳ ಕಡ್ಡಾಯ ನಿವೃತ್ತಿ: ಕೇಂದ್ರ ಗೃಹ ಸಚಿವಾಲಯ

13 ಐಪಿಎಸ್‌ ಅಧಿಕಾರಿಗಳ ಕಡ್ಡಾಯ ನಿವೃತ್ತಿ: ಕೇಂದ್ರ ಗೃಹ ಸಚಿವಾಲಯ

ಅಮಾನತ್ತಿನಲ್ಲಿರುವ 24 ಐಪಿಎಸ್ ಅಧಿಕಾರಿಗಳ ಮಾಹಿತಿಯನ್ನು ನೀಡಲು ಕೇಂದ್ರವು ನಿರಾಕರಿಸಿದೆ.

- Advertisement -
- Advertisement -

2014 ರಿಂದ ದೇಶದಾದ್ಯಂತ 13 ಭಾರತೀಯ ಪೊಲೀಸ್ ಸೇವೆ (ಐಪಿಎಸ್‌) ಅಧಿಕಾರಿಗಳನ್ನು ಸಾರ್ವಜನಿಕ ಹಿತದೃಷ್ಟಿಯಿಂದ ಕಡ್ಡಾಯ ನಿವೃತ್ತಿ ಮಾಡಲಾಗಿದ್ದು, ಐವರು ಅಧಿಕಾರಿಗಳನ್ನು ವಜಾಗೊಳಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ಬಹಿರಂಗಪಡಿಸಿದೆ. ಆದರೆ ಅಮಾನತ್ತಿನಲ್ಲಿರುವ 24 ಐಪಿಎಸ್ ಅಧಿಕಾರಿಗಳ ಮಾಹಿತಿಯನ್ನು ನೀಡಲು ಕೇಂದ್ರವು ನಿರಾಕರಿಸಿದೆ.

ದೇಶಾದ್ಯಂತ ಐದು ಐಪಿಎಸ್‌ ಅಧಿಕಾರಿಗಳ ವಿರುದ್ಧ ಸಚಿವಾಲಯವು ಕಾನೂನು ಕ್ರಮ ಜರುಗಿಸಲು ಅನುಮತಿ ನೀಡಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ. ಸಚಿವಾಲಯವು ನಿವೃತ್ತರಾದ, ವಜಾಗೊಳಿಸಿದ ಮತ್ತು ಕಾನೂನು ಕ್ರಮ ಜರುಗಿಸಲ್ಪಟ್ಟ ಎಲ್ಲ ಅಧಿಕಾರಿಗಳ ಹೆಸರನ್ನು ಹಂಚಿಕೊಂಡಿದೆ. ಆದರೆ ಪ್ರಸ್ತುತ ಅಮಾನತುಗೊಂಡಿರುವ 24 ಐಪಿಎಸ್‌ ಅಧಿಕಾರಿಗಳ ಹೆಸರನ್ನು ಬಹಿರಂಗಪಡಿಸಿಲ್ಲ. ಹಾಗೂ ಅದರಲ್ಲಿ “ಯಾವುದೇ ಸಾರ್ವಜನಿಕ ಹಿತಾಸಕ್ತಿ ಇಲ್ಲ” ಎಂದು ತಿಳಿಸಿದೆ.

ಫೆಬ್ರವರಿ 21, 2021 ರಲ್ಲಿ ಆರ್‌ಟಿಐ ಅರ್ಜಿಯ ಮೂಲಕ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ವಕೀಲರಾದ ಹೇಮಂತ್ ಕುಮಾರ್ ಅವರು 2014 ರ ಮೇ ತಿಂಗಳಿನಿಂದ ಯಾವ ಐಪಿಎಸ್‌ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಬಗ್ಗೆ ಮಾಹಿತಿ ಕೋರಿದ್ದರು.

ಇದನ್ನೂ ಓದಿ: CAA, NRC, NPR ಕುರಿತು ಚರ್ಚೆಗೆ ಸಿದ್ಧನಿದ್ದೇನೆ: ಅಮಿತ್‌ ಶಾಗೆ ಪತ್ರಬರೆದ ಮಾಜಿ ಐಎಎಸ್‌ ಕಣ್ಣನ್‌ ಗೋಪಿನಾಥನ್‌

ಕೇಂದ್ರ ಗೃಹ ಸಚಿವಾಲಯವು ರಾಜ್ಯ ಸರ್ಕಾರಗಳು ಮತ್ತು ವಿಶೇಷ ನ್ಯಾಯಾಲಯಗಳಿಗೆ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡಿದ ಎಲ್ಲಾ ಐಪಿಎಸ್ ಅಧಿಕಾರಿಗಳ ಬಗ್ಗೆ ಮಾಹಿತಿಯನ್ನು ಅರ್ಜಿಯಲ್ಲಿ ಕೋರಲಾಗಿತ್ತು.

ಈ ಮೊದಲು ಮಾರ್ಚ್ 11 ರಂದು ಆರ್‌ಟಿಐ ಅರ್ಜಿಗೆ ಉತ್ತರವಾಗಿ, ಗೃಹ ಸಚಿವಾಲಯವು ಮಾಹಿತಿಯನ್ನು ನೀಡಲು ನಿರಾಕರಿಸಿತ್ತು. ಮಾಹಿತಿಯನ್ನು ನೀಡುವಲ್ಲಿ ಯಾವುದೇ ಸಾರ್ವಜನಿಕ ಹಿತಾಸಕ್ತಿ ಇಲ್ಲ ಮತ್ತು ಅಂತಹ ಮಾಹಿತಿಯನ್ನು ಆರ್‌‌ಟಿಐ ಕಾಯ್ದೆ, 2005 ಸೆಕ್ಷನ್ 8 (1) (ಜೆ) ಅಡಿಯಲ್ಲಿ ಒದಗಿಸಲಾಗುವುದಿಲ್ಲ ಎಂದು ಹೇಳಿತ್ತು.

ಆದಾಗ್ಯೂ, ಮೇ 10 ರಂದು, ಮಾರ್ಚ್ 11 ರ ಪತ್ರಕ್ಕೆ ಮುಂದುವರಿದ ಪತ್ರವಾಗಿ ಗೃಹ ಸಚಿವಾಲಯವು ಹೆಚ್ಚಿನ ಮಾಹಿತಿಯನ್ನು ಹಂಚಿಕೊಂಡಿದೆ.

ಅಮಾನತುಗೊಂಡಿರುವ 24 ಐಪಿಎಸ್ ಅಧಿಕಾರಿಗಳ ಹೆಸರನ್ನು ಬಹಿರಂಗಪಡಿಸಲು ಗೃಹ ಸಚಿವಾಲಯ ಏಕೆ ಹಿಂಜರಿಯುತ್ತಿದೆ ಎಂದು ಅರ್ಜಿದಾರ ಹೇಮಂತ್‌ ಕುಮಾರ್ ಪ್ರಶ್ನಿಸಿದ್ದಾರೆ.

“ಸೆಪ್ಟೆಂಬರ್ 2017 ರಲ್ಲಿ, ಗೃಹ ಸಚಿವಾಲಯವು ಅಮಾನತುಗೊಂಡ 15 ಐಪಿಎಸ್ ಅಧಿಕಾರಿಗಳ ಹೆಸರು ಮತ್ತು ವಿವರಗಳನ್ನು ನನಗೆ ಒದಗಿಸಿತ್ತು. ಆದರೆ ಈಗ ಇದೇ ರೀತಿಯ ಮಾಹಿತಿಯನ್ನು ನಿರಾಕರಿಸಲಾಗುತ್ತಿದೆ” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಲಸಿಕಾ ರಾಜಕೀಯ: ಮೇ 1 ರಿಂದ ಲಸಿಕೆ ಎಂಬುದು ನಿಜವೇ? ನಿಮಗೆ ಲಸಿಕೆ ಸಿಗಲು ಎಷ್ಟು ತಿಂಗಳು/ವರ್ಷ ಬೇಕು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...