Homeಮುಖಪುಟ13 ಐಪಿಎಸ್‌ ಅಧಿಕಾರಿಗಳ ಕಡ್ಡಾಯ ನಿವೃತ್ತಿ: ಕೇಂದ್ರ ಗೃಹ ಸಚಿವಾಲಯ

13 ಐಪಿಎಸ್‌ ಅಧಿಕಾರಿಗಳ ಕಡ್ಡಾಯ ನಿವೃತ್ತಿ: ಕೇಂದ್ರ ಗೃಹ ಸಚಿವಾಲಯ

ಅಮಾನತ್ತಿನಲ್ಲಿರುವ 24 ಐಪಿಎಸ್ ಅಧಿಕಾರಿಗಳ ಮಾಹಿತಿಯನ್ನು ನೀಡಲು ಕೇಂದ್ರವು ನಿರಾಕರಿಸಿದೆ.

- Advertisement -
- Advertisement -

2014 ರಿಂದ ದೇಶದಾದ್ಯಂತ 13 ಭಾರತೀಯ ಪೊಲೀಸ್ ಸೇವೆ (ಐಪಿಎಸ್‌) ಅಧಿಕಾರಿಗಳನ್ನು ಸಾರ್ವಜನಿಕ ಹಿತದೃಷ್ಟಿಯಿಂದ ಕಡ್ಡಾಯ ನಿವೃತ್ತಿ ಮಾಡಲಾಗಿದ್ದು, ಐವರು ಅಧಿಕಾರಿಗಳನ್ನು ವಜಾಗೊಳಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ಬಹಿರಂಗಪಡಿಸಿದೆ. ಆದರೆ ಅಮಾನತ್ತಿನಲ್ಲಿರುವ 24 ಐಪಿಎಸ್ ಅಧಿಕಾರಿಗಳ ಮಾಹಿತಿಯನ್ನು ನೀಡಲು ಕೇಂದ್ರವು ನಿರಾಕರಿಸಿದೆ.

ದೇಶಾದ್ಯಂತ ಐದು ಐಪಿಎಸ್‌ ಅಧಿಕಾರಿಗಳ ವಿರುದ್ಧ ಸಚಿವಾಲಯವು ಕಾನೂನು ಕ್ರಮ ಜರುಗಿಸಲು ಅನುಮತಿ ನೀಡಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ. ಸಚಿವಾಲಯವು ನಿವೃತ್ತರಾದ, ವಜಾಗೊಳಿಸಿದ ಮತ್ತು ಕಾನೂನು ಕ್ರಮ ಜರುಗಿಸಲ್ಪಟ್ಟ ಎಲ್ಲ ಅಧಿಕಾರಿಗಳ ಹೆಸರನ್ನು ಹಂಚಿಕೊಂಡಿದೆ. ಆದರೆ ಪ್ರಸ್ತುತ ಅಮಾನತುಗೊಂಡಿರುವ 24 ಐಪಿಎಸ್‌ ಅಧಿಕಾರಿಗಳ ಹೆಸರನ್ನು ಬಹಿರಂಗಪಡಿಸಿಲ್ಲ. ಹಾಗೂ ಅದರಲ್ಲಿ “ಯಾವುದೇ ಸಾರ್ವಜನಿಕ ಹಿತಾಸಕ್ತಿ ಇಲ್ಲ” ಎಂದು ತಿಳಿಸಿದೆ.

ಫೆಬ್ರವರಿ 21, 2021 ರಲ್ಲಿ ಆರ್‌ಟಿಐ ಅರ್ಜಿಯ ಮೂಲಕ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ವಕೀಲರಾದ ಹೇಮಂತ್ ಕುಮಾರ್ ಅವರು 2014 ರ ಮೇ ತಿಂಗಳಿನಿಂದ ಯಾವ ಐಪಿಎಸ್‌ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಬಗ್ಗೆ ಮಾಹಿತಿ ಕೋರಿದ್ದರು.

ಇದನ್ನೂ ಓದಿ: CAA, NRC, NPR ಕುರಿತು ಚರ್ಚೆಗೆ ಸಿದ್ಧನಿದ್ದೇನೆ: ಅಮಿತ್‌ ಶಾಗೆ ಪತ್ರಬರೆದ ಮಾಜಿ ಐಎಎಸ್‌ ಕಣ್ಣನ್‌ ಗೋಪಿನಾಥನ್‌

ಕೇಂದ್ರ ಗೃಹ ಸಚಿವಾಲಯವು ರಾಜ್ಯ ಸರ್ಕಾರಗಳು ಮತ್ತು ವಿಶೇಷ ನ್ಯಾಯಾಲಯಗಳಿಗೆ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡಿದ ಎಲ್ಲಾ ಐಪಿಎಸ್ ಅಧಿಕಾರಿಗಳ ಬಗ್ಗೆ ಮಾಹಿತಿಯನ್ನು ಅರ್ಜಿಯಲ್ಲಿ ಕೋರಲಾಗಿತ್ತು.

ಈ ಮೊದಲು ಮಾರ್ಚ್ 11 ರಂದು ಆರ್‌ಟಿಐ ಅರ್ಜಿಗೆ ಉತ್ತರವಾಗಿ, ಗೃಹ ಸಚಿವಾಲಯವು ಮಾಹಿತಿಯನ್ನು ನೀಡಲು ನಿರಾಕರಿಸಿತ್ತು. ಮಾಹಿತಿಯನ್ನು ನೀಡುವಲ್ಲಿ ಯಾವುದೇ ಸಾರ್ವಜನಿಕ ಹಿತಾಸಕ್ತಿ ಇಲ್ಲ ಮತ್ತು ಅಂತಹ ಮಾಹಿತಿಯನ್ನು ಆರ್‌‌ಟಿಐ ಕಾಯ್ದೆ, 2005 ಸೆಕ್ಷನ್ 8 (1) (ಜೆ) ಅಡಿಯಲ್ಲಿ ಒದಗಿಸಲಾಗುವುದಿಲ್ಲ ಎಂದು ಹೇಳಿತ್ತು.

ಆದಾಗ್ಯೂ, ಮೇ 10 ರಂದು, ಮಾರ್ಚ್ 11 ರ ಪತ್ರಕ್ಕೆ ಮುಂದುವರಿದ ಪತ್ರವಾಗಿ ಗೃಹ ಸಚಿವಾಲಯವು ಹೆಚ್ಚಿನ ಮಾಹಿತಿಯನ್ನು ಹಂಚಿಕೊಂಡಿದೆ.

ಅಮಾನತುಗೊಂಡಿರುವ 24 ಐಪಿಎಸ್ ಅಧಿಕಾರಿಗಳ ಹೆಸರನ್ನು ಬಹಿರಂಗಪಡಿಸಲು ಗೃಹ ಸಚಿವಾಲಯ ಏಕೆ ಹಿಂಜರಿಯುತ್ತಿದೆ ಎಂದು ಅರ್ಜಿದಾರ ಹೇಮಂತ್‌ ಕುಮಾರ್ ಪ್ರಶ್ನಿಸಿದ್ದಾರೆ.

“ಸೆಪ್ಟೆಂಬರ್ 2017 ರಲ್ಲಿ, ಗೃಹ ಸಚಿವಾಲಯವು ಅಮಾನತುಗೊಂಡ 15 ಐಪಿಎಸ್ ಅಧಿಕಾರಿಗಳ ಹೆಸರು ಮತ್ತು ವಿವರಗಳನ್ನು ನನಗೆ ಒದಗಿಸಿತ್ತು. ಆದರೆ ಈಗ ಇದೇ ರೀತಿಯ ಮಾಹಿತಿಯನ್ನು ನಿರಾಕರಿಸಲಾಗುತ್ತಿದೆ” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಲಸಿಕಾ ರಾಜಕೀಯ: ಮೇ 1 ರಿಂದ ಲಸಿಕೆ ಎಂಬುದು ನಿಜವೇ? ನಿಮಗೆ ಲಸಿಕೆ ಸಿಗಲು ಎಷ್ಟು ತಿಂಗಳು/ವರ್ಷ ಬೇಕು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...