Homeಮುಖಪುಟ13 ಐಪಿಎಸ್‌ ಅಧಿಕಾರಿಗಳ ಕಡ್ಡಾಯ ನಿವೃತ್ತಿ: ಕೇಂದ್ರ ಗೃಹ ಸಚಿವಾಲಯ

13 ಐಪಿಎಸ್‌ ಅಧಿಕಾರಿಗಳ ಕಡ್ಡಾಯ ನಿವೃತ್ತಿ: ಕೇಂದ್ರ ಗೃಹ ಸಚಿವಾಲಯ

ಅಮಾನತ್ತಿನಲ್ಲಿರುವ 24 ಐಪಿಎಸ್ ಅಧಿಕಾರಿಗಳ ಮಾಹಿತಿಯನ್ನು ನೀಡಲು ಕೇಂದ್ರವು ನಿರಾಕರಿಸಿದೆ.

- Advertisement -
- Advertisement -

2014 ರಿಂದ ದೇಶದಾದ್ಯಂತ 13 ಭಾರತೀಯ ಪೊಲೀಸ್ ಸೇವೆ (ಐಪಿಎಸ್‌) ಅಧಿಕಾರಿಗಳನ್ನು ಸಾರ್ವಜನಿಕ ಹಿತದೃಷ್ಟಿಯಿಂದ ಕಡ್ಡಾಯ ನಿವೃತ್ತಿ ಮಾಡಲಾಗಿದ್ದು, ಐವರು ಅಧಿಕಾರಿಗಳನ್ನು ವಜಾಗೊಳಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ಬಹಿರಂಗಪಡಿಸಿದೆ. ಆದರೆ ಅಮಾನತ್ತಿನಲ್ಲಿರುವ 24 ಐಪಿಎಸ್ ಅಧಿಕಾರಿಗಳ ಮಾಹಿತಿಯನ್ನು ನೀಡಲು ಕೇಂದ್ರವು ನಿರಾಕರಿಸಿದೆ.

ದೇಶಾದ್ಯಂತ ಐದು ಐಪಿಎಸ್‌ ಅಧಿಕಾರಿಗಳ ವಿರುದ್ಧ ಸಚಿವಾಲಯವು ಕಾನೂನು ಕ್ರಮ ಜರುಗಿಸಲು ಅನುಮತಿ ನೀಡಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ. ಸಚಿವಾಲಯವು ನಿವೃತ್ತರಾದ, ವಜಾಗೊಳಿಸಿದ ಮತ್ತು ಕಾನೂನು ಕ್ರಮ ಜರುಗಿಸಲ್ಪಟ್ಟ ಎಲ್ಲ ಅಧಿಕಾರಿಗಳ ಹೆಸರನ್ನು ಹಂಚಿಕೊಂಡಿದೆ. ಆದರೆ ಪ್ರಸ್ತುತ ಅಮಾನತುಗೊಂಡಿರುವ 24 ಐಪಿಎಸ್‌ ಅಧಿಕಾರಿಗಳ ಹೆಸರನ್ನು ಬಹಿರಂಗಪಡಿಸಿಲ್ಲ. ಹಾಗೂ ಅದರಲ್ಲಿ “ಯಾವುದೇ ಸಾರ್ವಜನಿಕ ಹಿತಾಸಕ್ತಿ ಇಲ್ಲ” ಎಂದು ತಿಳಿಸಿದೆ.

ಫೆಬ್ರವರಿ 21, 2021 ರಲ್ಲಿ ಆರ್‌ಟಿಐ ಅರ್ಜಿಯ ಮೂಲಕ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ವಕೀಲರಾದ ಹೇಮಂತ್ ಕುಮಾರ್ ಅವರು 2014 ರ ಮೇ ತಿಂಗಳಿನಿಂದ ಯಾವ ಐಪಿಎಸ್‌ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಬಗ್ಗೆ ಮಾಹಿತಿ ಕೋರಿದ್ದರು.

ಇದನ್ನೂ ಓದಿ: CAA, NRC, NPR ಕುರಿತು ಚರ್ಚೆಗೆ ಸಿದ್ಧನಿದ್ದೇನೆ: ಅಮಿತ್‌ ಶಾಗೆ ಪತ್ರಬರೆದ ಮಾಜಿ ಐಎಎಸ್‌ ಕಣ್ಣನ್‌ ಗೋಪಿನಾಥನ್‌

ಕೇಂದ್ರ ಗೃಹ ಸಚಿವಾಲಯವು ರಾಜ್ಯ ಸರ್ಕಾರಗಳು ಮತ್ತು ವಿಶೇಷ ನ್ಯಾಯಾಲಯಗಳಿಗೆ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡಿದ ಎಲ್ಲಾ ಐಪಿಎಸ್ ಅಧಿಕಾರಿಗಳ ಬಗ್ಗೆ ಮಾಹಿತಿಯನ್ನು ಅರ್ಜಿಯಲ್ಲಿ ಕೋರಲಾಗಿತ್ತು.

ಈ ಮೊದಲು ಮಾರ್ಚ್ 11 ರಂದು ಆರ್‌ಟಿಐ ಅರ್ಜಿಗೆ ಉತ್ತರವಾಗಿ, ಗೃಹ ಸಚಿವಾಲಯವು ಮಾಹಿತಿಯನ್ನು ನೀಡಲು ನಿರಾಕರಿಸಿತ್ತು. ಮಾಹಿತಿಯನ್ನು ನೀಡುವಲ್ಲಿ ಯಾವುದೇ ಸಾರ್ವಜನಿಕ ಹಿತಾಸಕ್ತಿ ಇಲ್ಲ ಮತ್ತು ಅಂತಹ ಮಾಹಿತಿಯನ್ನು ಆರ್‌‌ಟಿಐ ಕಾಯ್ದೆ, 2005 ಸೆಕ್ಷನ್ 8 (1) (ಜೆ) ಅಡಿಯಲ್ಲಿ ಒದಗಿಸಲಾಗುವುದಿಲ್ಲ ಎಂದು ಹೇಳಿತ್ತು.

ಆದಾಗ್ಯೂ, ಮೇ 10 ರಂದು, ಮಾರ್ಚ್ 11 ರ ಪತ್ರಕ್ಕೆ ಮುಂದುವರಿದ ಪತ್ರವಾಗಿ ಗೃಹ ಸಚಿವಾಲಯವು ಹೆಚ್ಚಿನ ಮಾಹಿತಿಯನ್ನು ಹಂಚಿಕೊಂಡಿದೆ.

ಅಮಾನತುಗೊಂಡಿರುವ 24 ಐಪಿಎಸ್ ಅಧಿಕಾರಿಗಳ ಹೆಸರನ್ನು ಬಹಿರಂಗಪಡಿಸಲು ಗೃಹ ಸಚಿವಾಲಯ ಏಕೆ ಹಿಂಜರಿಯುತ್ತಿದೆ ಎಂದು ಅರ್ಜಿದಾರ ಹೇಮಂತ್‌ ಕುಮಾರ್ ಪ್ರಶ್ನಿಸಿದ್ದಾರೆ.

“ಸೆಪ್ಟೆಂಬರ್ 2017 ರಲ್ಲಿ, ಗೃಹ ಸಚಿವಾಲಯವು ಅಮಾನತುಗೊಂಡ 15 ಐಪಿಎಸ್ ಅಧಿಕಾರಿಗಳ ಹೆಸರು ಮತ್ತು ವಿವರಗಳನ್ನು ನನಗೆ ಒದಗಿಸಿತ್ತು. ಆದರೆ ಈಗ ಇದೇ ರೀತಿಯ ಮಾಹಿತಿಯನ್ನು ನಿರಾಕರಿಸಲಾಗುತ್ತಿದೆ” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಲಸಿಕಾ ರಾಜಕೀಯ: ಮೇ 1 ರಿಂದ ಲಸಿಕೆ ಎಂಬುದು ನಿಜವೇ? ನಿಮಗೆ ಲಸಿಕೆ ಸಿಗಲು ಎಷ್ಟು ತಿಂಗಳು/ವರ್ಷ ಬೇಕು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಶಾಲಾ ಬಸ್ಸಿನ ನೆಲಹಾಸು ಕುಸಿದು 7 ವರ್ಷದ ಬಾಲಕಿ ಸಾವು; ಇಬ್ಬರ ಬಂಧನ

ಉತ್ತರ ಪ್ರದೇಶದ ಅಲಿಗಢದಲ್ಲಿ ಶಾಲಾ ಬಸ್ಸಿನ ನೆಲಹಾಸು ಕುಸಿದು ಕೆಳಗೆ ಬಿದ್ದ ಏಳು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ. ಖಾಸಗಿ ಶಾಲೆಯ ವ್ಯವಸ್ಥಾಪಕ ಮತ್ತು ಬಸ್ ಚಾಲಕನನ್ನು ಬಂಧಿಸಲಾಗಿದೆ ಎಂದು...

ಇಸ್ರೇಲ್-ಇರಾನ್ ಸಂಘರ್ಷ: ನವದೆಹಲಿಯಲ್ಲಿ 24×7 ನಿಯಂತ್ರಣ ಕೊಠಡಿ ಸ್ಥಾಪಿಸಿದ ತೆಲಂಗಾಣ

ಹೈದರಾಬಾದ್: ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರ ನಿರ್ದೇಶನಗಳನ್ನು ಅನುಸರಿಸಿ, ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ನಡುವೆ, ಮಧ್ಯಪ್ರಾಚ್ಯದಲ್ಲಿರುವ ತೆಲಂಗಾಣ ನಾಗರಿಕರಿಗೆ ಸಹಾಯ ಮಾಡಲು ನವದೆಹಲಿಯ ತೆಲಂಗಾಣ ಭವನದಲ್ಲಿ 24×7 ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ. ಪ್ರಯಾಣ...

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಡ್ರೋನ್ ದೋಣಿ ಡಿಕ್ಕಿ; ಭಾರತೀಯ ಸಿಬ್ಬಂದಿ ಸಾವು

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಮಾನವರಹಿತ ಡ್ರೋನ್ ದೋಣಿ ಡಿಕ್ಕಿ ಹೊಡೆದ ಪರಿಣಾಮ ಭಾರತೀಯ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಇಸ್ರೇಲ್ ಮತ್ತು ಇರಾನ್ ನಡುವಿನ ಹಗೆತನವು ಪ್ರದೇಶದಾದ್ಯಂತ ಉಲ್ಬಣಗೊಳ್ಳುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡು ಹಡಗಿನಲ್ಲಿದ್ದ...

ನಾಗ್ಪುರ ಕಾರ್ಖಾನೆ ಸ್ಫೋಟ: ಸ್ಫೋಟಕ ಕಂಪನಿಯ ಒಂಬತ್ತು ನಿರ್ದೇಶಕರ ಬಂಧನ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 18 ಜನರು ಸಾವನ್ನಪ್ಪಿದ್ದು, ಸ್ಫೋಟಕ ತಯಾರಿಕಾ ಕಂಪನಿಯ ಒಂಬತ್ತು ನಿರ್ದೇಶಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಇಲ್ಲಿನ ಕಲ್ಮೇಶ್ವರ ಪೊಲೀಸರು ಎಸ್‌ಬಿಎಲ್ ಎನರ್ಜಿ...

ಅಪ್ರಾಪ್ತ ಮಗಳ ಮರ್ಯಾದೆಗೇಡು ಹತ್ಯೆ : ದಂಪತಿಗೆ ಜೀವಾವಧಿ ಶಿಕ್ಷೆ ಖಾಯಂಗೊಳಿಸಿದ ಅಲಹಾಬಾದ್‌ ಹೈಕೋರ್ಟ್

ಮರ್ಯಾದೆಗೇಡು ಹತ್ಯೆ ಪ್ರಕರಣದಲ್ಲಿ, 2014ರಲ್ಲಿ ತಮ್ಮ ಅಪ್ರಾಪ್ತ ಮಗಳು ಮತ್ತು ಬಾಡಿಗೆದಾರರನ್ನು ಕೊಲೆ ಮಾಡಿದ್ದ ದಂಪತಿಗೆ ಜೀವಾವಧಿ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಖಾಯಂಗೊಳಿಸಿದೆ. ನ್ಯಾಯಮೂರ್ತಿ ಜೆ.ಜೆ. ಮುನೀರ್ ಮತ್ತು ನ್ಯಾಯಮೂರ್ತಿ ವಿನಯ್ ಕುಮಾರ್ ದ್ವಿವೇದಿ...

ಇಸ್ರೇಲ್-ಇರಾನ್ ಸಂಘರ್ಷ: ಕೇರಳದ ಗಲ್ಫ್ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ, ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧಾರ

ತಿರುವನಂತಪುರಂ: ಪಶ್ಚಿಮ ಏಷ್ಯಾ ಪ್ರದೇಶದಲ್ಲಿನ ಪ್ರಚಲಿತ ಅಶಾಂತಿಯನ್ನು ಗಮನದಲ್ಲಿಟ್ಟುಕೊಂಡು, ಸಾಮಾನ್ಯ ಶಿಕ್ಷಣ ಇಲಾಖೆಯು ಗಲ್ಫ್ ರಾಷ್ಟ್ರಗಳಲ್ಲಿನ ಕೇಂದ್ರಗಳಲ್ಲಿ ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ ಮತ್ತು ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧರಿಸಿದೆ.   ಮಾರ್ಚ್ 5 ರಂದು ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ...

ಚಿಕ್ಕಬಳ್ಳಾಪುರ| ಆಯತುಲ್ಲಾ ಖಮೇನಿ ಹತ್ಯೆ; ಅಲಿಪುರದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ

ಇಸ್ರೇಲ್-ಅಮೆರಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತುಲ್ಲಾ ಖಮೇನಿ ಹತ್ಯೆಯಿಂದ ನೊಂದಿರುವ ಗೌರಿಬಿದನೂರು ತಾಲ್ಲೂಕಿನ ಅಲಿಪುರ ಗ್ರಾಮದ ಶಿಯಾ ಸಮುದಾಯವು, ಗ್ರಾಮದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ...

ಸೌದಿ ಅರೇಬಿಯಾ | ಡ್ರೋನ್ ದಾಳಿ ಬಳಿಕ ರಾಸ್ ತನುರಾ ಸಂಸ್ಕರಣಾಗಾರ ಮುಚ್ಚಿದ ತೈಲ ದೈತ್ಯ ಅರಾಮ್ಕೊ

ಸೌದಿ ಅರೇಬಿಯಾದ ಸರ್ಕಾರಿ ಸ್ವಾಮ್ಯದ ತೈಲ ದೈತ್ಯ ಸಂಸ್ಥೆ ಅರಾಮ್ಕೊ ಡ್ರೋನ್ ದಾಳಿಗೆ ಒಳಗಾದ ನಂತರ ತನ್ನ ರಾಸ್ ತನುರಾ ತೈಲ ಸಂಸ್ಕರಣಾಗಾರವನ್ನು ಮುಚ್ಚಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ರಾಯಿಟರ್ಸ್ ಸೋಮವಾರ (ಫೆ.2)...

ದೆಹಲಿ ನ್ಯಾಯಾಲಯದಿಂದ ತಕ್ಷಣ ಬಿಡುಗಡೆ ಆದೇಶ: ತಿಹಾರ್ ಜೈಲಿನಿಂದ ಹೊರಬಂದ 14 ಜೆಎನ್‌ಯು ವಿದ್ಯಾರ್ಥಿಗಳು 

ಫೆಬ್ರವರಿ 26 ರಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘ (ಜೆಎನ್‌ಯುಎಸ್‌ಯು) ಪ್ರತಿಭಟನೆಯ ಸಂದರ್ಭದಲ್ಲಿ ಬಂಧಿಸಲ್ಪಟ್ಟಿದ್ದ ಹದಿನಾಲ್ಕು ವಿದ್ಯಾರ್ಥಿ ನಾಯಕರನ್ನು ದೆಹಲಿ ನ್ಯಾಯಾಲಯವು ಭಾನುವಾರ ತಕ್ಷಣ ಬಿಡುಗಡೆ ಮಾಡಲು ಆದೇಶಿಸಿದ ನಂತರ, 14...

ಉತ್ತರ ಪ್ರದೇಶ| ಇಂಜೆಕ್ಷನ್ ನೀಡಿದ ಗೋರಖ್‌ಪುರದ ಮೆಡಿಕಲ್ ಸ್ಟೋರ್‌ ನಿರ್ವಾಹಕ; ಬಾಲಕಿ ಸಾವು

ಗೋರಖ್‌ಪುರದ ಉರುವಾ ಪ್ರದೇಶದ ಮೆಡಿಕಲ್ ಸ್ಟೋರ್‌ ನಿರ್ವಾಹಕನಿಂದ ಇಂಜೆಕ್ಷನ್ ಪಡೆದ ಒಂಬತ್ತು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಈ ಘಟನೆ ಭಾನುವಾರ ಸಂಜೆ ನಡೆದಿದೆ. ಮೃತ ದಿವ್ಯಾ ಬನ್ಸ್‌ಗಾಂವ್ ಪೊಲೀಸ್...