Homeಮುಖಪುಟ13 ಐಪಿಎಸ್‌ ಅಧಿಕಾರಿಗಳ ಕಡ್ಡಾಯ ನಿವೃತ್ತಿ: ಕೇಂದ್ರ ಗೃಹ ಸಚಿವಾಲಯ

13 ಐಪಿಎಸ್‌ ಅಧಿಕಾರಿಗಳ ಕಡ್ಡಾಯ ನಿವೃತ್ತಿ: ಕೇಂದ್ರ ಗೃಹ ಸಚಿವಾಲಯ

ಅಮಾನತ್ತಿನಲ್ಲಿರುವ 24 ಐಪಿಎಸ್ ಅಧಿಕಾರಿಗಳ ಮಾಹಿತಿಯನ್ನು ನೀಡಲು ಕೇಂದ್ರವು ನಿರಾಕರಿಸಿದೆ.

- Advertisement -
- Advertisement -

2014 ರಿಂದ ದೇಶದಾದ್ಯಂತ 13 ಭಾರತೀಯ ಪೊಲೀಸ್ ಸೇವೆ (ಐಪಿಎಸ್‌) ಅಧಿಕಾರಿಗಳನ್ನು ಸಾರ್ವಜನಿಕ ಹಿತದೃಷ್ಟಿಯಿಂದ ಕಡ್ಡಾಯ ನಿವೃತ್ತಿ ಮಾಡಲಾಗಿದ್ದು, ಐವರು ಅಧಿಕಾರಿಗಳನ್ನು ವಜಾಗೊಳಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ಬಹಿರಂಗಪಡಿಸಿದೆ. ಆದರೆ ಅಮಾನತ್ತಿನಲ್ಲಿರುವ 24 ಐಪಿಎಸ್ ಅಧಿಕಾರಿಗಳ ಮಾಹಿತಿಯನ್ನು ನೀಡಲು ಕೇಂದ್ರವು ನಿರಾಕರಿಸಿದೆ.

ದೇಶಾದ್ಯಂತ ಐದು ಐಪಿಎಸ್‌ ಅಧಿಕಾರಿಗಳ ವಿರುದ್ಧ ಸಚಿವಾಲಯವು ಕಾನೂನು ಕ್ರಮ ಜರುಗಿಸಲು ಅನುಮತಿ ನೀಡಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ. ಸಚಿವಾಲಯವು ನಿವೃತ್ತರಾದ, ವಜಾಗೊಳಿಸಿದ ಮತ್ತು ಕಾನೂನು ಕ್ರಮ ಜರುಗಿಸಲ್ಪಟ್ಟ ಎಲ್ಲ ಅಧಿಕಾರಿಗಳ ಹೆಸರನ್ನು ಹಂಚಿಕೊಂಡಿದೆ. ಆದರೆ ಪ್ರಸ್ತುತ ಅಮಾನತುಗೊಂಡಿರುವ 24 ಐಪಿಎಸ್‌ ಅಧಿಕಾರಿಗಳ ಹೆಸರನ್ನು ಬಹಿರಂಗಪಡಿಸಿಲ್ಲ. ಹಾಗೂ ಅದರಲ್ಲಿ “ಯಾವುದೇ ಸಾರ್ವಜನಿಕ ಹಿತಾಸಕ್ತಿ ಇಲ್ಲ” ಎಂದು ತಿಳಿಸಿದೆ.

ಫೆಬ್ರವರಿ 21, 2021 ರಲ್ಲಿ ಆರ್‌ಟಿಐ ಅರ್ಜಿಯ ಮೂಲಕ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ವಕೀಲರಾದ ಹೇಮಂತ್ ಕುಮಾರ್ ಅವರು 2014 ರ ಮೇ ತಿಂಗಳಿನಿಂದ ಯಾವ ಐಪಿಎಸ್‌ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಬಗ್ಗೆ ಮಾಹಿತಿ ಕೋರಿದ್ದರು.

ಇದನ್ನೂ ಓದಿ: CAA, NRC, NPR ಕುರಿತು ಚರ್ಚೆಗೆ ಸಿದ್ಧನಿದ್ದೇನೆ: ಅಮಿತ್‌ ಶಾಗೆ ಪತ್ರಬರೆದ ಮಾಜಿ ಐಎಎಸ್‌ ಕಣ್ಣನ್‌ ಗೋಪಿನಾಥನ್‌

ಕೇಂದ್ರ ಗೃಹ ಸಚಿವಾಲಯವು ರಾಜ್ಯ ಸರ್ಕಾರಗಳು ಮತ್ತು ವಿಶೇಷ ನ್ಯಾಯಾಲಯಗಳಿಗೆ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡಿದ ಎಲ್ಲಾ ಐಪಿಎಸ್ ಅಧಿಕಾರಿಗಳ ಬಗ್ಗೆ ಮಾಹಿತಿಯನ್ನು ಅರ್ಜಿಯಲ್ಲಿ ಕೋರಲಾಗಿತ್ತು.

ಈ ಮೊದಲು ಮಾರ್ಚ್ 11 ರಂದು ಆರ್‌ಟಿಐ ಅರ್ಜಿಗೆ ಉತ್ತರವಾಗಿ, ಗೃಹ ಸಚಿವಾಲಯವು ಮಾಹಿತಿಯನ್ನು ನೀಡಲು ನಿರಾಕರಿಸಿತ್ತು. ಮಾಹಿತಿಯನ್ನು ನೀಡುವಲ್ಲಿ ಯಾವುದೇ ಸಾರ್ವಜನಿಕ ಹಿತಾಸಕ್ತಿ ಇಲ್ಲ ಮತ್ತು ಅಂತಹ ಮಾಹಿತಿಯನ್ನು ಆರ್‌‌ಟಿಐ ಕಾಯ್ದೆ, 2005 ಸೆಕ್ಷನ್ 8 (1) (ಜೆ) ಅಡಿಯಲ್ಲಿ ಒದಗಿಸಲಾಗುವುದಿಲ್ಲ ಎಂದು ಹೇಳಿತ್ತು.

ಆದಾಗ್ಯೂ, ಮೇ 10 ರಂದು, ಮಾರ್ಚ್ 11 ರ ಪತ್ರಕ್ಕೆ ಮುಂದುವರಿದ ಪತ್ರವಾಗಿ ಗೃಹ ಸಚಿವಾಲಯವು ಹೆಚ್ಚಿನ ಮಾಹಿತಿಯನ್ನು ಹಂಚಿಕೊಂಡಿದೆ.

ಅಮಾನತುಗೊಂಡಿರುವ 24 ಐಪಿಎಸ್ ಅಧಿಕಾರಿಗಳ ಹೆಸರನ್ನು ಬಹಿರಂಗಪಡಿಸಲು ಗೃಹ ಸಚಿವಾಲಯ ಏಕೆ ಹಿಂಜರಿಯುತ್ತಿದೆ ಎಂದು ಅರ್ಜಿದಾರ ಹೇಮಂತ್‌ ಕುಮಾರ್ ಪ್ರಶ್ನಿಸಿದ್ದಾರೆ.

“ಸೆಪ್ಟೆಂಬರ್ 2017 ರಲ್ಲಿ, ಗೃಹ ಸಚಿವಾಲಯವು ಅಮಾನತುಗೊಂಡ 15 ಐಪಿಎಸ್ ಅಧಿಕಾರಿಗಳ ಹೆಸರು ಮತ್ತು ವಿವರಗಳನ್ನು ನನಗೆ ಒದಗಿಸಿತ್ತು. ಆದರೆ ಈಗ ಇದೇ ರೀತಿಯ ಮಾಹಿತಿಯನ್ನು ನಿರಾಕರಿಸಲಾಗುತ್ತಿದೆ” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಲಸಿಕಾ ರಾಜಕೀಯ: ಮೇ 1 ರಿಂದ ಲಸಿಕೆ ಎಂಬುದು ನಿಜವೇ? ನಿಮಗೆ ಲಸಿಕೆ ಸಿಗಲು ಎಷ್ಟು ತಿಂಗಳು/ವರ್ಷ ಬೇಕು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...