Homeಮುಖಪುಟನೊಬೆಲ್ ಶಾಂತಿ ಪುರಸ್ಕಾರಕ್ಕೆ ಮಂದರ್, ಪ್ರತೀಕ್ ಮತ್ತು ಜುಬೈರ್‌ ನಾಮನಿರ್ದೇಶನ!

ನೊಬೆಲ್ ಶಾಂತಿ ಪುರಸ್ಕಾರಕ್ಕೆ ಮಂದರ್, ಪ್ರತೀಕ್ ಮತ್ತು ಜುಬೈರ್‌ ನಾಮನಿರ್ದೇಶನ!

- Advertisement -
- Advertisement -

ಕಾರವಾನ್-ಎ-ಮೊಹಬ್ಬತ್ ಅಭಿಯಾನದ ಸಂಸ್ಥಾಪಕ, ಲೇಖಕ ಹರ್ಷ್ ಮಂದರ್ ಮತ್ತು ಫ್ಯಾಕ್ಟ್ ಚೆಕ್ ವೆಬ್‌ತಾಣವಾದ ಆಲ್ಟ್ ನ್ಯೂಸ್‌ನ ಸಂಸ್ಥಾಪಕರಾದ ಪ್ರತೀಕ್ ಸಿನ್ಹಾ ಹಾಗೂ ಮುಹಮ್ಮದ್ ಜುಬೈರ್ ಅವರನ್ನು ಪ್ರತಿಷ್ಠಿತ ನೊಬೆಲ್ ಶಾಂತಿ ಪುರಸ್ಕಾರಕ್ಕೆ ಶಾಂತಿ ಸಂಶೋಧನಾ ಸಂಸ್ಥೆ ಓಸ್ಲೊ (PRIO) ನಾಮನಿರ್ದೇಶನ ಮಾಡಿದೆ.

ನಾಮ ನಿರ್ದೇಶನ ಮಾಡಿರುವವರ ಕುರಿತು ಓಸ್ಲೊ ಸಂಸ್ಥೆಯು ನೀಡಿದ ಹೇಳಿಕೆಯಲ್ಲಿ, “ಸತ್ಯ ಪರಿಶೀಲನೆಯ ವೆಬ್ಸೈಟ್ ಮೂಲಕ ಗಮನಾರ್ಹ ಕೊಡುಗೆ ನೀಡಿದ ಸಿನ್ಹಾ ಮತ್ತು ಜುಬೈರ್ ಅವರನ್ನು ‘ಯೋಗ್ಯ ಅಭ್ಯರ್ಥಿಗಳು’ ಎಂದು ಪರಿಗಣಿಸಲಾಗಿದೆ. ಆಲ್ಟ್ ನ್ಯೂಸ್ ಬರೆದ ಸತ್ಯಶೋಧನಾ ಲೇಖನಗಳು ಹಲವು ನಕಲಿ ಸುದ್ದಿಗಳನ್ನು ಬಹಿರಂಗಪಡಿಸಿದೆ. ಭಾರತದಲ್ಲಿ ಮುಸ್ಲಿಂ ಸಮುದಾಯವನ್ನು ನಿಂದಿಸುವ ನಿಟ್ಟಿನಲ್ಲಿ ಹಬ್ಬುತ್ತಿರುವ ಹಲವು ಸುಳ್ಳುಸುದ್ದಿಗಳ ಸತ್ಯ ಪರಿಶೀಲನೆ ನಡೆಸಿದ ಹಿರಿಮೆ ಅವರಿಗಿದೆ” ಎಂದು ತಿಳಿಸಿದೆ.

ಇದನ್ನೂ ಓದಿ: ಮಹಿಳೆಯ ಕುರಿತ ಕೀಳು ಗ್ರಹಿಕೆ ಯಾರು ಹೊಣೆ?

ಹರ್ಷ್ ಮಂದರ್ ಆಯ್ಕೆಯ ಬಗ್ಗೆ, “ಭಾರತದಲ್ಲಿ ಮುಸ್ಲಿಂ ಸಮುದಾಯ ಹೆಚ್ಚು ಕಷ್ಟಕರವಾದ ಪರಿಸ್ಥಿತಿ ಎದುರಿಸುತ್ತಿದೆ. ಧಾರ್ಮಿಕ ಸಹಿಷ್ಣುತೆ ಮತ್ತು ಸಂವಾದಕ್ಕೆ ಮಂದರ್ ಪ್ರಮುಖ ಧ್ವನಿಯಾಗಿದ್ದಾರೆ”ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ದ್ವೇಷದ ಅಪರಾಧಗಳಿಂದ ನೊಂದ ಮನಸುಗಳ ಪರವಾಗಿ ಒಗ್ಗಟ್ಟನ್ನು ತೋರಿಸುವ ಸಲುವಾಗಿ ‘ಕ್ಯಾರವಾನ್ ಎ ಮೊಹಬ್ಬತ್’ ಅಂದರೆ ‘ಪ್ರೀತಿಯ ದಿಬ್ಬಣ’ ಎಂಬ ಅಭಿಯಾನವನ್ನು 2017ರಲ್ಲಿ ಹರ್ಷ್ ಮಂದರ್ ಸ್ಥಾಪಿಸಿದ್ದರು. ಈ ಅಭಿಯಾನವು ಅಂತರ್-ಧರ್ಮೀಯ ಸಂಘರ್ಷ ಮತ್ತು ಹಿಂಸಾಚಾರವನ್ನು ವಿರೋಧಿಸುವವರು ಒಗ್ಗಟ್ಟಾಗಲು ಸಹಕಾರಿಯಾಗಿದೆ.

ಆಲ್ಟ್ ನ್ಯೂಸ್ ಎಂಬುದು ಸತ್ಯ-ಪರಿಶೀಲನೆಯ ವೆಬ್‌ತಾಣವಾಗಿದ್ದು, ಸಾಮಾಜಿಕ ಮಾಧ್ಯಮ ಮತ್ತು ಮುಖ್ಯವಾಹಿನಿಯ ಮಾಧ್ಯಮಗಳಲ್ಲಿ ಪ್ರತಿದಿನವೂ ಕಂಡುಬರುವ ತಪ್ಪು ಮಾಹಿತಿ, ತಪ್ಪು ಸುದ್ದಿಗಳ ಸತ್ಯ ಪರಿಶೀಲನೆ ನಡೆಸುತ್ತದೆ.

ಇದನ್ನೂ ಓದಿ: ಹಿಜಾಬ್ ವಿವಾದ: ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿಸುವ ಹುನ್ನಾರ- ಸಿದ್ದರಾಮಯ್ಯ

ಈ ಪ್ರಶಸ್ತಿಗೆ ನಾಮನಿರ್ದೇಶಿತರಲ್ಲಿ ಬೆಲಾರಸ್‌ನ ರಾಜಕಾರಣಿ ಸ್ವಿಯಾಟ್ಲಾನಾ ಸಿಖಾನೌಸ್ಕಯಾ, ಚೀನಾದ ಕಾರ್ಯಕರ್ತರಾದ ಇಲ್ಹಾಮ್ ತೊಹ್ತಿ, ಆಗ್ನೆಸ್ ಚೌ ಮತ್ತು ನಾಥನ್ ಲಾ, ಮಾನವ ಹಕ್ಕುಗಳ ಕಾರ್ಯಕರ್ತೆ ನಟಾಸಾ ಕಂಡಿಕ್, ಮಾನವೀಯ ಕಾನೂನು ಕೇಂದ್ರ, ಹ್ಯೂಮನ್ ರೈಟ್ಸ್ ಡೇಟಾ ಅನಾಲಿಸಿಸ್ ಗ್ರೂಪ್ ಮತ್ತು ಸೆಂಟರ್ ಫಾರ್ ಅಪ್ಲೈಡ್ ನಾನ್ ವಯಲೆಂಟ್ ಆಕ್ಷನ್ ಆಂಡ್ ಸ್ಟ್ರಾಟಜೀಸ್‌ ಮೊದಲಾದ ಸಂಸ್ಥೆಗಳು ಸೇರಿವೆ.

ನೊಬೆಲ್ ಪುರಸ್ಕಾರಕ್ಕೆ ಹೆಸರುಗಳನ್ನು ಶೀಫಾರಸು ಮಾಡಿರುವ ಓಸ್ಲೊ ಸಂಸ್ಥೆಯು ನೊಬೆಲ್ ಪ್ರಶಸ್ತಿ ನೀಡುವ ನೊಬೆಲ್ ಇನ್‌ಸ್ಟಿಟ್ಯೂಟ್ ಅಥವಾ ನಾರ್ವೆ ಮೂಲದ ನೊಬೆಲ್ ಸಮಿತಿಗೆ ಸೇರಿದ ಸಂಸ್ಥೆಯಲ್ಲ. ಆದರೆ ಇದು ಪ್ರತಿ ವರ್ಷವು ತನ್ನ ಸಂಸ್ಥೆಯ ವತಿಯಿಂದ ನೊಬೆಲ್ ಪ್ರಶಸ್ತಿಗೆ ಹೆಸರುಗಳನ್ನು ಶಿಫಾರಸು ಮಾಡುತ್ತದೆ. ಪ್ರಸ್ತುತ ಹೆನ್ರಿಕ್ ಉರ್ದಾಲ್ ಈ ಸಂಸ್ಥೆಯ ನಿರ್ದೇಶಕರಾಗಿದ್ದಾರೆ.

ಇದನ್ನೂ ಓದಿ: ಗುಂಡಿನ ದಾಳಿ: ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿಗೆ ಝಡ್ ಶ್ರೇಣಿಯ ಭದ್ರತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...