Homeಮುಖಪುಟನೊಬೆಲ್ ಶಾಂತಿ ಪುರಸ್ಕಾರಕ್ಕೆ ಮಂದರ್, ಪ್ರತೀಕ್ ಮತ್ತು ಜುಬೈರ್‌ ನಾಮನಿರ್ದೇಶನ!

ನೊಬೆಲ್ ಶಾಂತಿ ಪುರಸ್ಕಾರಕ್ಕೆ ಮಂದರ್, ಪ್ರತೀಕ್ ಮತ್ತು ಜುಬೈರ್‌ ನಾಮನಿರ್ದೇಶನ!

- Advertisement -
- Advertisement -

ಕಾರವಾನ್-ಎ-ಮೊಹಬ್ಬತ್ ಅಭಿಯಾನದ ಸಂಸ್ಥಾಪಕ, ಲೇಖಕ ಹರ್ಷ್ ಮಂದರ್ ಮತ್ತು ಫ್ಯಾಕ್ಟ್ ಚೆಕ್ ವೆಬ್‌ತಾಣವಾದ ಆಲ್ಟ್ ನ್ಯೂಸ್‌ನ ಸಂಸ್ಥಾಪಕರಾದ ಪ್ರತೀಕ್ ಸಿನ್ಹಾ ಹಾಗೂ ಮುಹಮ್ಮದ್ ಜುಬೈರ್ ಅವರನ್ನು ಪ್ರತಿಷ್ಠಿತ ನೊಬೆಲ್ ಶಾಂತಿ ಪುರಸ್ಕಾರಕ್ಕೆ ಶಾಂತಿ ಸಂಶೋಧನಾ ಸಂಸ್ಥೆ ಓಸ್ಲೊ (PRIO) ನಾಮನಿರ್ದೇಶನ ಮಾಡಿದೆ.

ನಾಮ ನಿರ್ದೇಶನ ಮಾಡಿರುವವರ ಕುರಿತು ಓಸ್ಲೊ ಸಂಸ್ಥೆಯು ನೀಡಿದ ಹೇಳಿಕೆಯಲ್ಲಿ, “ಸತ್ಯ ಪರಿಶೀಲನೆಯ ವೆಬ್ಸೈಟ್ ಮೂಲಕ ಗಮನಾರ್ಹ ಕೊಡುಗೆ ನೀಡಿದ ಸಿನ್ಹಾ ಮತ್ತು ಜುಬೈರ್ ಅವರನ್ನು ‘ಯೋಗ್ಯ ಅಭ್ಯರ್ಥಿಗಳು’ ಎಂದು ಪರಿಗಣಿಸಲಾಗಿದೆ. ಆಲ್ಟ್ ನ್ಯೂಸ್ ಬರೆದ ಸತ್ಯಶೋಧನಾ ಲೇಖನಗಳು ಹಲವು ನಕಲಿ ಸುದ್ದಿಗಳನ್ನು ಬಹಿರಂಗಪಡಿಸಿದೆ. ಭಾರತದಲ್ಲಿ ಮುಸ್ಲಿಂ ಸಮುದಾಯವನ್ನು ನಿಂದಿಸುವ ನಿಟ್ಟಿನಲ್ಲಿ ಹಬ್ಬುತ್ತಿರುವ ಹಲವು ಸುಳ್ಳುಸುದ್ದಿಗಳ ಸತ್ಯ ಪರಿಶೀಲನೆ ನಡೆಸಿದ ಹಿರಿಮೆ ಅವರಿಗಿದೆ” ಎಂದು ತಿಳಿಸಿದೆ.

ಇದನ್ನೂ ಓದಿ: ಮಹಿಳೆಯ ಕುರಿತ ಕೀಳು ಗ್ರಹಿಕೆ ಯಾರು ಹೊಣೆ?

ಹರ್ಷ್ ಮಂದರ್ ಆಯ್ಕೆಯ ಬಗ್ಗೆ, “ಭಾರತದಲ್ಲಿ ಮುಸ್ಲಿಂ ಸಮುದಾಯ ಹೆಚ್ಚು ಕಷ್ಟಕರವಾದ ಪರಿಸ್ಥಿತಿ ಎದುರಿಸುತ್ತಿದೆ. ಧಾರ್ಮಿಕ ಸಹಿಷ್ಣುತೆ ಮತ್ತು ಸಂವಾದಕ್ಕೆ ಮಂದರ್ ಪ್ರಮುಖ ಧ್ವನಿಯಾಗಿದ್ದಾರೆ”ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ದ್ವೇಷದ ಅಪರಾಧಗಳಿಂದ ನೊಂದ ಮನಸುಗಳ ಪರವಾಗಿ ಒಗ್ಗಟ್ಟನ್ನು ತೋರಿಸುವ ಸಲುವಾಗಿ ‘ಕ್ಯಾರವಾನ್ ಎ ಮೊಹಬ್ಬತ್’ ಅಂದರೆ ‘ಪ್ರೀತಿಯ ದಿಬ್ಬಣ’ ಎಂಬ ಅಭಿಯಾನವನ್ನು 2017ರಲ್ಲಿ ಹರ್ಷ್ ಮಂದರ್ ಸ್ಥಾಪಿಸಿದ್ದರು. ಈ ಅಭಿಯಾನವು ಅಂತರ್-ಧರ್ಮೀಯ ಸಂಘರ್ಷ ಮತ್ತು ಹಿಂಸಾಚಾರವನ್ನು ವಿರೋಧಿಸುವವರು ಒಗ್ಗಟ್ಟಾಗಲು ಸಹಕಾರಿಯಾಗಿದೆ.

ಆಲ್ಟ್ ನ್ಯೂಸ್ ಎಂಬುದು ಸತ್ಯ-ಪರಿಶೀಲನೆಯ ವೆಬ್‌ತಾಣವಾಗಿದ್ದು, ಸಾಮಾಜಿಕ ಮಾಧ್ಯಮ ಮತ್ತು ಮುಖ್ಯವಾಹಿನಿಯ ಮಾಧ್ಯಮಗಳಲ್ಲಿ ಪ್ರತಿದಿನವೂ ಕಂಡುಬರುವ ತಪ್ಪು ಮಾಹಿತಿ, ತಪ್ಪು ಸುದ್ದಿಗಳ ಸತ್ಯ ಪರಿಶೀಲನೆ ನಡೆಸುತ್ತದೆ.

ಇದನ್ನೂ ಓದಿ: ಹಿಜಾಬ್ ವಿವಾದ: ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿಸುವ ಹುನ್ನಾರ- ಸಿದ್ದರಾಮಯ್ಯ

ಈ ಪ್ರಶಸ್ತಿಗೆ ನಾಮನಿರ್ದೇಶಿತರಲ್ಲಿ ಬೆಲಾರಸ್‌ನ ರಾಜಕಾರಣಿ ಸ್ವಿಯಾಟ್ಲಾನಾ ಸಿಖಾನೌಸ್ಕಯಾ, ಚೀನಾದ ಕಾರ್ಯಕರ್ತರಾದ ಇಲ್ಹಾಮ್ ತೊಹ್ತಿ, ಆಗ್ನೆಸ್ ಚೌ ಮತ್ತು ನಾಥನ್ ಲಾ, ಮಾನವ ಹಕ್ಕುಗಳ ಕಾರ್ಯಕರ್ತೆ ನಟಾಸಾ ಕಂಡಿಕ್, ಮಾನವೀಯ ಕಾನೂನು ಕೇಂದ್ರ, ಹ್ಯೂಮನ್ ರೈಟ್ಸ್ ಡೇಟಾ ಅನಾಲಿಸಿಸ್ ಗ್ರೂಪ್ ಮತ್ತು ಸೆಂಟರ್ ಫಾರ್ ಅಪ್ಲೈಡ್ ನಾನ್ ವಯಲೆಂಟ್ ಆಕ್ಷನ್ ಆಂಡ್ ಸ್ಟ್ರಾಟಜೀಸ್‌ ಮೊದಲಾದ ಸಂಸ್ಥೆಗಳು ಸೇರಿವೆ.

ನೊಬೆಲ್ ಪುರಸ್ಕಾರಕ್ಕೆ ಹೆಸರುಗಳನ್ನು ಶೀಫಾರಸು ಮಾಡಿರುವ ಓಸ್ಲೊ ಸಂಸ್ಥೆಯು ನೊಬೆಲ್ ಪ್ರಶಸ್ತಿ ನೀಡುವ ನೊಬೆಲ್ ಇನ್‌ಸ್ಟಿಟ್ಯೂಟ್ ಅಥವಾ ನಾರ್ವೆ ಮೂಲದ ನೊಬೆಲ್ ಸಮಿತಿಗೆ ಸೇರಿದ ಸಂಸ್ಥೆಯಲ್ಲ. ಆದರೆ ಇದು ಪ್ರತಿ ವರ್ಷವು ತನ್ನ ಸಂಸ್ಥೆಯ ವತಿಯಿಂದ ನೊಬೆಲ್ ಪ್ರಶಸ್ತಿಗೆ ಹೆಸರುಗಳನ್ನು ಶಿಫಾರಸು ಮಾಡುತ್ತದೆ. ಪ್ರಸ್ತುತ ಹೆನ್ರಿಕ್ ಉರ್ದಾಲ್ ಈ ಸಂಸ್ಥೆಯ ನಿರ್ದೇಶಕರಾಗಿದ್ದಾರೆ.

ಇದನ್ನೂ ಓದಿ: ಗುಂಡಿನ ದಾಳಿ: ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿಗೆ ಝಡ್ ಶ್ರೇಣಿಯ ಭದ್ರತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....