Homeಮುಖಪುಟನೊಬೆಲ್ ಶಾಂತಿ ಪುರಸ್ಕಾರಕ್ಕೆ ಮಂದರ್, ಪ್ರತೀಕ್ ಮತ್ತು ಜುಬೈರ್‌ ನಾಮನಿರ್ದೇಶನ!

ನೊಬೆಲ್ ಶಾಂತಿ ಪುರಸ್ಕಾರಕ್ಕೆ ಮಂದರ್, ಪ್ರತೀಕ್ ಮತ್ತು ಜುಬೈರ್‌ ನಾಮನಿರ್ದೇಶನ!

- Advertisement -
- Advertisement -

ಕಾರವಾನ್-ಎ-ಮೊಹಬ್ಬತ್ ಅಭಿಯಾನದ ಸಂಸ್ಥಾಪಕ, ಲೇಖಕ ಹರ್ಷ್ ಮಂದರ್ ಮತ್ತು ಫ್ಯಾಕ್ಟ್ ಚೆಕ್ ವೆಬ್‌ತಾಣವಾದ ಆಲ್ಟ್ ನ್ಯೂಸ್‌ನ ಸಂಸ್ಥಾಪಕರಾದ ಪ್ರತೀಕ್ ಸಿನ್ಹಾ ಹಾಗೂ ಮುಹಮ್ಮದ್ ಜುಬೈರ್ ಅವರನ್ನು ಪ್ರತಿಷ್ಠಿತ ನೊಬೆಲ್ ಶಾಂತಿ ಪುರಸ್ಕಾರಕ್ಕೆ ಶಾಂತಿ ಸಂಶೋಧನಾ ಸಂಸ್ಥೆ ಓಸ್ಲೊ (PRIO) ನಾಮನಿರ್ದೇಶನ ಮಾಡಿದೆ.

ನಾಮ ನಿರ್ದೇಶನ ಮಾಡಿರುವವರ ಕುರಿತು ಓಸ್ಲೊ ಸಂಸ್ಥೆಯು ನೀಡಿದ ಹೇಳಿಕೆಯಲ್ಲಿ, “ಸತ್ಯ ಪರಿಶೀಲನೆಯ ವೆಬ್ಸೈಟ್ ಮೂಲಕ ಗಮನಾರ್ಹ ಕೊಡುಗೆ ನೀಡಿದ ಸಿನ್ಹಾ ಮತ್ತು ಜುಬೈರ್ ಅವರನ್ನು ‘ಯೋಗ್ಯ ಅಭ್ಯರ್ಥಿಗಳು’ ಎಂದು ಪರಿಗಣಿಸಲಾಗಿದೆ. ಆಲ್ಟ್ ನ್ಯೂಸ್ ಬರೆದ ಸತ್ಯಶೋಧನಾ ಲೇಖನಗಳು ಹಲವು ನಕಲಿ ಸುದ್ದಿಗಳನ್ನು ಬಹಿರಂಗಪಡಿಸಿದೆ. ಭಾರತದಲ್ಲಿ ಮುಸ್ಲಿಂ ಸಮುದಾಯವನ್ನು ನಿಂದಿಸುವ ನಿಟ್ಟಿನಲ್ಲಿ ಹಬ್ಬುತ್ತಿರುವ ಹಲವು ಸುಳ್ಳುಸುದ್ದಿಗಳ ಸತ್ಯ ಪರಿಶೀಲನೆ ನಡೆಸಿದ ಹಿರಿಮೆ ಅವರಿಗಿದೆ” ಎಂದು ತಿಳಿಸಿದೆ.

ಇದನ್ನೂ ಓದಿ: ಮಹಿಳೆಯ ಕುರಿತ ಕೀಳು ಗ್ರಹಿಕೆ ಯಾರು ಹೊಣೆ?

ಹರ್ಷ್ ಮಂದರ್ ಆಯ್ಕೆಯ ಬಗ್ಗೆ, “ಭಾರತದಲ್ಲಿ ಮುಸ್ಲಿಂ ಸಮುದಾಯ ಹೆಚ್ಚು ಕಷ್ಟಕರವಾದ ಪರಿಸ್ಥಿತಿ ಎದುರಿಸುತ್ತಿದೆ. ಧಾರ್ಮಿಕ ಸಹಿಷ್ಣುತೆ ಮತ್ತು ಸಂವಾದಕ್ಕೆ ಮಂದರ್ ಪ್ರಮುಖ ಧ್ವನಿಯಾಗಿದ್ದಾರೆ”ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ದ್ವೇಷದ ಅಪರಾಧಗಳಿಂದ ನೊಂದ ಮನಸುಗಳ ಪರವಾಗಿ ಒಗ್ಗಟ್ಟನ್ನು ತೋರಿಸುವ ಸಲುವಾಗಿ ‘ಕ್ಯಾರವಾನ್ ಎ ಮೊಹಬ್ಬತ್’ ಅಂದರೆ ‘ಪ್ರೀತಿಯ ದಿಬ್ಬಣ’ ಎಂಬ ಅಭಿಯಾನವನ್ನು 2017ರಲ್ಲಿ ಹರ್ಷ್ ಮಂದರ್ ಸ್ಥಾಪಿಸಿದ್ದರು. ಈ ಅಭಿಯಾನವು ಅಂತರ್-ಧರ್ಮೀಯ ಸಂಘರ್ಷ ಮತ್ತು ಹಿಂಸಾಚಾರವನ್ನು ವಿರೋಧಿಸುವವರು ಒಗ್ಗಟ್ಟಾಗಲು ಸಹಕಾರಿಯಾಗಿದೆ.

ಆಲ್ಟ್ ನ್ಯೂಸ್ ಎಂಬುದು ಸತ್ಯ-ಪರಿಶೀಲನೆಯ ವೆಬ್‌ತಾಣವಾಗಿದ್ದು, ಸಾಮಾಜಿಕ ಮಾಧ್ಯಮ ಮತ್ತು ಮುಖ್ಯವಾಹಿನಿಯ ಮಾಧ್ಯಮಗಳಲ್ಲಿ ಪ್ರತಿದಿನವೂ ಕಂಡುಬರುವ ತಪ್ಪು ಮಾಹಿತಿ, ತಪ್ಪು ಸುದ್ದಿಗಳ ಸತ್ಯ ಪರಿಶೀಲನೆ ನಡೆಸುತ್ತದೆ.

ಇದನ್ನೂ ಓದಿ: ಹಿಜಾಬ್ ವಿವಾದ: ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿಸುವ ಹುನ್ನಾರ- ಸಿದ್ದರಾಮಯ್ಯ

ಈ ಪ್ರಶಸ್ತಿಗೆ ನಾಮನಿರ್ದೇಶಿತರಲ್ಲಿ ಬೆಲಾರಸ್‌ನ ರಾಜಕಾರಣಿ ಸ್ವಿಯಾಟ್ಲಾನಾ ಸಿಖಾನೌಸ್ಕಯಾ, ಚೀನಾದ ಕಾರ್ಯಕರ್ತರಾದ ಇಲ್ಹಾಮ್ ತೊಹ್ತಿ, ಆಗ್ನೆಸ್ ಚೌ ಮತ್ತು ನಾಥನ್ ಲಾ, ಮಾನವ ಹಕ್ಕುಗಳ ಕಾರ್ಯಕರ್ತೆ ನಟಾಸಾ ಕಂಡಿಕ್, ಮಾನವೀಯ ಕಾನೂನು ಕೇಂದ್ರ, ಹ್ಯೂಮನ್ ರೈಟ್ಸ್ ಡೇಟಾ ಅನಾಲಿಸಿಸ್ ಗ್ರೂಪ್ ಮತ್ತು ಸೆಂಟರ್ ಫಾರ್ ಅಪ್ಲೈಡ್ ನಾನ್ ವಯಲೆಂಟ್ ಆಕ್ಷನ್ ಆಂಡ್ ಸ್ಟ್ರಾಟಜೀಸ್‌ ಮೊದಲಾದ ಸಂಸ್ಥೆಗಳು ಸೇರಿವೆ.

ನೊಬೆಲ್ ಪುರಸ್ಕಾರಕ್ಕೆ ಹೆಸರುಗಳನ್ನು ಶೀಫಾರಸು ಮಾಡಿರುವ ಓಸ್ಲೊ ಸಂಸ್ಥೆಯು ನೊಬೆಲ್ ಪ್ರಶಸ್ತಿ ನೀಡುವ ನೊಬೆಲ್ ಇನ್‌ಸ್ಟಿಟ್ಯೂಟ್ ಅಥವಾ ನಾರ್ವೆ ಮೂಲದ ನೊಬೆಲ್ ಸಮಿತಿಗೆ ಸೇರಿದ ಸಂಸ್ಥೆಯಲ್ಲ. ಆದರೆ ಇದು ಪ್ರತಿ ವರ್ಷವು ತನ್ನ ಸಂಸ್ಥೆಯ ವತಿಯಿಂದ ನೊಬೆಲ್ ಪ್ರಶಸ್ತಿಗೆ ಹೆಸರುಗಳನ್ನು ಶಿಫಾರಸು ಮಾಡುತ್ತದೆ. ಪ್ರಸ್ತುತ ಹೆನ್ರಿಕ್ ಉರ್ದಾಲ್ ಈ ಸಂಸ್ಥೆಯ ನಿರ್ದೇಶಕರಾಗಿದ್ದಾರೆ.

ಇದನ್ನೂ ಓದಿ: ಗುಂಡಿನ ದಾಳಿ: ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿಗೆ ಝಡ್ ಶ್ರೇಣಿಯ ಭದ್ರತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...