Homeಮುಖಪುಟನೊಬೆಲ್ ಶಾಂತಿ ಪುರಸ್ಕಾರಕ್ಕೆ ಮಂದರ್, ಪ್ರತೀಕ್ ಮತ್ತು ಜುಬೈರ್‌ ನಾಮನಿರ್ದೇಶನ!

ನೊಬೆಲ್ ಶಾಂತಿ ಪುರಸ್ಕಾರಕ್ಕೆ ಮಂದರ್, ಪ್ರತೀಕ್ ಮತ್ತು ಜುಬೈರ್‌ ನಾಮನಿರ್ದೇಶನ!

- Advertisement -
- Advertisement -

ಕಾರವಾನ್-ಎ-ಮೊಹಬ್ಬತ್ ಅಭಿಯಾನದ ಸಂಸ್ಥಾಪಕ, ಲೇಖಕ ಹರ್ಷ್ ಮಂದರ್ ಮತ್ತು ಫ್ಯಾಕ್ಟ್ ಚೆಕ್ ವೆಬ್‌ತಾಣವಾದ ಆಲ್ಟ್ ನ್ಯೂಸ್‌ನ ಸಂಸ್ಥಾಪಕರಾದ ಪ್ರತೀಕ್ ಸಿನ್ಹಾ ಹಾಗೂ ಮುಹಮ್ಮದ್ ಜುಬೈರ್ ಅವರನ್ನು ಪ್ರತಿಷ್ಠಿತ ನೊಬೆಲ್ ಶಾಂತಿ ಪುರಸ್ಕಾರಕ್ಕೆ ಶಾಂತಿ ಸಂಶೋಧನಾ ಸಂಸ್ಥೆ ಓಸ್ಲೊ (PRIO) ನಾಮನಿರ್ದೇಶನ ಮಾಡಿದೆ.

ನಾಮ ನಿರ್ದೇಶನ ಮಾಡಿರುವವರ ಕುರಿತು ಓಸ್ಲೊ ಸಂಸ್ಥೆಯು ನೀಡಿದ ಹೇಳಿಕೆಯಲ್ಲಿ, “ಸತ್ಯ ಪರಿಶೀಲನೆಯ ವೆಬ್ಸೈಟ್ ಮೂಲಕ ಗಮನಾರ್ಹ ಕೊಡುಗೆ ನೀಡಿದ ಸಿನ್ಹಾ ಮತ್ತು ಜುಬೈರ್ ಅವರನ್ನು ‘ಯೋಗ್ಯ ಅಭ್ಯರ್ಥಿಗಳು’ ಎಂದು ಪರಿಗಣಿಸಲಾಗಿದೆ. ಆಲ್ಟ್ ನ್ಯೂಸ್ ಬರೆದ ಸತ್ಯಶೋಧನಾ ಲೇಖನಗಳು ಹಲವು ನಕಲಿ ಸುದ್ದಿಗಳನ್ನು ಬಹಿರಂಗಪಡಿಸಿದೆ. ಭಾರತದಲ್ಲಿ ಮುಸ್ಲಿಂ ಸಮುದಾಯವನ್ನು ನಿಂದಿಸುವ ನಿಟ್ಟಿನಲ್ಲಿ ಹಬ್ಬುತ್ತಿರುವ ಹಲವು ಸುಳ್ಳುಸುದ್ದಿಗಳ ಸತ್ಯ ಪರಿಶೀಲನೆ ನಡೆಸಿದ ಹಿರಿಮೆ ಅವರಿಗಿದೆ” ಎಂದು ತಿಳಿಸಿದೆ.

ಇದನ್ನೂ ಓದಿ: ಮಹಿಳೆಯ ಕುರಿತ ಕೀಳು ಗ್ರಹಿಕೆ ಯಾರು ಹೊಣೆ?

ಹರ್ಷ್ ಮಂದರ್ ಆಯ್ಕೆಯ ಬಗ್ಗೆ, “ಭಾರತದಲ್ಲಿ ಮುಸ್ಲಿಂ ಸಮುದಾಯ ಹೆಚ್ಚು ಕಷ್ಟಕರವಾದ ಪರಿಸ್ಥಿತಿ ಎದುರಿಸುತ್ತಿದೆ. ಧಾರ್ಮಿಕ ಸಹಿಷ್ಣುತೆ ಮತ್ತು ಸಂವಾದಕ್ಕೆ ಮಂದರ್ ಪ್ರಮುಖ ಧ್ವನಿಯಾಗಿದ್ದಾರೆ”ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ದ್ವೇಷದ ಅಪರಾಧಗಳಿಂದ ನೊಂದ ಮನಸುಗಳ ಪರವಾಗಿ ಒಗ್ಗಟ್ಟನ್ನು ತೋರಿಸುವ ಸಲುವಾಗಿ ‘ಕ್ಯಾರವಾನ್ ಎ ಮೊಹಬ್ಬತ್’ ಅಂದರೆ ‘ಪ್ರೀತಿಯ ದಿಬ್ಬಣ’ ಎಂಬ ಅಭಿಯಾನವನ್ನು 2017ರಲ್ಲಿ ಹರ್ಷ್ ಮಂದರ್ ಸ್ಥಾಪಿಸಿದ್ದರು. ಈ ಅಭಿಯಾನವು ಅಂತರ್-ಧರ್ಮೀಯ ಸಂಘರ್ಷ ಮತ್ತು ಹಿಂಸಾಚಾರವನ್ನು ವಿರೋಧಿಸುವವರು ಒಗ್ಗಟ್ಟಾಗಲು ಸಹಕಾರಿಯಾಗಿದೆ.

ಆಲ್ಟ್ ನ್ಯೂಸ್ ಎಂಬುದು ಸತ್ಯ-ಪರಿಶೀಲನೆಯ ವೆಬ್‌ತಾಣವಾಗಿದ್ದು, ಸಾಮಾಜಿಕ ಮಾಧ್ಯಮ ಮತ್ತು ಮುಖ್ಯವಾಹಿನಿಯ ಮಾಧ್ಯಮಗಳಲ್ಲಿ ಪ್ರತಿದಿನವೂ ಕಂಡುಬರುವ ತಪ್ಪು ಮಾಹಿತಿ, ತಪ್ಪು ಸುದ್ದಿಗಳ ಸತ್ಯ ಪರಿಶೀಲನೆ ನಡೆಸುತ್ತದೆ.

ಇದನ್ನೂ ಓದಿ: ಹಿಜಾಬ್ ವಿವಾದ: ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿಸುವ ಹುನ್ನಾರ- ಸಿದ್ದರಾಮಯ್ಯ

ಈ ಪ್ರಶಸ್ತಿಗೆ ನಾಮನಿರ್ದೇಶಿತರಲ್ಲಿ ಬೆಲಾರಸ್‌ನ ರಾಜಕಾರಣಿ ಸ್ವಿಯಾಟ್ಲಾನಾ ಸಿಖಾನೌಸ್ಕಯಾ, ಚೀನಾದ ಕಾರ್ಯಕರ್ತರಾದ ಇಲ್ಹಾಮ್ ತೊಹ್ತಿ, ಆಗ್ನೆಸ್ ಚೌ ಮತ್ತು ನಾಥನ್ ಲಾ, ಮಾನವ ಹಕ್ಕುಗಳ ಕಾರ್ಯಕರ್ತೆ ನಟಾಸಾ ಕಂಡಿಕ್, ಮಾನವೀಯ ಕಾನೂನು ಕೇಂದ್ರ, ಹ್ಯೂಮನ್ ರೈಟ್ಸ್ ಡೇಟಾ ಅನಾಲಿಸಿಸ್ ಗ್ರೂಪ್ ಮತ್ತು ಸೆಂಟರ್ ಫಾರ್ ಅಪ್ಲೈಡ್ ನಾನ್ ವಯಲೆಂಟ್ ಆಕ್ಷನ್ ಆಂಡ್ ಸ್ಟ್ರಾಟಜೀಸ್‌ ಮೊದಲಾದ ಸಂಸ್ಥೆಗಳು ಸೇರಿವೆ.

ನೊಬೆಲ್ ಪುರಸ್ಕಾರಕ್ಕೆ ಹೆಸರುಗಳನ್ನು ಶೀಫಾರಸು ಮಾಡಿರುವ ಓಸ್ಲೊ ಸಂಸ್ಥೆಯು ನೊಬೆಲ್ ಪ್ರಶಸ್ತಿ ನೀಡುವ ನೊಬೆಲ್ ಇನ್‌ಸ್ಟಿಟ್ಯೂಟ್ ಅಥವಾ ನಾರ್ವೆ ಮೂಲದ ನೊಬೆಲ್ ಸಮಿತಿಗೆ ಸೇರಿದ ಸಂಸ್ಥೆಯಲ್ಲ. ಆದರೆ ಇದು ಪ್ರತಿ ವರ್ಷವು ತನ್ನ ಸಂಸ್ಥೆಯ ವತಿಯಿಂದ ನೊಬೆಲ್ ಪ್ರಶಸ್ತಿಗೆ ಹೆಸರುಗಳನ್ನು ಶಿಫಾರಸು ಮಾಡುತ್ತದೆ. ಪ್ರಸ್ತುತ ಹೆನ್ರಿಕ್ ಉರ್ದಾಲ್ ಈ ಸಂಸ್ಥೆಯ ನಿರ್ದೇಶಕರಾಗಿದ್ದಾರೆ.

ಇದನ್ನೂ ಓದಿ: ಗುಂಡಿನ ದಾಳಿ: ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿಗೆ ಝಡ್ ಶ್ರೇಣಿಯ ಭದ್ರತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...