Homeಕರ್ನಾಟಕಮದ್ದೂರು ಕಲ್ಲು ತೂರಾಟ ಪ್ರಕರಣ: 21 ಜನರ ಬಂಧನ, ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ

ಮದ್ದೂರು ಕಲ್ಲು ತೂರಾಟ ಪ್ರಕರಣ: 21 ಜನರ ಬಂಧನ, ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ

- Advertisement -
- Advertisement -

ಮಂಡ್ಯ: ಗಣೇಶ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ಮದ್ದೂರು ಪಟ್ಟಣದಲ್ಲಿ ಭಾನುವಾರ ರಾತ್ರಿ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಇದುವರೆಗೆ 21 ಜನರನ್ನು ಬಂಧಿಸಲಾಗಿದೆ ಎಂದು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್.ಪಿ) ಮಲ್ಲಿಕಾರ್ಜುನ ಬಾಲದಂಡಿ ಸೋಮವಾರ ತಿಳಿಸಿದ್ದಾರೆ. ಈ ಘಟನೆಯ ನಂತರ ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಶಾಂತಿ ಸುವ್ಯವಸ್ಥೆ ಕಾಪಾಡಲು ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಘಟನೆಯ ಹಿನ್ನೆಲೆ ಮತ್ತು ಪೊಲೀಸ್ ಕ್ರಮ

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಸ್.ಪಿ. ಬಾಲದಂಡಿ, ಗಣೇಶ ಮೆರವಣಿಗೆಯು ತಮಿಳರ ಕಾಲೋನಿಯಿಂದ ಹೊರಟು ಮಸೀದಿಯೊಂದರ ಬಳಿ ತಲುಪಿದಾಗ ಕಲ್ಲು ತೂರಾಟ ಆರಂಭಗೊಂಡಿದೆ. ಆ ಸಂದರ್ಭದಲ್ಲಿ ವಿದ್ಯುತ್‌ ಪೂರೈಕೆಯಲ್ಲಿಯೂ ವ್ಯತ್ಯಯ ಉಂಟಾಗಿ, ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದೆ. ಎರಡು ಗುಂಪುಗಳ ನಡುವೆ ಸಂಘರ್ಷ ತೀವ್ರಗೊಂಡಾಗ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಲಾಠಿ ಪ್ರಹಾರ ನಡೆಸಿದರು. ಘಟನೆಗೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದ್ದು, ಹೆಚ್ಚಿನ ಆರೋಪಿಗಳನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ ಎಂದು ಅವರು ಹೇಳಿದರು.

ಪರಿಸ್ಥಿತಿಯನ್ನು ನಿಯಂತ್ರಿಸಿದ ಪೊಲೀಸರು, ಗಣೇಶ ಮೂರ್ತಿಯ ವಿಸರ್ಜನೆಗೂ ಅವಕಾಶ ಮಾಡಿಕೊಟ್ಟರು. ಕಾನೂನು ಸುವ್ಯವಸ್ಥೆ ಕಾಪಾಡಲು ಪಟ್ಟಣದಾದ್ಯಂತ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಅವರು ವಿವರಿಸಿದರು.

ಗಣ್ಯರ ಪ್ರತಿಕ್ರಿಯೆ ಮತ್ತು ರಾಜಕೀಯ ಆರೋಪಗಳು

ಈ ಘಟನೆಯ ಕುರಿತು ಹಲವು ರಾಜಕೀಯ ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ಗಲಭೆಗೆ ಬಿಜೆಪಿ ಮತ್ತು ಜೆಡಿಎಸ್ ನಾಯಕರ ಪ್ರಚೋದನೆ ಕಾರಣ ಎಂದು ನೇರವಾಗಿ ಆರೋಪಿಸಿದ್ದಾರೆ.

‘ಯಾವ ಹಿಂದೂಗಳ ಮೇಲೂ ಕೇಸ್ ದಾಖಲಾಗಿಲ್ಲ. ಕೇವಲ ಕೆಲವು ಗಂಟೆಗಳಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ. ಆದರೂ ಬಿಜೆಪಿಯ ಹಾಗೂ ಕೆಲವು ಜೆಡಿಎಸ್ ನಾಯಕರು ಕೋಮು ಗಲಭೆಗೆ ಪ್ರಚೋದನೆ ನೀಡುತ್ತಿದ್ದಾರೆ,’ ಎಂದು ಅವರು ದೂರಿದರು.

ಅಲ್ಲದೆ, ಮದ್ದೂರಿನಲ್ಲಿ ಇಂತಹ ಘಟನೆಗಳು ಹಿಂದೆಂದೂ ನಡೆದಿಲ್ಲ, ಹೊರಗಿನಿಂದ ಬಂದವರು ಗಲಭೆ ಮಾಡಿರಬಹುದು ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದು ಸಚಿವರು ತಿಳಿಸಿದರು.

ಘಟನೆಯ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಹಿತಿ ನೀಡಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಅವರು ಸೂಚಿಸಿದ್ದಾರೆ ಎಂದು ಚಲುವರಾಯಸ್ವಾಮಿ ಹೇಳಿದ್ದಾರೆ. ಗೃಹ ಸಚಿವ ಡಾ. ಪರಮೇಶ್ವರ್ ಅವರು ಕೂಡ, ‘ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಕ್ರಮ ಜರುಗಿಸಿದ್ದಾರೆ. ಪ್ರಕರಣಕ್ಕೆ ಕಾರಣರಾದವರನ್ನು ಬಂಧಿಸಲಾಗುತ್ತದೆ,’ ಎಂದು ಸ್ಪಷ್ಟಪಡಿಸಿದ್ದಾರೆ.

ಬಂಧಿತರಾದ 21 ಜನರು ಮುಸ್ಲಿಂ ಸಮುದಾಯಕ್ಕೆ ಸೇರಿದವರು ಎಂದು ಚಲುವರಾಯಸ್ವಾಮಿ ಹೇಳಿದ್ದಾರೆ. ಈ ಘಟನೆಯ ನಂತರ ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.

ಘಟನೆಯ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಕಲ್ಲು ತೂರಾಟವು ಮಸೀದಿಯ ಕಡೆಯಿಂದ ಆರಂಭವಾಗಿದೆ ಎಂಬ ಮಾಹಿತಿ ಇದೆ. ಈ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಿ, ಕೆಲವೇ ಗಂಟೆಗಳಲ್ಲಿ 21 ಜನರನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಗಲಭೆ ನಡೆದ ಕೆಲವೇ ಕ್ಷಣಗಳಲ್ಲಿ ಇಷ್ಟು ತ್ವರಿತವಾಗಿ ಕ್ರಮ ತೆಗೆದುಕೊಂಡ ಪ್ರಕರಣಗಳು ಅಪರೂಪ ಎಂದು ಅವರು ಹೇಳಿದರು.

‘ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ’: ಗೃಹ ಸಚಿವ ಪರಮೇಶ್ವರ್

ಮದ್ದೂರಿನಲ್ಲಿ ನಡೆದ ಕಲ್ಲು ತೂರಾಟ ಘಟನೆಗೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಪ್ರತಿಕ್ರಿಯಿಸಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಸೂಕ್ತ ಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಪ್ರಕರಣಕ್ಕೆ ಕಾರಣರಾದವರನ್ನು ಪತ್ತೆ ಹಚ್ಚಿ ಬಂಧಿಸಲಾಗುತ್ತದೆ ಎಂದು ಸಚಿವರು ಭರವಸೆ ನೀಡಿದ್ದಾರೆ. ಅಲ್ಲದೆ, ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಅವರು ಜನರಿಗೆ ಮನವಿ ಮಾಡಿದ್ದಾರೆ. ಘಟನೆಯ ಕುರಿತು ಪೊಲೀಸರು ಈಗಾಗಲೇ ತನಿಖೆ ನಡೆಸುತ್ತಿದ್ದಾರೆ ಮತ್ತು ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಪಟ್ಟಣದಲ್ಲಿ ಬಿಗಿ ಬಂದೋಬಸ್ತ್ ಮತ್ತು ಪ್ರಸ್ತುತ ಪರಿಸ್ಥಿತಿ

ಪ್ರಸ್ತುತ ಮದ್ದೂರು ಪಟ್ಟಣದಲ್ಲಿ ಅಂಗಡಿಗಳನ್ನು ಮುಚ್ಚಿಸಲಾಗಿದ್ದು, ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಪ್ರವಾಸಿ ಮಂದಿರ ವೃತ್ತದಿಂದ ಪೇಟೆಯ ರಸ್ತೆಗಳಲ್ಲಿನ ಎಲ್ಲಾ ಅಂಗಡಿಗಳನ್ನು ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಬಂದ್ ಮಾಡಿಸಿದ್ದಾರೆ.

ಪರಿಸ್ಥಿತಿ “ಬೂದಿ ಮುಚ್ಚಿದ ಕೆಂಡದಂತೆ” ಇದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಪೊಲೀಸ್ ಪಡೆ ಹರಸಾಹಸ ಪಡುತ್ತಿದೆ. ಪೊಲೀಸರ ಮನವಿಗೂ ಸ್ಪಂದಿಸದೆ ಕೆಲವರು ಪ್ರತಿಭಟನೆ ಮುಂದುವರೆಸಿದ್ದರಿಂದ ಲಾಠಿ ಪ್ರಹಾರ ನಡೆಸಿ ಚದುರಿಸಲಾಗಿದೆ. ಸದ್ಯ ಮದ್ದೂರಿನಲ್ಲಿ ಸೆಕ್ಷನ್ 144 ಜಾರಿಯಲ್ಲಿದ್ದು, ನಾಳೆಯೂ ನಿಷೇಧಾಜ್ಞೆ ಮುಂದುವರಿಯಲಿದೆ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.

ಸ್ಥಳೀಯರು ಮತ್ತು ಪೊಲೀಸರ ನಡುವಿನ ಘರ್ಷಣೆ

ಗಣಪತಿ ಉತ್ಸವ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆದಿದೆ ಎಂದು ಆರೋಪಿಸಿ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಹರಸಾಹಸ ಪಟ್ಟರು. ಪ್ರತಿಭಟನಾಕಾರರನ್ನು ಚದುರಿಸಲು ಲಾಠಿ ಪ್ರಹಾರ ನಡೆಸಲಾಯಿತು. ಸದ್ಯ ಪಟ್ಟಣದಲ್ಲಿ ಪರಿಸ್ಥಿತಿ ಶಾಂತವಾಗಿದ್ದರೂ, ಮುಂಜಾಗ್ರತಾ ಕ್ರಮವಾಗಿ ಅಂಗಡಿಗಳನ್ನು ಮುಚ್ಚಿಸಲಾಗಿದ್ದು, ಸೆಕ್ಷನ್ 144 ಅನ್ನು ಜಾರಿಗೊಳಿಸಲಾಗಿದೆ.

ಪೊಲೀಸ್ ಇಲಾಖೆಯಿಂದ ಬಂಧಿತರ ಸಮುದಾಯದ ಕುರಿತು ಯಾವುದೇ ಅಧಿಕೃತ ಮಾಹಿತಿ ಪ್ರಕಟವಾಗಿಲ್ಲ. ಸಚಿವರ ಹೇಳಿಕೆಯು ಮಾಧ್ಯಮಗಳಲ್ಲಿ ಪ್ರಮುಖವಾಗಿ ವರದಿಯಾಗಿದ್ದು, ಇದೇ ಆಧಾರದ ಮೇಲೆ ಮುಂದಿನ ತನಿಖೆ ಮತ್ತು ರಾಜಕೀಯ ಚರ್ಚೆಗಳು ನಡೆಯುವ ಸಾಧ್ಯತೆಗಳಿವೆ.

ಸಂಡೂರು: ಜಿಂದಾಲ್ ಕಂಪೆನಿಯಿಂದ ದಲಿತರ ಭೂಮಿ ಕಬಳಿಕೆ ಆರೋಪ: ಪಿಟಿಸಿಎಲ್ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿಯಿಂದ ಜಿಲ್ಲಾಧಿಕಾರಿಗೆ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...