Homeಕರ್ನಾಟಕಮಂಡ್ಯ: ಟ್ಯೂಷನ್‌ಗೆ ಬಂದಿದ್ದ ಬಾಲಕಿಯನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿದ ಶಿಕ್ಷಕ

ಮಂಡ್ಯ: ಟ್ಯೂಷನ್‌ಗೆ ಬಂದಿದ್ದ ಬಾಲಕಿಯನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿದ ಶಿಕ್ಷಕ

- Advertisement -
- Advertisement -

ಮಂಡ್ಯದ ಮಳವಳ್ಳಿಯಲ್ಲಿ ಟ್ಯೂಷನ್‌ಗೆಂದು ತೆರಳಿದ್ದ 6ನೇ ತರಗತಿ ವಿದ್ಯಾರ್ಥಿನಿಯೊಬ್ಬರು ನಿರ್ಮಾಣ ಹಂತದ ಮನೆಯ ಮುಂಭಾಗದಲ್ಲಿದ್ದ ನೀರಿನ ಸಂಪ್‌ನಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆಗೆ ತಿರುವು ಲಭಿಸಿದ್ದು, ಟ್ಯೂಷನ್‌ ನೀಡುತ್ತಿದ್ದ ಶಿಕ್ಷಕ ಕಾಂತರಾಜು ಬಾಲಕಿಯನ್ನು ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದಾನೆ ಎಂದು ವರದಿಯಾಗಿದೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎಂದು ‘ನುಡಿ ಕರ್ನಾಟಕ’ ಸುದ್ದಿ ಪೋರ್ಟಲ್ ಬುಧವಾರ ವರದಿ ಮಾಡಿದೆ.

ಆರೋಪಿ ಕಾಂತರಾಜು ಮಳವಳ್ಳಿ ತಾಲ್ಲೂಕಿನ ನೆಲಮಾಕನಹಳ್ಳಿ ಗ್ರಾಮದವನಾಗಿದ್ದು, ಕಳೆದ 15 ವರ್ಷಗಳಿಂದ ಮೈಸೂರಿನಲ್ಲಿ ನೆಲೆಸಿದ್ದ. ಬಾಲಕಿಯನ್ನು ಆರೋಪಿಯು ಚಾಕೊಲೇಟ್ ನೀಡುವುದಾಗಿ ಪುಸಲಾಯಿಸಿ ಕರೆದೊಯ್ದು, ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದಾಗಿ ತಿಳಿದು ಬಂದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಳವಳ್ಳಿ ಪಟ್ಟಣದಲ್ಲಿ ಟ್ಯೂಷನ್ ಸೆಂಟರ್‌ ನಲ್ಲಿ ಕೆಲಸಕ್ಕಿದ್ದ ಕಾಂತರಾಜು ನಿನ್ನೆ ಮಂಗಳವಾರ ಬಾಲಕಿಗೆ ಕರೆ ಮಾಡಿ ಬೆಳಿಗ್ಗೆ 11 ಗಂಟೆ ಸುಮಾರಿಗೆ ಟ್ಯೂಷನ್ ಗೆ ಬರುವಂತೆ ತಿಳಿಸಿದ್ದ. ಬಾಲಕಿ  ಟ್ಯೂಷನ್ ಗೆ ಬಂದ ಸಂದರ್ಭದಲ್ಲಿ ಚಾಕೊಲೇಟ್ ಕೊಡಿಸುವುದಾಗಿ ಪುಸಲಾಯಿಸಿ ಅಲ್ಲಿದ್ದ ಗಲ್ಲಿಯಲ್ಲಿ ಅತ್ಯಾಚಾರ ನಡೆಸಿ, ಕೊಲೆ ಮಾಡಿ ಶವವನ್ನು ಮಳವಳ್ಳಿ ಪಟ್ಟಣದ ಮೈಸೂರು ರಸ್ತೆಯ ಮಯೂರ ಬೇಕರಿ ಹಿಂಭಾಗದ ನಿರ್ಮಾಣ ಹಂತದ ಮನೆಯ ಕಟ್ಟಡದ ನೀರಿನ ಸಂಪಿಗೆ ಹಾಕಿದ್ದ ಎನ್ನಲಾಗಿದೆ.

ಇದನ್ನೂ ಓದಿ: ವಾಮಾಚಾರಕ್ಕೆ ಮಹಿಳೆಯರಿಬ್ಬರ ನರಬಲಿ: ಅಘಾತ ವ್ಯಕ್ತಪಡಿಸಿದ ಕೇರಳ ಹೈಕೋರ್ಟ್‌‌

ಬಾಲಕಿಯನ್ನು ಹುಡುಕಾಟ ನಡೆಸಿ ನಾಟಕವಾಡಿದ ಆರೋಪಿ

ತಮ್ಮ ಮಗಳು ಬೆಳಿಗ್ಗೆ 11 ಗಂಟೆಗೆ ಟ್ಯೂಷನ್‌ಗೆ ಎಂದು ಮನೆಯಿಂದ ಹೋದವಳು, ಸಂಜೆಯಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಗಾಬರಿಯಾದ ಪೋಷಕರು ಟ್ಯೂಶನ್ ಸೆಂಟರ್ ಸೇರಿದಂತೆ ಅಕ್ಕಪಕ್ಕದಲ್ಲಿ ವಿಚಾರಿಸಿದರೂ ಬಾಲಕಿ ಪತ್ತೆಯಾಗಿರಲಿಲ್ಲ.

ಟ್ಯೂಷನ್ ಸೆಂಟರ್ ನೋಡಿಕೊಂಡಿದ್ದ ಕಾಂತರಾಜು ಕೂಡ ನನಗೆ ಬಾಲಕಿ ಬಗ್ಗೆ ತನಗೆ ಏನೂ ಗೊತ್ತಿಲ್ಲ ಎಂದು ಹೇಳಿ, ಆತನೂ ಬಾಲಕಿಯ ಪಾಲಕರೊಂದಿಗೆ ಹುಡುಕಾಟ ನಡೆಸಿದ್ದ. ಕೊನೆಗೆ ಮೈಸೂರು ರಸ್ತೆಯ ಮಯೂರ ಬೇಕರಿ ಹಿಂಭಾಗ ನಾಗರಾಜು ಎಂಬುವವರ ನಿರ್ಮಾಣ ಹಂತದ ಮನೆಯ ಕಟ್ಟಡದ ಸಮೀಪದಲ್ಲಿದ್ದ ನೀರಿನ ಸಂಪ್‌ನಲ್ಲಿ ಬಿದ್ದಿರುವ ಮಾಹಿತಿ ಮೇರೆಗೆ ಪೋಲಿಸರು ನೀರಿನ ಸಂಪ್‌ನಲ್ಲಿ ಪರಿಶೀಲನೆ ನಡೆಸಿದಾಗ ಬಾಲಕಿಯ ಶವ ಪತ್ತೆಯಾಗಿತ್ತು.

ಈ ವೇಳೆಗಾಗಲೆ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಬಗ್ಗೆ ಸಾಕಷ್ಟು ಅನುಮಾನ ವ್ಯಕ್ತವಾಗಿದ್ದವು. ಸ್ಥಳಕ್ಕೆ ಡಿವೈಎಸ್ ಪಿ‌ ಎನ್.ನವೀನ್ ಕುಮಾರ್, ಸಿಪಿಐ ಎ.ಕೆ.ರಾಜೇಶ್ ಭೇಟಿ ನೀಡಿ ಶ್ವಾನದಳದೊಂದಿಗೆ ಪರಿಶೀಲನೆ ಕೂಡ ನಡೆಸಿದ್ದರು.

ಇದನ್ನೂ ಓದಿ: ಬೆಂಗಳೂರು: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್ಳಲು ಮುಂದಾದ ದಂಪತಿ ರಕ್ಷಿಸಿದ ಅಗ್ನಿಶಾಮಕ ದಳ

ಮಧ್ಯರಾತ್ರಿ ಸೆರೆಯಾದ ಆರೋಪಿ

ಎಸ್ಐಗಳಾದ ಶೇಷಾದ್ರಿ ಕುಮಾರ್, ಶ್ರೀಧರ್, ಅಶೋಕ್ ಅವರು ಟ್ಯೂಷನ್ ಸೆಂಟರ್‌ ನೋಡಿಕೊಳ್ಳುತ್ತಿದ್ದ ಕಾಂತರಾಜು ಹೇಳಿಕೆಗಳ ಮೇಲೆ ಅನುಮಾನ ವ್ಯಕ್ತಪಡಿಸಿದ್ದರು. ಅವನನ್ನು ಕರೆತಂದು ವಿಚಾರಣೆ ಮಾಡಿದ ಸಂದರ್ಭದಲ್ಲಿ ಆತನೇ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿ‌, ನೀರಿನ ಸಂಪಿಗೆ ಹಾಕಿದ್ದ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...