Homeಕರ್ನಾಟಕಮಂಡ್ಯ | ದಲಿತ ಯುವಕನ ಸಜೀವ ದಹನ; ಆರೋಪಿ ನಾಪತ್ತೆ

ಮಂಡ್ಯ | ದಲಿತ ಯುವಕನ ಸಜೀವ ದಹನ; ಆರೋಪಿ ನಾಪತ್ತೆ

- Advertisement -
- Advertisement -

ಹುಲ್ಲಿನ ಮೆದೆಯಲ್ಲಿ ದಲಿತ ಯುವಕನ ಸಜೀವ ದಹನ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದಲ್ಲಿ ನಡೆದಿದೆ ಎಂದು ಈದಿನ.ಕಾಂ ವರದಿ ಮಾಡಿದೆ. ಪ್ರಕರಣ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಸದರಿ ಗ್ರಾಮದ ಸವರ್ಣಿಯ ಯುವಕ ಅನಿಲ್ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿ ನಾಪತ್ತೆಯಾಗಿರುವುದಾಗಿ ವರದಿ ಹೇಳಿದೆ. ಮಂಡ್ಯ | ದಲಿತ

ಕತ್ತರಘಟ್ಟ ಗ್ರಾಮದಲ್ಲಿ ಹುಲ್ಲಿನ ಮೆದೆಗೆ ಬೆಂಕಿ ಹಾಕಿ ದಲಿತ ಯುವಕ ಜಯಕುಮಾರ್‌ನನ್ನು ಜೀವಂತವಾಗಿ ದಹನ ಮಾಡಿರುವ ಸಂಬಂಧ ಗ್ರಾಮದ ಕೃಷ್ಣೆಗೌಡರ ಮಗ ಅನಿಲ್ ಕುಮಾರ್ ವಿರುದ್ಧ ಮೃತನ ಪತ್ನಿ ಲಕ್ಷ್ಮಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕೃಷ್ಣರಾಜಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದಲ್ಲಿ ದಲಿತ ಸಿದ್ದಯ್ಯ ಅವರಿಗೆ ಸೇರಿರುವ ಜಮೀನಿನಲ್ಲಿ ಕೃಷ್ಣೆಗೌಡರ ಮಗ ಅನಿಲ್ ಕುಮಾರ್ ಅಕ್ರಮವಾಗಿ ಹುಲ್ಲಿನ ಮೆದೆಯನ್ನು ಹಾಕಿಕೊಂಡಿದ್ದು, ತನ್ನ ಜಮೀನಿನಲ್ಲಿ ಅಕ್ರಮವಾಗಿ ಹಾಕಿಕೊಂಡಿರುವ ಹುಲ್ಲಿನ ಮೆದೆಯನ್ನು ತೆರವು ಮಾಡಿಕೊಡುವಂತೆ ಗ್ರಾಮದಲ್ಲಿ ರಾಜಿ ಪಂಚಾಯಿತಿ ಮಾಡಿ ಅದು ಪ್ರಯೋಜನವಾಗದ ಹಿನ್ನೆಲೆಯಲ್ಲಿ ಮೃತ ಯುವಕ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದರು ಎಂದು ತಿಳಿದುಬಂದಿದೆ.

ನಿನ್ನೆಯೂ ಅನಿಲ್ ಮತ್ತು ಜಯಕುಮಾರ್ ನಡುವೆ ತೀವ್ರ ಮಾತಿನ ಚಕಮಕಿ ಹಾಗೂ ಪರಸ್ಪರ ಗಲಾಟೆ, ಗದ್ದಲಗಳು ನಡೆದಿದ್ದು, ʼನಾನು ಹುಲ್ಲಿನ ಮೆದೆಯನ್ನು ತೆರವುಗೊಳಿಸುವುದಿಲ್ಲ, ಮೆದೆಗೆ ಬೆಂಕಿ ಹಾಕ್ತೀನಿ ನೀನು ಬೆಂಕಿಯೊಳಗೆ ಬಿದ್ದು ಸಾಯಿ, ಇಲ್ಲದಿದ್ದರೆ ನಾನೇ ನಿನ್ನನ್ನು ಸಾಯಿಸುತ್ತೇನೆʼ ಎಂದು ಸವರ್ಣೀಯನೊಬ್ಬ ಬೆದರಿಕೆ ಹಾಕಿದ ಎನ್ನಲಾಗಿದೆ. ಮನನೊಂದ ದಲಿತ ಯುವಕ ಜಯಕುಮಾರ್ ಉರಿಯುತ್ತಿರುವ ಹುಲ್ಲಿನ ಮೆದೆಯೊಳಕ್ಕೆ ಹಾರಿ ಸಾವಿಗೆ ಶರಣಾಗಿದ್ದಾರೆ. ಈ ಹಿನ್ನೆಲೆಯಲ್ಲಿ ʼನನ್ನ ಪತಿಯ ಸಾವಿಗೆ ಅನಿಲ್ ಕಾರಣʼ ಎಂದು ಲಕ್ಷ್ಮಿ ದೂರು ನೀಡಿದ್ದಾರೆ.

ಆರೋಪಿ ಅನಿಲ್ ಕುಮಾರ್ ತಲೆ ಮರೆಸಿಕೊಂಡಿದ್ದು, ಆತನ ಪತ್ತೆಗಾಗಿ ಗ್ರಾಮಾಂತರ ಪೊಲೀಸರು ಬಲೆ ಬೀಸಿದ್ದಾರೆ. ನಾಗಮಂಗಲ ಡಿವೈಎಸ್‌ಪಿ ಚಲುವರಾಜು ಅವರು ಅನಿಲ್ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸಿದ್ದು, ‘ಉರಿಯುವ ಬೆಂಕಿಯಲ್ಲಿ ಕಿರಚಾಟ, ಬೆಂಕಿ ಜ್ವಾಲೆಗೆ ಓಡಾಟ ಇರಬೇಕಿತ್ತು. ಪಕ್ಕದಲ್ಲೇ ಟ್ರಾಕ್ಟರ್‌ನಲ್ಲಿ ಉಳುಮೆ ಮಾಡುತ್ತಿದ್ದವರಿಗೂ ಕೇಳಿಸಿಲ್ಲವೆಂದರೆ, ಮುಂಚೆಯೇ ಕೊಲೆ ಮಾಡಿ ಸುಟ್ಟಿರಬೇಕು’ ಎನ್ನುವ ಮಾತುಗಳು ಕೇಳಿಬಂದಿವೆ.

ಕೃಷ್ಣರಾಜಪೇಟೆ ಪಟ್ಟಣದ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಇಂದು ಜಯಕುಮಾರ್ ಅವರ ಮೃತ ದೇಹದ ಮರಣೋತ್ತರ ಪರೀಕ್ಷೆ ನಡೆಸಿ ಮೃತರ ವಾರಸುದಾರರಿಗೆ ಮೃತ ದೇಹವನ್ನು ಹಸ್ತಾಂತರಿಸಲಾಯಿತು.

ಛಲವಾದಿ ಮಹಾಸಭಾ ಜಿಲ್ಲಾಧ್ಯಕ್ಷ ಮಾಂಬಳ್ಳಿ ಜಯರಾಮ್, ತಾಲೂಕು ಅಧ್ಯಕ್ಷ ಊಚನಹಳ್ಳಿ ನಟರಾಜ್, ದಲಿತ ಹಕ್ಕುಗಳ ಹೋರಾಟಗಾರ ಚನ್ನಕೇಶವ, ರಂಗಸ್ವಾಮಿ, ಬಂಡಿಹೊಳೆ ರಮೇಶ್, ಗ್ರಾಮಾಂತರ ಠಾಣೆ ಇನ್‌ಸ್ಪೆಕ್ಟರ್ ಆನಂದ್ ಗೌಡ, ದಲಿತ ಯುವರೈತ ಮೃತ ಜಯಕುಮಾರ್ ಪತ್ನಿ ಲಕ್ಷ್ಮಿ, ಇಬ್ಬರು ಪುಟ್ಟ ಮಕ್ಕಳು ಸೇರಿದಂತೆ ಮೃತರ ಬಂಧುಗಳು ಹಾಗೂ ಕತ್ತರಘಟ್ಟ ಗ್ರಾಮಸ್ಥರು ಅಂತ್ಯ ಸಂಸ್ಕಾರದ ವೇಳೆ ಇದ್ದರು. ಮಂಡ್ಯ | ದಲಿತ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸೋಲಾಪುರದ ಜವಳಿ ಉತ್ಪಾದನಾ ಘಟಕದಲ್ಲಿ ಭೀಕರ ಅಗ್ನಿ ಅವಘಡ: ಮಾಲೀಕ ಸೇರಿ ಮಂದಿ ಸಾವು

ಸೋಲಾಪುರದ ಜವಳಿ ಉತ್ಪಾದನಾ ಘಟಕದಲ್ಲಿ ಭೀಕರ ಅಗ್ನಿ ಅವಘಡ: ಮಾಲೀಕ ಸೇರಿ ಮಂದಿ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...