Homeಕರ್ನಾಟಕಮಂಡ್ಯ | ದಲಿತ ಯುವಕನ ಸಜೀವ ದಹನ; ಆರೋಪಿ ನಾಪತ್ತೆ

ಮಂಡ್ಯ | ದಲಿತ ಯುವಕನ ಸಜೀವ ದಹನ; ಆರೋಪಿ ನಾಪತ್ತೆ

- Advertisement -
- Advertisement -

ಹುಲ್ಲಿನ ಮೆದೆಯಲ್ಲಿ ದಲಿತ ಯುವಕನ ಸಜೀವ ದಹನ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದಲ್ಲಿ ನಡೆದಿದೆ ಎಂದು ಈದಿನ.ಕಾಂ ವರದಿ ಮಾಡಿದೆ. ಪ್ರಕರಣ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಸದರಿ ಗ್ರಾಮದ ಸವರ್ಣಿಯ ಯುವಕ ಅನಿಲ್ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿ ನಾಪತ್ತೆಯಾಗಿರುವುದಾಗಿ ವರದಿ ಹೇಳಿದೆ. ಮಂಡ್ಯ | ದಲಿತ

ಕತ್ತರಘಟ್ಟ ಗ್ರಾಮದಲ್ಲಿ ಹುಲ್ಲಿನ ಮೆದೆಗೆ ಬೆಂಕಿ ಹಾಕಿ ದಲಿತ ಯುವಕ ಜಯಕುಮಾರ್‌ನನ್ನು ಜೀವಂತವಾಗಿ ದಹನ ಮಾಡಿರುವ ಸಂಬಂಧ ಗ್ರಾಮದ ಕೃಷ್ಣೆಗೌಡರ ಮಗ ಅನಿಲ್ ಕುಮಾರ್ ವಿರುದ್ಧ ಮೃತನ ಪತ್ನಿ ಲಕ್ಷ್ಮಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕೃಷ್ಣರಾಜಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದಲ್ಲಿ ದಲಿತ ಸಿದ್ದಯ್ಯ ಅವರಿಗೆ ಸೇರಿರುವ ಜಮೀನಿನಲ್ಲಿ ಕೃಷ್ಣೆಗೌಡರ ಮಗ ಅನಿಲ್ ಕುಮಾರ್ ಅಕ್ರಮವಾಗಿ ಹುಲ್ಲಿನ ಮೆದೆಯನ್ನು ಹಾಕಿಕೊಂಡಿದ್ದು, ತನ್ನ ಜಮೀನಿನಲ್ಲಿ ಅಕ್ರಮವಾಗಿ ಹಾಕಿಕೊಂಡಿರುವ ಹುಲ್ಲಿನ ಮೆದೆಯನ್ನು ತೆರವು ಮಾಡಿಕೊಡುವಂತೆ ಗ್ರಾಮದಲ್ಲಿ ರಾಜಿ ಪಂಚಾಯಿತಿ ಮಾಡಿ ಅದು ಪ್ರಯೋಜನವಾಗದ ಹಿನ್ನೆಲೆಯಲ್ಲಿ ಮೃತ ಯುವಕ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದರು ಎಂದು ತಿಳಿದುಬಂದಿದೆ.

ನಿನ್ನೆಯೂ ಅನಿಲ್ ಮತ್ತು ಜಯಕುಮಾರ್ ನಡುವೆ ತೀವ್ರ ಮಾತಿನ ಚಕಮಕಿ ಹಾಗೂ ಪರಸ್ಪರ ಗಲಾಟೆ, ಗದ್ದಲಗಳು ನಡೆದಿದ್ದು, ʼನಾನು ಹುಲ್ಲಿನ ಮೆದೆಯನ್ನು ತೆರವುಗೊಳಿಸುವುದಿಲ್ಲ, ಮೆದೆಗೆ ಬೆಂಕಿ ಹಾಕ್ತೀನಿ ನೀನು ಬೆಂಕಿಯೊಳಗೆ ಬಿದ್ದು ಸಾಯಿ, ಇಲ್ಲದಿದ್ದರೆ ನಾನೇ ನಿನ್ನನ್ನು ಸಾಯಿಸುತ್ತೇನೆʼ ಎಂದು ಸವರ್ಣೀಯನೊಬ್ಬ ಬೆದರಿಕೆ ಹಾಕಿದ ಎನ್ನಲಾಗಿದೆ. ಮನನೊಂದ ದಲಿತ ಯುವಕ ಜಯಕುಮಾರ್ ಉರಿಯುತ್ತಿರುವ ಹುಲ್ಲಿನ ಮೆದೆಯೊಳಕ್ಕೆ ಹಾರಿ ಸಾವಿಗೆ ಶರಣಾಗಿದ್ದಾರೆ. ಈ ಹಿನ್ನೆಲೆಯಲ್ಲಿ ʼನನ್ನ ಪತಿಯ ಸಾವಿಗೆ ಅನಿಲ್ ಕಾರಣʼ ಎಂದು ಲಕ್ಷ್ಮಿ ದೂರು ನೀಡಿದ್ದಾರೆ.

ಆರೋಪಿ ಅನಿಲ್ ಕುಮಾರ್ ತಲೆ ಮರೆಸಿಕೊಂಡಿದ್ದು, ಆತನ ಪತ್ತೆಗಾಗಿ ಗ್ರಾಮಾಂತರ ಪೊಲೀಸರು ಬಲೆ ಬೀಸಿದ್ದಾರೆ. ನಾಗಮಂಗಲ ಡಿವೈಎಸ್‌ಪಿ ಚಲುವರಾಜು ಅವರು ಅನಿಲ್ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸಿದ್ದು, ‘ಉರಿಯುವ ಬೆಂಕಿಯಲ್ಲಿ ಕಿರಚಾಟ, ಬೆಂಕಿ ಜ್ವಾಲೆಗೆ ಓಡಾಟ ಇರಬೇಕಿತ್ತು. ಪಕ್ಕದಲ್ಲೇ ಟ್ರಾಕ್ಟರ್‌ನಲ್ಲಿ ಉಳುಮೆ ಮಾಡುತ್ತಿದ್ದವರಿಗೂ ಕೇಳಿಸಿಲ್ಲವೆಂದರೆ, ಮುಂಚೆಯೇ ಕೊಲೆ ಮಾಡಿ ಸುಟ್ಟಿರಬೇಕು’ ಎನ್ನುವ ಮಾತುಗಳು ಕೇಳಿಬಂದಿವೆ.

ಕೃಷ್ಣರಾಜಪೇಟೆ ಪಟ್ಟಣದ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಇಂದು ಜಯಕುಮಾರ್ ಅವರ ಮೃತ ದೇಹದ ಮರಣೋತ್ತರ ಪರೀಕ್ಷೆ ನಡೆಸಿ ಮೃತರ ವಾರಸುದಾರರಿಗೆ ಮೃತ ದೇಹವನ್ನು ಹಸ್ತಾಂತರಿಸಲಾಯಿತು.

ಛಲವಾದಿ ಮಹಾಸಭಾ ಜಿಲ್ಲಾಧ್ಯಕ್ಷ ಮಾಂಬಳ್ಳಿ ಜಯರಾಮ್, ತಾಲೂಕು ಅಧ್ಯಕ್ಷ ಊಚನಹಳ್ಳಿ ನಟರಾಜ್, ದಲಿತ ಹಕ್ಕುಗಳ ಹೋರಾಟಗಾರ ಚನ್ನಕೇಶವ, ರಂಗಸ್ವಾಮಿ, ಬಂಡಿಹೊಳೆ ರಮೇಶ್, ಗ್ರಾಮಾಂತರ ಠಾಣೆ ಇನ್‌ಸ್ಪೆಕ್ಟರ್ ಆನಂದ್ ಗೌಡ, ದಲಿತ ಯುವರೈತ ಮೃತ ಜಯಕುಮಾರ್ ಪತ್ನಿ ಲಕ್ಷ್ಮಿ, ಇಬ್ಬರು ಪುಟ್ಟ ಮಕ್ಕಳು ಸೇರಿದಂತೆ ಮೃತರ ಬಂಧುಗಳು ಹಾಗೂ ಕತ್ತರಘಟ್ಟ ಗ್ರಾಮಸ್ಥರು ಅಂತ್ಯ ಸಂಸ್ಕಾರದ ವೇಳೆ ಇದ್ದರು. ಮಂಡ್ಯ | ದಲಿತ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸೋಲಾಪುರದ ಜವಳಿ ಉತ್ಪಾದನಾ ಘಟಕದಲ್ಲಿ ಭೀಕರ ಅಗ್ನಿ ಅವಘಡ: ಮಾಲೀಕ ಸೇರಿ ಮಂದಿ ಸಾವು

ಸೋಲಾಪುರದ ಜವಳಿ ಉತ್ಪಾದನಾ ಘಟಕದಲ್ಲಿ ಭೀಕರ ಅಗ್ನಿ ಅವಘಡ: ಮಾಲೀಕ ಸೇರಿ ಮಂದಿ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...