Homeಕರ್ನಾಟಕಮಂಡ್ಯ | ದಲಿತ ಯುವಕನ ಸಜೀವ ದಹನ; ಆರೋಪಿ ನಾಪತ್ತೆ

ಮಂಡ್ಯ | ದಲಿತ ಯುವಕನ ಸಜೀವ ದಹನ; ಆರೋಪಿ ನಾಪತ್ತೆ

- Advertisement -
- Advertisement -

ಹುಲ್ಲಿನ ಮೆದೆಯಲ್ಲಿ ದಲಿತ ಯುವಕನ ಸಜೀವ ದಹನ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದಲ್ಲಿ ನಡೆದಿದೆ ಎಂದು ಈದಿನ.ಕಾಂ ವರದಿ ಮಾಡಿದೆ. ಪ್ರಕರಣ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಸದರಿ ಗ್ರಾಮದ ಸವರ್ಣಿಯ ಯುವಕ ಅನಿಲ್ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿ ನಾಪತ್ತೆಯಾಗಿರುವುದಾಗಿ ವರದಿ ಹೇಳಿದೆ. ಮಂಡ್ಯ | ದಲಿತ

ಕತ್ತರಘಟ್ಟ ಗ್ರಾಮದಲ್ಲಿ ಹುಲ್ಲಿನ ಮೆದೆಗೆ ಬೆಂಕಿ ಹಾಕಿ ದಲಿತ ಯುವಕ ಜಯಕುಮಾರ್‌ನನ್ನು ಜೀವಂತವಾಗಿ ದಹನ ಮಾಡಿರುವ ಸಂಬಂಧ ಗ್ರಾಮದ ಕೃಷ್ಣೆಗೌಡರ ಮಗ ಅನಿಲ್ ಕುಮಾರ್ ವಿರುದ್ಧ ಮೃತನ ಪತ್ನಿ ಲಕ್ಷ್ಮಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕೃಷ್ಣರಾಜಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದಲ್ಲಿ ದಲಿತ ಸಿದ್ದಯ್ಯ ಅವರಿಗೆ ಸೇರಿರುವ ಜಮೀನಿನಲ್ಲಿ ಕೃಷ್ಣೆಗೌಡರ ಮಗ ಅನಿಲ್ ಕುಮಾರ್ ಅಕ್ರಮವಾಗಿ ಹುಲ್ಲಿನ ಮೆದೆಯನ್ನು ಹಾಕಿಕೊಂಡಿದ್ದು, ತನ್ನ ಜಮೀನಿನಲ್ಲಿ ಅಕ್ರಮವಾಗಿ ಹಾಕಿಕೊಂಡಿರುವ ಹುಲ್ಲಿನ ಮೆದೆಯನ್ನು ತೆರವು ಮಾಡಿಕೊಡುವಂತೆ ಗ್ರಾಮದಲ್ಲಿ ರಾಜಿ ಪಂಚಾಯಿತಿ ಮಾಡಿ ಅದು ಪ್ರಯೋಜನವಾಗದ ಹಿನ್ನೆಲೆಯಲ್ಲಿ ಮೃತ ಯುವಕ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದರು ಎಂದು ತಿಳಿದುಬಂದಿದೆ.

ನಿನ್ನೆಯೂ ಅನಿಲ್ ಮತ್ತು ಜಯಕುಮಾರ್ ನಡುವೆ ತೀವ್ರ ಮಾತಿನ ಚಕಮಕಿ ಹಾಗೂ ಪರಸ್ಪರ ಗಲಾಟೆ, ಗದ್ದಲಗಳು ನಡೆದಿದ್ದು, ʼನಾನು ಹುಲ್ಲಿನ ಮೆದೆಯನ್ನು ತೆರವುಗೊಳಿಸುವುದಿಲ್ಲ, ಮೆದೆಗೆ ಬೆಂಕಿ ಹಾಕ್ತೀನಿ ನೀನು ಬೆಂಕಿಯೊಳಗೆ ಬಿದ್ದು ಸಾಯಿ, ಇಲ್ಲದಿದ್ದರೆ ನಾನೇ ನಿನ್ನನ್ನು ಸಾಯಿಸುತ್ತೇನೆʼ ಎಂದು ಸವರ್ಣೀಯನೊಬ್ಬ ಬೆದರಿಕೆ ಹಾಕಿದ ಎನ್ನಲಾಗಿದೆ. ಮನನೊಂದ ದಲಿತ ಯುವಕ ಜಯಕುಮಾರ್ ಉರಿಯುತ್ತಿರುವ ಹುಲ್ಲಿನ ಮೆದೆಯೊಳಕ್ಕೆ ಹಾರಿ ಸಾವಿಗೆ ಶರಣಾಗಿದ್ದಾರೆ. ಈ ಹಿನ್ನೆಲೆಯಲ್ಲಿ ʼನನ್ನ ಪತಿಯ ಸಾವಿಗೆ ಅನಿಲ್ ಕಾರಣʼ ಎಂದು ಲಕ್ಷ್ಮಿ ದೂರು ನೀಡಿದ್ದಾರೆ.

ಆರೋಪಿ ಅನಿಲ್ ಕುಮಾರ್ ತಲೆ ಮರೆಸಿಕೊಂಡಿದ್ದು, ಆತನ ಪತ್ತೆಗಾಗಿ ಗ್ರಾಮಾಂತರ ಪೊಲೀಸರು ಬಲೆ ಬೀಸಿದ್ದಾರೆ. ನಾಗಮಂಗಲ ಡಿವೈಎಸ್‌ಪಿ ಚಲುವರಾಜು ಅವರು ಅನಿಲ್ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸಿದ್ದು, ‘ಉರಿಯುವ ಬೆಂಕಿಯಲ್ಲಿ ಕಿರಚಾಟ, ಬೆಂಕಿ ಜ್ವಾಲೆಗೆ ಓಡಾಟ ಇರಬೇಕಿತ್ತು. ಪಕ್ಕದಲ್ಲೇ ಟ್ರಾಕ್ಟರ್‌ನಲ್ಲಿ ಉಳುಮೆ ಮಾಡುತ್ತಿದ್ದವರಿಗೂ ಕೇಳಿಸಿಲ್ಲವೆಂದರೆ, ಮುಂಚೆಯೇ ಕೊಲೆ ಮಾಡಿ ಸುಟ್ಟಿರಬೇಕು’ ಎನ್ನುವ ಮಾತುಗಳು ಕೇಳಿಬಂದಿವೆ.

ಕೃಷ್ಣರಾಜಪೇಟೆ ಪಟ್ಟಣದ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಇಂದು ಜಯಕುಮಾರ್ ಅವರ ಮೃತ ದೇಹದ ಮರಣೋತ್ತರ ಪರೀಕ್ಷೆ ನಡೆಸಿ ಮೃತರ ವಾರಸುದಾರರಿಗೆ ಮೃತ ದೇಹವನ್ನು ಹಸ್ತಾಂತರಿಸಲಾಯಿತು.

ಛಲವಾದಿ ಮಹಾಸಭಾ ಜಿಲ್ಲಾಧ್ಯಕ್ಷ ಮಾಂಬಳ್ಳಿ ಜಯರಾಮ್, ತಾಲೂಕು ಅಧ್ಯಕ್ಷ ಊಚನಹಳ್ಳಿ ನಟರಾಜ್, ದಲಿತ ಹಕ್ಕುಗಳ ಹೋರಾಟಗಾರ ಚನ್ನಕೇಶವ, ರಂಗಸ್ವಾಮಿ, ಬಂಡಿಹೊಳೆ ರಮೇಶ್, ಗ್ರಾಮಾಂತರ ಠಾಣೆ ಇನ್‌ಸ್ಪೆಕ್ಟರ್ ಆನಂದ್ ಗೌಡ, ದಲಿತ ಯುವರೈತ ಮೃತ ಜಯಕುಮಾರ್ ಪತ್ನಿ ಲಕ್ಷ್ಮಿ, ಇಬ್ಬರು ಪುಟ್ಟ ಮಕ್ಕಳು ಸೇರಿದಂತೆ ಮೃತರ ಬಂಧುಗಳು ಹಾಗೂ ಕತ್ತರಘಟ್ಟ ಗ್ರಾಮಸ್ಥರು ಅಂತ್ಯ ಸಂಸ್ಕಾರದ ವೇಳೆ ಇದ್ದರು. ಮಂಡ್ಯ | ದಲಿತ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸೋಲಾಪುರದ ಜವಳಿ ಉತ್ಪಾದನಾ ಘಟಕದಲ್ಲಿ ಭೀಕರ ಅಗ್ನಿ ಅವಘಡ: ಮಾಲೀಕ ಸೇರಿ ಮಂದಿ ಸಾವು

ಸೋಲಾಪುರದ ಜವಳಿ ಉತ್ಪಾದನಾ ಘಟಕದಲ್ಲಿ ಭೀಕರ ಅಗ್ನಿ ಅವಘಡ: ಮಾಲೀಕ ಸೇರಿ ಮಂದಿ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...