Homeಕರ್ನಾಟಕಮಂಡ್ಯದಲ್ಲಿ ಹಿಜಾಬ್ ಧರಿಸಿದ ಶಿಕ್ಷಕಿಯರಿಗೂ ಇಲ್ಲ ಪ್ರವೇಶ: ಗೇಟ್‌ ಬಳಿಯೇ ಹಿಜಾಬ್, ಬುರ್ಕಾ ತೆಗೆದ ಶಿಕ್ಷಕಿಯರು

ಮಂಡ್ಯದಲ್ಲಿ ಹಿಜಾಬ್ ಧರಿಸಿದ ಶಿಕ್ಷಕಿಯರಿಗೂ ಇಲ್ಲ ಪ್ರವೇಶ: ಗೇಟ್‌ ಬಳಿಯೇ ಹಿಜಾಬ್, ಬುರ್ಕಾ ತೆಗೆದ ಶಿಕ್ಷಕಿಯರು

- Advertisement -
- Advertisement -

ಹಿಜಾಬ್- ಕೇಸರಿ ಶಾಲು ವಿವಾದದ ಹಿನ್ನೆಲೆ ರಜೆ ಘೋಷಿಸಲಾಗಿದ್ದ ಪ್ರೌಢಶಾಲೆಗಳು ಇಂದಿನಿಂದ ಪುನರಾರಂಭಗೊಂಡಿವೆ. ರಾಜ್ಯದ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಯಾವುದೆ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿವೆ. ಇದರ ನಡುವೆ ಮಂಡ್ಯದಲ್ಲಿ ಹಿಜಾಬ್ ಧರಿಸಿದ ಶಿಕ್ಷಕಿಯರಿಗೂ ಪ್ರವೇಶ ನಿರಾಕರಿಸಲಾಗಿದೆ.

ವಿದ್ಯಾರ್ಥಿಗಳು ಯಾವುದೇ ಧರ್ಮವನ್ನು ಸೂಚಿಸುವಂತಹ ಬಟ್ಟೆ ಧರಿಸಿ ಬರಬಾರದು ಎಂಬ ಹೈಕೋರ್ಟ್‌ ಮಧ್ಯಂತರ ಆದೇಶವನ್ನು ಕಟ್ಟು ನಿಟ್ಟಾಗಿ ಪಾಲಿಸಲಾಗುತ್ತಿದೆ. ಈ ನಡುವೆಯೇ ಮಂಡ್ಯದ ರೋಟರಿ ವಿದ್ಯಾಸಂಸ್ಥೆಯಲ್ಲಿ ಹಿಜಾಬ್ ಧರಿಸಿ ಬರಿವ ಶಿಕ್ಷಕಿಯರಿಗೂ ಪ್ರವೇಶ ನಿರಾಕರಿಸಲಾಗಿದ್ದು, ಶಾಲೆಯ ಗೇಟ್ ಬಳಿಯೇ ಹಿಜಾಬ್, ಬುರ್ಕಾ ತೆಗೆದಿಟ್ಟು ಒಳ ಹೋಗುತ್ತಿರುವ ದೃಶ್ಯ ಕಂಡು ಬಂದಿದೆ.

ಹಿಜಾಬ್ ಧರಿಸಿ ಬರುವ ಶಿಕ್ಷಕರಿಗೂ ಕ್ಯಾಂಪಸ್ ಒಳಗೆ ಪ್ರವೇಶ ನೀಡದಂತೆ ಮಂಡ್ಯ ಜಿಲ್ಲಾಡಳಿತ ಸೂಚನೆ ನೀಡಿದೆ. ಶಿಕ್ಷಕರು ಶಾಲೆ ಅಥವಾ ಕಾಲೇಜಿಗೆ ಪ್ರವೇಶಿಸುವ ಮೊದಲು ಗೇಟ್‌ನಲ್ಲಿಯೇ ಹಿಜಾಬ್ ಅನ್ನು ತೆಗೆದುಹಾಕಬೇಕು ಎಂದು ಆದೇಶಿಸಲಾಗಿದೆ ಎಂದು ಟೈಮ್ಸ್‌ ನೌ ಪತ್ರಕರ್ತ ಇಮ್ರಾನ್ ಖಾನ್ ವಿಡಿಯೋ ಸಹಿತ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಇಂದಿನಿಂದ ಪ್ರೌಢಶಾಲೆಗಳು ಆರಂಭ: ಶಾಂತಿ ಮತ್ತು ಸಹಜತೆ ನೆಲೆಸಲಿದೆ ಎಂದ ಸಿಎಂ

ಶಾಲೆಗೆ ಬಂದ ಬುರ್ಕಾ ಹಾಗೂ ಹಿಜಾಬ್ ತೊಟ್ಟು ವಿದ್ಯಾರ್ಥಿನಿಯರನ್ನ ಶಾಲಾ ಆಡಳಿತ ಮಂಡಳಿಯವರು ಗೇಟ್ ಬಳಿಯೇ ತಡೆದು ನಿಲ್ಲಿಸಿದ್ದಾರೆ. ಬುರ್ಕಾ, ಹಿಜಾಬ್ ತೆಗೆದ ನಂತರವೇ ಶಾಲೆಯ ಒಳಗೆ ಹೋಗಲು ಅವಕಾಶ ನೀಡಲಾಗಿದೆ.

ಪ್ರೌಢಶಾಲೆಗಳು ಆರಂಭದ ಬಗ್ಗೆ ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ “10ನೇ ತರಗತಿವರೆಗಿನ ಪ್ರೌಢಶಾಲೆಗಳು ಪುನರಾರಂಭಗೊಳ್ಳಲಿವೆ. ಶಾಂತಿ ಸಮಿತಿ ಸಭೆ ನಡೆಸುವಂತೆ ಡಿಸಿಗಳು, ಎಸ್ಪಿಗಳು ಮತ್ತು ಶಾಲಾ ಆಡಳಿತ ಮಂಡಳಿಗಳಿಗೆ ಸೂಚನೆ ನೀಡಿದ್ದೇನೆ. ಪರಿಸ್ಥಿತಿ ಅವಲೋಕಿಸಿದ ಕಾಲೇಜುಗಳು ಆರಂಭದ ಬಗ್ಗೆ ರ್ಧಾರ ಕೈಗೊಳ್ಳಲಾಗುತ್ತದೆ” ಎಂದು ಹೇಳಿದ್ದರು.

ಹಿಜಾಬ್‌ ಧರಿಸಿ ಕಾಲೇಜು ಪ್ರವೇಶ ಕೋರಿ ಸಲ್ಲಿಸಿದ್ದ ಉಡುಪಿ ಜಿಲ್ಲೆಯ ವಿದ್ಯಾರ್ಥಿನಿಯರ ಅರ್ಜಿಯನ್ನು ಆಲಿಸುತ್ತಿದ್ದ ವಿಸ್ಕೃತ ಪೀಠ ಇಂದು (ಫೆ.14) ಮಧ್ಯಾಹ್ನ 2.30ಕ್ಕೆ ಪ್ರಕರಣದ ವಿಚಾರಣೆ ಪುನರಾರಂಭಿಸಲಿದೆ.


ಇದನ್ನೂ ಓದಿ: ಹಿಜಾಬ್ – ಕೇಸರಿ ಶಾಲು ವಿವಾದ: ಉಡುಪಿಯ ಪ್ರೌಢಶಾಲಾ ವ್ಯಾಪ್ತಿಯಲ್ಲಿ ಫೆ.14 ರಂದು ನಿಷೇಧಾಜ್ಞೆ ಜಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....