Homeಅಂಕಣಗಳುಕುಮಾರಣ್ಣ ಮಾಡಿದ್ದು ಅವುನಿಗೇ ಅಟಗಾಯಿಸಿಗತ್ತು?

ಕುಮಾರಣ್ಣ ಮಾಡಿದ್ದು ಅವುನಿಗೇ ಅಟಗಾಯಿಸಿಗತ್ತು?

- Advertisement -
- Advertisement -

ಕರ್ನಾಟಕದಲ್ಲಿ ಈಗ ಆಗಿಹೋದ ಮತದಾನದ ವೈಖರಿ ಗಮನಿಸಿದರೆ, ಮೈತ್ರಿಗಳ ಮುಸುಡಿಗೆ ಸರಿಯಾದ ಹೊಡೆತ ಬೀಳುವಂತೆ ಕಾಣುತ್ತಿದೆಯಲ್ಲಾ. ಯಾಕೆಂದರೆ, ಈ ಮೈತ್ರಿ ಸರಕಾರದ ಮುಖ್ಯಮಂತ್ರಿ ನಾನು ಪರಿಸ್ಥಿತಿಯ ಕೂಸು ಎಂದಿತು. ಆದರೆ ಆ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಸಂಪೂರ್ಣ ಸೋತು ಹೋಗಿದೆ. ಬಿಜೆಪಿಯನ್ನು ಟೀಕಿಸುವುದರ ಜೊತೆಗೆ ಅವಕಾಶ ಸಿಕ್ಕಾಗಲೆಲ್ಲಾ ಕಾಂಗ್ರೆಸ್ಸನ್ನೂ ಟೀಕಿಸಿದೆ. ಇದರಿಂದ ಸಿಟ್ಟಾದ ಕಾಂಗೈಗಳು, ಕೂಸಿನ ಎಳಸು ಮಾತನ್ನು ಗಂಭೀರವಾಗಿಯೇ ಪರಿಗಣಿಸಿ, ಇಂತಹ ಎಳಸಿನ ಮುಖಂಡತ್ವದಲ್ಲಿ ನಾವು ರಾಜಕಾರಣ ಮಾಡಲು ಸಾಧ್ಯವೇ ಇಲ್ಲ ಎಂದು ಒಂದು ರಾಜಕೀಯ ಕ್ಷೋಭೆಯನ್ನು ಉಂಟುಮಾಡಿದರಲ್ಲಾ. ಈ ಕ್ಷೋಭೆ ಸತತವಾಗಿ ಒಂದು ವರ್ಷ ನಡೆದುದರ ಫಲವಾಗಿ ಸರಕಾರ ದಿಕ್ಕು ದೆಸೆಯಿಲ್ಲದೆ ನಡೆಯುತ್ತಿರುವಾಗಲೇ, ಅತ್ತ ದೇವೇಗೌಡರ ಕುಟುಂಬದ ಅಧಿಕಾರ ದಾಹದ ಫಲವಾಗಿ ಒಕ್ಕಲಿಗರಲ್ಲೇ ಅಸಮಾಧಾನ ಭುಗಿಲೆದ್ದು, ಅದು ಇಡೀ ಕರ್ನಾಟಕಕ್ಕೇ ಹಬ್ಬಿದಾಗ, ಚುನಾವಣೆ ಎದುರಾಗಿ, ಜನಸಮೂಹ “ಬನ್ನಿ ನಿಮ್ಮ ಬುರುಡೆಗೆ ಬಿಸಿನೀರು ಕಾಯಿಸಲು ಇದು ಸರಿಯಾದ ಸಮಯ” ಎಂದು ಕಾಯುತ್ತಿರುವಾಗ, ಮೈತ್ರಿಗಳು ಅದ್ಯಾವ ಬಾಯಿಂದ ನಾವು ಇಪ್ಪತ್ತೆರಡು ಬಾರಿಸುತ್ತೇವೆ ಎಂದು ಹೇಳುತ್ತಿರುವುದೇ ಹಾಸ್ಯಾಸ್ಪದವಾಗಿದೆಯಲ್ಲಾ, ಥೂತ್ತೇರಿ.

ಮೂರು ದಶಕದ ಹಿಂದೆ ಇದೇ ಕಾಂಗೈಗಳು ತಮ್ಮ ಹೆಸರಿಗೆ ಬದಲಾಗಿ, ಇಂದಿರಾಗಾಂಧಿಗೆ ಓಟು ಕೇಳುತ್ತಿದ್ದವು. ದೇವಸ್ಥಾನಕ್ಕೆ ನಿಧಿ ಎತ್ತುವವರು ತಮ್ಮ ಹೆಸರೇಳದೆ ದೇವಿ ಹೆಸರು ಹೇಳಿ ವಂತಿಕೆ ವಸೂಲು ಮಾಡುತ್ತವಲ್ಲ. ಹಾಗೆ ಅಂತದೇ ಒಂದು ಸ್ಥಿತಿಗೆ ಈ ಬಿಜೆಪಿಗಳು ಬಂದು ಕೂತಿವೆಯಲ್ಲಾ. ಇಂದಿರಾಗಾಂಧಿ ಹೆಸರೇ ಬಡಬಗ್ಗರು, ದುರ್ಬಲರು, ಅಲ್ಪಸಂಖ್ಯಾತರಿಗೆ ರೋಮಾಂಚನವುಂಟು ಮಾಡುತ್ತಿತ್ತು. ಆದರೆ ಈ ಮೋದಿ ಹೆಸರು ಚೆಡ್ಡಿಗಳಿಗೆ ಮತ್ತವರ ಮನೆಹಾಳ ಪರಿವಾರಕ್ಕೆ ಮಾತ್ರ ಕೋಸಂಬರಿ ತಿಂದು ಪಾನಕ ಕುಡಿದಷ್ಟು ಆಪ್ಯಾಯಮಾನವಾಗಿದೆಯಲ್ಲಾ. ಮೋದಿ ಮಹಾತ್ಮ ಕಡಿದು ಕಟ್ಟೆಹಾಕಿದ ಯಾವ ಕೆಲಸವೂ ಇಲ್ಲದ ಕಾರಣ ಬಾಯಿಗೆ ಬಂದ ಸುಳ್ಳನ್ನೇ ಒದರುತ್ತಿದ್ದಾನೆ. ಸುಳ್ಳಿಗಿರುವ ಶಕ್ತಿಯನ್ನು ಸರಿಯಾಗಿಯೇ ಗುರುತಿಸಿರುವ ಬಿಜೆಪಿಗಳು ಅದನ್ನೇ ಬೊಗಳುತ್ತಿರುವಾಗ ಅವುಗಳ ಸುಳ್ಳಿಗೆ ಬದಲು ಸತ್ಯ ಸಂಗತಿಯನ್ನು ಸಾರಲು ಈ ಕಾಂಗೈಗಳಿಗೆ ಏನಾಗಿದೆ ಎಂದು ಜನರು ಕೇಳುತ್ತಿರುವಾಗಲೆ, ಸಿದ್ದರಾಮಯ್ಯ ತನ್ನ ಐದು ವರ್ಷದ ಸಾಧನೆಯನ್ನ ಹೇಳುತ್ತಾ ಇಂತಹ ಸಾಧನೆ ಮೋದಿಯಿಂದ ಆಗಿದೆಯೇ ನೀವೇ ಹೇಳಿ ಎಂದಾಗ, ಸಿದ್ದರಾಮಯ್ಯ ಕೊಟ್ಟ ಅಕ್ಕಿ ತಿಂದ ಜನ ಅದನ್ನ ಮರೆತು ಏನೂ ಮಾಡದ ಮೋದಿ ಪರವಾಗಿಲ್ಲ ಎನ್ನುತ್ತಿವೆಯಲ್ಲಾ, ಥೂತ್ತೇರಿ.

ಮಂಡ್ಯ ಚುನಾವಣೆ ಇನ್ನೊಂದು ಚಾಮುಂಡೇಶ್ವರಿ ಚುನಾವಣೆಯಂತಾಗಿ ಅಂತ್ಯಗೊಂಡಿರುವಾಗ, ಆ ಬಗ್ಗೆ ವಾಟಿಸ್ಸೆ ಕೇಳಬೇಕೆನಿಸಿತಲ್ಲಾ. ಕೂಡಲೇ ಫೋನ್ ಮಾಡಲಾಗಿ ರಿಂಗಾಯ್ತು, ರಿಂಗ್ ಠೋನ್ `ಟರ್ರ್ ಟರ್ರ್’ “ಹಲೋ ಹೇಳಿ ಸಾ”.

“ವಾಟಿಸ್ಸೆ ಚುನಾವಣೆ ಯಂಗಾಯ್ತು.”

“ಡಲ್ಲಾಗಿತ್ತು ಸಾ.”

“ಯಾಕೆ?”

“ಯಾಕಂದ್ರೆ ನನ್ನ ಕಣ್ಣೆದುರಿಗೆ ಡ್ರಿಂಕ್ ಅಂಗಡಿಗೆ ಬಾಗಲಾಕಿಸಿಬುಟ್ರು ಸಾ. ಮೊದ್ಲೆ ಗೊತ್ತಿದ್ರೆ ಯಲಕ್ಷನ್ ಮುಗಿಯುವರಿಗೂ ಮೇಂಟೇನಾಗೋವಷ್ಟು ಡ್ರಿಂಕ್ಸ್ ತಗಂಡು ಸ್ಟಾಕ್ ಮಡಿಕಬವುದಿತ್ತು.”

“ಅಂಗಡಿ ಬಾಗಲಾಕಿ ಸೀಲಾಕಿದ್ರು. ಹಿಂದಲ ಬಾಗಲಲ್ಲಿ ಸಿಗತದೆ.”

“ಈ ಸತಿ ಬಾಳ ಸ್ಟಿಕ್ಟು ಸಾರ್, ಆದ್ರು ಓಟು ಮಾಡೋ ಹಿಂದಿನ ದಿನ ನಿಖಿಲ್ ಕಡೆಯೋರಿಂದ ಒಂದೇ ಒಂದು ರಾಜಾ ವಿಸ್ಕಿ ಪ್ಯಾಕೆಟ್ ಸಿಕ್ತು ಸಾ.”

“ಅವುರತ್ರಲೂ ಈಸಗಂಡ್ಯಾ.”

“ಒಂದು ಷರತ್ತ ಮ್ಯಾಲೆ ಕೊಟ್ರು ಸಾರ್.”

“ಏನು ಷರತ್ತು.”

“ನಿಖಿಲ್ ಕುಮಾರ್‌ಸ್ವಾಮಿಗೇ ಓಟಾಕ್ತಿನಿ ಅಂತ ಹೇಳಿದ ಮ್ಯಾಲೆ ಕೊಟ್ರು ಸಾ.”

“ಅಂಗರೆ ನಿನ್ನೋಟು ನಿಖಿಲ್‌ಗೋಯ್ತು.”

“ಏಲ್ಯಾರವುಂಟೆ ಸಾರ್, ಐನೂರ‍್ರುಪಾಯಿ ಈಸಿಗಂಡೋರೆ ಕೈ ಕೊಟ್ರು, ಇನ್ನ ನನ್ನಂಥೋರು ಹಾಕಕ್ಕಾದತೆ.”

“ಐನೂರು ಕೊಟ್ಟೋರು ಧರ್ಮಸ್ಥಳದ ಆಣೆ ಮಾಡಿಸಿದರಂತೆ.”

“ಅದೂ ನ್ಯಡಿತು, ಕ್ಯಾರ್‌ಪೇಟೆ ಪಾಂಡುಪುರ ಇಲ್ಯಲ್ಲ ನ್ಯಡೀತು. ಅದ್ಕೆ ಅಲ್ಲಿ ಸಲುಪ ಸುಮಲತನಿಗೆ ಹಿನ್ನೆಡೆ.”

“ಮದ್ದೂರು ಮಳವಳ್ಳಿ ಯಂಗೆ.”

“ಅಲ್ಲಿ ತಮ್ಮಣ್ಣ ಭಾರಿ ದುಡ್ಡು ಬಡದ ಸಾ. ಆ ನನಮಗನಿಗೆ ಎಲ್ಲಿ ಕುಮಾರಣ್ಣ ಎಗರೋಗಿ ಮಂತ್ರಿಗಿರಿ ಹೋಯ್ತದೋ ಅಂತ ಹೆದ್ರಿಕಂಡು ದುಡ್ಡ ಸುರುದುಬುಟ್ಟ.”

“ಪ್ರಾಪರ್ ಮಂಡ್ಯ ಯಂಗೆ.”

“ಅದ್ಯಂಗೊ ಗೊತ್ತಿಲ್ಲ. ನಮ್ಮ ನಾಗಮಂಗಲದ ಬಗ್ಗೆ ಯಲ್ಲ ಡವುಟು ಮಾಡತಿದ್ರು. ಆದ್ರು ನಾವು ನಂಬಿಕಸ್ಥರು ಅಂತ ತೋರಿದೊ ಸಾ.”

“ಇದು ನಿನ್ನಭಿಪ್ರಾಯನ.”

“ನಾನು, ಜನಗಳ ಜೊತೆ ಇದ್ದಿನಿ ಸಾ.”

“ಕುಡುಕರ ಜೊತೇಲೆ?”

“ನನ್ನಂಥ ಕುಡುಕ್ರು ಕುಡುಕರ ಕೂಡೆ ಇರದಿಲ್ಲ ಸಾರ್, ಅವುರಿಗೆ ಮಾತ ಕೇಳೋ ಜನಗಳು ಬೇಕು, ಅದ್ಕೆ ನಾನು ಜನಗಳ ಜೊತೆ ಇರತಿನಿ, ಈ ಕುಮಾರಸ್ವಾಮಿ ಮಾಡಿದ ಕ್ಯಲಸ ಅವುನಿಗೇ ಅಟಗಾಯಿಸಿಗತ್ತಾ ಅದೆ ಸಾ.”

“ಯಂಗೇ?”

“ಅವುನು ಅವುಳ್ಯಾರೊ ಡಿ.ಸಿ ಹಿಡಕಂಡು ತನ್ನ ಮಗನೆಸರು ಮದಲೇಟಿಗೆ ಪಸ್ಟ್ಬರಂಗೆ ಮಾಡಿದ, ಇದರಿಂದ ಸುಮಲತ 20ನೇ ಕ್ಯಾಂಡೇಟಾದ್ರು. ಜೊತೆಗೆ ಮೇಲೆ ಕ್ಯೆಳಗೆ ಯರಡು ಮೂರು ಸುಮಲತ ಬಿದ್ರು.”

“ನಾನು ನೋಡಿದೆ ಅದ.”

“ಇಪ್ಪತ್ಯೆರುಡು ಜನ ಕ್ಯಾಂಡೇಟಾದ್ರಿಂದ ಯರಡು ಲೈನಾಯ್ತು ಸಾ. ಸುಮಲತ ಲೈನಲ್ಲಿ ಮೊದಲಿದ್ದೋನಿಗೆ ಅದ್ಯಂತದೋ ಸಿತಾರ್ ವಾದ್ಯ ಕೊಟ್ಟಿದ್ರು. ಅದು ಒಂಥರ ಜ್ವಾಳದ ಕಡ್ಡಿವರೆ ಮಡಗಿದಂಗಿತ್ತು. ಅಷ್ಟೇ ಸಾಕು ಈ ಯಬ್ಬೆಟ್ಟಿನವ್ಯಲ್ಲ ಆ ಸಿತಾರ್‌ನ ಹುಲ್ಲೊರೆ ಅಂತ ತಿಳಕಂಡು ಒತ್ತಿ ಮಡಿಗ್ಯವೆ.”

“ಅರರೆ, ಅದ್ಯಂಗೆ.”

“ಸುಮಲತನ ಲೈನಲ್ಲಿ ಮೊದಲನೆಯವನು ಅವುನೆ ಅಲ್ಲವ ಸಾ. ಅದು ಯಬ್ಬೆಟ್ಟಿಗಳಿಗ್ಯಂಗೆ ಗೊತ್ತಾಗಬೇಕು. ಅಂತೂ ನಿಖಿಲ್‌ನ ಕಡೆ ಐವತ್ತೋಟು ದಿಕ್ಕು ತಪ್ಯವೆ, ನಮ್ಮದೊಂದು ಬೂತಲ್ಲೇ ಅಂಗಾದ್ರೆ ಉಳಿದ ಕಡೆ.”

“ಅಂಗರೆ ಸಿತಾರಿನೋನು ತಗದ ಅನ್ನು.”

“ಕುಮಾರಣ್ಣ ಮಾಡಿದ್ದು ಅವನೇ ಅನುಭವುಸಂಗಾಯ್ತು ಸಾ.”

“ಥೂತ್ತೇರಿ.”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...