Homeಅಂಕಣಗಳುಕುಮಾರಣ್ಣ ಮಾಡಿದ್ದು ಅವುನಿಗೇ ಅಟಗಾಯಿಸಿಗತ್ತು?

ಕುಮಾರಣ್ಣ ಮಾಡಿದ್ದು ಅವುನಿಗೇ ಅಟಗಾಯಿಸಿಗತ್ತು?

- Advertisement -
- Advertisement -

ಕರ್ನಾಟಕದಲ್ಲಿ ಈಗ ಆಗಿಹೋದ ಮತದಾನದ ವೈಖರಿ ಗಮನಿಸಿದರೆ, ಮೈತ್ರಿಗಳ ಮುಸುಡಿಗೆ ಸರಿಯಾದ ಹೊಡೆತ ಬೀಳುವಂತೆ ಕಾಣುತ್ತಿದೆಯಲ್ಲಾ. ಯಾಕೆಂದರೆ, ಈ ಮೈತ್ರಿ ಸರಕಾರದ ಮುಖ್ಯಮಂತ್ರಿ ನಾನು ಪರಿಸ್ಥಿತಿಯ ಕೂಸು ಎಂದಿತು. ಆದರೆ ಆ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಸಂಪೂರ್ಣ ಸೋತು ಹೋಗಿದೆ. ಬಿಜೆಪಿಯನ್ನು ಟೀಕಿಸುವುದರ ಜೊತೆಗೆ ಅವಕಾಶ ಸಿಕ್ಕಾಗಲೆಲ್ಲಾ ಕಾಂಗ್ರೆಸ್ಸನ್ನೂ ಟೀಕಿಸಿದೆ. ಇದರಿಂದ ಸಿಟ್ಟಾದ ಕಾಂಗೈಗಳು, ಕೂಸಿನ ಎಳಸು ಮಾತನ್ನು ಗಂಭೀರವಾಗಿಯೇ ಪರಿಗಣಿಸಿ, ಇಂತಹ ಎಳಸಿನ ಮುಖಂಡತ್ವದಲ್ಲಿ ನಾವು ರಾಜಕಾರಣ ಮಾಡಲು ಸಾಧ್ಯವೇ ಇಲ್ಲ ಎಂದು ಒಂದು ರಾಜಕೀಯ ಕ್ಷೋಭೆಯನ್ನು ಉಂಟುಮಾಡಿದರಲ್ಲಾ. ಈ ಕ್ಷೋಭೆ ಸತತವಾಗಿ ಒಂದು ವರ್ಷ ನಡೆದುದರ ಫಲವಾಗಿ ಸರಕಾರ ದಿಕ್ಕು ದೆಸೆಯಿಲ್ಲದೆ ನಡೆಯುತ್ತಿರುವಾಗಲೇ, ಅತ್ತ ದೇವೇಗೌಡರ ಕುಟುಂಬದ ಅಧಿಕಾರ ದಾಹದ ಫಲವಾಗಿ ಒಕ್ಕಲಿಗರಲ್ಲೇ ಅಸಮಾಧಾನ ಭುಗಿಲೆದ್ದು, ಅದು ಇಡೀ ಕರ್ನಾಟಕಕ್ಕೇ ಹಬ್ಬಿದಾಗ, ಚುನಾವಣೆ ಎದುರಾಗಿ, ಜನಸಮೂಹ “ಬನ್ನಿ ನಿಮ್ಮ ಬುರುಡೆಗೆ ಬಿಸಿನೀರು ಕಾಯಿಸಲು ಇದು ಸರಿಯಾದ ಸಮಯ” ಎಂದು ಕಾಯುತ್ತಿರುವಾಗ, ಮೈತ್ರಿಗಳು ಅದ್ಯಾವ ಬಾಯಿಂದ ನಾವು ಇಪ್ಪತ್ತೆರಡು ಬಾರಿಸುತ್ತೇವೆ ಎಂದು ಹೇಳುತ್ತಿರುವುದೇ ಹಾಸ್ಯಾಸ್ಪದವಾಗಿದೆಯಲ್ಲಾ, ಥೂತ್ತೇರಿ.

ಮೂರು ದಶಕದ ಹಿಂದೆ ಇದೇ ಕಾಂಗೈಗಳು ತಮ್ಮ ಹೆಸರಿಗೆ ಬದಲಾಗಿ, ಇಂದಿರಾಗಾಂಧಿಗೆ ಓಟು ಕೇಳುತ್ತಿದ್ದವು. ದೇವಸ್ಥಾನಕ್ಕೆ ನಿಧಿ ಎತ್ತುವವರು ತಮ್ಮ ಹೆಸರೇಳದೆ ದೇವಿ ಹೆಸರು ಹೇಳಿ ವಂತಿಕೆ ವಸೂಲು ಮಾಡುತ್ತವಲ್ಲ. ಹಾಗೆ ಅಂತದೇ ಒಂದು ಸ್ಥಿತಿಗೆ ಈ ಬಿಜೆಪಿಗಳು ಬಂದು ಕೂತಿವೆಯಲ್ಲಾ. ಇಂದಿರಾಗಾಂಧಿ ಹೆಸರೇ ಬಡಬಗ್ಗರು, ದುರ್ಬಲರು, ಅಲ್ಪಸಂಖ್ಯಾತರಿಗೆ ರೋಮಾಂಚನವುಂಟು ಮಾಡುತ್ತಿತ್ತು. ಆದರೆ ಈ ಮೋದಿ ಹೆಸರು ಚೆಡ್ಡಿಗಳಿಗೆ ಮತ್ತವರ ಮನೆಹಾಳ ಪರಿವಾರಕ್ಕೆ ಮಾತ್ರ ಕೋಸಂಬರಿ ತಿಂದು ಪಾನಕ ಕುಡಿದಷ್ಟು ಆಪ್ಯಾಯಮಾನವಾಗಿದೆಯಲ್ಲಾ. ಮೋದಿ ಮಹಾತ್ಮ ಕಡಿದು ಕಟ್ಟೆಹಾಕಿದ ಯಾವ ಕೆಲಸವೂ ಇಲ್ಲದ ಕಾರಣ ಬಾಯಿಗೆ ಬಂದ ಸುಳ್ಳನ್ನೇ ಒದರುತ್ತಿದ್ದಾನೆ. ಸುಳ್ಳಿಗಿರುವ ಶಕ್ತಿಯನ್ನು ಸರಿಯಾಗಿಯೇ ಗುರುತಿಸಿರುವ ಬಿಜೆಪಿಗಳು ಅದನ್ನೇ ಬೊಗಳುತ್ತಿರುವಾಗ ಅವುಗಳ ಸುಳ್ಳಿಗೆ ಬದಲು ಸತ್ಯ ಸಂಗತಿಯನ್ನು ಸಾರಲು ಈ ಕಾಂಗೈಗಳಿಗೆ ಏನಾಗಿದೆ ಎಂದು ಜನರು ಕೇಳುತ್ತಿರುವಾಗಲೆ, ಸಿದ್ದರಾಮಯ್ಯ ತನ್ನ ಐದು ವರ್ಷದ ಸಾಧನೆಯನ್ನ ಹೇಳುತ್ತಾ ಇಂತಹ ಸಾಧನೆ ಮೋದಿಯಿಂದ ಆಗಿದೆಯೇ ನೀವೇ ಹೇಳಿ ಎಂದಾಗ, ಸಿದ್ದರಾಮಯ್ಯ ಕೊಟ್ಟ ಅಕ್ಕಿ ತಿಂದ ಜನ ಅದನ್ನ ಮರೆತು ಏನೂ ಮಾಡದ ಮೋದಿ ಪರವಾಗಿಲ್ಲ ಎನ್ನುತ್ತಿವೆಯಲ್ಲಾ, ಥೂತ್ತೇರಿ.

ಮಂಡ್ಯ ಚುನಾವಣೆ ಇನ್ನೊಂದು ಚಾಮುಂಡೇಶ್ವರಿ ಚುನಾವಣೆಯಂತಾಗಿ ಅಂತ್ಯಗೊಂಡಿರುವಾಗ, ಆ ಬಗ್ಗೆ ವಾಟಿಸ್ಸೆ ಕೇಳಬೇಕೆನಿಸಿತಲ್ಲಾ. ಕೂಡಲೇ ಫೋನ್ ಮಾಡಲಾಗಿ ರಿಂಗಾಯ್ತು, ರಿಂಗ್ ಠೋನ್ `ಟರ್ರ್ ಟರ್ರ್’ “ಹಲೋ ಹೇಳಿ ಸಾ”.

“ವಾಟಿಸ್ಸೆ ಚುನಾವಣೆ ಯಂಗಾಯ್ತು.”

“ಡಲ್ಲಾಗಿತ್ತು ಸಾ.”

“ಯಾಕೆ?”

“ಯಾಕಂದ್ರೆ ನನ್ನ ಕಣ್ಣೆದುರಿಗೆ ಡ್ರಿಂಕ್ ಅಂಗಡಿಗೆ ಬಾಗಲಾಕಿಸಿಬುಟ್ರು ಸಾ. ಮೊದ್ಲೆ ಗೊತ್ತಿದ್ರೆ ಯಲಕ್ಷನ್ ಮುಗಿಯುವರಿಗೂ ಮೇಂಟೇನಾಗೋವಷ್ಟು ಡ್ರಿಂಕ್ಸ್ ತಗಂಡು ಸ್ಟಾಕ್ ಮಡಿಕಬವುದಿತ್ತು.”

“ಅಂಗಡಿ ಬಾಗಲಾಕಿ ಸೀಲಾಕಿದ್ರು. ಹಿಂದಲ ಬಾಗಲಲ್ಲಿ ಸಿಗತದೆ.”

“ಈ ಸತಿ ಬಾಳ ಸ್ಟಿಕ್ಟು ಸಾರ್, ಆದ್ರು ಓಟು ಮಾಡೋ ಹಿಂದಿನ ದಿನ ನಿಖಿಲ್ ಕಡೆಯೋರಿಂದ ಒಂದೇ ಒಂದು ರಾಜಾ ವಿಸ್ಕಿ ಪ್ಯಾಕೆಟ್ ಸಿಕ್ತು ಸಾ.”

“ಅವುರತ್ರಲೂ ಈಸಗಂಡ್ಯಾ.”

“ಒಂದು ಷರತ್ತ ಮ್ಯಾಲೆ ಕೊಟ್ರು ಸಾರ್.”

“ಏನು ಷರತ್ತು.”

“ನಿಖಿಲ್ ಕುಮಾರ್‌ಸ್ವಾಮಿಗೇ ಓಟಾಕ್ತಿನಿ ಅಂತ ಹೇಳಿದ ಮ್ಯಾಲೆ ಕೊಟ್ರು ಸಾ.”

“ಅಂಗರೆ ನಿನ್ನೋಟು ನಿಖಿಲ್‌ಗೋಯ್ತು.”

“ಏಲ್ಯಾರವುಂಟೆ ಸಾರ್, ಐನೂರ‍್ರುಪಾಯಿ ಈಸಿಗಂಡೋರೆ ಕೈ ಕೊಟ್ರು, ಇನ್ನ ನನ್ನಂಥೋರು ಹಾಕಕ್ಕಾದತೆ.”

“ಐನೂರು ಕೊಟ್ಟೋರು ಧರ್ಮಸ್ಥಳದ ಆಣೆ ಮಾಡಿಸಿದರಂತೆ.”

“ಅದೂ ನ್ಯಡಿತು, ಕ್ಯಾರ್‌ಪೇಟೆ ಪಾಂಡುಪುರ ಇಲ್ಯಲ್ಲ ನ್ಯಡೀತು. ಅದ್ಕೆ ಅಲ್ಲಿ ಸಲುಪ ಸುಮಲತನಿಗೆ ಹಿನ್ನೆಡೆ.”

“ಮದ್ದೂರು ಮಳವಳ್ಳಿ ಯಂಗೆ.”

“ಅಲ್ಲಿ ತಮ್ಮಣ್ಣ ಭಾರಿ ದುಡ್ಡು ಬಡದ ಸಾ. ಆ ನನಮಗನಿಗೆ ಎಲ್ಲಿ ಕುಮಾರಣ್ಣ ಎಗರೋಗಿ ಮಂತ್ರಿಗಿರಿ ಹೋಯ್ತದೋ ಅಂತ ಹೆದ್ರಿಕಂಡು ದುಡ್ಡ ಸುರುದುಬುಟ್ಟ.”

“ಪ್ರಾಪರ್ ಮಂಡ್ಯ ಯಂಗೆ.”

“ಅದ್ಯಂಗೊ ಗೊತ್ತಿಲ್ಲ. ನಮ್ಮ ನಾಗಮಂಗಲದ ಬಗ್ಗೆ ಯಲ್ಲ ಡವುಟು ಮಾಡತಿದ್ರು. ಆದ್ರು ನಾವು ನಂಬಿಕಸ್ಥರು ಅಂತ ತೋರಿದೊ ಸಾ.”

“ಇದು ನಿನ್ನಭಿಪ್ರಾಯನ.”

“ನಾನು, ಜನಗಳ ಜೊತೆ ಇದ್ದಿನಿ ಸಾ.”

“ಕುಡುಕರ ಜೊತೇಲೆ?”

“ನನ್ನಂಥ ಕುಡುಕ್ರು ಕುಡುಕರ ಕೂಡೆ ಇರದಿಲ್ಲ ಸಾರ್, ಅವುರಿಗೆ ಮಾತ ಕೇಳೋ ಜನಗಳು ಬೇಕು, ಅದ್ಕೆ ನಾನು ಜನಗಳ ಜೊತೆ ಇರತಿನಿ, ಈ ಕುಮಾರಸ್ವಾಮಿ ಮಾಡಿದ ಕ್ಯಲಸ ಅವುನಿಗೇ ಅಟಗಾಯಿಸಿಗತ್ತಾ ಅದೆ ಸಾ.”

“ಯಂಗೇ?”

“ಅವುನು ಅವುಳ್ಯಾರೊ ಡಿ.ಸಿ ಹಿಡಕಂಡು ತನ್ನ ಮಗನೆಸರು ಮದಲೇಟಿಗೆ ಪಸ್ಟ್ಬರಂಗೆ ಮಾಡಿದ, ಇದರಿಂದ ಸುಮಲತ 20ನೇ ಕ್ಯಾಂಡೇಟಾದ್ರು. ಜೊತೆಗೆ ಮೇಲೆ ಕ್ಯೆಳಗೆ ಯರಡು ಮೂರು ಸುಮಲತ ಬಿದ್ರು.”

“ನಾನು ನೋಡಿದೆ ಅದ.”

“ಇಪ್ಪತ್ಯೆರುಡು ಜನ ಕ್ಯಾಂಡೇಟಾದ್ರಿಂದ ಯರಡು ಲೈನಾಯ್ತು ಸಾ. ಸುಮಲತ ಲೈನಲ್ಲಿ ಮೊದಲಿದ್ದೋನಿಗೆ ಅದ್ಯಂತದೋ ಸಿತಾರ್ ವಾದ್ಯ ಕೊಟ್ಟಿದ್ರು. ಅದು ಒಂಥರ ಜ್ವಾಳದ ಕಡ್ಡಿವರೆ ಮಡಗಿದಂಗಿತ್ತು. ಅಷ್ಟೇ ಸಾಕು ಈ ಯಬ್ಬೆಟ್ಟಿನವ್ಯಲ್ಲ ಆ ಸಿತಾರ್‌ನ ಹುಲ್ಲೊರೆ ಅಂತ ತಿಳಕಂಡು ಒತ್ತಿ ಮಡಿಗ್ಯವೆ.”

“ಅರರೆ, ಅದ್ಯಂಗೆ.”

“ಸುಮಲತನ ಲೈನಲ್ಲಿ ಮೊದಲನೆಯವನು ಅವುನೆ ಅಲ್ಲವ ಸಾ. ಅದು ಯಬ್ಬೆಟ್ಟಿಗಳಿಗ್ಯಂಗೆ ಗೊತ್ತಾಗಬೇಕು. ಅಂತೂ ನಿಖಿಲ್‌ನ ಕಡೆ ಐವತ್ತೋಟು ದಿಕ್ಕು ತಪ್ಯವೆ, ನಮ್ಮದೊಂದು ಬೂತಲ್ಲೇ ಅಂಗಾದ್ರೆ ಉಳಿದ ಕಡೆ.”

“ಅಂಗರೆ ಸಿತಾರಿನೋನು ತಗದ ಅನ್ನು.”

“ಕುಮಾರಣ್ಣ ಮಾಡಿದ್ದು ಅವನೇ ಅನುಭವುಸಂಗಾಯ್ತು ಸಾ.”

“ಥೂತ್ತೇರಿ.”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...