Homeಅಂಕಣಗಳುಕುಮಾರಣ್ಣ ಮಾಡಿದ್ದು ಅವುನಿಗೇ ಅಟಗಾಯಿಸಿಗತ್ತು?

ಕುಮಾರಣ್ಣ ಮಾಡಿದ್ದು ಅವುನಿಗೇ ಅಟಗಾಯಿಸಿಗತ್ತು?

- Advertisement -
- Advertisement -

ಕರ್ನಾಟಕದಲ್ಲಿ ಈಗ ಆಗಿಹೋದ ಮತದಾನದ ವೈಖರಿ ಗಮನಿಸಿದರೆ, ಮೈತ್ರಿಗಳ ಮುಸುಡಿಗೆ ಸರಿಯಾದ ಹೊಡೆತ ಬೀಳುವಂತೆ ಕಾಣುತ್ತಿದೆಯಲ್ಲಾ. ಯಾಕೆಂದರೆ, ಈ ಮೈತ್ರಿ ಸರಕಾರದ ಮುಖ್ಯಮಂತ್ರಿ ನಾನು ಪರಿಸ್ಥಿತಿಯ ಕೂಸು ಎಂದಿತು. ಆದರೆ ಆ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಸಂಪೂರ್ಣ ಸೋತು ಹೋಗಿದೆ. ಬಿಜೆಪಿಯನ್ನು ಟೀಕಿಸುವುದರ ಜೊತೆಗೆ ಅವಕಾಶ ಸಿಕ್ಕಾಗಲೆಲ್ಲಾ ಕಾಂಗ್ರೆಸ್ಸನ್ನೂ ಟೀಕಿಸಿದೆ. ಇದರಿಂದ ಸಿಟ್ಟಾದ ಕಾಂಗೈಗಳು, ಕೂಸಿನ ಎಳಸು ಮಾತನ್ನು ಗಂಭೀರವಾಗಿಯೇ ಪರಿಗಣಿಸಿ, ಇಂತಹ ಎಳಸಿನ ಮುಖಂಡತ್ವದಲ್ಲಿ ನಾವು ರಾಜಕಾರಣ ಮಾಡಲು ಸಾಧ್ಯವೇ ಇಲ್ಲ ಎಂದು ಒಂದು ರಾಜಕೀಯ ಕ್ಷೋಭೆಯನ್ನು ಉಂಟುಮಾಡಿದರಲ್ಲಾ. ಈ ಕ್ಷೋಭೆ ಸತತವಾಗಿ ಒಂದು ವರ್ಷ ನಡೆದುದರ ಫಲವಾಗಿ ಸರಕಾರ ದಿಕ್ಕು ದೆಸೆಯಿಲ್ಲದೆ ನಡೆಯುತ್ತಿರುವಾಗಲೇ, ಅತ್ತ ದೇವೇಗೌಡರ ಕುಟುಂಬದ ಅಧಿಕಾರ ದಾಹದ ಫಲವಾಗಿ ಒಕ್ಕಲಿಗರಲ್ಲೇ ಅಸಮಾಧಾನ ಭುಗಿಲೆದ್ದು, ಅದು ಇಡೀ ಕರ್ನಾಟಕಕ್ಕೇ ಹಬ್ಬಿದಾಗ, ಚುನಾವಣೆ ಎದುರಾಗಿ, ಜನಸಮೂಹ “ಬನ್ನಿ ನಿಮ್ಮ ಬುರುಡೆಗೆ ಬಿಸಿನೀರು ಕಾಯಿಸಲು ಇದು ಸರಿಯಾದ ಸಮಯ” ಎಂದು ಕಾಯುತ್ತಿರುವಾಗ, ಮೈತ್ರಿಗಳು ಅದ್ಯಾವ ಬಾಯಿಂದ ನಾವು ಇಪ್ಪತ್ತೆರಡು ಬಾರಿಸುತ್ತೇವೆ ಎಂದು ಹೇಳುತ್ತಿರುವುದೇ ಹಾಸ್ಯಾಸ್ಪದವಾಗಿದೆಯಲ್ಲಾ, ಥೂತ್ತೇರಿ.

ಮೂರು ದಶಕದ ಹಿಂದೆ ಇದೇ ಕಾಂಗೈಗಳು ತಮ್ಮ ಹೆಸರಿಗೆ ಬದಲಾಗಿ, ಇಂದಿರಾಗಾಂಧಿಗೆ ಓಟು ಕೇಳುತ್ತಿದ್ದವು. ದೇವಸ್ಥಾನಕ್ಕೆ ನಿಧಿ ಎತ್ತುವವರು ತಮ್ಮ ಹೆಸರೇಳದೆ ದೇವಿ ಹೆಸರು ಹೇಳಿ ವಂತಿಕೆ ವಸೂಲು ಮಾಡುತ್ತವಲ್ಲ. ಹಾಗೆ ಅಂತದೇ ಒಂದು ಸ್ಥಿತಿಗೆ ಈ ಬಿಜೆಪಿಗಳು ಬಂದು ಕೂತಿವೆಯಲ್ಲಾ. ಇಂದಿರಾಗಾಂಧಿ ಹೆಸರೇ ಬಡಬಗ್ಗರು, ದುರ್ಬಲರು, ಅಲ್ಪಸಂಖ್ಯಾತರಿಗೆ ರೋಮಾಂಚನವುಂಟು ಮಾಡುತ್ತಿತ್ತು. ಆದರೆ ಈ ಮೋದಿ ಹೆಸರು ಚೆಡ್ಡಿಗಳಿಗೆ ಮತ್ತವರ ಮನೆಹಾಳ ಪರಿವಾರಕ್ಕೆ ಮಾತ್ರ ಕೋಸಂಬರಿ ತಿಂದು ಪಾನಕ ಕುಡಿದಷ್ಟು ಆಪ್ಯಾಯಮಾನವಾಗಿದೆಯಲ್ಲಾ. ಮೋದಿ ಮಹಾತ್ಮ ಕಡಿದು ಕಟ್ಟೆಹಾಕಿದ ಯಾವ ಕೆಲಸವೂ ಇಲ್ಲದ ಕಾರಣ ಬಾಯಿಗೆ ಬಂದ ಸುಳ್ಳನ್ನೇ ಒದರುತ್ತಿದ್ದಾನೆ. ಸುಳ್ಳಿಗಿರುವ ಶಕ್ತಿಯನ್ನು ಸರಿಯಾಗಿಯೇ ಗುರುತಿಸಿರುವ ಬಿಜೆಪಿಗಳು ಅದನ್ನೇ ಬೊಗಳುತ್ತಿರುವಾಗ ಅವುಗಳ ಸುಳ್ಳಿಗೆ ಬದಲು ಸತ್ಯ ಸಂಗತಿಯನ್ನು ಸಾರಲು ಈ ಕಾಂಗೈಗಳಿಗೆ ಏನಾಗಿದೆ ಎಂದು ಜನರು ಕೇಳುತ್ತಿರುವಾಗಲೆ, ಸಿದ್ದರಾಮಯ್ಯ ತನ್ನ ಐದು ವರ್ಷದ ಸಾಧನೆಯನ್ನ ಹೇಳುತ್ತಾ ಇಂತಹ ಸಾಧನೆ ಮೋದಿಯಿಂದ ಆಗಿದೆಯೇ ನೀವೇ ಹೇಳಿ ಎಂದಾಗ, ಸಿದ್ದರಾಮಯ್ಯ ಕೊಟ್ಟ ಅಕ್ಕಿ ತಿಂದ ಜನ ಅದನ್ನ ಮರೆತು ಏನೂ ಮಾಡದ ಮೋದಿ ಪರವಾಗಿಲ್ಲ ಎನ್ನುತ್ತಿವೆಯಲ್ಲಾ, ಥೂತ್ತೇರಿ.

ಮಂಡ್ಯ ಚುನಾವಣೆ ಇನ್ನೊಂದು ಚಾಮುಂಡೇಶ್ವರಿ ಚುನಾವಣೆಯಂತಾಗಿ ಅಂತ್ಯಗೊಂಡಿರುವಾಗ, ಆ ಬಗ್ಗೆ ವಾಟಿಸ್ಸೆ ಕೇಳಬೇಕೆನಿಸಿತಲ್ಲಾ. ಕೂಡಲೇ ಫೋನ್ ಮಾಡಲಾಗಿ ರಿಂಗಾಯ್ತು, ರಿಂಗ್ ಠೋನ್ `ಟರ್ರ್ ಟರ್ರ್’ “ಹಲೋ ಹೇಳಿ ಸಾ”.

“ವಾಟಿಸ್ಸೆ ಚುನಾವಣೆ ಯಂಗಾಯ್ತು.”

“ಡಲ್ಲಾಗಿತ್ತು ಸಾ.”

“ಯಾಕೆ?”

“ಯಾಕಂದ್ರೆ ನನ್ನ ಕಣ್ಣೆದುರಿಗೆ ಡ್ರಿಂಕ್ ಅಂಗಡಿಗೆ ಬಾಗಲಾಕಿಸಿಬುಟ್ರು ಸಾ. ಮೊದ್ಲೆ ಗೊತ್ತಿದ್ರೆ ಯಲಕ್ಷನ್ ಮುಗಿಯುವರಿಗೂ ಮೇಂಟೇನಾಗೋವಷ್ಟು ಡ್ರಿಂಕ್ಸ್ ತಗಂಡು ಸ್ಟಾಕ್ ಮಡಿಕಬವುದಿತ್ತು.”

“ಅಂಗಡಿ ಬಾಗಲಾಕಿ ಸೀಲಾಕಿದ್ರು. ಹಿಂದಲ ಬಾಗಲಲ್ಲಿ ಸಿಗತದೆ.”

“ಈ ಸತಿ ಬಾಳ ಸ್ಟಿಕ್ಟು ಸಾರ್, ಆದ್ರು ಓಟು ಮಾಡೋ ಹಿಂದಿನ ದಿನ ನಿಖಿಲ್ ಕಡೆಯೋರಿಂದ ಒಂದೇ ಒಂದು ರಾಜಾ ವಿಸ್ಕಿ ಪ್ಯಾಕೆಟ್ ಸಿಕ್ತು ಸಾ.”

“ಅವುರತ್ರಲೂ ಈಸಗಂಡ್ಯಾ.”

“ಒಂದು ಷರತ್ತ ಮ್ಯಾಲೆ ಕೊಟ್ರು ಸಾರ್.”

“ಏನು ಷರತ್ತು.”

“ನಿಖಿಲ್ ಕುಮಾರ್‌ಸ್ವಾಮಿಗೇ ಓಟಾಕ್ತಿನಿ ಅಂತ ಹೇಳಿದ ಮ್ಯಾಲೆ ಕೊಟ್ರು ಸಾ.”

“ಅಂಗರೆ ನಿನ್ನೋಟು ನಿಖಿಲ್‌ಗೋಯ್ತು.”

“ಏಲ್ಯಾರವುಂಟೆ ಸಾರ್, ಐನೂರ‍್ರುಪಾಯಿ ಈಸಿಗಂಡೋರೆ ಕೈ ಕೊಟ್ರು, ಇನ್ನ ನನ್ನಂಥೋರು ಹಾಕಕ್ಕಾದತೆ.”

“ಐನೂರು ಕೊಟ್ಟೋರು ಧರ್ಮಸ್ಥಳದ ಆಣೆ ಮಾಡಿಸಿದರಂತೆ.”

“ಅದೂ ನ್ಯಡಿತು, ಕ್ಯಾರ್‌ಪೇಟೆ ಪಾಂಡುಪುರ ಇಲ್ಯಲ್ಲ ನ್ಯಡೀತು. ಅದ್ಕೆ ಅಲ್ಲಿ ಸಲುಪ ಸುಮಲತನಿಗೆ ಹಿನ್ನೆಡೆ.”

“ಮದ್ದೂರು ಮಳವಳ್ಳಿ ಯಂಗೆ.”

“ಅಲ್ಲಿ ತಮ್ಮಣ್ಣ ಭಾರಿ ದುಡ್ಡು ಬಡದ ಸಾ. ಆ ನನಮಗನಿಗೆ ಎಲ್ಲಿ ಕುಮಾರಣ್ಣ ಎಗರೋಗಿ ಮಂತ್ರಿಗಿರಿ ಹೋಯ್ತದೋ ಅಂತ ಹೆದ್ರಿಕಂಡು ದುಡ್ಡ ಸುರುದುಬುಟ್ಟ.”

“ಪ್ರಾಪರ್ ಮಂಡ್ಯ ಯಂಗೆ.”

“ಅದ್ಯಂಗೊ ಗೊತ್ತಿಲ್ಲ. ನಮ್ಮ ನಾಗಮಂಗಲದ ಬಗ್ಗೆ ಯಲ್ಲ ಡವುಟು ಮಾಡತಿದ್ರು. ಆದ್ರು ನಾವು ನಂಬಿಕಸ್ಥರು ಅಂತ ತೋರಿದೊ ಸಾ.”

“ಇದು ನಿನ್ನಭಿಪ್ರಾಯನ.”

“ನಾನು, ಜನಗಳ ಜೊತೆ ಇದ್ದಿನಿ ಸಾ.”

“ಕುಡುಕರ ಜೊತೇಲೆ?”

“ನನ್ನಂಥ ಕುಡುಕ್ರು ಕುಡುಕರ ಕೂಡೆ ಇರದಿಲ್ಲ ಸಾರ್, ಅವುರಿಗೆ ಮಾತ ಕೇಳೋ ಜನಗಳು ಬೇಕು, ಅದ್ಕೆ ನಾನು ಜನಗಳ ಜೊತೆ ಇರತಿನಿ, ಈ ಕುಮಾರಸ್ವಾಮಿ ಮಾಡಿದ ಕ್ಯಲಸ ಅವುನಿಗೇ ಅಟಗಾಯಿಸಿಗತ್ತಾ ಅದೆ ಸಾ.”

“ಯಂಗೇ?”

“ಅವುನು ಅವುಳ್ಯಾರೊ ಡಿ.ಸಿ ಹಿಡಕಂಡು ತನ್ನ ಮಗನೆಸರು ಮದಲೇಟಿಗೆ ಪಸ್ಟ್ಬರಂಗೆ ಮಾಡಿದ, ಇದರಿಂದ ಸುಮಲತ 20ನೇ ಕ್ಯಾಂಡೇಟಾದ್ರು. ಜೊತೆಗೆ ಮೇಲೆ ಕ್ಯೆಳಗೆ ಯರಡು ಮೂರು ಸುಮಲತ ಬಿದ್ರು.”

“ನಾನು ನೋಡಿದೆ ಅದ.”

“ಇಪ್ಪತ್ಯೆರುಡು ಜನ ಕ್ಯಾಂಡೇಟಾದ್ರಿಂದ ಯರಡು ಲೈನಾಯ್ತು ಸಾ. ಸುಮಲತ ಲೈನಲ್ಲಿ ಮೊದಲಿದ್ದೋನಿಗೆ ಅದ್ಯಂತದೋ ಸಿತಾರ್ ವಾದ್ಯ ಕೊಟ್ಟಿದ್ರು. ಅದು ಒಂಥರ ಜ್ವಾಳದ ಕಡ್ಡಿವರೆ ಮಡಗಿದಂಗಿತ್ತು. ಅಷ್ಟೇ ಸಾಕು ಈ ಯಬ್ಬೆಟ್ಟಿನವ್ಯಲ್ಲ ಆ ಸಿತಾರ್‌ನ ಹುಲ್ಲೊರೆ ಅಂತ ತಿಳಕಂಡು ಒತ್ತಿ ಮಡಿಗ್ಯವೆ.”

“ಅರರೆ, ಅದ್ಯಂಗೆ.”

“ಸುಮಲತನ ಲೈನಲ್ಲಿ ಮೊದಲನೆಯವನು ಅವುನೆ ಅಲ್ಲವ ಸಾ. ಅದು ಯಬ್ಬೆಟ್ಟಿಗಳಿಗ್ಯಂಗೆ ಗೊತ್ತಾಗಬೇಕು. ಅಂತೂ ನಿಖಿಲ್‌ನ ಕಡೆ ಐವತ್ತೋಟು ದಿಕ್ಕು ತಪ್ಯವೆ, ನಮ್ಮದೊಂದು ಬೂತಲ್ಲೇ ಅಂಗಾದ್ರೆ ಉಳಿದ ಕಡೆ.”

“ಅಂಗರೆ ಸಿತಾರಿನೋನು ತಗದ ಅನ್ನು.”

“ಕುಮಾರಣ್ಣ ಮಾಡಿದ್ದು ಅವನೇ ಅನುಭವುಸಂಗಾಯ್ತು ಸಾ.”

“ಥೂತ್ತೇರಿ.”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪರಿಶಿಷ್ಟ ಜಾತಿ ಪಟ್ಟಿಗೆ ಜಮ್ಮು-ಕಾಶ್ಮೀರದ ವಾಲ್ಮೀಕಿ ಸಮುದಾಯ: ಒಕ್ಕೂಟ ಸರ್ಕಾರ

ಜಮ್ಮು ಮತ್ತು ಕಾಶ್ಮೀರದ ವಾಲ್ಮೀಕಿ ಸಮುದಾಯವನ್ನು ಈಗ ಅಧಿಕೃತವಾಗಿ ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸಲಾಗಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಬುಧವಾರ ಸಂಸತ್ತಿಗೆ ತಿಳಿಸಿದೆ. ಇತ್ತೀಚಿನ ವರ್ಷಗಳಲ್ಲಿ ಪ್ರಕ್ರಿಯೆಗೊಳಿಸಲಾದ...

ತಿರುಪತಿ ದೇಣಿಗೆ ಕಳ್ಳತನ ಪ್ರಕರಣ: ಕಾನೂನು ಕ್ರಮ ತೆಗೆದುಕೊಳ್ಳವಂತೆ ‘ಸಿಐಡಿ-ಎಸಿಬಿ’ಗೆ ಹೈಕೋರ್ಟ್ ನಿರ್ದೇಶನ

ತಿರುಮಲ ತಿರುಪತಿ ದೇವಸ್ಥಾನದ ಪರಕಮಣಿ (ದೇಣಿಗೆ ಪೆಟ್ಟಿಗೆ) ಕಳ್ಳತನ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಆಂಧ್ರಪ್ರದೇಶ ಹೈಕೋರ್ಟ್ ರಾಜ್ಯದ ಅಪರಾಧ ತನಿಖಾ ಇಲಾಖೆ (ಸಿಐಡಿ) ಮತ್ತು ಭ್ರಷ್ಟಾಚಾರ ನಿಗ್ರಹ ದಳ...

ದಲಿತರ ಮನೆಯಲ್ಲಿ ಊಟ ಮಾಡಿದ ಆರ್‌ಎಸ್‌ಎಸ್‌ ಕಾರ್ಯಕರ್ತನ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಗ್ರಾಮೀಣ ಭಾರತದ ಕೆಲವು ಭಾಗಗಳಲ್ಲಿ ಜಾತಿ ಪೂರ್ವಾಗ್ರಹಗಳು ಎಷ್ಟು ಆಳವಾಗಿ ಉಳಿದಿವೆ ಎಂಬುದನ್ನು ನೆನಪಿಸುವ ರೀತಿಯಲ್ಲಿ, ಮಧ್ಯಪ್ರದೇಶದ ರೈಸೇನ್ ಜಿಲ್ಲೆಯ ಹಳ್ಳಿಯೊಂದರಿಂದ ಸಾಮಾಜಿಕ ಬಹಿಷ್ಕಾರ ಮತ್ತು ಅಸ್ಪೃಶ್ಯತೆಯ ಪ್ರಕರಣ ಬೆಳಕಿಗೆ ಬಂದಿದೆ. ಆರ್‌ಎಸ್‌ಎಸ್...

ಅಸ್ಸಾಮಿ ಗಾಯಕನ ಬಂಧನ ಬಗ್ಗೆ ಟೈಮ್ಸ್ ನೌ ನವಭಾರತ್‌ ಪೂರ್ವಾಗ್ರಹ ಪೀಡಿತ ವರದಿ : ವಾರದೊಳಗೆ ತೆಗೆದು ಹಾಕಲು ಎನ್‌ಬಿಡಿಎಸ್‌ಎ ಆದೇಶ

ಸೆಪ್ಟೆಂಬರ್ 2024ರಲ್ಲಿ ಅಸ್ಸಾಮಿ ಗಾಯಕ ಅಲ್ತಾಫ್ ಹುಸೇನ್ ಬಂಧನದ ಬಗ್ಗೆ ಪ್ರಸಾರವಾದ ಕಾರ್ಯಕ್ರಮದ ಭಾಗಗಳನ್ನು ತೆಗೆದುಹಾಕುವಂತೆ ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರವು (ಎನ್‌ಬಿಡಿಎಸ್‌ಎ) ಟೈಮ್ಸ್ ನೌ ನವಭಾರತ್‌ಗೆ ನಿರ್ದೇಶನ ನೀಡಿದೆ. ಡಿಸೆಂಬರ್...

ಸಾವರ್ಕರ್ ಪ್ರಶಸ್ತಿ ಬಗ್ಗೆ ನನಗೆ ಗೊತ್ತೂ ಇಲ್ಲ, ಸ್ವೀಕರಿಸುವುದೂ ಇಲ್ಲ : ಶಶಿ ತರೂರ್

ಹಿಂದುತ್ವವಾದಿ ವಿ.ಡಿ ಸಾವರ್ಕರ್ ಹೆಸರಿನಲ್ಲಿ ಪ್ರಶಸ್ತಿ ಘೋಷಣೆಯಾದ ಬಗ್ಗೆ ನನಗೆ ಗೊತ್ತೂ ಇಲ್ಲ, ಅಂತಹ ಪ್ರಶಸ್ತಿ ಸ್ವೀಕರಿಸುವುದೂ ಇಲ್ಲ ಎಂದು ಕಾಂಗ್ರೆಸ್ ನಾಯಕ ಹಾಗೂ ತಿರುವನಂತಪುರಂ ಸಂಸದ ಶಶಿ ತರೂರ್ ಬುಧವಾರ (ಡಿಸೆಂಬರ್...

ಮಧ್ಯಪ್ರದೇಶ| ಯುವಕನನ್ನು ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸಿಲುಕಿಸಿದ ಪೊಲೀಸರು

18 ವರ್ಷದ ಯುವಕನನ್ನು ಬಸ್ಸಿನಿಂದ ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸುಳ್ಳು ಆರೋಪ ಹೊರಿಸಿದ ಆರೋಪದ ಮೇಲೆ ಮಧ್ಯಪ್ರದೇಶದ ಆರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ತನಿಖೆಯ ಸಮಗ್ರತೆ ಮತ್ತು ಕಾನೂನುಬದ್ಧತೆಯನ್ನು ಪ್ರಶ್ನಿಸಿದ ಇಂದೋರ್...

ಮುಟ್ಟಿನ ರಜೆ ನೀತಿ ಬಲವಾಗಿ ಸಮರ್ಥಿಸಿಕೊಂಡ ಸರ್ಕಾರ : ಅಧಿಸೂಚನೆ ತಡೆ ತೆರವುಗೊಳಿಸಿದ ಹೈಕೋರ್ಟ್

ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ನೀಡುವ ಸಂಬಂಧ ಹೊರಡಿಸಿದ್ದ ತನ್ನ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಬಲವಾಗಿ ಸಮರ್ಥಿಸಿಕೊಂಡಿದೆ. ಸರ್ಕಾರದ ವಾದ ಆಲಿಸಿದ ಹೈಕೋರ್ಟ್, ಅಧಿಸೂಚನೆಗೆ...

ದೆಹಲಿ ಗಲಭೆ ಪ್ರಕರಣ : ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತಿತರರ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್, ಮೊಹಮ್ಮದ್ ಸಲೀಮ್ ಖಾನ್ ಮತ್ತು ಶಾದಾಬ್ ಅಹ್ಮದ್ ಸಲ್ಲಿಸಿದ್ದ ಅರ್ಜಿಗಳ...

ಪಕ್ಷಪಾತ ಆರೋಪದಿಂದ ದೀಪಸ್ತಂಭದವರೆಗೆ..ಕಟಕಟೆಯಲ್ಲಿರುವ ನ್ಯಾಯಮೂರ್ತಿ ಸ್ವಾಮಿನಾಥನ್ ಯಾರು?

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ಪದಚ್ಯುತಿ ಕೋರಿ ಮಂಗಳವಾರ (ಡಿಸೆಂಬರ್ 9) ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ನೋಟಿಸ್ ಸಲ್ಲಿಸಲಾಗಿದೆ. ತಮಿಳುನಾಡಿನ ಡಿಎಂಕೆ ಸೇರಿದಂತೆ ವಿವಿಧ...

ಗುಜರಾತ್‌| 6 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಗಂಭೀರವಾಗಿ ಹಲ್ಲೆ ನಡೆಸಿದವನ ಬಂಧನ

ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ನಂತರ ಆಕೆಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ನಡೆದಿದೆ. ಈ ಪ್ರಕರಣ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, 35 ವರ್ಷದ...