Homeಅಂಕಣಗಳುಕುಮಾರಣ್ಣ ಮಾಡಿದ್ದು ಅವುನಿಗೇ ಅಟಗಾಯಿಸಿಗತ್ತು?

ಕುಮಾರಣ್ಣ ಮಾಡಿದ್ದು ಅವುನಿಗೇ ಅಟಗಾಯಿಸಿಗತ್ತು?

- Advertisement -
- Advertisement -

ಕರ್ನಾಟಕದಲ್ಲಿ ಈಗ ಆಗಿಹೋದ ಮತದಾನದ ವೈಖರಿ ಗಮನಿಸಿದರೆ, ಮೈತ್ರಿಗಳ ಮುಸುಡಿಗೆ ಸರಿಯಾದ ಹೊಡೆತ ಬೀಳುವಂತೆ ಕಾಣುತ್ತಿದೆಯಲ್ಲಾ. ಯಾಕೆಂದರೆ, ಈ ಮೈತ್ರಿ ಸರಕಾರದ ಮುಖ್ಯಮಂತ್ರಿ ನಾನು ಪರಿಸ್ಥಿತಿಯ ಕೂಸು ಎಂದಿತು. ಆದರೆ ಆ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಸಂಪೂರ್ಣ ಸೋತು ಹೋಗಿದೆ. ಬಿಜೆಪಿಯನ್ನು ಟೀಕಿಸುವುದರ ಜೊತೆಗೆ ಅವಕಾಶ ಸಿಕ್ಕಾಗಲೆಲ್ಲಾ ಕಾಂಗ್ರೆಸ್ಸನ್ನೂ ಟೀಕಿಸಿದೆ. ಇದರಿಂದ ಸಿಟ್ಟಾದ ಕಾಂಗೈಗಳು, ಕೂಸಿನ ಎಳಸು ಮಾತನ್ನು ಗಂಭೀರವಾಗಿಯೇ ಪರಿಗಣಿಸಿ, ಇಂತಹ ಎಳಸಿನ ಮುಖಂಡತ್ವದಲ್ಲಿ ನಾವು ರಾಜಕಾರಣ ಮಾಡಲು ಸಾಧ್ಯವೇ ಇಲ್ಲ ಎಂದು ಒಂದು ರಾಜಕೀಯ ಕ್ಷೋಭೆಯನ್ನು ಉಂಟುಮಾಡಿದರಲ್ಲಾ. ಈ ಕ್ಷೋಭೆ ಸತತವಾಗಿ ಒಂದು ವರ್ಷ ನಡೆದುದರ ಫಲವಾಗಿ ಸರಕಾರ ದಿಕ್ಕು ದೆಸೆಯಿಲ್ಲದೆ ನಡೆಯುತ್ತಿರುವಾಗಲೇ, ಅತ್ತ ದೇವೇಗೌಡರ ಕುಟುಂಬದ ಅಧಿಕಾರ ದಾಹದ ಫಲವಾಗಿ ಒಕ್ಕಲಿಗರಲ್ಲೇ ಅಸಮಾಧಾನ ಭುಗಿಲೆದ್ದು, ಅದು ಇಡೀ ಕರ್ನಾಟಕಕ್ಕೇ ಹಬ್ಬಿದಾಗ, ಚುನಾವಣೆ ಎದುರಾಗಿ, ಜನಸಮೂಹ “ಬನ್ನಿ ನಿಮ್ಮ ಬುರುಡೆಗೆ ಬಿಸಿನೀರು ಕಾಯಿಸಲು ಇದು ಸರಿಯಾದ ಸಮಯ” ಎಂದು ಕಾಯುತ್ತಿರುವಾಗ, ಮೈತ್ರಿಗಳು ಅದ್ಯಾವ ಬಾಯಿಂದ ನಾವು ಇಪ್ಪತ್ತೆರಡು ಬಾರಿಸುತ್ತೇವೆ ಎಂದು ಹೇಳುತ್ತಿರುವುದೇ ಹಾಸ್ಯಾಸ್ಪದವಾಗಿದೆಯಲ್ಲಾ, ಥೂತ್ತೇರಿ.

ಮೂರು ದಶಕದ ಹಿಂದೆ ಇದೇ ಕಾಂಗೈಗಳು ತಮ್ಮ ಹೆಸರಿಗೆ ಬದಲಾಗಿ, ಇಂದಿರಾಗಾಂಧಿಗೆ ಓಟು ಕೇಳುತ್ತಿದ್ದವು. ದೇವಸ್ಥಾನಕ್ಕೆ ನಿಧಿ ಎತ್ತುವವರು ತಮ್ಮ ಹೆಸರೇಳದೆ ದೇವಿ ಹೆಸರು ಹೇಳಿ ವಂತಿಕೆ ವಸೂಲು ಮಾಡುತ್ತವಲ್ಲ. ಹಾಗೆ ಅಂತದೇ ಒಂದು ಸ್ಥಿತಿಗೆ ಈ ಬಿಜೆಪಿಗಳು ಬಂದು ಕೂತಿವೆಯಲ್ಲಾ. ಇಂದಿರಾಗಾಂಧಿ ಹೆಸರೇ ಬಡಬಗ್ಗರು, ದುರ್ಬಲರು, ಅಲ್ಪಸಂಖ್ಯಾತರಿಗೆ ರೋಮಾಂಚನವುಂಟು ಮಾಡುತ್ತಿತ್ತು. ಆದರೆ ಈ ಮೋದಿ ಹೆಸರು ಚೆಡ್ಡಿಗಳಿಗೆ ಮತ್ತವರ ಮನೆಹಾಳ ಪರಿವಾರಕ್ಕೆ ಮಾತ್ರ ಕೋಸಂಬರಿ ತಿಂದು ಪಾನಕ ಕುಡಿದಷ್ಟು ಆಪ್ಯಾಯಮಾನವಾಗಿದೆಯಲ್ಲಾ. ಮೋದಿ ಮಹಾತ್ಮ ಕಡಿದು ಕಟ್ಟೆಹಾಕಿದ ಯಾವ ಕೆಲಸವೂ ಇಲ್ಲದ ಕಾರಣ ಬಾಯಿಗೆ ಬಂದ ಸುಳ್ಳನ್ನೇ ಒದರುತ್ತಿದ್ದಾನೆ. ಸುಳ್ಳಿಗಿರುವ ಶಕ್ತಿಯನ್ನು ಸರಿಯಾಗಿಯೇ ಗುರುತಿಸಿರುವ ಬಿಜೆಪಿಗಳು ಅದನ್ನೇ ಬೊಗಳುತ್ತಿರುವಾಗ ಅವುಗಳ ಸುಳ್ಳಿಗೆ ಬದಲು ಸತ್ಯ ಸಂಗತಿಯನ್ನು ಸಾರಲು ಈ ಕಾಂಗೈಗಳಿಗೆ ಏನಾಗಿದೆ ಎಂದು ಜನರು ಕೇಳುತ್ತಿರುವಾಗಲೆ, ಸಿದ್ದರಾಮಯ್ಯ ತನ್ನ ಐದು ವರ್ಷದ ಸಾಧನೆಯನ್ನ ಹೇಳುತ್ತಾ ಇಂತಹ ಸಾಧನೆ ಮೋದಿಯಿಂದ ಆಗಿದೆಯೇ ನೀವೇ ಹೇಳಿ ಎಂದಾಗ, ಸಿದ್ದರಾಮಯ್ಯ ಕೊಟ್ಟ ಅಕ್ಕಿ ತಿಂದ ಜನ ಅದನ್ನ ಮರೆತು ಏನೂ ಮಾಡದ ಮೋದಿ ಪರವಾಗಿಲ್ಲ ಎನ್ನುತ್ತಿವೆಯಲ್ಲಾ, ಥೂತ್ತೇರಿ.

ಮಂಡ್ಯ ಚುನಾವಣೆ ಇನ್ನೊಂದು ಚಾಮುಂಡೇಶ್ವರಿ ಚುನಾವಣೆಯಂತಾಗಿ ಅಂತ್ಯಗೊಂಡಿರುವಾಗ, ಆ ಬಗ್ಗೆ ವಾಟಿಸ್ಸೆ ಕೇಳಬೇಕೆನಿಸಿತಲ್ಲಾ. ಕೂಡಲೇ ಫೋನ್ ಮಾಡಲಾಗಿ ರಿಂಗಾಯ್ತು, ರಿಂಗ್ ಠೋನ್ `ಟರ್ರ್ ಟರ್ರ್’ “ಹಲೋ ಹೇಳಿ ಸಾ”.

“ವಾಟಿಸ್ಸೆ ಚುನಾವಣೆ ಯಂಗಾಯ್ತು.”

“ಡಲ್ಲಾಗಿತ್ತು ಸಾ.”

“ಯಾಕೆ?”

“ಯಾಕಂದ್ರೆ ನನ್ನ ಕಣ್ಣೆದುರಿಗೆ ಡ್ರಿಂಕ್ ಅಂಗಡಿಗೆ ಬಾಗಲಾಕಿಸಿಬುಟ್ರು ಸಾ. ಮೊದ್ಲೆ ಗೊತ್ತಿದ್ರೆ ಯಲಕ್ಷನ್ ಮುಗಿಯುವರಿಗೂ ಮೇಂಟೇನಾಗೋವಷ್ಟು ಡ್ರಿಂಕ್ಸ್ ತಗಂಡು ಸ್ಟಾಕ್ ಮಡಿಕಬವುದಿತ್ತು.”

“ಅಂಗಡಿ ಬಾಗಲಾಕಿ ಸೀಲಾಕಿದ್ರು. ಹಿಂದಲ ಬಾಗಲಲ್ಲಿ ಸಿಗತದೆ.”

“ಈ ಸತಿ ಬಾಳ ಸ್ಟಿಕ್ಟು ಸಾರ್, ಆದ್ರು ಓಟು ಮಾಡೋ ಹಿಂದಿನ ದಿನ ನಿಖಿಲ್ ಕಡೆಯೋರಿಂದ ಒಂದೇ ಒಂದು ರಾಜಾ ವಿಸ್ಕಿ ಪ್ಯಾಕೆಟ್ ಸಿಕ್ತು ಸಾ.”

“ಅವುರತ್ರಲೂ ಈಸಗಂಡ್ಯಾ.”

“ಒಂದು ಷರತ್ತ ಮ್ಯಾಲೆ ಕೊಟ್ರು ಸಾರ್.”

“ಏನು ಷರತ್ತು.”

“ನಿಖಿಲ್ ಕುಮಾರ್‌ಸ್ವಾಮಿಗೇ ಓಟಾಕ್ತಿನಿ ಅಂತ ಹೇಳಿದ ಮ್ಯಾಲೆ ಕೊಟ್ರು ಸಾ.”

“ಅಂಗರೆ ನಿನ್ನೋಟು ನಿಖಿಲ್‌ಗೋಯ್ತು.”

“ಏಲ್ಯಾರವುಂಟೆ ಸಾರ್, ಐನೂರ‍್ರುಪಾಯಿ ಈಸಿಗಂಡೋರೆ ಕೈ ಕೊಟ್ರು, ಇನ್ನ ನನ್ನಂಥೋರು ಹಾಕಕ್ಕಾದತೆ.”

“ಐನೂರು ಕೊಟ್ಟೋರು ಧರ್ಮಸ್ಥಳದ ಆಣೆ ಮಾಡಿಸಿದರಂತೆ.”

“ಅದೂ ನ್ಯಡಿತು, ಕ್ಯಾರ್‌ಪೇಟೆ ಪಾಂಡುಪುರ ಇಲ್ಯಲ್ಲ ನ್ಯಡೀತು. ಅದ್ಕೆ ಅಲ್ಲಿ ಸಲುಪ ಸುಮಲತನಿಗೆ ಹಿನ್ನೆಡೆ.”

“ಮದ್ದೂರು ಮಳವಳ್ಳಿ ಯಂಗೆ.”

“ಅಲ್ಲಿ ತಮ್ಮಣ್ಣ ಭಾರಿ ದುಡ್ಡು ಬಡದ ಸಾ. ಆ ನನಮಗನಿಗೆ ಎಲ್ಲಿ ಕುಮಾರಣ್ಣ ಎಗರೋಗಿ ಮಂತ್ರಿಗಿರಿ ಹೋಯ್ತದೋ ಅಂತ ಹೆದ್ರಿಕಂಡು ದುಡ್ಡ ಸುರುದುಬುಟ್ಟ.”

“ಪ್ರಾಪರ್ ಮಂಡ್ಯ ಯಂಗೆ.”

“ಅದ್ಯಂಗೊ ಗೊತ್ತಿಲ್ಲ. ನಮ್ಮ ನಾಗಮಂಗಲದ ಬಗ್ಗೆ ಯಲ್ಲ ಡವುಟು ಮಾಡತಿದ್ರು. ಆದ್ರು ನಾವು ನಂಬಿಕಸ್ಥರು ಅಂತ ತೋರಿದೊ ಸಾ.”

“ಇದು ನಿನ್ನಭಿಪ್ರಾಯನ.”

“ನಾನು, ಜನಗಳ ಜೊತೆ ಇದ್ದಿನಿ ಸಾ.”

“ಕುಡುಕರ ಜೊತೇಲೆ?”

“ನನ್ನಂಥ ಕುಡುಕ್ರು ಕುಡುಕರ ಕೂಡೆ ಇರದಿಲ್ಲ ಸಾರ್, ಅವುರಿಗೆ ಮಾತ ಕೇಳೋ ಜನಗಳು ಬೇಕು, ಅದ್ಕೆ ನಾನು ಜನಗಳ ಜೊತೆ ಇರತಿನಿ, ಈ ಕುಮಾರಸ್ವಾಮಿ ಮಾಡಿದ ಕ್ಯಲಸ ಅವುನಿಗೇ ಅಟಗಾಯಿಸಿಗತ್ತಾ ಅದೆ ಸಾ.”

“ಯಂಗೇ?”

“ಅವುನು ಅವುಳ್ಯಾರೊ ಡಿ.ಸಿ ಹಿಡಕಂಡು ತನ್ನ ಮಗನೆಸರು ಮದಲೇಟಿಗೆ ಪಸ್ಟ್ಬರಂಗೆ ಮಾಡಿದ, ಇದರಿಂದ ಸುಮಲತ 20ನೇ ಕ್ಯಾಂಡೇಟಾದ್ರು. ಜೊತೆಗೆ ಮೇಲೆ ಕ್ಯೆಳಗೆ ಯರಡು ಮೂರು ಸುಮಲತ ಬಿದ್ರು.”

“ನಾನು ನೋಡಿದೆ ಅದ.”

“ಇಪ್ಪತ್ಯೆರುಡು ಜನ ಕ್ಯಾಂಡೇಟಾದ್ರಿಂದ ಯರಡು ಲೈನಾಯ್ತು ಸಾ. ಸುಮಲತ ಲೈನಲ್ಲಿ ಮೊದಲಿದ್ದೋನಿಗೆ ಅದ್ಯಂತದೋ ಸಿತಾರ್ ವಾದ್ಯ ಕೊಟ್ಟಿದ್ರು. ಅದು ಒಂಥರ ಜ್ವಾಳದ ಕಡ್ಡಿವರೆ ಮಡಗಿದಂಗಿತ್ತು. ಅಷ್ಟೇ ಸಾಕು ಈ ಯಬ್ಬೆಟ್ಟಿನವ್ಯಲ್ಲ ಆ ಸಿತಾರ್‌ನ ಹುಲ್ಲೊರೆ ಅಂತ ತಿಳಕಂಡು ಒತ್ತಿ ಮಡಿಗ್ಯವೆ.”

“ಅರರೆ, ಅದ್ಯಂಗೆ.”

“ಸುಮಲತನ ಲೈನಲ್ಲಿ ಮೊದಲನೆಯವನು ಅವುನೆ ಅಲ್ಲವ ಸಾ. ಅದು ಯಬ್ಬೆಟ್ಟಿಗಳಿಗ್ಯಂಗೆ ಗೊತ್ತಾಗಬೇಕು. ಅಂತೂ ನಿಖಿಲ್‌ನ ಕಡೆ ಐವತ್ತೋಟು ದಿಕ್ಕು ತಪ್ಯವೆ, ನಮ್ಮದೊಂದು ಬೂತಲ್ಲೇ ಅಂಗಾದ್ರೆ ಉಳಿದ ಕಡೆ.”

“ಅಂಗರೆ ಸಿತಾರಿನೋನು ತಗದ ಅನ್ನು.”

“ಕುಮಾರಣ್ಣ ಮಾಡಿದ್ದು ಅವನೇ ಅನುಭವುಸಂಗಾಯ್ತು ಸಾ.”

“ಥೂತ್ತೇರಿ.”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...