HomeUncategorizedಮಂಡ್ಯ: ತನ್ನ ತಲೆ ಮೇಲೆ ತಾನೇ ಕಲ್ಲು ಹಾಕಿಕೊಳ್ಳುತ್ತಿರುವ ಜೆಡಿಎಸ್

ಮಂಡ್ಯ: ತನ್ನ ತಲೆ ಮೇಲೆ ತಾನೇ ಕಲ್ಲು ಹಾಕಿಕೊಳ್ಳುತ್ತಿರುವ ಜೆಡಿಎಸ್

- Advertisement -
- Advertisement -

ಹೌದು ಕೆಲವರು ಎಡವಿ ತಮ್ಮ ಕಾಲ ಮೇಲೆ ತಾವೇ ಕಲ್ಲಾಕಿಕೊಂಡರೆ, ಮಂಡ್ಯದಲ್ಲಿ ಜೆಡಿಎಸ್‍ನವರು ತಮ್ಮ ತಲೆಯ ಮೇಲೆಯೇ ಕಲ್ಲಾಕಿಕೊಳ್ಳುತ್ತಿದ್ದಾರೆ. 8ಕ್ಕೆ 8 ತಮ್ಮದೇ ಪಕ್ಷದ ಎಂಎಲ್‍ಎಗಳನ್ನು ಹೊಂದಿದ್ದರೂ ಕೂಡ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಎದುರು ಗೆಲುವಿಗಾಗಿ ತಿಣುಕಾಡಬೇಕಾದ ಪರಿಸ್ಥಿತಿ ಬಂದಿರಲು ಸ್ವತಃ ಅವರೇ ಕಾರಣ. ದಿನಕ್ಕೊಂದರಂತೆ, ಬಾಯಿಗೆ ಬಂದಂತೆ ಅವರಾಡುತ್ತಿರುವ ಮಾತುಗಳು ಅವರನ್ನು ಸೋಲಿನ ದವಡೆಗೆ ನೂಕುತ್ತಿವೆ. ಇನ್ನೊಂದೆಡೆ ಹೆಚ್ಚಿಗೆ ಏನನ್ನೂ ಮಾತಾಡದೇ ಅನುಕಂಪದ ಅಲೆಯನ್ನು ವಿಸ್ತರಿಸಿಕೊಳ್ಳುತ್ತಿರುವ ಸುಮಲತಾರವರು ಗೆಲುವಿನೆಡೆಗೆ ಹೆಜ್ಜೆ ಹಾಕುತ್ತಿದ್ದಾರೆ.

ಸುಮಲತಾ ಆಂಧ್ರ ಗೌಡ್ತಿಯೇ ಹೊರತು ಒಕ್ಕಲಿಗರಲ್ಲ
ಇನ್ನೂ ಚುನಾವಣಾ ಕಾವು ಶುರುವಾಗಿರಲಿಲ್ಲ. ಸುಮಲತಾ ಅಂಬರೀಶ್ ಸ್ಪರ್ಧಿಸುವ ಬಯಕೆ ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಮುಖಂಡರೊಂದಿಗೆ ಚರ್ಚೆ ನಡೆಸಿದ್ದರು. ಅಂತಹ ಸಂದರ್ಭದಲ್ಲಿ ಮಂಡ್ಯದ ವಿಧಾನ ಪರಿಷತ್ ಸದಸ್ಯ ಕೆ.ಟಿ ಶ್ರೀಕಂಠೇಗೌಡ ತಮ್ಮ ನಾಲಿಗೆ ಹರಿಬಿಟ್ಟರು. ಸುಮಲತಾ ಆಂಧ್ರ ಗೌಡ್ತಿಯೇ ಹೊರತು ಒಕ್ಕಲಿಗರಲ್ಲ ಎಂದು ಗುಡುಗಿಬಿಟ್ಟರು. ಅದಕ್ಕೆ ಜನ ತೀವ್ರ ವಿರೋಧ ವ್ಯಕ್ತಪಡಿಸಿದರು. ‘ಜಾತ್ಯಾತೀತ’ ಎಂದರೆ ಇದೇನಾ ಎಂದು ಪ್ರಶ್ನಿಸಿದರು. ಸುಮಲತಾ ಪ್ರತಿಕ್ರಿಯಿಸಲಿಲ್ಲವಾದರೂ ಅವರಿಗೆ ಒಳ್ಳೇಯದೆ ಆಯಿತು.

ಒಂದು ಲೋಟ ನೀರು ಸಹ ಕೊಡಲಿಲ್ಲ
ಕೆ.ಟಿ ಶ್ರೀಕಂಠೇಗೌಡ ಮಾಡಿದ್ದ ಎಡವಟ್ಟು ತಣ್ಣಗಾಗುವುದರೊಳಗೆ ಸಾರಿಗೆ ಸಚಿವ, ಮದ್ದೂರಿನ ಶಾಸಕ ಡಿ.ಸಿ ತಮ್ಮಣ್ಣ ಇನ್ನೊಂದು ಬಾಂಬ್ ಸಿಡಿಸಿದರು. ನಾವೆಲ್ಲರೂ ಅದೆಷ್ಟು ಬಾರಿ ಅಂಬರೀಶ್ ರವರ ಮನೆಗೆ ಹೋಗಿದ್ದೇವೆ. ನಮ್ಮನ್ನು ಮಾತಾಡಿಸುವುದಿರಲಿ ಒಂದು ಲೋಟ ನೀರು ಸಹ ಕೊಟ್ಟಿಲ್ಲ. ಇವರಿಗೆ ಮಂಡ್ಯದ ಜನರ ಬಗ್ಗೆ ಕಾಳಜಿ ಇದೆಯೇ? ಎಂದು ಹೇಳಿಕೆ ನೀಡಿದರು. ಇನ್ನೊಂದು ಸುತ್ತಿನ ಚರ್ಚೆ ಆರಂಭವಾಯಿತು. ಡಿಸಿ ತಮ್ಮಣ್ಣ ಮತ್ತು ಅಂಬರೀಶ್‍ರವರ ಜೊತೆಗೆ ಟೇಬಲ್ ನೀರಿನ ಬಾಟಲಿ ಇದ್ದ ಫೋಟೊ ಹಾಕಿ ತಮ್ಮಣ್ಣ ಸುಳ್ಳು ಹೇಳುತ್ತಿದ್ದಾರೆ ಎಂದು ಸುಮಲತಾ ಅಭಿಮಾನಿಗಳು ಟ್ರೋಲ್ ಮಾಡಿದರು.

ಗಂಡ ಸತ್ತು ತಿಂಗಳಾಗಿಲ್ಲ, ರಾಜಕೀಯ ಬೇಕಾ?
ಮಾರ್ಚ್ 08. ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ದಿನ ಸುಮಲತಾ ಅಂಬರೀಶ್ ಅನ್ನು ಟೀಕಿಸುವ ಭರದಲ್ಲಿ ಗಂಡ ಸತ್ತು ತಿಂಗಳಾಗಿಲ್ಲ ಆಗಲೇ ಚುನಾವಣೆಗೆ ಬೇಕಾಯ್ತಾ ಎಂದು ಜೆಡಿಎಸ್‍ನ ಎಚ್.ಡಿ.ರೇವಣ್ಣ ಹೇಳಿಬಿಟ್ಟರು. ಈ ಹಿಂದೆ ಗುಂಡ್ಲುಪೇಟೆ ಉಪಚುನಾವಣೆಯ ಸಂದರ್ಭದಲ್ಲಿ ಬಿಜೆಪಿಯ ಪ್ರತಾಪ್ ಸಿಂಹ ‘ಇನ್ನು ಗಂಡ ಸತ್ತು ಒಂದು ವಾರ ಆಗಿಲ್ಲ, ಆಗಲೇ ಅವರಿಗೆ ಗೂಟದ ಕಾರಿನ ಮೇಲೆ ಆಸೆ’ ಎಂದಿದ್ದರು ಮತ್ತು ಆ ಹೇಳಿಕೆಯಿಂದಲೇ ಅಲ್ಲಿ ಬಿಜೆಪಿ ಸೋತಿದ್ದನ್ನು ರೇವಣ್ಣ ಮರೆತುಬಿಟ್ಟಿದ್ದರು. ಈ ಹೇಳಿಕೆಯ ನಂತರ ರೇವಣ್ಣ ಸರಿಯಾಗಿ ಛೀಮಾರಿ ಹಾಕಿಸಿಕೊಂಡರು. ಮಹಿಳಾ ದಿನವೇ ಮಹಿಳಾ ವಿರೋಧಿ ಹೇಳಿಕೆ ನೀಡಿದ್ದರಿಂದ ಭಾರೀ ಪ್ರತಿರೋಧ ವ್ಯಕ್ತವಾಗಿತ್ತು.

ನಿಖಿಲ್ ಎಲ್ಲಿದ್ದೀಯಪ್ಪ?
ಈ ವರ್ಷ ಕರ್ನಾಟಕದ ಸಾಮಾಜಿಕ ಜಾಲಾತಾಣದಲ್ಲಿ ಅತಿ ಹೆಚ್ಚು ವೈರಲ್ ಆದ, ಟ್ರೆಂಡ್ ಆದ ಮತ್ತು ಟ್ರೋಲ್ ಆದ ಹೇಳಿಕೆ ಎಂದರೆ ಅದು ‘ನಿಖಿಲ್ ಎಲ್ಲಿದ್ದೀಯಪ್ಪ’. ಜಾಗ್ವಾರ್ ಆಡಿಯೋ ಬಿಡುಗಡೆ ಸಂದರ್ಭದಲ್ಲಿ ನಡೆಸಿದ್ದ ಈ ಹೈಡ್ರಾಮಾದ ವಿಡಿಯೋ ತುಣುಕೊಂದನ್ನು ಮಾರ್ಚ್ ತಿಂಗಳಲ್ಲಿ ಹರಿಬಿಟ್ಟ ಕಾರಣ ಅದು ಜೆಡಿಎಸ್ ಮತ್ತು ಕುಮಾರಸ್ವಾಮಿಗೆ ಸರಿಯಾಗಿಯೇ ಉಲ್ಟಾ ಹೊಡೆಯಿತು. ಲೋಕಸಭಾ ಚುನಾವಣೆಯ ಮೇಲೆ ಕಣ್ಣಿಟ್ಟು ‘ಮಂಡ್ಯ ಜನರ ಮಧ್ಯೆ ಇದೀನಿ’ ಎಂದು ಹೇಳಿಸುವ ಕೆಲಸ ಹಿಂದೆಯೇ ಮಾಡಿದ್ದಾರೆಂದು ಅಪಹಾಸ್ಯಕ್ಕೊಳಗಾಯಿತು. ಇದರ ಕುರಿತಾಗಿ ಸಾವಿರಾರು ಮೀಮ್ಸ್‍ಗಳು, ಟ್ರೋಲ್ ವಿಡಿಯೋಗಳು ಹರಿದಾಡಿ ಜೆಡಿಎಸ್‍ಗೆ ದೊಡ್ಡ ಮುಜುಗರ ಉಂಟುಮಾಡಿತು.


ನಮ್ಮ ಕೈಯ್ಯಲ್ಲಿ ತನಿಖಾ ಸಂಸ್ಥೆಗಳಿವೆ, ಚಿತ್ರನಟರು ತೆಪ್ಪಗೆ ಮನೆಯಲ್ಲಿರಬೇಕು ಅಷ್ಟೆ.
ಕೆ.ಆರ್ ಪೇಟೆ ಶಾಸಕ ನಾರಾಯಣಗೌಡರ ಧಮಕಿ ಇದು. ಮಂಡ್ಯಗೆ ದರ್ಶನ್ ಮತ್ತು ಯಶ್ ಸುಮಲತಾ ಅಂಬರೀಶ್ ಪರವಾಗಿ ಪ್ರಚಾರಕ್ಕೆ ಬಂದಾಗ ನೀಡಿದ ಈ ಹೇಳಿಕೆಗೆ ನಾರಾಯಣಗೌಡರಿಗೆ ಜನ ಸರಿಯಾಗಿಯೇ ಉಗಿದು ಉಪ್ಪಿನ ಕಾಯಿ ಹಾಕಿದರು. ದರ್ಶನ್ ಅಭಿಮಾನಿಗಳು ಕಿಡಿಕಾರಿದರು.

ಕಳ್ಳೆತ್ತುಗಳು
ಇದು ಸಿಎಂ ಕುಮಾರಸ್ವಾಮಿ ಆಡಿದ ಅಣಿಮುತ್ತುಗಳು. ಜವಾಬ್ದಾರಿಯುತ ಸ್ಥಾನದಲ್ಲಿರುವ ಇವರು ದರ್ಶನ್ ಮತ್ತು ಯಶ್ ಬಗ್ಗೆ ನೀಡಿದ ಈ ಹೇಳಿಕೆ ಅವರಿಗೆ ದೊಡ್ಡ ಶಾಪವಾಗಿ ಪರಿಣಮಿಸಿತು. ಇದರ ವಿರುದ್ಧ ಜೋಡೆತ್ತುಗಳು ಎಂಬ ಇನ್ನೊಂದು ಟ್ರೋಲ್ ಸಹ ಬಂತು. ಒಟ್ಟಿನಲ್ಲಿ ಕುಮಾರಸ್ವಾಮಿಗೆ ಹಿನ್ನಡೆಯಾಯಿತು.

ಸುಮಲತಾ ಎದುರಿಸಲು ಮೂವರು ಸುಮಲತಾರು ಕಣಕ್ಕೆ
ಎಲ್ಲಾ ಕಡೆ ನಡೆಯುವಂತೆ ಇಲ್ಲಿಯೂ ಕೂಡ ಸುಮಲತಾ ಅಂಬರೀಶ್ ವಿರುದ್ಧ ಸುಮಲತಾ ಹೆಸರಿನ ಇನ್ನು ಮೂವರನ್ನು ಕಣಕ್ಕೆ ಇಳಿಸಲಾಗಿದೆ. ಅದಲ್ಲದೇ ಕ್ರಮ ಸಂಖ್ಯೆ 19 ಸುಮಲತಾ ಎಂಬ ಪಕ್ಷೇತರ ಅಭ್ಯರ್ಥಿಗೆ ನೀಡಿದರೆ ಕ್ರಮ ಸಂಖ್ಯೆ 20 ಅನ್ನು ಸುಮಲತಾ ಅಂಬರೀಶ್‍ರವರಿಗೆ ನೀಡಲಾಗಿದೆ. ಇದು ಕೂಡ ಚುನಾವಣಾ ಆಯೋಗ ಮತ್ತು ಡಿಸಿ ಜೆಡಿಎಸ್ ಪರ ಕೆಲಸ ಮಾಡುತ್ತಿದ್ದಾರೆ ಎಂಬ ಆರೋಪಕ್ಕೆ ತುತ್ತಾಗಿದೆ. ಚೀಪ್ ಪಾಲಿಟಿಕ್ಸ್ ಎಂದು ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಬಲ್ ಕಟ್ ಎಂಬ ಮಾಮೂಲಿ ಕತೆ
ಸುಮಲತಾ ಅಂಬರೀಶ್ ನಾಮಪತ್ರ ಸಲ್ಲಿಸುವ ದಿನ ಕೇಬಲ್ ಕಟ್ ಮಾಡಲಾಗಿತ್ತು. ಅದೇ ರೀತಿ ಇನ್ನೊಂದು ದೊಡ್ಡ ಸಮಾವೇಶ ಏರ್ಪಡಿಸಿದ ದಿನವೂ ಕೂಡ ಕೇಬಲ್ ಇರಲಿಲ್ಲ. ಮುಖ್ಯಮಂತ್ರಿಯವರ ಪ್ರಭಾವ ಬಳಸಿ ಜೆಡಿಎಸ್ ನಾಯಕರು ಈ ರೀತಿ ಕೇಬಲ್ ಕಟ್ ಮಾಡಿಸುವ ಮೂಲಕ ಸುಮಲತಾರವರ ಪ್ರಚಾರ ಜನರಿಗೆ ತಲುಪದಂತೆ ತಡೆಯುತ್ತಿದ್ದಾರೆ ಎಂದು ಸುಮಲತಾ ಅಭಿಮಾನಿಗಳು ಪದೇ ಪದೇ ಆರೋಪ ಮಾಡುತ್ತಿದ್ದಾರೆ.

ಸುಮಲತಾಗೆ ಯಶ್ ಹಿರಿಮಗನೊ, ಕಿರಿಮಗನೋ? ಬಾಡಿಗೆ ಕಟ್ಟಲಾಗದವನು
ಇನ್ನು ಮುಂದಿನ ಸರದಿ ಜೆಡಿಎಸ್ ಅಧಿಕೃತ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಯವರದ್ದು. ಯಶ್ ವಿರುದ್ಧ ಕಿಡಿಕಾರಿರುವ ಅವರು ಸುಮಲತಾಗೆ ಯಶ್ ಹಿರಿಮಗನೊ, ಕಿರಿಮಗನೋ? ಬಾಡಿಗೆ ಕಟ್ಟಲಾಗದವನು ನಮ್ಮ ತಂದೆಯ ವಿರುದ್ಧ ಮಾತಾಡುತ್ತಾನೆ ಎಂದು ವ್ಯಂಗ್ಯವಾಡಿದ್ದಾರೆ. ಬಾಡಿಗೆ ಮನೆಯಲ್ಲಿರುವವರು ನಿಖಿಲ್‍ಗೆ ಓಟು ಹಾಕಲ್ಲ ಎಂದು ಕೆಲವರು ತಿರುಗೇಟು ನೀಡಿದ್ದಾರೆ.

ಎಚ್.ವಿಶ್ವನಾಥ್‍ರ ಬುದ್ಧಿಮಾತು ಕೇಳುವ ಸಾಧ್ಯತೆಯಿಲ್ಲ
ಇಂತಹ ಮಾತುಗಳು ಇನ್ನೂ ಹೆಚ್ಚಾಗುವ ಸಾಧ್ಯತೆಯೇ ಇದೆ. ಜೆಡಿಎಸ್‍ನ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್‍ರು ಯಾವುದೇ ಕಾರಣಕ್ಕೂ ವಿರೋಧಿಗಳನ್ನು, ಅದರಲ್ಲೂ ಸುಮಲತಾರನ್ನು ಯಾರೂ ಟೀಕಿಸಬಾರದು ಎಂದು ಸೂಚಿಸಿದ್ದರು. ಅದಕ್ಕೆ ಯಾರೂ ಸೊಪ್ಪು ಹಾಕಿಲ್ಲ. ಇವೆಲ್ಲವೂ ಜೆಡಿಎಸ್‍ಗೆ ಕೌಂಟರ್ ಆಗುವ ಸಾಧ್ಯತೆಗಳಿವೆ. ತಮ್ಮ ಪಕ್ಷದ ಸಾಧನೆಗಳು, ಗೆದ್ದರೆ ನಾವು ಏನು ಮಾಡುತ್ತೇವೆ ಎಂಬುದನ್ನು ಮಾತಾಡಬೇಕು. ಆದರೆ ಅದನ್ನು ಬಿಟ್ಟು ಜೆಡಿಎಸ್‍ನವರು ಸುಖಾಸುಮ್ಮನೆ ವಿರೋಧಿಗಳನ್ನು ಟೀಕೆ ಮಾಡುವುದನ್ನೇ ಕಾಯಕ ಮಾಡಿಕೊಂಡರೆ ಈಗಾಗಲೇ ಅನುಕಂಪದ ಅಲೆಯಲ್ಲಿ ಸುಮಲತಾರ ಪರ ಮತ್ತಷ್ಟು ಅಲೆ ಬೀಸಲಿದೆ. ಜನರ ಕೋಪವನ್ನು ಮತ್ತಷ್ಟು ಹೆಚ್ಚಿಸಲಿದೆ ಅಷ್ಟೇ.

ಆದರೆ ಮತ್ತೊಂದು ಕಡೆ ಸುಮಲತಾ ಅಂಬರೀಶ್ ತಾನಾಗಿಯೇ ಯಾವುದೇ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುತ್ತಿಲ್ಲ. ಪಕ್ಕಾ ರಾಜಕಾರಣಿಯ ಥರ ಅಳೆದು ತೂಗಿ ಮಾತಾಡುತ್ತಿದ್ದಾರೆ. ಇವೆಲ್ಲವೂ ಅವರಿಗೆ ಪ್ಲಸ್ ಪಾಯಿಂಟ್ ಆಗುತ್ತಿವೆ. ಜೆಡಿಎಸ್‍ನವರು ಹತಾಶೆಗೊಂಡವರ ಥರಹ ಹೇಳಿಕೆ ನೀಡುತ್ತಿರುವುದು ಸುಮಲತಾರವರಿಗೆ ಅನಾಯಸವಾಗಿ ಬೆಂಬಲ ತಂದುಕೊಡುತ್ತಿದೆ.
ಒಟ್ಟಿನಲ್ಲಿ ತಮ್ಮದೇ ಸಡಿಲ ಮಾತುಗಳಿಂದ, 8 ಎಂಎಲ್‍ಎಗಳು, ಮೂವರು ಎಂಎಲ್‍ಸಿಗಳು, ಜಿ.ಪಂ, ತಾಪಂಗಳು, ಪುರಸಭೆ ನಗರಸಭೆಗಳು ಎಲ್ಲವನ್ನೂ ತಮ್ಮದಾಗಿಸಿಕೊಂಡಿದ್ದರೂ ಎಂಪಿ ಗೆಲ್ಲಲಾಗದ ಅಪೂರ್ವ ಇತಿಹಾಸವನ್ನು ಮಂಡ್ಯದಲ್ಲಿ ಜೆಡಿಎಸ್ ಸೃಷ್ಟಿಸಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...