HomeUncategorizedಮಂಡ್ಯ: ತನ್ನ ತಲೆ ಮೇಲೆ ತಾನೇ ಕಲ್ಲು ಹಾಕಿಕೊಳ್ಳುತ್ತಿರುವ ಜೆಡಿಎಸ್

ಮಂಡ್ಯ: ತನ್ನ ತಲೆ ಮೇಲೆ ತಾನೇ ಕಲ್ಲು ಹಾಕಿಕೊಳ್ಳುತ್ತಿರುವ ಜೆಡಿಎಸ್

- Advertisement -
- Advertisement -

ಹೌದು ಕೆಲವರು ಎಡವಿ ತಮ್ಮ ಕಾಲ ಮೇಲೆ ತಾವೇ ಕಲ್ಲಾಕಿಕೊಂಡರೆ, ಮಂಡ್ಯದಲ್ಲಿ ಜೆಡಿಎಸ್‍ನವರು ತಮ್ಮ ತಲೆಯ ಮೇಲೆಯೇ ಕಲ್ಲಾಕಿಕೊಳ್ಳುತ್ತಿದ್ದಾರೆ. 8ಕ್ಕೆ 8 ತಮ್ಮದೇ ಪಕ್ಷದ ಎಂಎಲ್‍ಎಗಳನ್ನು ಹೊಂದಿದ್ದರೂ ಕೂಡ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಎದುರು ಗೆಲುವಿಗಾಗಿ ತಿಣುಕಾಡಬೇಕಾದ ಪರಿಸ್ಥಿತಿ ಬಂದಿರಲು ಸ್ವತಃ ಅವರೇ ಕಾರಣ. ದಿನಕ್ಕೊಂದರಂತೆ, ಬಾಯಿಗೆ ಬಂದಂತೆ ಅವರಾಡುತ್ತಿರುವ ಮಾತುಗಳು ಅವರನ್ನು ಸೋಲಿನ ದವಡೆಗೆ ನೂಕುತ್ತಿವೆ. ಇನ್ನೊಂದೆಡೆ ಹೆಚ್ಚಿಗೆ ಏನನ್ನೂ ಮಾತಾಡದೇ ಅನುಕಂಪದ ಅಲೆಯನ್ನು ವಿಸ್ತರಿಸಿಕೊಳ್ಳುತ್ತಿರುವ ಸುಮಲತಾರವರು ಗೆಲುವಿನೆಡೆಗೆ ಹೆಜ್ಜೆ ಹಾಕುತ್ತಿದ್ದಾರೆ.

ಸುಮಲತಾ ಆಂಧ್ರ ಗೌಡ್ತಿಯೇ ಹೊರತು ಒಕ್ಕಲಿಗರಲ್ಲ
ಇನ್ನೂ ಚುನಾವಣಾ ಕಾವು ಶುರುವಾಗಿರಲಿಲ್ಲ. ಸುಮಲತಾ ಅಂಬರೀಶ್ ಸ್ಪರ್ಧಿಸುವ ಬಯಕೆ ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಮುಖಂಡರೊಂದಿಗೆ ಚರ್ಚೆ ನಡೆಸಿದ್ದರು. ಅಂತಹ ಸಂದರ್ಭದಲ್ಲಿ ಮಂಡ್ಯದ ವಿಧಾನ ಪರಿಷತ್ ಸದಸ್ಯ ಕೆ.ಟಿ ಶ್ರೀಕಂಠೇಗೌಡ ತಮ್ಮ ನಾಲಿಗೆ ಹರಿಬಿಟ್ಟರು. ಸುಮಲತಾ ಆಂಧ್ರ ಗೌಡ್ತಿಯೇ ಹೊರತು ಒಕ್ಕಲಿಗರಲ್ಲ ಎಂದು ಗುಡುಗಿಬಿಟ್ಟರು. ಅದಕ್ಕೆ ಜನ ತೀವ್ರ ವಿರೋಧ ವ್ಯಕ್ತಪಡಿಸಿದರು. ‘ಜಾತ್ಯಾತೀತ’ ಎಂದರೆ ಇದೇನಾ ಎಂದು ಪ್ರಶ್ನಿಸಿದರು. ಸುಮಲತಾ ಪ್ರತಿಕ್ರಿಯಿಸಲಿಲ್ಲವಾದರೂ ಅವರಿಗೆ ಒಳ್ಳೇಯದೆ ಆಯಿತು.

ಒಂದು ಲೋಟ ನೀರು ಸಹ ಕೊಡಲಿಲ್ಲ
ಕೆ.ಟಿ ಶ್ರೀಕಂಠೇಗೌಡ ಮಾಡಿದ್ದ ಎಡವಟ್ಟು ತಣ್ಣಗಾಗುವುದರೊಳಗೆ ಸಾರಿಗೆ ಸಚಿವ, ಮದ್ದೂರಿನ ಶಾಸಕ ಡಿ.ಸಿ ತಮ್ಮಣ್ಣ ಇನ್ನೊಂದು ಬಾಂಬ್ ಸಿಡಿಸಿದರು. ನಾವೆಲ್ಲರೂ ಅದೆಷ್ಟು ಬಾರಿ ಅಂಬರೀಶ್ ರವರ ಮನೆಗೆ ಹೋಗಿದ್ದೇವೆ. ನಮ್ಮನ್ನು ಮಾತಾಡಿಸುವುದಿರಲಿ ಒಂದು ಲೋಟ ನೀರು ಸಹ ಕೊಟ್ಟಿಲ್ಲ. ಇವರಿಗೆ ಮಂಡ್ಯದ ಜನರ ಬಗ್ಗೆ ಕಾಳಜಿ ಇದೆಯೇ? ಎಂದು ಹೇಳಿಕೆ ನೀಡಿದರು. ಇನ್ನೊಂದು ಸುತ್ತಿನ ಚರ್ಚೆ ಆರಂಭವಾಯಿತು. ಡಿಸಿ ತಮ್ಮಣ್ಣ ಮತ್ತು ಅಂಬರೀಶ್‍ರವರ ಜೊತೆಗೆ ಟೇಬಲ್ ನೀರಿನ ಬಾಟಲಿ ಇದ್ದ ಫೋಟೊ ಹಾಕಿ ತಮ್ಮಣ್ಣ ಸುಳ್ಳು ಹೇಳುತ್ತಿದ್ದಾರೆ ಎಂದು ಸುಮಲತಾ ಅಭಿಮಾನಿಗಳು ಟ್ರೋಲ್ ಮಾಡಿದರು.

ಗಂಡ ಸತ್ತು ತಿಂಗಳಾಗಿಲ್ಲ, ರಾಜಕೀಯ ಬೇಕಾ?
ಮಾರ್ಚ್ 08. ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ದಿನ ಸುಮಲತಾ ಅಂಬರೀಶ್ ಅನ್ನು ಟೀಕಿಸುವ ಭರದಲ್ಲಿ ಗಂಡ ಸತ್ತು ತಿಂಗಳಾಗಿಲ್ಲ ಆಗಲೇ ಚುನಾವಣೆಗೆ ಬೇಕಾಯ್ತಾ ಎಂದು ಜೆಡಿಎಸ್‍ನ ಎಚ್.ಡಿ.ರೇವಣ್ಣ ಹೇಳಿಬಿಟ್ಟರು. ಈ ಹಿಂದೆ ಗುಂಡ್ಲುಪೇಟೆ ಉಪಚುನಾವಣೆಯ ಸಂದರ್ಭದಲ್ಲಿ ಬಿಜೆಪಿಯ ಪ್ರತಾಪ್ ಸಿಂಹ ‘ಇನ್ನು ಗಂಡ ಸತ್ತು ಒಂದು ವಾರ ಆಗಿಲ್ಲ, ಆಗಲೇ ಅವರಿಗೆ ಗೂಟದ ಕಾರಿನ ಮೇಲೆ ಆಸೆ’ ಎಂದಿದ್ದರು ಮತ್ತು ಆ ಹೇಳಿಕೆಯಿಂದಲೇ ಅಲ್ಲಿ ಬಿಜೆಪಿ ಸೋತಿದ್ದನ್ನು ರೇವಣ್ಣ ಮರೆತುಬಿಟ್ಟಿದ್ದರು. ಈ ಹೇಳಿಕೆಯ ನಂತರ ರೇವಣ್ಣ ಸರಿಯಾಗಿ ಛೀಮಾರಿ ಹಾಕಿಸಿಕೊಂಡರು. ಮಹಿಳಾ ದಿನವೇ ಮಹಿಳಾ ವಿರೋಧಿ ಹೇಳಿಕೆ ನೀಡಿದ್ದರಿಂದ ಭಾರೀ ಪ್ರತಿರೋಧ ವ್ಯಕ್ತವಾಗಿತ್ತು.

ನಿಖಿಲ್ ಎಲ್ಲಿದ್ದೀಯಪ್ಪ?
ಈ ವರ್ಷ ಕರ್ನಾಟಕದ ಸಾಮಾಜಿಕ ಜಾಲಾತಾಣದಲ್ಲಿ ಅತಿ ಹೆಚ್ಚು ವೈರಲ್ ಆದ, ಟ್ರೆಂಡ್ ಆದ ಮತ್ತು ಟ್ರೋಲ್ ಆದ ಹೇಳಿಕೆ ಎಂದರೆ ಅದು ‘ನಿಖಿಲ್ ಎಲ್ಲಿದ್ದೀಯಪ್ಪ’. ಜಾಗ್ವಾರ್ ಆಡಿಯೋ ಬಿಡುಗಡೆ ಸಂದರ್ಭದಲ್ಲಿ ನಡೆಸಿದ್ದ ಈ ಹೈಡ್ರಾಮಾದ ವಿಡಿಯೋ ತುಣುಕೊಂದನ್ನು ಮಾರ್ಚ್ ತಿಂಗಳಲ್ಲಿ ಹರಿಬಿಟ್ಟ ಕಾರಣ ಅದು ಜೆಡಿಎಸ್ ಮತ್ತು ಕುಮಾರಸ್ವಾಮಿಗೆ ಸರಿಯಾಗಿಯೇ ಉಲ್ಟಾ ಹೊಡೆಯಿತು. ಲೋಕಸಭಾ ಚುನಾವಣೆಯ ಮೇಲೆ ಕಣ್ಣಿಟ್ಟು ‘ಮಂಡ್ಯ ಜನರ ಮಧ್ಯೆ ಇದೀನಿ’ ಎಂದು ಹೇಳಿಸುವ ಕೆಲಸ ಹಿಂದೆಯೇ ಮಾಡಿದ್ದಾರೆಂದು ಅಪಹಾಸ್ಯಕ್ಕೊಳಗಾಯಿತು. ಇದರ ಕುರಿತಾಗಿ ಸಾವಿರಾರು ಮೀಮ್ಸ್‍ಗಳು, ಟ್ರೋಲ್ ವಿಡಿಯೋಗಳು ಹರಿದಾಡಿ ಜೆಡಿಎಸ್‍ಗೆ ದೊಡ್ಡ ಮುಜುಗರ ಉಂಟುಮಾಡಿತು.


ನಮ್ಮ ಕೈಯ್ಯಲ್ಲಿ ತನಿಖಾ ಸಂಸ್ಥೆಗಳಿವೆ, ಚಿತ್ರನಟರು ತೆಪ್ಪಗೆ ಮನೆಯಲ್ಲಿರಬೇಕು ಅಷ್ಟೆ.
ಕೆ.ಆರ್ ಪೇಟೆ ಶಾಸಕ ನಾರಾಯಣಗೌಡರ ಧಮಕಿ ಇದು. ಮಂಡ್ಯಗೆ ದರ್ಶನ್ ಮತ್ತು ಯಶ್ ಸುಮಲತಾ ಅಂಬರೀಶ್ ಪರವಾಗಿ ಪ್ರಚಾರಕ್ಕೆ ಬಂದಾಗ ನೀಡಿದ ಈ ಹೇಳಿಕೆಗೆ ನಾರಾಯಣಗೌಡರಿಗೆ ಜನ ಸರಿಯಾಗಿಯೇ ಉಗಿದು ಉಪ್ಪಿನ ಕಾಯಿ ಹಾಕಿದರು. ದರ್ಶನ್ ಅಭಿಮಾನಿಗಳು ಕಿಡಿಕಾರಿದರು.

ಕಳ್ಳೆತ್ತುಗಳು
ಇದು ಸಿಎಂ ಕುಮಾರಸ್ವಾಮಿ ಆಡಿದ ಅಣಿಮುತ್ತುಗಳು. ಜವಾಬ್ದಾರಿಯುತ ಸ್ಥಾನದಲ್ಲಿರುವ ಇವರು ದರ್ಶನ್ ಮತ್ತು ಯಶ್ ಬಗ್ಗೆ ನೀಡಿದ ಈ ಹೇಳಿಕೆ ಅವರಿಗೆ ದೊಡ್ಡ ಶಾಪವಾಗಿ ಪರಿಣಮಿಸಿತು. ಇದರ ವಿರುದ್ಧ ಜೋಡೆತ್ತುಗಳು ಎಂಬ ಇನ್ನೊಂದು ಟ್ರೋಲ್ ಸಹ ಬಂತು. ಒಟ್ಟಿನಲ್ಲಿ ಕುಮಾರಸ್ವಾಮಿಗೆ ಹಿನ್ನಡೆಯಾಯಿತು.

ಸುಮಲತಾ ಎದುರಿಸಲು ಮೂವರು ಸುಮಲತಾರು ಕಣಕ್ಕೆ
ಎಲ್ಲಾ ಕಡೆ ನಡೆಯುವಂತೆ ಇಲ್ಲಿಯೂ ಕೂಡ ಸುಮಲತಾ ಅಂಬರೀಶ್ ವಿರುದ್ಧ ಸುಮಲತಾ ಹೆಸರಿನ ಇನ್ನು ಮೂವರನ್ನು ಕಣಕ್ಕೆ ಇಳಿಸಲಾಗಿದೆ. ಅದಲ್ಲದೇ ಕ್ರಮ ಸಂಖ್ಯೆ 19 ಸುಮಲತಾ ಎಂಬ ಪಕ್ಷೇತರ ಅಭ್ಯರ್ಥಿಗೆ ನೀಡಿದರೆ ಕ್ರಮ ಸಂಖ್ಯೆ 20 ಅನ್ನು ಸುಮಲತಾ ಅಂಬರೀಶ್‍ರವರಿಗೆ ನೀಡಲಾಗಿದೆ. ಇದು ಕೂಡ ಚುನಾವಣಾ ಆಯೋಗ ಮತ್ತು ಡಿಸಿ ಜೆಡಿಎಸ್ ಪರ ಕೆಲಸ ಮಾಡುತ್ತಿದ್ದಾರೆ ಎಂಬ ಆರೋಪಕ್ಕೆ ತುತ್ತಾಗಿದೆ. ಚೀಪ್ ಪಾಲಿಟಿಕ್ಸ್ ಎಂದು ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಬಲ್ ಕಟ್ ಎಂಬ ಮಾಮೂಲಿ ಕತೆ
ಸುಮಲತಾ ಅಂಬರೀಶ್ ನಾಮಪತ್ರ ಸಲ್ಲಿಸುವ ದಿನ ಕೇಬಲ್ ಕಟ್ ಮಾಡಲಾಗಿತ್ತು. ಅದೇ ರೀತಿ ಇನ್ನೊಂದು ದೊಡ್ಡ ಸಮಾವೇಶ ಏರ್ಪಡಿಸಿದ ದಿನವೂ ಕೂಡ ಕೇಬಲ್ ಇರಲಿಲ್ಲ. ಮುಖ್ಯಮಂತ್ರಿಯವರ ಪ್ರಭಾವ ಬಳಸಿ ಜೆಡಿಎಸ್ ನಾಯಕರು ಈ ರೀತಿ ಕೇಬಲ್ ಕಟ್ ಮಾಡಿಸುವ ಮೂಲಕ ಸುಮಲತಾರವರ ಪ್ರಚಾರ ಜನರಿಗೆ ತಲುಪದಂತೆ ತಡೆಯುತ್ತಿದ್ದಾರೆ ಎಂದು ಸುಮಲತಾ ಅಭಿಮಾನಿಗಳು ಪದೇ ಪದೇ ಆರೋಪ ಮಾಡುತ್ತಿದ್ದಾರೆ.

ಸುಮಲತಾಗೆ ಯಶ್ ಹಿರಿಮಗನೊ, ಕಿರಿಮಗನೋ? ಬಾಡಿಗೆ ಕಟ್ಟಲಾಗದವನು
ಇನ್ನು ಮುಂದಿನ ಸರದಿ ಜೆಡಿಎಸ್ ಅಧಿಕೃತ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಯವರದ್ದು. ಯಶ್ ವಿರುದ್ಧ ಕಿಡಿಕಾರಿರುವ ಅವರು ಸುಮಲತಾಗೆ ಯಶ್ ಹಿರಿಮಗನೊ, ಕಿರಿಮಗನೋ? ಬಾಡಿಗೆ ಕಟ್ಟಲಾಗದವನು ನಮ್ಮ ತಂದೆಯ ವಿರುದ್ಧ ಮಾತಾಡುತ್ತಾನೆ ಎಂದು ವ್ಯಂಗ್ಯವಾಡಿದ್ದಾರೆ. ಬಾಡಿಗೆ ಮನೆಯಲ್ಲಿರುವವರು ನಿಖಿಲ್‍ಗೆ ಓಟು ಹಾಕಲ್ಲ ಎಂದು ಕೆಲವರು ತಿರುಗೇಟು ನೀಡಿದ್ದಾರೆ.

ಎಚ್.ವಿಶ್ವನಾಥ್‍ರ ಬುದ್ಧಿಮಾತು ಕೇಳುವ ಸಾಧ್ಯತೆಯಿಲ್ಲ
ಇಂತಹ ಮಾತುಗಳು ಇನ್ನೂ ಹೆಚ್ಚಾಗುವ ಸಾಧ್ಯತೆಯೇ ಇದೆ. ಜೆಡಿಎಸ್‍ನ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್‍ರು ಯಾವುದೇ ಕಾರಣಕ್ಕೂ ವಿರೋಧಿಗಳನ್ನು, ಅದರಲ್ಲೂ ಸುಮಲತಾರನ್ನು ಯಾರೂ ಟೀಕಿಸಬಾರದು ಎಂದು ಸೂಚಿಸಿದ್ದರು. ಅದಕ್ಕೆ ಯಾರೂ ಸೊಪ್ಪು ಹಾಕಿಲ್ಲ. ಇವೆಲ್ಲವೂ ಜೆಡಿಎಸ್‍ಗೆ ಕೌಂಟರ್ ಆಗುವ ಸಾಧ್ಯತೆಗಳಿವೆ. ತಮ್ಮ ಪಕ್ಷದ ಸಾಧನೆಗಳು, ಗೆದ್ದರೆ ನಾವು ಏನು ಮಾಡುತ್ತೇವೆ ಎಂಬುದನ್ನು ಮಾತಾಡಬೇಕು. ಆದರೆ ಅದನ್ನು ಬಿಟ್ಟು ಜೆಡಿಎಸ್‍ನವರು ಸುಖಾಸುಮ್ಮನೆ ವಿರೋಧಿಗಳನ್ನು ಟೀಕೆ ಮಾಡುವುದನ್ನೇ ಕಾಯಕ ಮಾಡಿಕೊಂಡರೆ ಈಗಾಗಲೇ ಅನುಕಂಪದ ಅಲೆಯಲ್ಲಿ ಸುಮಲತಾರ ಪರ ಮತ್ತಷ್ಟು ಅಲೆ ಬೀಸಲಿದೆ. ಜನರ ಕೋಪವನ್ನು ಮತ್ತಷ್ಟು ಹೆಚ್ಚಿಸಲಿದೆ ಅಷ್ಟೇ.

ಆದರೆ ಮತ್ತೊಂದು ಕಡೆ ಸುಮಲತಾ ಅಂಬರೀಶ್ ತಾನಾಗಿಯೇ ಯಾವುದೇ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುತ್ತಿಲ್ಲ. ಪಕ್ಕಾ ರಾಜಕಾರಣಿಯ ಥರ ಅಳೆದು ತೂಗಿ ಮಾತಾಡುತ್ತಿದ್ದಾರೆ. ಇವೆಲ್ಲವೂ ಅವರಿಗೆ ಪ್ಲಸ್ ಪಾಯಿಂಟ್ ಆಗುತ್ತಿವೆ. ಜೆಡಿಎಸ್‍ನವರು ಹತಾಶೆಗೊಂಡವರ ಥರಹ ಹೇಳಿಕೆ ನೀಡುತ್ತಿರುವುದು ಸುಮಲತಾರವರಿಗೆ ಅನಾಯಸವಾಗಿ ಬೆಂಬಲ ತಂದುಕೊಡುತ್ತಿದೆ.
ಒಟ್ಟಿನಲ್ಲಿ ತಮ್ಮದೇ ಸಡಿಲ ಮಾತುಗಳಿಂದ, 8 ಎಂಎಲ್‍ಎಗಳು, ಮೂವರು ಎಂಎಲ್‍ಸಿಗಳು, ಜಿ.ಪಂ, ತಾಪಂಗಳು, ಪುರಸಭೆ ನಗರಸಭೆಗಳು ಎಲ್ಲವನ್ನೂ ತಮ್ಮದಾಗಿಸಿಕೊಂಡಿದ್ದರೂ ಎಂಪಿ ಗೆಲ್ಲಲಾಗದ ಅಪೂರ್ವ ಇತಿಹಾಸವನ್ನು ಮಂಡ್ಯದಲ್ಲಿ ಜೆಡಿಎಸ್ ಸೃಷ್ಟಿಸಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...