Homeಕರ್ನಾಟಕಮಂಡ್ಯದ ಬೂಕನಕೆರೆಯಲ್ಲಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಕೊಲೆ ಆರೋಪ: ನಾಳೆ ಪ್ರತಿಭಟನೆ

ಮಂಡ್ಯದ ಬೂಕನಕೆರೆಯಲ್ಲಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಕೊಲೆ ಆರೋಪ: ನಾಳೆ ಪ್ರತಿಭಟನೆ

- Advertisement -
- Advertisement -

ಮಂಡ್ಯ ಜಿಲ್ಲೆಯ ಕೆ.ಆರ್‌.ಪೇಟೆ ತಾಲೂಕಿನ ಬೂಕನಕೆರೆ ಗ್ರಾಮದಲ್ಲಿ 14 ವರ್ಷದ ಬಾಲಕಿಯೊಬ್ಬರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದು, ಇದು ಕೊಲೆ ಎಂದು ಬಾಲಕಿಯ ಪೋಷಕರು ಆರೋಪಿಸಿದ್ದಾರೆ.

ಅಪ್ರಾಪ್ತ ಬಾಲಕಿಯ ಸಾವಿನ ಸುತ್ತ ಅನುಮಾನ ವ್ಯಕ್ತವಾಗಿದ್ದು, ಆಕೆ ಆತ್ಮಹತ್ಯೆ ಮಾಡಿಕೊಂಡಿಲ್ಲ, ಆಕೆಯ ಮೇಲೆ ಅತ್ಯಾಚಾರವೆಸಿದ್ದ ವ್ಯಕ್ತಿಯೇ ಕೊಲೆ ಮಾಡಿದ್ದಾರೆ ಎಂದು ಮೃತ ಬಾಲಕಿಯ ತಾಯಿ ಆರೋಪಿಸಿದ್ದಾರೆ.

ಬಾಲಕಿಗೆ ಹೊಟ್ಟೆ ನೋವಿದ್ದ ಕಾರಣಕ್ಕೆ ಕಳೆದ 15 ದಿನಗಳ ಹಿಂದೆ ಆಸ್ಪತ್ರೆಗೆ ತೆರಳಿದ್ದ ಸಂದರ್ಭದಲ್ಲಿ ಬಾಲಕಿ ಗರ್ಭಿಣಿ ಎಂಬುದು ತಿಳಿದು ಬಂದಿದೆ. ಆಕೆಯ ಮೇಲೆ ಪಕ್ಕದ ಮನೆಯ 46 ವರ್ಷದ ಪರಮೇಶ್ ಎಂಬುವವನು ಮಗಳ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಪೋಷಕರು ದೂರು ನೀಡಿದ್ದಾರೆ.

ಇದನ್ನೂ ಓದಿ: ರಾಜಸ್ಥಾನ: ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 13 ಮಂದಿಗೆ 20 ವರ್ಷ ಜೈಲು

ತಂದೆ-ತಾಯಿ ಕೆಲಸಕ್ಕೆ ತೆರಳಿದ ಸಂದರ್ಭಗಳಲ್ಲಿ ಆರೋಪಿ ಪರಮೇಶ್ ಮನೆಗೆ ಬಂದು ಮಗಳ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ್ದಾರೆ. ಆಕೆ ಗರ್ಭಿಣಿ ಎಂದು ತಿಳಿದು ಆರೋಪಿ ನೇಣು ಹಾಕಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಪೋಷಕರ ದೂರಿನ ಮೇರೆಗೆ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಅಖಿಲ ಕರ್ನಾಟಕ ಅರುಂಧತಿಯಾರ್‌ ಮಹಾಸಭಾದ ಸದಸ್ಯರು ಘಟನೆ ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ. ಆರೋಪಿಯನ್ನು ಬಂಧಿಸಿ, ಸಂತ್ರಸ್ತ ಕುಟುಂಬಕ್ಕೆ ರಕ್ಷಣೆ ನೀಡಿ, 30 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದರು.

ಘಟನೆಯನ್ನು ಖಂಡಿಸಿರುವ ಮಹಿಳಾ ಮುನ್ನಡೆ ಸಂಘಟನೆ ಸೋಮವಾರ (ಡಿಸೆಂಬರ್‌ 20) ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಪ್ರತಿಭಟನೆ ನಡೆಸಲಿದೆ.


ಇದನ್ನೂ ಓದಿ: ಹನುಮ ಜಯಂತಿ: ಕೆ.ಆರ್‌.ಪೇಟೆಯಲ್ಲಿ ದಲಿತರ ಮೇಲೆ ಮಾರಣಾಂತಿಕ ಹಲ್ಲೆ; 27 ಮಂದಿ ಸವರ್ಣೀಯರ ಮೇಲೆ ಎಫ್‌ಐಆರ್‌‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...