Homeಕರ್ನಾಟಕಕೆ.ಆರ್‌.ಪೇಟೆ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಆರೋಪ: ಪರಿಣಾಮಕಾರಿ ಕ್ರಮಕ್ಕೆ ಜನಪರ ಸಂಘಟನೆಗಳ ಆಗ್ರಹ

ಕೆ.ಆರ್‌.ಪೇಟೆ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಆರೋಪ: ಪರಿಣಾಮಕಾರಿ ಕ್ರಮಕ್ಕೆ ಜನಪರ ಸಂಘಟನೆಗಳ ಆಗ್ರಹ

- Advertisement -
- Advertisement -

ಮಂಡ್ಯದ ಕೆ.ಆರ್‌.ಪೇಟೆ ತಾಲೂಕಿನ ಬೂಕನಕೆರೆ ಗ್ರಾಮದಲ್ಲಿ ಪೌರಕಾರ್ಮಿಕ ಸಮುದಾಯದ ಅಪ್ರಾಪ್ತ ಬಾಲಕಿಯ ಮೇಲಾದ ಲೈಂಗಿಕ ದೌರ್ಜನ್ಯ ಹಾಗೂ ಅಸಹಜ ಸಾವಿನ ವಿರುದ್ಧ ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ, ಒತ್ತಾಯ ಪತ್ರ ಸಲ್ಲಿಸಲಾಗಿದೆ.

ಕೆ.ಆರ್‌.ಪೇಟೆ ತಾಲೂಕಿನ ಬೂಕನಕೆರೆ ಗ್ರಾಮದಲ್ಲಿ 14 ವರ್ಷದ ಬಾಲಕಿಯೊಬ್ಬರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಇದು ಕೊಲೆ ಎಂದು ಬಾಲಕಿಯ ಪೋಷಕರು ಆರೋಪಿಸಿದ್ದರು. ಘಟನೆಯನ್ನು ಜನಪರ ಸಂಘಟನೆಗಳು ಖಂಡಿಸಿ, ಇಂದು ಪ್ರತಿಭಟನೆಗೆ ಕರೆ ನೀಡಿದ್ದರು.

ಮಹಿಳಾ ಮುನ್ನಡೆ ಮತ್ತು ಲೈಂಗಿಕ ಹಿಂಸೆ ವಿರೋಧಿ ಜನಚಳವಳಿಯ ಕಾರ್ಯಕರ್ತರು, ’ಘಟನೆಯಲ್ಲಿ ಯಾರೇ ಯಾವುದೇ ರೀತಿಯಲ್ಲಿ ಪಾಲ್ಗೊಂಡಿದ್ದರೂ ಕಠಿಣ ಹಾಗೂ ನಿಷ್ಪಕ್ಷಪಾತ ತನಿಖೆಯಾಗಬೇಕು ಮತ್ತು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂದು’ ಜಿಲ್ಲಾಧಿಕಾರಿಗಳಿಗೆ ಒತ್ತಾಯ ಪತ್ರ ಸಲ್ಲಿಸಿ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಹರಿಹರಪುರ ಅಟ್ರಾಸಿಟಿ ಪ್ರಕರಣ: ದಲಿತ ಮುಖಂಡರನ್ನು ಬಳಸಿ ಪ್ರಕರಣ ಮುಚ್ಚಲು ಯತ್ನ?

“ಕೆ.ಆರ್.ಪೇಟೆ ತಾಲೂಕು ಬೂಕನಕೆರೆ ಗ್ರಾಮದಲ್ಲಿ ಪೌರಕಾರ್ಮಿಕ ಸಮುದಾಯದ ಅಪ್ರಾಪ್ತ ಬಾಲಕಿ ಅಸಹಜ ಸಾವನ್ನಪ್ಪಿರುವ ಘಟನೆ ನಡೆದಿದೆ. ತಾಂತ್ರಿಕವಾಗಿ ಇದು ಕೊಲೆಯೋ ಅಲ್ಲವೋ ತನಿಖೆಯಿಂದ ತಿಳಿಯಬೇಕಾಗಿದೆಯಾದರೂ, ಇದು ವ್ಯವಸ್ಥೆಯ ವೈಫಲ್ಯದಿಂದ ಆಗಿರುವ ಕೊಲೆ ಎಂಬುದು ಸಾಂದರ್ಭಿಕ ಘಟನೆಗಳು ಹೇಳುತ್ತಿವೆ. ಈ ಬಾಲಕಿಯು ನಿರಂತರವಾಗಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿರುವುದು, ಸತ್ತಾಗ ಗರ್ಭಿಣಿಯಾಗಿದ್ದದ್ದು, ಅದಕ್ಕೆ ಮುಂಚೆ ತನ್ನನ್ನು ಈ ಸ್ಥಿತಿಯಿಂದ ಪಾರು ಮಾಡಲು ಕೋರಿದ್ದಳು ಎಂಬುದು ಇವೆಲ್ಲವೂ ನಮ್ಮ ಸಾಮಾಜಿಕ ಸ್ಥಿತಿಯ ಕುರಿತೂ ಬೆಳಕು ಚೆಲ್ಲುತ್ತವೆ” ಎಂದು ಸಂಘಟನೆಗಳು ತಿಳಿಸಿವೆ.

ಮಕ್ಕಳು, ಮಹಿಳೆಯರು ತಮ್ಮ ಮೇಲಾಗುವ ದೌರ್ಜನ್ಯಗಳನ್ನು ಎದುರಿಸಲು ಬೇಕಾದ ಸಹಾಯವಾಣಿ, ಸಾಂತ್ವನ ಕೇಂದ್ರಗಳು, ಇಲಾಖೆಗಳು, ಸಮಿತಿಗಳು, ಪೊಲೀಸ್ ಠಾಣೆಗಳು, ಅಧಿಕಾರಿಗಳು – ತಮ್ಮ ಅಸ್ತಿತ್ವದ ಕುರಿತು ನೆರವು ಅಗತ್ಯವಿರುವವರಿಗೆ ಮೊದಲು ಮಾಹಿತಿ ಕೊಡಬೇಕಿದೆ ಎಂದು ತಿಳಿಸಿವೆ.

’ಮಂಡ್ಯ ಜಿಲ್ಲೆಯಲ್ಲಿ ಇಂತಹ ಹಲವಾರು ಪ್ರಕರಣಗಳು ಪದೇ ಪದೇ ಬೆಳಕಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಪರಿಣಾಮಕಾರಿ ಕ್ರಮಗಳಿಗೆ ಮುಂದಾಗಬೇಕೆಂದು ನಾವು ಆಗ್ರಹಿಸುತ್ತೇವೆ. ಈ ವಿಚಾರದಲ್ಲಿ ನಾಗರಿಕ ಸಮಾಜದ್ದೂ ಪಾತ್ರವಿದೆ ಎಂದು ನಾವು ಭಾವಿಸುತ್ತೇವೆ. ಜನರಲ್ಲಿ ಅರಿವು ಮೂಡಿಸುವ, ದೌರ್ಜನ್ಯ ನಡೆದಾಗ ಅವರ ರಕ್ಷಣೆಗೆ ಧಾವಿಸುವ ವ್ಯವಸ್ಥೆ ಇದೆಯೆಂಬುದನ್ನು ಎಲ್ಲೆಡೆಗೆ ತಲುಪಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತದ ಜೊತೆ ಕೈ ಜೋಡಿಸಲು ನಾವು ಸಿದ್ಧರಿದ್ದೇವೆ’ ಎಂದು ಸಂಘಟನೆಯ ಕಾರ್ಯಕರ್ತರು ತಿಳಿಸಿದ್ದಾರೆ.


ಇದನ್ನೂ ಓದಿ: ಮಂಡ್ಯದ ಬೂಕನಕೆರೆಯಲ್ಲಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಕೊಲೆ ಆರೋಪ: ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...