Homeಕರ್ನಾಟಕಕೆ.ಆರ್‌.ಪೇಟೆ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಆರೋಪ: ಪರಿಣಾಮಕಾರಿ ಕ್ರಮಕ್ಕೆ ಜನಪರ ಸಂಘಟನೆಗಳ ಆಗ್ರಹ

ಕೆ.ಆರ್‌.ಪೇಟೆ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಆರೋಪ: ಪರಿಣಾಮಕಾರಿ ಕ್ರಮಕ್ಕೆ ಜನಪರ ಸಂಘಟನೆಗಳ ಆಗ್ರಹ

- Advertisement -
- Advertisement -

ಮಂಡ್ಯದ ಕೆ.ಆರ್‌.ಪೇಟೆ ತಾಲೂಕಿನ ಬೂಕನಕೆರೆ ಗ್ರಾಮದಲ್ಲಿ ಪೌರಕಾರ್ಮಿಕ ಸಮುದಾಯದ ಅಪ್ರಾಪ್ತ ಬಾಲಕಿಯ ಮೇಲಾದ ಲೈಂಗಿಕ ದೌರ್ಜನ್ಯ ಹಾಗೂ ಅಸಹಜ ಸಾವಿನ ವಿರುದ್ಧ ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ, ಒತ್ತಾಯ ಪತ್ರ ಸಲ್ಲಿಸಲಾಗಿದೆ.

ಕೆ.ಆರ್‌.ಪೇಟೆ ತಾಲೂಕಿನ ಬೂಕನಕೆರೆ ಗ್ರಾಮದಲ್ಲಿ 14 ವರ್ಷದ ಬಾಲಕಿಯೊಬ್ಬರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಇದು ಕೊಲೆ ಎಂದು ಬಾಲಕಿಯ ಪೋಷಕರು ಆರೋಪಿಸಿದ್ದರು. ಘಟನೆಯನ್ನು ಜನಪರ ಸಂಘಟನೆಗಳು ಖಂಡಿಸಿ, ಇಂದು ಪ್ರತಿಭಟನೆಗೆ ಕರೆ ನೀಡಿದ್ದರು.

ಮಹಿಳಾ ಮುನ್ನಡೆ ಮತ್ತು ಲೈಂಗಿಕ ಹಿಂಸೆ ವಿರೋಧಿ ಜನಚಳವಳಿಯ ಕಾರ್ಯಕರ್ತರು, ’ಘಟನೆಯಲ್ಲಿ ಯಾರೇ ಯಾವುದೇ ರೀತಿಯಲ್ಲಿ ಪಾಲ್ಗೊಂಡಿದ್ದರೂ ಕಠಿಣ ಹಾಗೂ ನಿಷ್ಪಕ್ಷಪಾತ ತನಿಖೆಯಾಗಬೇಕು ಮತ್ತು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂದು’ ಜಿಲ್ಲಾಧಿಕಾರಿಗಳಿಗೆ ಒತ್ತಾಯ ಪತ್ರ ಸಲ್ಲಿಸಿ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಹರಿಹರಪುರ ಅಟ್ರಾಸಿಟಿ ಪ್ರಕರಣ: ದಲಿತ ಮುಖಂಡರನ್ನು ಬಳಸಿ ಪ್ರಕರಣ ಮುಚ್ಚಲು ಯತ್ನ?

“ಕೆ.ಆರ್.ಪೇಟೆ ತಾಲೂಕು ಬೂಕನಕೆರೆ ಗ್ರಾಮದಲ್ಲಿ ಪೌರಕಾರ್ಮಿಕ ಸಮುದಾಯದ ಅಪ್ರಾಪ್ತ ಬಾಲಕಿ ಅಸಹಜ ಸಾವನ್ನಪ್ಪಿರುವ ಘಟನೆ ನಡೆದಿದೆ. ತಾಂತ್ರಿಕವಾಗಿ ಇದು ಕೊಲೆಯೋ ಅಲ್ಲವೋ ತನಿಖೆಯಿಂದ ತಿಳಿಯಬೇಕಾಗಿದೆಯಾದರೂ, ಇದು ವ್ಯವಸ್ಥೆಯ ವೈಫಲ್ಯದಿಂದ ಆಗಿರುವ ಕೊಲೆ ಎಂಬುದು ಸಾಂದರ್ಭಿಕ ಘಟನೆಗಳು ಹೇಳುತ್ತಿವೆ. ಈ ಬಾಲಕಿಯು ನಿರಂತರವಾಗಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿರುವುದು, ಸತ್ತಾಗ ಗರ್ಭಿಣಿಯಾಗಿದ್ದದ್ದು, ಅದಕ್ಕೆ ಮುಂಚೆ ತನ್ನನ್ನು ಈ ಸ್ಥಿತಿಯಿಂದ ಪಾರು ಮಾಡಲು ಕೋರಿದ್ದಳು ಎಂಬುದು ಇವೆಲ್ಲವೂ ನಮ್ಮ ಸಾಮಾಜಿಕ ಸ್ಥಿತಿಯ ಕುರಿತೂ ಬೆಳಕು ಚೆಲ್ಲುತ್ತವೆ” ಎಂದು ಸಂಘಟನೆಗಳು ತಿಳಿಸಿವೆ.

ಮಕ್ಕಳು, ಮಹಿಳೆಯರು ತಮ್ಮ ಮೇಲಾಗುವ ದೌರ್ಜನ್ಯಗಳನ್ನು ಎದುರಿಸಲು ಬೇಕಾದ ಸಹಾಯವಾಣಿ, ಸಾಂತ್ವನ ಕೇಂದ್ರಗಳು, ಇಲಾಖೆಗಳು, ಸಮಿತಿಗಳು, ಪೊಲೀಸ್ ಠಾಣೆಗಳು, ಅಧಿಕಾರಿಗಳು – ತಮ್ಮ ಅಸ್ತಿತ್ವದ ಕುರಿತು ನೆರವು ಅಗತ್ಯವಿರುವವರಿಗೆ ಮೊದಲು ಮಾಹಿತಿ ಕೊಡಬೇಕಿದೆ ಎಂದು ತಿಳಿಸಿವೆ.

’ಮಂಡ್ಯ ಜಿಲ್ಲೆಯಲ್ಲಿ ಇಂತಹ ಹಲವಾರು ಪ್ರಕರಣಗಳು ಪದೇ ಪದೇ ಬೆಳಕಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಪರಿಣಾಮಕಾರಿ ಕ್ರಮಗಳಿಗೆ ಮುಂದಾಗಬೇಕೆಂದು ನಾವು ಆಗ್ರಹಿಸುತ್ತೇವೆ. ಈ ವಿಚಾರದಲ್ಲಿ ನಾಗರಿಕ ಸಮಾಜದ್ದೂ ಪಾತ್ರವಿದೆ ಎಂದು ನಾವು ಭಾವಿಸುತ್ತೇವೆ. ಜನರಲ್ಲಿ ಅರಿವು ಮೂಡಿಸುವ, ದೌರ್ಜನ್ಯ ನಡೆದಾಗ ಅವರ ರಕ್ಷಣೆಗೆ ಧಾವಿಸುವ ವ್ಯವಸ್ಥೆ ಇದೆಯೆಂಬುದನ್ನು ಎಲ್ಲೆಡೆಗೆ ತಲುಪಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತದ ಜೊತೆ ಕೈ ಜೋಡಿಸಲು ನಾವು ಸಿದ್ಧರಿದ್ದೇವೆ’ ಎಂದು ಸಂಘಟನೆಯ ಕಾರ್ಯಕರ್ತರು ತಿಳಿಸಿದ್ದಾರೆ.


ಇದನ್ನೂ ಓದಿ: ಮಂಡ್ಯದ ಬೂಕನಕೆರೆಯಲ್ಲಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಕೊಲೆ ಆರೋಪ: ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...