Homeಕರ್ನಾಟಕಮಂಡ್ಯ: ನೆತ್ತಿಯ ಮೇಲಿನ ಸೂರಿಗಾಗಿ, ಭೂಮಿಯ ಹಕ್ಕಿಗಾಗಿ ಶ್ರಮಿಕರ ಪಟ್ಟುಬಿಡದ ಹೋರಾಟ

ಮಂಡ್ಯ: ನೆತ್ತಿಯ ಮೇಲಿನ ಸೂರಿಗಾಗಿ, ಭೂಮಿಯ ಹಕ್ಕಿಗಾಗಿ ಶ್ರಮಿಕರ ಪಟ್ಟುಬಿಡದ ಹೋರಾಟ

- Advertisement -
- Advertisement -

ಸರ್ಕಾರದ್ದೇ ನೀತಿಗಳು, ಸರ್ಕಾರದ್ದೇ ಕಾಯ್ದೆಗಳು, ಸರ್ಕಾರದ್ದೇ ಅಧಿಕಾರಿಗಳು. ಜನಸಮುದಾಯಗಳ ಒಳಿತಿಗೆ ಇರಬೇಕಾದ ಕಾಯ್ದೆಗಳನ್ನು ಸರಿಯಾಗಿ ಅನುಷ್ಠಾನ ಮಾಡದಿರುವುದರಿಂದಲೋ, ಅಧಿಕಾರಿಗಳ ನಿರ್ಲಕ್ಷ್ಯದಿಂದಲೋ ಶಿಕ್ಷೆ-ತೊಂದರೆಗಳನ್ನು ಅನುಭವಿಸುವವರು ಬಡವರು, ದಲಿತರು, ಆದಿವಾಸಿಗಳು, ಹಿಂದುಳಿದ ಸಮುದಾಯಗಳು. ಒಂದೇ ಮಾತಿನಲ್ಲಿ ಹೇಳುವುದಾದರೆ ತಳಸಮುದಾಯಗಳು.

ಸರ್ಕಾರ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯ, ಬೇಜವಾಬ್ದಾರಿ ಧೋರಣೆಗಳಿಂದಾಗಿ ಮಂಡ್ಯ ನಗರವನ್ನು ಕಟ್ಟಿದ, ಸ್ಲಂ ಜನರು ಎಂದು ಕರೆಯಲ್ಪಡುವ ಶ್ರಮಿಕ ನಗರ ನಿವಾಸಿಗಳು ಹಲವು ವರ್ಷಗಳಿಂದ ಸಮಸ್ಯೆಯ ಸುಳಿಯಿಂದ ಹೊರಬರಲಾಗುತ್ತಿಲ್ಲ. ಮಂಡ್ಯ ನಗರದಲ್ಲಿ 24 ಶ್ರಮಿಕ ನಗರಗಳಿವೆ. ಅಲ್ಲಿ ವಾಸಿಸುವ ನಿವಾಸಿಗಳಿಗೆ ಜಿಲ್ಲಾಡಳಿತವು ಹತ್ತಾರು ಸಮಸ್ಯೆಗಳನ್ನು ಸೃಷ್ಟಿಸಿದೆ. ಎಲ್ಲಕ್ಕಿಂತ ಮುಖ್ಯವಾಗಿ ಅವರು ವಾಸಿಸುವ ಭೂಮಿ ಹಕ್ಕಿನ ಸಮಸ್ಯೆ, ಅವರ ಬದುಕನ್ನು ತಂತಿಯ ಮೇಲಿನ ನಡಿಗೆಯನ್ನಾಗಿಸಿದೆ. ಹೀಗಾಗಿ, ಈ ಜನರು ತಮ್ಮ ನೆಲೆಯನ್ನು ಭದ್ರಪಡಿಸಿಕೊಳ್ಳಲು ಶತಪ್ರಯತ್ನ ಮಾಡುತ್ತಲೇ ಇದ್ದಾರೆ. ಆದರೆ, ಆಡಳಿತದ ಸ್ಪಂದನೆಯಿಲ್ಲದೆ, ಅವರೆಲ್ಲರೂ ಭರವಸೆಯನ್ನೇ ಕಳೆದುಕೊಳ್ಳುವಂತಾಗಿದೆ.

ಮಂಡ್ಯದ ಕಾಳಿಕಾಂಬ ದೇವಾಲಯ ಪಕ್ಕದಲ್ಲಿರುವ ಕಾಳಿಕಾಂಬ ಸ್ಲಂ ಎಂದು ಕರೆಯಲ್ಪಡುವ ಶ್ರಮಿಕ ನಗರದ ಸಮಸ್ಯೆ 2006ರಿಂದಲೂ ಉಪೇಕ್ಷೆಗೆ ಒಳಗಾಗಿದೆ. ಅವರ ಬೇಡಿಕೆಗಳೆಲ್ಲವೂ ನೆನೆಗುದಿಗೆ ಬಿದ್ದಿದೆ. ಅಲ್ಲಿನ ಜನರು, ಜನಪರ ಸಂಘಟನೆಗಳ ನೆರವಿನಿಂದ ನ್ಯಾಯಾಂಗದ ಮೆಟ್ಟಿಲೇರಿ ತಮ್ಮ ಭೂಮಿಯನ್ನು ಉಳಿಸಿಕೊಳ್ಳುವ ಹೋರಾಟದಲ್ಲಿ ಗೆದ್ದು ಬಂದಿದ್ದಾರಾದರೂ, ಅಧಿಕಾರಿಗಳು ಮತ್ತು ಭೂಗಳ್ಳರ ಅಪವಿತ್ರ ಮೈತ್ರಿಯಿಂದಾಗಿ ಇನ್ನೂ ಅವರಿಗೆ ಆ ಭೂಮಿಯ ಹಕ್ಕು ಸಿಗದೇ ಮತ್ತೆ ಕೋರ್ಟ್ ಬಾಗಿಲು ತಟ್ಟುವಂತಾಗಿದೆ.

ಮಂಡ್ಯ ಆರ್‌ಟಿಓ ಮುಂಭಾಗದಲ್ಲಿರುವ ಕಾಳಪ್ಪ ಬಡಾವಣೆ ಪ್ರದೇಶದ ಜನರು 2007ರಿಂದ ಅತೀವ ತೊಂದರೆಯನ್ನು ಎದುರಿಸುತ್ತಲೇ ಇದ್ದಾರೆ. ಅವರನ್ನು 2007ರಲ್ಲಿ ಎತ್ತಂಗಡಿ ಮಾಡಿಸಲು ಯತ್ನಿಸಲಾಗಿತ್ತು. ನೆಲೆ ಕಳೆದುಕೊಂಡರೆ ಬದುಕು ಅತಂತ್ರ ಎಂದರಿತ ಅಲ್ಲಿನ ಜನರ ಸುದೀರ್ಘ ಹೋರಾಟದಿಂದ ಅಲ್ಲಿಯೇ ವಾಸಿಸಲು ಸಾಧ್ಯವಾಗಿದೆ. ಆದರೆ, ಇದುವರೆಗೂ ಅವರಿಗೆ ಭೂಮಿಯ ದಾಖಲೆಗಳ ಸಮಸ್ಯೆಗಳು, ಆಡಳಿತಾತ್ಮಕ ತೊಡಕುಗಳು ಕಾಡುತ್ತಲೇ ಇವೆ.

ಇನ್ನು, ಹೇಗೋ ಸೂರು ಕಟ್ಟಿಕೊಂಡು ತಮ್ಮ ಮನೆಗಳಲ್ಲಿ ವಾಸಿಸುತ್ತಿದ್ದ ಹಾಲಹಳ್ಳಿ ಶ್ರಮಿಕನಗರದ ಜನರಿಗೆ ಹೊಸ ಮನೆಯ ಆಸೆ ಹುಟ್ಟಸಿ ಮನೆ ಖಾಲಿ ಮಾಡಿಸಿ, ಅವರ ಮನೆಗಳನ್ನೆಲ್ಲಾ ಕೆಡವಲಾಗಿದೆ. ಐದಾರು ವರ್ಷಗಳಿಂದ ಹೊಸ ಮನೆಗಳ ನಿರ್ಮಾಣ ಕಾರ್ಯ ನಡೆಯುತ್ತಲೇ ಇದೆ. ಎಳೆದೂ ಎಳೆದೂ ಒಂದಷ್ಟು ಮನೆಗಳು ನಿರ್ಮಾಣಗೊಂಡಿವೆ. ಆದರೆ, ಈಗ ಹೊಸ ತಗಾದೆ ತೆಗೆದು, ತಮ್ಮ ಹಳೆಯ ಮನೆಗಳನ್ನು ಕೆಡವುದಕ್ಕೂ ಮೊದಲು ಆ ಮನೆಗಳಲ್ಲಿ ತಾವೇ ಇದ್ದೆವು ಎಂದು ದಾಖಲೆ ತೋರಿಸಿ ಸಾಬೀತುಪಡಿಸಬೇಕು, ಇಲ್ಲದಿದ್ದರೆ ಹೊಸ ಮನೆ ಇಲ್ಲ ಎಂಬ ಆಷಾಢಭೂತಿತದ ಕ್ರೌರ್ಯವನ್ನು ಜಿಲ್ಲಾಡಳಿತ ತೋರುತ್ತಿದೆ.

ಹೀಗೆ, ಇಂದಿರಾ ಬಡಾವಣೆ, ನ್ಯೂ ತಮಿಳು ಕಾಲೋನಿ, ಗಾಡಿಕಾರ್ಖಾನೆ, ಹೊಸಹಳ್ಳಿ ಗುರುಮಠ, ಸ್ಲಾಟರ್‌ಹೌಸ್ ಶ್ರಮಿಕನಗರಗಳು ಸೇರಿದಂತೆ ಒಂದೊಂದು ಶ್ರಮಿಕ ನಗರಗಳಲ್ಲಿ ವಾಸಿಸುತ್ತಿರುವ ನಿವಾಸಿಗಳಿಗೆ ಇನ್ನೊಂದು, ಮತ್ತೊಂದು-ಮಗದೊಂದು ಎಂಬಂತೆ ಸಮಸ್ಯೆಗಳು ಕಾಡುತ್ತಲೇ ಇವೆ.

ತಮ್ಮ ಸಮಸ್ಯೆಗಳನ್ನು ಬಗೆಹರಿಸಿ, ತಮ್ಮ ಹಕ್ಕುಪತ್ರಗಳನ್ನು ಒದಗಿಸಬೇಕು ಎಂದು ಜಿಲ್ಲಾಡಳಿತದ ಮುಂದೆ ಹಲವು ಪ್ರತಿಭಟನೆಗಳು, ಐದು ವರ್ಷಕ್ಕೊಮ್ಮೆ ಗೆದ್ದು ಬರುವ ಶಾಸಕರು, ಸಂದರಿಗೆ ನೂರಾರು ಮನವಿ ಪತ್ರಗಳನ್ನು ಕೊಟ್ಟು ಸುಸ್ತಾಗಿರುವ ಶ್ರಮಿಕ ನಿವಾಸಿಗಳು ಅಂತಿಮವಾಗಿ ಸುದೀರ್ಘ ಸಂಘರ್ಷಕ್ಕಿಳಿದಿದ್ದಾರೆ.

ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳ ಧೋರಣೆಯ ವಿರುದ್ದ ಕುದಿಯುತ್ತಿದ್ದ ಶ್ರಮಿಕ ನಿವಾಸಿಗಳಿಗೆ ಸ್ಫ್ಪೂರ್ತಿಯಾಗಿ ಕಂಡದ್ದು ದೆಹಲಿ ರೈತ ಹೋರಾಟ. ರೈತರ ಯಶಸ್ವಿ ಹೋರಾಟದ ಸ್ಫ್ಪೂರ್ತಿ ಪಡೆದ ಶ್ರಮಿಕ ನಿವಾಸಿಗಳು, ಮಂಡ್ಯ ಜಿಲ್ಲಾ ಶ್ರಮಿಕ ನಗರ ನಿವಾಸಿಗಳ ಒಕ್ಕೂಟದ ನೇತೃತ್ವದಲ್ಲಿ ’ಮಾಡು ಇಲ್ಲವೇ ಮಡಿ’ ಎಂಬ ಧ್ಯೇಯದೊಂದಿಗೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಒಂದು ವಾರ ನಿರ್ಣಾಯಕ ಹೋರಾಟಕ್ಕಿಳಿದಿದ್ದರು.

ವಿವಿಧ ಹಕ್ಕೊತ್ತಾಯಗಳನ್ನು ಜಿಲ್ಲಾಡಳಿತದ ಮುಂದಿಟ್ಟಿದ್ದ ಶ್ರಮಿಕ ನಿವಾಸಿಗಳು, ಮಂಡ್ಯ ನಗರದಲ್ಲಿರುವ ಶ್ರಮಿಕ ನಗರ ನಿವಾಸಿಗಳ ಸಮಸ್ಯೆಗಳನ್ನು ಬಗೆಹರಿಸಬೇಕು, ಮಾತ್ರವಲ್ಲದೆ ಜಿಲ್ಲೆಯ ಎಲ್ಲಾ ಸ್ಲಂ ಜನರಿಗೆ ನ್ಯಾಯ ಒದಗಿಸಬೇಕು. ಅದಕ್ಕಾಗಿ ಉನ್ನತ ಮಟ್ಟದ ಸಮಿತಿ ರಚಿಸಬೇಕು. ಮದ್ದೂರಿನ ಶ್ರಮಿಕ ನಗರ ನಿವಾಸಿಗಳಿಗೆ ವಿವೇಶನ ಒದಗಿಸಬೇಕು, ಶ್ರೀರಂಗಪಟ್ಟಣದ ಮೊಗರಳ್ಳಿ ಮಂಟಿಯಿಂದ ಚನ್ನಹಳ್ಳಿಗೆ ಏಕಾಏಕಿ ಸ್ಥಳಾಂತರಿಸಲ್ಪಟ್ಟ ಹಕ್ಕಿ-ಪಿಕ್ಕಿ ಸಮುದಾಯದ ಜನರಿಗೆ ಭೂಮಿ ಮತ್ತು ವಸತಿ ಹಕ್ಕನ್ನು ನೀಡಬೇಕು. ನಾಗಮಂಗಲ ತಾಲೂಕಿನ ಶಿಕಾರಿಪುರ ಅಲೆಮಾರಿ ಆದಿವಾಸಿಗಳಿಗೆ ಅರಣ್ಯ ಇಲಾಖೆ ಮತ್ತು ಇತರ ಸರ್ಕಾರಿ ಇಲಾಖೆಗಳಿಂದ ಉಂಟಾಗುತ್ತಿರುವ ಭೂಮಿ ಹಕ್ಕಿನ ವಿಚಾರ ಇತ್ಯರ್ಥಪಡಿಸಬೇಕು. ಸರ್ಕಾರವೇ ಹೊರಡಿಸಿದ್ದ ಆದೇಶದಂತೆ ನಗರ ಪ್ರದೇಶಗಳ ಬಡವರಿಗೆ ಅಕ್ರಮ ಸಕ್ರಮದ ಅಡಿಯಲ್ಲಿ ಭೂಮಿ ಸೌಕರ್ಯ ಒದಗಿಸುವ ಸೌಲಭ್ಯದಡಿ 94ಸಿಸಿ ಅರ್ಜಿ ಸಲ್ಲಿಸಿರುವ ಜನರಿಗೆ ಅವರ ಭೂಮಿಯನ್ನು ಸಕ್ರಮಗೊಳಿಸಬೇಕು ಎಂದು ಒತ್ತಾಯಿಸಿ ಡಿ. 1ರಿಂದ ನಿರಂತರ ಪ್ರತಿಭಟನೆ ನಡೆಸಿದ್ದಾರೆ.

ಆರಂಭದಲ್ಲಿ ಎಂದಿನಂತೆ ನಿರ್ಲಕ್ಷ್ಯ ವಹಿಸಿದ ಜಿಲ್ಲಾಡಳಿತ, ಶ್ರಮಿಕ ನಗರ ನಿವಾಸಿಗಳ ಒಂದು ವಾರದ ನಿರಂತರ ಹೋರಾಟಕ್ಕೆ ಮಣಿದಿದೆ. ಭೂಮಿ ಸಮಸ್ಯೆಗಳ ಪರಿಹಾರಕ್ಕೆ ಉನ್ನತ ಹಂತದ ಸಮಿತಿ ರಚನೆ, ಭೂಮಂಜೂರಾತಿ ಸಮಿತಿಗಳ ರಚನೆ ಮಾಡುವುದಾಗಿ ಒಪ್ಪಿಕೊಂಡಿದೆ. ಮಾತ್ರವಲ್ಲದೆ, ಎಲ್ಲಾ ಹಕ್ಕೊತ್ತಾಯಗಳನ್ನೂ ಈಡೇರಿಸುವ ಭರವಸೆಯನ್ನೂ ನೀಡಿದೆ.

“ಇದು 20 ವರ್ಷಗಳ ಹೋರಾಟದ ಫಲ. ನಮ್ಮ ಹೋರಾಟದ ರೂಪ ಬದಲಾಗಬಹುದೇ ಹೊರತು, ಹೋರಾಟವು ನಿಲ್ಲುವುದಿಲ್ಲ. ಜಿಲ್ಲಾಡಳಿತವು ನಮ್ಮ ಹಕ್ಕೊತ್ತಾಯಗಳನ್ನು ಈಡೇರಿಸುವ ಭರವಸೆ ನೀಡಿದೆ. ಹೀಗಾಗಿ, ನಮ್ಮ ನಿರಂತರ ನಿರ್ಣಾಯಕ ಹೋರಾಟಕ್ಕೆ ತಾತ್ಕಾಲಿಕ ವಿರಾಮ ನೀಡಿದ್ದೇವೆ. ಆದಷ್ಟು ಬೇಗ ಜಿಲ್ಲಾಡಳಿತ ಈ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತವಾಗದಿದ್ದರೆ, ನಮ್ಮ ಹೋರಾಟ ಮುಂದುವರೆಯುತ್ತದೆ” ಎನ್ನುತ್ತಾರೆ ಶ್ರಮಿಕ ನಗರ ನಿವಾಸಿಗಳ ಒಕ್ಕೂಟದ ಸಂಚಾಲಕ ಸಿದ್ದರಾಜು.

“ದಮನಿತರು ಸಂಘಟಿತರಾದರೆ ಅವರ ದನಿಗೆ ಎಷ್ಟು ಗಟ್ಟಿತನ ಬರುತ್ತದೆಂಬುದಕ್ಕೆ ಶ್ರಮಿಕ ನಿವಾಸಿಗಳ ಸಂಘಟನೆ ಸಾಕ್ಷಿ. ಈ ಸಂಘಟನೆಯ ಎಲ್ಲಾ ಹೋರಾಟಗಳಲ್ಲೂ ನಾನು ಪಾಲ್ಗೊಂಡಿದ್ದೇನೆ. ಕಾನೂನು ಎಲ್ಲರಿಗೂ ಒಂದೇ. ನಾವು ಸಾಮಾನ್ಯರು, ಅದರ ಪ್ರಯೋಜನ ಪಡೆಯಬೇಕೆಂದರೆ ನಮ್ಮ ಸಂಘಟಿತ ಶಕ್ತಿಯಿಂದ ಮಾತ್ರ ಸಾಧ್ಯ ಎಂದು ಚಿಂತಕರೂ, ಹಿರಿಯ ವಕೀಲರೂ ಆದ ಬಿ.ಟಿ.ವಿಶ್ವನಾಥ್ ಹೇಳಿದ್ದಾರೆ.

“ದುಡಿಯುವ ಜನರ ಶಕ್ತಿಯನ್ನು ಅಧಿಕಾರಿಗಳು ಮತ್ತು ರಾಜಕಾರಣಿಗಳು ಕಡೆಗಣಿಸಬಾರದು. ಆ ರೀತಿ ಕಡೆಗಣಿಸಿದ ದೊಡ್ಡ ರಾಜಕಾರಣಿಗಳ ರಾಜಕೀಯ ಭವಿಷ್ಯವನ್ನೇ ಮೂಲೆಗುಂಪು ಮಾಡಿದ ಇತಿಹಾಸ ಈ
ಜನರಿಗಿದೆ” ಎನ್ನುತ್ತಾರೆ ಹೋರಾಟಗಾರ, ಪತ್ರಕರ್ತ ನಾಗೇಶ್.

ಜಿಲ್ಲಾಡಳಿತ ನೀಡಿರುವ ಭರವಸೆಗಳನ್ನು ಈಡೇರಿಸಿ, ಶ್ರಮಿಕ ನಗರ ನಿವಾಸಿಗಳ ಸಮಸ್ಯೆಗಳನ್ನು ನಿವಾರಿಸುವತ್ತ ಕಾರ್ಯಪ್ರವೃತ್ತರಾಗಬೇಕು ಎಂಬುದು ಈ ನಿರ್ಲಕ್ಷಿತ ಸಮುದಾಯಗಳ ಆಗ್ರಹ.


ಇದನ್ನೂ ಓದಿ: ರಾಜೇಶ್ವರಿ ತೇಜಸ್ವಿ ಸ್ಮರಣೆ; ಜೀವನ ಪ್ರೀತಿಯ ಹುಚ್ಚುತನವನ್ನು ಕಾಣಿಸಿದ ಲೇಖಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...