Homeಕರ್ನಾಟಕಮಂಡ್ಯ: ನೆತ್ತಿಯ ಮೇಲಿನ ಸೂರಿಗಾಗಿ, ಭೂಮಿಯ ಹಕ್ಕಿಗಾಗಿ ಶ್ರಮಿಕರ ಪಟ್ಟುಬಿಡದ ಹೋರಾಟ

ಮಂಡ್ಯ: ನೆತ್ತಿಯ ಮೇಲಿನ ಸೂರಿಗಾಗಿ, ಭೂಮಿಯ ಹಕ್ಕಿಗಾಗಿ ಶ್ರಮಿಕರ ಪಟ್ಟುಬಿಡದ ಹೋರಾಟ

- Advertisement -
- Advertisement -

ಸರ್ಕಾರದ್ದೇ ನೀತಿಗಳು, ಸರ್ಕಾರದ್ದೇ ಕಾಯ್ದೆಗಳು, ಸರ್ಕಾರದ್ದೇ ಅಧಿಕಾರಿಗಳು. ಜನಸಮುದಾಯಗಳ ಒಳಿತಿಗೆ ಇರಬೇಕಾದ ಕಾಯ್ದೆಗಳನ್ನು ಸರಿಯಾಗಿ ಅನುಷ್ಠಾನ ಮಾಡದಿರುವುದರಿಂದಲೋ, ಅಧಿಕಾರಿಗಳ ನಿರ್ಲಕ್ಷ್ಯದಿಂದಲೋ ಶಿಕ್ಷೆ-ತೊಂದರೆಗಳನ್ನು ಅನುಭವಿಸುವವರು ಬಡವರು, ದಲಿತರು, ಆದಿವಾಸಿಗಳು, ಹಿಂದುಳಿದ ಸಮುದಾಯಗಳು. ಒಂದೇ ಮಾತಿನಲ್ಲಿ ಹೇಳುವುದಾದರೆ ತಳಸಮುದಾಯಗಳು.

ಸರ್ಕಾರ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯ, ಬೇಜವಾಬ್ದಾರಿ ಧೋರಣೆಗಳಿಂದಾಗಿ ಮಂಡ್ಯ ನಗರವನ್ನು ಕಟ್ಟಿದ, ಸ್ಲಂ ಜನರು ಎಂದು ಕರೆಯಲ್ಪಡುವ ಶ್ರಮಿಕ ನಗರ ನಿವಾಸಿಗಳು ಹಲವು ವರ್ಷಗಳಿಂದ ಸಮಸ್ಯೆಯ ಸುಳಿಯಿಂದ ಹೊರಬರಲಾಗುತ್ತಿಲ್ಲ. ಮಂಡ್ಯ ನಗರದಲ್ಲಿ 24 ಶ್ರಮಿಕ ನಗರಗಳಿವೆ. ಅಲ್ಲಿ ವಾಸಿಸುವ ನಿವಾಸಿಗಳಿಗೆ ಜಿಲ್ಲಾಡಳಿತವು ಹತ್ತಾರು ಸಮಸ್ಯೆಗಳನ್ನು ಸೃಷ್ಟಿಸಿದೆ. ಎಲ್ಲಕ್ಕಿಂತ ಮುಖ್ಯವಾಗಿ ಅವರು ವಾಸಿಸುವ ಭೂಮಿ ಹಕ್ಕಿನ ಸಮಸ್ಯೆ, ಅವರ ಬದುಕನ್ನು ತಂತಿಯ ಮೇಲಿನ ನಡಿಗೆಯನ್ನಾಗಿಸಿದೆ. ಹೀಗಾಗಿ, ಈ ಜನರು ತಮ್ಮ ನೆಲೆಯನ್ನು ಭದ್ರಪಡಿಸಿಕೊಳ್ಳಲು ಶತಪ್ರಯತ್ನ ಮಾಡುತ್ತಲೇ ಇದ್ದಾರೆ. ಆದರೆ, ಆಡಳಿತದ ಸ್ಪಂದನೆಯಿಲ್ಲದೆ, ಅವರೆಲ್ಲರೂ ಭರವಸೆಯನ್ನೇ ಕಳೆದುಕೊಳ್ಳುವಂತಾಗಿದೆ.

ಮಂಡ್ಯದ ಕಾಳಿಕಾಂಬ ದೇವಾಲಯ ಪಕ್ಕದಲ್ಲಿರುವ ಕಾಳಿಕಾಂಬ ಸ್ಲಂ ಎಂದು ಕರೆಯಲ್ಪಡುವ ಶ್ರಮಿಕ ನಗರದ ಸಮಸ್ಯೆ 2006ರಿಂದಲೂ ಉಪೇಕ್ಷೆಗೆ ಒಳಗಾಗಿದೆ. ಅವರ ಬೇಡಿಕೆಗಳೆಲ್ಲವೂ ನೆನೆಗುದಿಗೆ ಬಿದ್ದಿದೆ. ಅಲ್ಲಿನ ಜನರು, ಜನಪರ ಸಂಘಟನೆಗಳ ನೆರವಿನಿಂದ ನ್ಯಾಯಾಂಗದ ಮೆಟ್ಟಿಲೇರಿ ತಮ್ಮ ಭೂಮಿಯನ್ನು ಉಳಿಸಿಕೊಳ್ಳುವ ಹೋರಾಟದಲ್ಲಿ ಗೆದ್ದು ಬಂದಿದ್ದಾರಾದರೂ, ಅಧಿಕಾರಿಗಳು ಮತ್ತು ಭೂಗಳ್ಳರ ಅಪವಿತ್ರ ಮೈತ್ರಿಯಿಂದಾಗಿ ಇನ್ನೂ ಅವರಿಗೆ ಆ ಭೂಮಿಯ ಹಕ್ಕು ಸಿಗದೇ ಮತ್ತೆ ಕೋರ್ಟ್ ಬಾಗಿಲು ತಟ್ಟುವಂತಾಗಿದೆ.

ಮಂಡ್ಯ ಆರ್‌ಟಿಓ ಮುಂಭಾಗದಲ್ಲಿರುವ ಕಾಳಪ್ಪ ಬಡಾವಣೆ ಪ್ರದೇಶದ ಜನರು 2007ರಿಂದ ಅತೀವ ತೊಂದರೆಯನ್ನು ಎದುರಿಸುತ್ತಲೇ ಇದ್ದಾರೆ. ಅವರನ್ನು 2007ರಲ್ಲಿ ಎತ್ತಂಗಡಿ ಮಾಡಿಸಲು ಯತ್ನಿಸಲಾಗಿತ್ತು. ನೆಲೆ ಕಳೆದುಕೊಂಡರೆ ಬದುಕು ಅತಂತ್ರ ಎಂದರಿತ ಅಲ್ಲಿನ ಜನರ ಸುದೀರ್ಘ ಹೋರಾಟದಿಂದ ಅಲ್ಲಿಯೇ ವಾಸಿಸಲು ಸಾಧ್ಯವಾಗಿದೆ. ಆದರೆ, ಇದುವರೆಗೂ ಅವರಿಗೆ ಭೂಮಿಯ ದಾಖಲೆಗಳ ಸಮಸ್ಯೆಗಳು, ಆಡಳಿತಾತ್ಮಕ ತೊಡಕುಗಳು ಕಾಡುತ್ತಲೇ ಇವೆ.

ಇನ್ನು, ಹೇಗೋ ಸೂರು ಕಟ್ಟಿಕೊಂಡು ತಮ್ಮ ಮನೆಗಳಲ್ಲಿ ವಾಸಿಸುತ್ತಿದ್ದ ಹಾಲಹಳ್ಳಿ ಶ್ರಮಿಕನಗರದ ಜನರಿಗೆ ಹೊಸ ಮನೆಯ ಆಸೆ ಹುಟ್ಟಸಿ ಮನೆ ಖಾಲಿ ಮಾಡಿಸಿ, ಅವರ ಮನೆಗಳನ್ನೆಲ್ಲಾ ಕೆಡವಲಾಗಿದೆ. ಐದಾರು ವರ್ಷಗಳಿಂದ ಹೊಸ ಮನೆಗಳ ನಿರ್ಮಾಣ ಕಾರ್ಯ ನಡೆಯುತ್ತಲೇ ಇದೆ. ಎಳೆದೂ ಎಳೆದೂ ಒಂದಷ್ಟು ಮನೆಗಳು ನಿರ್ಮಾಣಗೊಂಡಿವೆ. ಆದರೆ, ಈಗ ಹೊಸ ತಗಾದೆ ತೆಗೆದು, ತಮ್ಮ ಹಳೆಯ ಮನೆಗಳನ್ನು ಕೆಡವುದಕ್ಕೂ ಮೊದಲು ಆ ಮನೆಗಳಲ್ಲಿ ತಾವೇ ಇದ್ದೆವು ಎಂದು ದಾಖಲೆ ತೋರಿಸಿ ಸಾಬೀತುಪಡಿಸಬೇಕು, ಇಲ್ಲದಿದ್ದರೆ ಹೊಸ ಮನೆ ಇಲ್ಲ ಎಂಬ ಆಷಾಢಭೂತಿತದ ಕ್ರೌರ್ಯವನ್ನು ಜಿಲ್ಲಾಡಳಿತ ತೋರುತ್ತಿದೆ.

ಹೀಗೆ, ಇಂದಿರಾ ಬಡಾವಣೆ, ನ್ಯೂ ತಮಿಳು ಕಾಲೋನಿ, ಗಾಡಿಕಾರ್ಖಾನೆ, ಹೊಸಹಳ್ಳಿ ಗುರುಮಠ, ಸ್ಲಾಟರ್‌ಹೌಸ್ ಶ್ರಮಿಕನಗರಗಳು ಸೇರಿದಂತೆ ಒಂದೊಂದು ಶ್ರಮಿಕ ನಗರಗಳಲ್ಲಿ ವಾಸಿಸುತ್ತಿರುವ ನಿವಾಸಿಗಳಿಗೆ ಇನ್ನೊಂದು, ಮತ್ತೊಂದು-ಮಗದೊಂದು ಎಂಬಂತೆ ಸಮಸ್ಯೆಗಳು ಕಾಡುತ್ತಲೇ ಇವೆ.

ತಮ್ಮ ಸಮಸ್ಯೆಗಳನ್ನು ಬಗೆಹರಿಸಿ, ತಮ್ಮ ಹಕ್ಕುಪತ್ರಗಳನ್ನು ಒದಗಿಸಬೇಕು ಎಂದು ಜಿಲ್ಲಾಡಳಿತದ ಮುಂದೆ ಹಲವು ಪ್ರತಿಭಟನೆಗಳು, ಐದು ವರ್ಷಕ್ಕೊಮ್ಮೆ ಗೆದ್ದು ಬರುವ ಶಾಸಕರು, ಸಂದರಿಗೆ ನೂರಾರು ಮನವಿ ಪತ್ರಗಳನ್ನು ಕೊಟ್ಟು ಸುಸ್ತಾಗಿರುವ ಶ್ರಮಿಕ ನಿವಾಸಿಗಳು ಅಂತಿಮವಾಗಿ ಸುದೀರ್ಘ ಸಂಘರ್ಷಕ್ಕಿಳಿದಿದ್ದಾರೆ.

ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳ ಧೋರಣೆಯ ವಿರುದ್ದ ಕುದಿಯುತ್ತಿದ್ದ ಶ್ರಮಿಕ ನಿವಾಸಿಗಳಿಗೆ ಸ್ಫ್ಪೂರ್ತಿಯಾಗಿ ಕಂಡದ್ದು ದೆಹಲಿ ರೈತ ಹೋರಾಟ. ರೈತರ ಯಶಸ್ವಿ ಹೋರಾಟದ ಸ್ಫ್ಪೂರ್ತಿ ಪಡೆದ ಶ್ರಮಿಕ ನಿವಾಸಿಗಳು, ಮಂಡ್ಯ ಜಿಲ್ಲಾ ಶ್ರಮಿಕ ನಗರ ನಿವಾಸಿಗಳ ಒಕ್ಕೂಟದ ನೇತೃತ್ವದಲ್ಲಿ ’ಮಾಡು ಇಲ್ಲವೇ ಮಡಿ’ ಎಂಬ ಧ್ಯೇಯದೊಂದಿಗೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಒಂದು ವಾರ ನಿರ್ಣಾಯಕ ಹೋರಾಟಕ್ಕಿಳಿದಿದ್ದರು.

ವಿವಿಧ ಹಕ್ಕೊತ್ತಾಯಗಳನ್ನು ಜಿಲ್ಲಾಡಳಿತದ ಮುಂದಿಟ್ಟಿದ್ದ ಶ್ರಮಿಕ ನಿವಾಸಿಗಳು, ಮಂಡ್ಯ ನಗರದಲ್ಲಿರುವ ಶ್ರಮಿಕ ನಗರ ನಿವಾಸಿಗಳ ಸಮಸ್ಯೆಗಳನ್ನು ಬಗೆಹರಿಸಬೇಕು, ಮಾತ್ರವಲ್ಲದೆ ಜಿಲ್ಲೆಯ ಎಲ್ಲಾ ಸ್ಲಂ ಜನರಿಗೆ ನ್ಯಾಯ ಒದಗಿಸಬೇಕು. ಅದಕ್ಕಾಗಿ ಉನ್ನತ ಮಟ್ಟದ ಸಮಿತಿ ರಚಿಸಬೇಕು. ಮದ್ದೂರಿನ ಶ್ರಮಿಕ ನಗರ ನಿವಾಸಿಗಳಿಗೆ ವಿವೇಶನ ಒದಗಿಸಬೇಕು, ಶ್ರೀರಂಗಪಟ್ಟಣದ ಮೊಗರಳ್ಳಿ ಮಂಟಿಯಿಂದ ಚನ್ನಹಳ್ಳಿಗೆ ಏಕಾಏಕಿ ಸ್ಥಳಾಂತರಿಸಲ್ಪಟ್ಟ ಹಕ್ಕಿ-ಪಿಕ್ಕಿ ಸಮುದಾಯದ ಜನರಿಗೆ ಭೂಮಿ ಮತ್ತು ವಸತಿ ಹಕ್ಕನ್ನು ನೀಡಬೇಕು. ನಾಗಮಂಗಲ ತಾಲೂಕಿನ ಶಿಕಾರಿಪುರ ಅಲೆಮಾರಿ ಆದಿವಾಸಿಗಳಿಗೆ ಅರಣ್ಯ ಇಲಾಖೆ ಮತ್ತು ಇತರ ಸರ್ಕಾರಿ ಇಲಾಖೆಗಳಿಂದ ಉಂಟಾಗುತ್ತಿರುವ ಭೂಮಿ ಹಕ್ಕಿನ ವಿಚಾರ ಇತ್ಯರ್ಥಪಡಿಸಬೇಕು. ಸರ್ಕಾರವೇ ಹೊರಡಿಸಿದ್ದ ಆದೇಶದಂತೆ ನಗರ ಪ್ರದೇಶಗಳ ಬಡವರಿಗೆ ಅಕ್ರಮ ಸಕ್ರಮದ ಅಡಿಯಲ್ಲಿ ಭೂಮಿ ಸೌಕರ್ಯ ಒದಗಿಸುವ ಸೌಲಭ್ಯದಡಿ 94ಸಿಸಿ ಅರ್ಜಿ ಸಲ್ಲಿಸಿರುವ ಜನರಿಗೆ ಅವರ ಭೂಮಿಯನ್ನು ಸಕ್ರಮಗೊಳಿಸಬೇಕು ಎಂದು ಒತ್ತಾಯಿಸಿ ಡಿ. 1ರಿಂದ ನಿರಂತರ ಪ್ರತಿಭಟನೆ ನಡೆಸಿದ್ದಾರೆ.

ಆರಂಭದಲ್ಲಿ ಎಂದಿನಂತೆ ನಿರ್ಲಕ್ಷ್ಯ ವಹಿಸಿದ ಜಿಲ್ಲಾಡಳಿತ, ಶ್ರಮಿಕ ನಗರ ನಿವಾಸಿಗಳ ಒಂದು ವಾರದ ನಿರಂತರ ಹೋರಾಟಕ್ಕೆ ಮಣಿದಿದೆ. ಭೂಮಿ ಸಮಸ್ಯೆಗಳ ಪರಿಹಾರಕ್ಕೆ ಉನ್ನತ ಹಂತದ ಸಮಿತಿ ರಚನೆ, ಭೂಮಂಜೂರಾತಿ ಸಮಿತಿಗಳ ರಚನೆ ಮಾಡುವುದಾಗಿ ಒಪ್ಪಿಕೊಂಡಿದೆ. ಮಾತ್ರವಲ್ಲದೆ, ಎಲ್ಲಾ ಹಕ್ಕೊತ್ತಾಯಗಳನ್ನೂ ಈಡೇರಿಸುವ ಭರವಸೆಯನ್ನೂ ನೀಡಿದೆ.

“ಇದು 20 ವರ್ಷಗಳ ಹೋರಾಟದ ಫಲ. ನಮ್ಮ ಹೋರಾಟದ ರೂಪ ಬದಲಾಗಬಹುದೇ ಹೊರತು, ಹೋರಾಟವು ನಿಲ್ಲುವುದಿಲ್ಲ. ಜಿಲ್ಲಾಡಳಿತವು ನಮ್ಮ ಹಕ್ಕೊತ್ತಾಯಗಳನ್ನು ಈಡೇರಿಸುವ ಭರವಸೆ ನೀಡಿದೆ. ಹೀಗಾಗಿ, ನಮ್ಮ ನಿರಂತರ ನಿರ್ಣಾಯಕ ಹೋರಾಟಕ್ಕೆ ತಾತ್ಕಾಲಿಕ ವಿರಾಮ ನೀಡಿದ್ದೇವೆ. ಆದಷ್ಟು ಬೇಗ ಜಿಲ್ಲಾಡಳಿತ ಈ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತವಾಗದಿದ್ದರೆ, ನಮ್ಮ ಹೋರಾಟ ಮುಂದುವರೆಯುತ್ತದೆ” ಎನ್ನುತ್ತಾರೆ ಶ್ರಮಿಕ ನಗರ ನಿವಾಸಿಗಳ ಒಕ್ಕೂಟದ ಸಂಚಾಲಕ ಸಿದ್ದರಾಜು.

“ದಮನಿತರು ಸಂಘಟಿತರಾದರೆ ಅವರ ದನಿಗೆ ಎಷ್ಟು ಗಟ್ಟಿತನ ಬರುತ್ತದೆಂಬುದಕ್ಕೆ ಶ್ರಮಿಕ ನಿವಾಸಿಗಳ ಸಂಘಟನೆ ಸಾಕ್ಷಿ. ಈ ಸಂಘಟನೆಯ ಎಲ್ಲಾ ಹೋರಾಟಗಳಲ್ಲೂ ನಾನು ಪಾಲ್ಗೊಂಡಿದ್ದೇನೆ. ಕಾನೂನು ಎಲ್ಲರಿಗೂ ಒಂದೇ. ನಾವು ಸಾಮಾನ್ಯರು, ಅದರ ಪ್ರಯೋಜನ ಪಡೆಯಬೇಕೆಂದರೆ ನಮ್ಮ ಸಂಘಟಿತ ಶಕ್ತಿಯಿಂದ ಮಾತ್ರ ಸಾಧ್ಯ ಎಂದು ಚಿಂತಕರೂ, ಹಿರಿಯ ವಕೀಲರೂ ಆದ ಬಿ.ಟಿ.ವಿಶ್ವನಾಥ್ ಹೇಳಿದ್ದಾರೆ.

“ದುಡಿಯುವ ಜನರ ಶಕ್ತಿಯನ್ನು ಅಧಿಕಾರಿಗಳು ಮತ್ತು ರಾಜಕಾರಣಿಗಳು ಕಡೆಗಣಿಸಬಾರದು. ಆ ರೀತಿ ಕಡೆಗಣಿಸಿದ ದೊಡ್ಡ ರಾಜಕಾರಣಿಗಳ ರಾಜಕೀಯ ಭವಿಷ್ಯವನ್ನೇ ಮೂಲೆಗುಂಪು ಮಾಡಿದ ಇತಿಹಾಸ ಈ
ಜನರಿಗಿದೆ” ಎನ್ನುತ್ತಾರೆ ಹೋರಾಟಗಾರ, ಪತ್ರಕರ್ತ ನಾಗೇಶ್.

ಜಿಲ್ಲಾಡಳಿತ ನೀಡಿರುವ ಭರವಸೆಗಳನ್ನು ಈಡೇರಿಸಿ, ಶ್ರಮಿಕ ನಗರ ನಿವಾಸಿಗಳ ಸಮಸ್ಯೆಗಳನ್ನು ನಿವಾರಿಸುವತ್ತ ಕಾರ್ಯಪ್ರವೃತ್ತರಾಗಬೇಕು ಎಂಬುದು ಈ ನಿರ್ಲಕ್ಷಿತ ಸಮುದಾಯಗಳ ಆಗ್ರಹ.


ಇದನ್ನೂ ಓದಿ: ರಾಜೇಶ್ವರಿ ತೇಜಸ್ವಿ ಸ್ಮರಣೆ; ಜೀವನ ಪ್ರೀತಿಯ ಹುಚ್ಚುತನವನ್ನು ಕಾಣಿಸಿದ ಲೇಖಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...