Homeಕರ್ನಾಟಕಮಂಡ್ಯ: ನೆತ್ತಿಯ ಮೇಲಿನ ಸೂರಿಗಾಗಿ, ಭೂಮಿಯ ಹಕ್ಕಿಗಾಗಿ ಶ್ರಮಿಕರ ಪಟ್ಟುಬಿಡದ ಹೋರಾಟ

ಮಂಡ್ಯ: ನೆತ್ತಿಯ ಮೇಲಿನ ಸೂರಿಗಾಗಿ, ಭೂಮಿಯ ಹಕ್ಕಿಗಾಗಿ ಶ್ರಮಿಕರ ಪಟ್ಟುಬಿಡದ ಹೋರಾಟ

- Advertisement -
- Advertisement -

ಸರ್ಕಾರದ್ದೇ ನೀತಿಗಳು, ಸರ್ಕಾರದ್ದೇ ಕಾಯ್ದೆಗಳು, ಸರ್ಕಾರದ್ದೇ ಅಧಿಕಾರಿಗಳು. ಜನಸಮುದಾಯಗಳ ಒಳಿತಿಗೆ ಇರಬೇಕಾದ ಕಾಯ್ದೆಗಳನ್ನು ಸರಿಯಾಗಿ ಅನುಷ್ಠಾನ ಮಾಡದಿರುವುದರಿಂದಲೋ, ಅಧಿಕಾರಿಗಳ ನಿರ್ಲಕ್ಷ್ಯದಿಂದಲೋ ಶಿಕ್ಷೆ-ತೊಂದರೆಗಳನ್ನು ಅನುಭವಿಸುವವರು ಬಡವರು, ದಲಿತರು, ಆದಿವಾಸಿಗಳು, ಹಿಂದುಳಿದ ಸಮುದಾಯಗಳು. ಒಂದೇ ಮಾತಿನಲ್ಲಿ ಹೇಳುವುದಾದರೆ ತಳಸಮುದಾಯಗಳು.

ಸರ್ಕಾರ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯ, ಬೇಜವಾಬ್ದಾರಿ ಧೋರಣೆಗಳಿಂದಾಗಿ ಮಂಡ್ಯ ನಗರವನ್ನು ಕಟ್ಟಿದ, ಸ್ಲಂ ಜನರು ಎಂದು ಕರೆಯಲ್ಪಡುವ ಶ್ರಮಿಕ ನಗರ ನಿವಾಸಿಗಳು ಹಲವು ವರ್ಷಗಳಿಂದ ಸಮಸ್ಯೆಯ ಸುಳಿಯಿಂದ ಹೊರಬರಲಾಗುತ್ತಿಲ್ಲ. ಮಂಡ್ಯ ನಗರದಲ್ಲಿ 24 ಶ್ರಮಿಕ ನಗರಗಳಿವೆ. ಅಲ್ಲಿ ವಾಸಿಸುವ ನಿವಾಸಿಗಳಿಗೆ ಜಿಲ್ಲಾಡಳಿತವು ಹತ್ತಾರು ಸಮಸ್ಯೆಗಳನ್ನು ಸೃಷ್ಟಿಸಿದೆ. ಎಲ್ಲಕ್ಕಿಂತ ಮುಖ್ಯವಾಗಿ ಅವರು ವಾಸಿಸುವ ಭೂಮಿ ಹಕ್ಕಿನ ಸಮಸ್ಯೆ, ಅವರ ಬದುಕನ್ನು ತಂತಿಯ ಮೇಲಿನ ನಡಿಗೆಯನ್ನಾಗಿಸಿದೆ. ಹೀಗಾಗಿ, ಈ ಜನರು ತಮ್ಮ ನೆಲೆಯನ್ನು ಭದ್ರಪಡಿಸಿಕೊಳ್ಳಲು ಶತಪ್ರಯತ್ನ ಮಾಡುತ್ತಲೇ ಇದ್ದಾರೆ. ಆದರೆ, ಆಡಳಿತದ ಸ್ಪಂದನೆಯಿಲ್ಲದೆ, ಅವರೆಲ್ಲರೂ ಭರವಸೆಯನ್ನೇ ಕಳೆದುಕೊಳ್ಳುವಂತಾಗಿದೆ.

ಮಂಡ್ಯದ ಕಾಳಿಕಾಂಬ ದೇವಾಲಯ ಪಕ್ಕದಲ್ಲಿರುವ ಕಾಳಿಕಾಂಬ ಸ್ಲಂ ಎಂದು ಕರೆಯಲ್ಪಡುವ ಶ್ರಮಿಕ ನಗರದ ಸಮಸ್ಯೆ 2006ರಿಂದಲೂ ಉಪೇಕ್ಷೆಗೆ ಒಳಗಾಗಿದೆ. ಅವರ ಬೇಡಿಕೆಗಳೆಲ್ಲವೂ ನೆನೆಗುದಿಗೆ ಬಿದ್ದಿದೆ. ಅಲ್ಲಿನ ಜನರು, ಜನಪರ ಸಂಘಟನೆಗಳ ನೆರವಿನಿಂದ ನ್ಯಾಯಾಂಗದ ಮೆಟ್ಟಿಲೇರಿ ತಮ್ಮ ಭೂಮಿಯನ್ನು ಉಳಿಸಿಕೊಳ್ಳುವ ಹೋರಾಟದಲ್ಲಿ ಗೆದ್ದು ಬಂದಿದ್ದಾರಾದರೂ, ಅಧಿಕಾರಿಗಳು ಮತ್ತು ಭೂಗಳ್ಳರ ಅಪವಿತ್ರ ಮೈತ್ರಿಯಿಂದಾಗಿ ಇನ್ನೂ ಅವರಿಗೆ ಆ ಭೂಮಿಯ ಹಕ್ಕು ಸಿಗದೇ ಮತ್ತೆ ಕೋರ್ಟ್ ಬಾಗಿಲು ತಟ್ಟುವಂತಾಗಿದೆ.

ಮಂಡ್ಯ ಆರ್‌ಟಿಓ ಮುಂಭಾಗದಲ್ಲಿರುವ ಕಾಳಪ್ಪ ಬಡಾವಣೆ ಪ್ರದೇಶದ ಜನರು 2007ರಿಂದ ಅತೀವ ತೊಂದರೆಯನ್ನು ಎದುರಿಸುತ್ತಲೇ ಇದ್ದಾರೆ. ಅವರನ್ನು 2007ರಲ್ಲಿ ಎತ್ತಂಗಡಿ ಮಾಡಿಸಲು ಯತ್ನಿಸಲಾಗಿತ್ತು. ನೆಲೆ ಕಳೆದುಕೊಂಡರೆ ಬದುಕು ಅತಂತ್ರ ಎಂದರಿತ ಅಲ್ಲಿನ ಜನರ ಸುದೀರ್ಘ ಹೋರಾಟದಿಂದ ಅಲ್ಲಿಯೇ ವಾಸಿಸಲು ಸಾಧ್ಯವಾಗಿದೆ. ಆದರೆ, ಇದುವರೆಗೂ ಅವರಿಗೆ ಭೂಮಿಯ ದಾಖಲೆಗಳ ಸಮಸ್ಯೆಗಳು, ಆಡಳಿತಾತ್ಮಕ ತೊಡಕುಗಳು ಕಾಡುತ್ತಲೇ ಇವೆ.

ಇನ್ನು, ಹೇಗೋ ಸೂರು ಕಟ್ಟಿಕೊಂಡು ತಮ್ಮ ಮನೆಗಳಲ್ಲಿ ವಾಸಿಸುತ್ತಿದ್ದ ಹಾಲಹಳ್ಳಿ ಶ್ರಮಿಕನಗರದ ಜನರಿಗೆ ಹೊಸ ಮನೆಯ ಆಸೆ ಹುಟ್ಟಸಿ ಮನೆ ಖಾಲಿ ಮಾಡಿಸಿ, ಅವರ ಮನೆಗಳನ್ನೆಲ್ಲಾ ಕೆಡವಲಾಗಿದೆ. ಐದಾರು ವರ್ಷಗಳಿಂದ ಹೊಸ ಮನೆಗಳ ನಿರ್ಮಾಣ ಕಾರ್ಯ ನಡೆಯುತ್ತಲೇ ಇದೆ. ಎಳೆದೂ ಎಳೆದೂ ಒಂದಷ್ಟು ಮನೆಗಳು ನಿರ್ಮಾಣಗೊಂಡಿವೆ. ಆದರೆ, ಈಗ ಹೊಸ ತಗಾದೆ ತೆಗೆದು, ತಮ್ಮ ಹಳೆಯ ಮನೆಗಳನ್ನು ಕೆಡವುದಕ್ಕೂ ಮೊದಲು ಆ ಮನೆಗಳಲ್ಲಿ ತಾವೇ ಇದ್ದೆವು ಎಂದು ದಾಖಲೆ ತೋರಿಸಿ ಸಾಬೀತುಪಡಿಸಬೇಕು, ಇಲ್ಲದಿದ್ದರೆ ಹೊಸ ಮನೆ ಇಲ್ಲ ಎಂಬ ಆಷಾಢಭೂತಿತದ ಕ್ರೌರ್ಯವನ್ನು ಜಿಲ್ಲಾಡಳಿತ ತೋರುತ್ತಿದೆ.

ಹೀಗೆ, ಇಂದಿರಾ ಬಡಾವಣೆ, ನ್ಯೂ ತಮಿಳು ಕಾಲೋನಿ, ಗಾಡಿಕಾರ್ಖಾನೆ, ಹೊಸಹಳ್ಳಿ ಗುರುಮಠ, ಸ್ಲಾಟರ್‌ಹೌಸ್ ಶ್ರಮಿಕನಗರಗಳು ಸೇರಿದಂತೆ ಒಂದೊಂದು ಶ್ರಮಿಕ ನಗರಗಳಲ್ಲಿ ವಾಸಿಸುತ್ತಿರುವ ನಿವಾಸಿಗಳಿಗೆ ಇನ್ನೊಂದು, ಮತ್ತೊಂದು-ಮಗದೊಂದು ಎಂಬಂತೆ ಸಮಸ್ಯೆಗಳು ಕಾಡುತ್ತಲೇ ಇವೆ.

ತಮ್ಮ ಸಮಸ್ಯೆಗಳನ್ನು ಬಗೆಹರಿಸಿ, ತಮ್ಮ ಹಕ್ಕುಪತ್ರಗಳನ್ನು ಒದಗಿಸಬೇಕು ಎಂದು ಜಿಲ್ಲಾಡಳಿತದ ಮುಂದೆ ಹಲವು ಪ್ರತಿಭಟನೆಗಳು, ಐದು ವರ್ಷಕ್ಕೊಮ್ಮೆ ಗೆದ್ದು ಬರುವ ಶಾಸಕರು, ಸಂದರಿಗೆ ನೂರಾರು ಮನವಿ ಪತ್ರಗಳನ್ನು ಕೊಟ್ಟು ಸುಸ್ತಾಗಿರುವ ಶ್ರಮಿಕ ನಿವಾಸಿಗಳು ಅಂತಿಮವಾಗಿ ಸುದೀರ್ಘ ಸಂಘರ್ಷಕ್ಕಿಳಿದಿದ್ದಾರೆ.

ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳ ಧೋರಣೆಯ ವಿರುದ್ದ ಕುದಿಯುತ್ತಿದ್ದ ಶ್ರಮಿಕ ನಿವಾಸಿಗಳಿಗೆ ಸ್ಫ್ಪೂರ್ತಿಯಾಗಿ ಕಂಡದ್ದು ದೆಹಲಿ ರೈತ ಹೋರಾಟ. ರೈತರ ಯಶಸ್ವಿ ಹೋರಾಟದ ಸ್ಫ್ಪೂರ್ತಿ ಪಡೆದ ಶ್ರಮಿಕ ನಿವಾಸಿಗಳು, ಮಂಡ್ಯ ಜಿಲ್ಲಾ ಶ್ರಮಿಕ ನಗರ ನಿವಾಸಿಗಳ ಒಕ್ಕೂಟದ ನೇತೃತ್ವದಲ್ಲಿ ’ಮಾಡು ಇಲ್ಲವೇ ಮಡಿ’ ಎಂಬ ಧ್ಯೇಯದೊಂದಿಗೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಒಂದು ವಾರ ನಿರ್ಣಾಯಕ ಹೋರಾಟಕ್ಕಿಳಿದಿದ್ದರು.

ವಿವಿಧ ಹಕ್ಕೊತ್ತಾಯಗಳನ್ನು ಜಿಲ್ಲಾಡಳಿತದ ಮುಂದಿಟ್ಟಿದ್ದ ಶ್ರಮಿಕ ನಿವಾಸಿಗಳು, ಮಂಡ್ಯ ನಗರದಲ್ಲಿರುವ ಶ್ರಮಿಕ ನಗರ ನಿವಾಸಿಗಳ ಸಮಸ್ಯೆಗಳನ್ನು ಬಗೆಹರಿಸಬೇಕು, ಮಾತ್ರವಲ್ಲದೆ ಜಿಲ್ಲೆಯ ಎಲ್ಲಾ ಸ್ಲಂ ಜನರಿಗೆ ನ್ಯಾಯ ಒದಗಿಸಬೇಕು. ಅದಕ್ಕಾಗಿ ಉನ್ನತ ಮಟ್ಟದ ಸಮಿತಿ ರಚಿಸಬೇಕು. ಮದ್ದೂರಿನ ಶ್ರಮಿಕ ನಗರ ನಿವಾಸಿಗಳಿಗೆ ವಿವೇಶನ ಒದಗಿಸಬೇಕು, ಶ್ರೀರಂಗಪಟ್ಟಣದ ಮೊಗರಳ್ಳಿ ಮಂಟಿಯಿಂದ ಚನ್ನಹಳ್ಳಿಗೆ ಏಕಾಏಕಿ ಸ್ಥಳಾಂತರಿಸಲ್ಪಟ್ಟ ಹಕ್ಕಿ-ಪಿಕ್ಕಿ ಸಮುದಾಯದ ಜನರಿಗೆ ಭೂಮಿ ಮತ್ತು ವಸತಿ ಹಕ್ಕನ್ನು ನೀಡಬೇಕು. ನಾಗಮಂಗಲ ತಾಲೂಕಿನ ಶಿಕಾರಿಪುರ ಅಲೆಮಾರಿ ಆದಿವಾಸಿಗಳಿಗೆ ಅರಣ್ಯ ಇಲಾಖೆ ಮತ್ತು ಇತರ ಸರ್ಕಾರಿ ಇಲಾಖೆಗಳಿಂದ ಉಂಟಾಗುತ್ತಿರುವ ಭೂಮಿ ಹಕ್ಕಿನ ವಿಚಾರ ಇತ್ಯರ್ಥಪಡಿಸಬೇಕು. ಸರ್ಕಾರವೇ ಹೊರಡಿಸಿದ್ದ ಆದೇಶದಂತೆ ನಗರ ಪ್ರದೇಶಗಳ ಬಡವರಿಗೆ ಅಕ್ರಮ ಸಕ್ರಮದ ಅಡಿಯಲ್ಲಿ ಭೂಮಿ ಸೌಕರ್ಯ ಒದಗಿಸುವ ಸೌಲಭ್ಯದಡಿ 94ಸಿಸಿ ಅರ್ಜಿ ಸಲ್ಲಿಸಿರುವ ಜನರಿಗೆ ಅವರ ಭೂಮಿಯನ್ನು ಸಕ್ರಮಗೊಳಿಸಬೇಕು ಎಂದು ಒತ್ತಾಯಿಸಿ ಡಿ. 1ರಿಂದ ನಿರಂತರ ಪ್ರತಿಭಟನೆ ನಡೆಸಿದ್ದಾರೆ.

ಆರಂಭದಲ್ಲಿ ಎಂದಿನಂತೆ ನಿರ್ಲಕ್ಷ್ಯ ವಹಿಸಿದ ಜಿಲ್ಲಾಡಳಿತ, ಶ್ರಮಿಕ ನಗರ ನಿವಾಸಿಗಳ ಒಂದು ವಾರದ ನಿರಂತರ ಹೋರಾಟಕ್ಕೆ ಮಣಿದಿದೆ. ಭೂಮಿ ಸಮಸ್ಯೆಗಳ ಪರಿಹಾರಕ್ಕೆ ಉನ್ನತ ಹಂತದ ಸಮಿತಿ ರಚನೆ, ಭೂಮಂಜೂರಾತಿ ಸಮಿತಿಗಳ ರಚನೆ ಮಾಡುವುದಾಗಿ ಒಪ್ಪಿಕೊಂಡಿದೆ. ಮಾತ್ರವಲ್ಲದೆ, ಎಲ್ಲಾ ಹಕ್ಕೊತ್ತಾಯಗಳನ್ನೂ ಈಡೇರಿಸುವ ಭರವಸೆಯನ್ನೂ ನೀಡಿದೆ.

“ಇದು 20 ವರ್ಷಗಳ ಹೋರಾಟದ ಫಲ. ನಮ್ಮ ಹೋರಾಟದ ರೂಪ ಬದಲಾಗಬಹುದೇ ಹೊರತು, ಹೋರಾಟವು ನಿಲ್ಲುವುದಿಲ್ಲ. ಜಿಲ್ಲಾಡಳಿತವು ನಮ್ಮ ಹಕ್ಕೊತ್ತಾಯಗಳನ್ನು ಈಡೇರಿಸುವ ಭರವಸೆ ನೀಡಿದೆ. ಹೀಗಾಗಿ, ನಮ್ಮ ನಿರಂತರ ನಿರ್ಣಾಯಕ ಹೋರಾಟಕ್ಕೆ ತಾತ್ಕಾಲಿಕ ವಿರಾಮ ನೀಡಿದ್ದೇವೆ. ಆದಷ್ಟು ಬೇಗ ಜಿಲ್ಲಾಡಳಿತ ಈ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತವಾಗದಿದ್ದರೆ, ನಮ್ಮ ಹೋರಾಟ ಮುಂದುವರೆಯುತ್ತದೆ” ಎನ್ನುತ್ತಾರೆ ಶ್ರಮಿಕ ನಗರ ನಿವಾಸಿಗಳ ಒಕ್ಕೂಟದ ಸಂಚಾಲಕ ಸಿದ್ದರಾಜು.

“ದಮನಿತರು ಸಂಘಟಿತರಾದರೆ ಅವರ ದನಿಗೆ ಎಷ್ಟು ಗಟ್ಟಿತನ ಬರುತ್ತದೆಂಬುದಕ್ಕೆ ಶ್ರಮಿಕ ನಿವಾಸಿಗಳ ಸಂಘಟನೆ ಸಾಕ್ಷಿ. ಈ ಸಂಘಟನೆಯ ಎಲ್ಲಾ ಹೋರಾಟಗಳಲ್ಲೂ ನಾನು ಪಾಲ್ಗೊಂಡಿದ್ದೇನೆ. ಕಾನೂನು ಎಲ್ಲರಿಗೂ ಒಂದೇ. ನಾವು ಸಾಮಾನ್ಯರು, ಅದರ ಪ್ರಯೋಜನ ಪಡೆಯಬೇಕೆಂದರೆ ನಮ್ಮ ಸಂಘಟಿತ ಶಕ್ತಿಯಿಂದ ಮಾತ್ರ ಸಾಧ್ಯ ಎಂದು ಚಿಂತಕರೂ, ಹಿರಿಯ ವಕೀಲರೂ ಆದ ಬಿ.ಟಿ.ವಿಶ್ವನಾಥ್ ಹೇಳಿದ್ದಾರೆ.

“ದುಡಿಯುವ ಜನರ ಶಕ್ತಿಯನ್ನು ಅಧಿಕಾರಿಗಳು ಮತ್ತು ರಾಜಕಾರಣಿಗಳು ಕಡೆಗಣಿಸಬಾರದು. ಆ ರೀತಿ ಕಡೆಗಣಿಸಿದ ದೊಡ್ಡ ರಾಜಕಾರಣಿಗಳ ರಾಜಕೀಯ ಭವಿಷ್ಯವನ್ನೇ ಮೂಲೆಗುಂಪು ಮಾಡಿದ ಇತಿಹಾಸ ಈ
ಜನರಿಗಿದೆ” ಎನ್ನುತ್ತಾರೆ ಹೋರಾಟಗಾರ, ಪತ್ರಕರ್ತ ನಾಗೇಶ್.

ಜಿಲ್ಲಾಡಳಿತ ನೀಡಿರುವ ಭರವಸೆಗಳನ್ನು ಈಡೇರಿಸಿ, ಶ್ರಮಿಕ ನಗರ ನಿವಾಸಿಗಳ ಸಮಸ್ಯೆಗಳನ್ನು ನಿವಾರಿಸುವತ್ತ ಕಾರ್ಯಪ್ರವೃತ್ತರಾಗಬೇಕು ಎಂಬುದು ಈ ನಿರ್ಲಕ್ಷಿತ ಸಮುದಾಯಗಳ ಆಗ್ರಹ.


ಇದನ್ನೂ ಓದಿ: ರಾಜೇಶ್ವರಿ ತೇಜಸ್ವಿ ಸ್ಮರಣೆ; ಜೀವನ ಪ್ರೀತಿಯ ಹುಚ್ಚುತನವನ್ನು ಕಾಣಿಸಿದ ಲೇಖಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...