Homeಕರ್ನಾಟಕಮಂಡ್ಯ: ನೆತ್ತಿಯ ಮೇಲಿನ ಸೂರಿಗಾಗಿ, ಭೂಮಿಯ ಹಕ್ಕಿಗಾಗಿ ಶ್ರಮಿಕರ ಪಟ್ಟುಬಿಡದ ಹೋರಾಟ

ಮಂಡ್ಯ: ನೆತ್ತಿಯ ಮೇಲಿನ ಸೂರಿಗಾಗಿ, ಭೂಮಿಯ ಹಕ್ಕಿಗಾಗಿ ಶ್ರಮಿಕರ ಪಟ್ಟುಬಿಡದ ಹೋರಾಟ

- Advertisement -
- Advertisement -

ಸರ್ಕಾರದ್ದೇ ನೀತಿಗಳು, ಸರ್ಕಾರದ್ದೇ ಕಾಯ್ದೆಗಳು, ಸರ್ಕಾರದ್ದೇ ಅಧಿಕಾರಿಗಳು. ಜನಸಮುದಾಯಗಳ ಒಳಿತಿಗೆ ಇರಬೇಕಾದ ಕಾಯ್ದೆಗಳನ್ನು ಸರಿಯಾಗಿ ಅನುಷ್ಠಾನ ಮಾಡದಿರುವುದರಿಂದಲೋ, ಅಧಿಕಾರಿಗಳ ನಿರ್ಲಕ್ಷ್ಯದಿಂದಲೋ ಶಿಕ್ಷೆ-ತೊಂದರೆಗಳನ್ನು ಅನುಭವಿಸುವವರು ಬಡವರು, ದಲಿತರು, ಆದಿವಾಸಿಗಳು, ಹಿಂದುಳಿದ ಸಮುದಾಯಗಳು. ಒಂದೇ ಮಾತಿನಲ್ಲಿ ಹೇಳುವುದಾದರೆ ತಳಸಮುದಾಯಗಳು.

ಸರ್ಕಾರ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯ, ಬೇಜವಾಬ್ದಾರಿ ಧೋರಣೆಗಳಿಂದಾಗಿ ಮಂಡ್ಯ ನಗರವನ್ನು ಕಟ್ಟಿದ, ಸ್ಲಂ ಜನರು ಎಂದು ಕರೆಯಲ್ಪಡುವ ಶ್ರಮಿಕ ನಗರ ನಿವಾಸಿಗಳು ಹಲವು ವರ್ಷಗಳಿಂದ ಸಮಸ್ಯೆಯ ಸುಳಿಯಿಂದ ಹೊರಬರಲಾಗುತ್ತಿಲ್ಲ. ಮಂಡ್ಯ ನಗರದಲ್ಲಿ 24 ಶ್ರಮಿಕ ನಗರಗಳಿವೆ. ಅಲ್ಲಿ ವಾಸಿಸುವ ನಿವಾಸಿಗಳಿಗೆ ಜಿಲ್ಲಾಡಳಿತವು ಹತ್ತಾರು ಸಮಸ್ಯೆಗಳನ್ನು ಸೃಷ್ಟಿಸಿದೆ. ಎಲ್ಲಕ್ಕಿಂತ ಮುಖ್ಯವಾಗಿ ಅವರು ವಾಸಿಸುವ ಭೂಮಿ ಹಕ್ಕಿನ ಸಮಸ್ಯೆ, ಅವರ ಬದುಕನ್ನು ತಂತಿಯ ಮೇಲಿನ ನಡಿಗೆಯನ್ನಾಗಿಸಿದೆ. ಹೀಗಾಗಿ, ಈ ಜನರು ತಮ್ಮ ನೆಲೆಯನ್ನು ಭದ್ರಪಡಿಸಿಕೊಳ್ಳಲು ಶತಪ್ರಯತ್ನ ಮಾಡುತ್ತಲೇ ಇದ್ದಾರೆ. ಆದರೆ, ಆಡಳಿತದ ಸ್ಪಂದನೆಯಿಲ್ಲದೆ, ಅವರೆಲ್ಲರೂ ಭರವಸೆಯನ್ನೇ ಕಳೆದುಕೊಳ್ಳುವಂತಾಗಿದೆ.

ಮಂಡ್ಯದ ಕಾಳಿಕಾಂಬ ದೇವಾಲಯ ಪಕ್ಕದಲ್ಲಿರುವ ಕಾಳಿಕಾಂಬ ಸ್ಲಂ ಎಂದು ಕರೆಯಲ್ಪಡುವ ಶ್ರಮಿಕ ನಗರದ ಸಮಸ್ಯೆ 2006ರಿಂದಲೂ ಉಪೇಕ್ಷೆಗೆ ಒಳಗಾಗಿದೆ. ಅವರ ಬೇಡಿಕೆಗಳೆಲ್ಲವೂ ನೆನೆಗುದಿಗೆ ಬಿದ್ದಿದೆ. ಅಲ್ಲಿನ ಜನರು, ಜನಪರ ಸಂಘಟನೆಗಳ ನೆರವಿನಿಂದ ನ್ಯಾಯಾಂಗದ ಮೆಟ್ಟಿಲೇರಿ ತಮ್ಮ ಭೂಮಿಯನ್ನು ಉಳಿಸಿಕೊಳ್ಳುವ ಹೋರಾಟದಲ್ಲಿ ಗೆದ್ದು ಬಂದಿದ್ದಾರಾದರೂ, ಅಧಿಕಾರಿಗಳು ಮತ್ತು ಭೂಗಳ್ಳರ ಅಪವಿತ್ರ ಮೈತ್ರಿಯಿಂದಾಗಿ ಇನ್ನೂ ಅವರಿಗೆ ಆ ಭೂಮಿಯ ಹಕ್ಕು ಸಿಗದೇ ಮತ್ತೆ ಕೋರ್ಟ್ ಬಾಗಿಲು ತಟ್ಟುವಂತಾಗಿದೆ.

ಮಂಡ್ಯ ಆರ್‌ಟಿಓ ಮುಂಭಾಗದಲ್ಲಿರುವ ಕಾಳಪ್ಪ ಬಡಾವಣೆ ಪ್ರದೇಶದ ಜನರು 2007ರಿಂದ ಅತೀವ ತೊಂದರೆಯನ್ನು ಎದುರಿಸುತ್ತಲೇ ಇದ್ದಾರೆ. ಅವರನ್ನು 2007ರಲ್ಲಿ ಎತ್ತಂಗಡಿ ಮಾಡಿಸಲು ಯತ್ನಿಸಲಾಗಿತ್ತು. ನೆಲೆ ಕಳೆದುಕೊಂಡರೆ ಬದುಕು ಅತಂತ್ರ ಎಂದರಿತ ಅಲ್ಲಿನ ಜನರ ಸುದೀರ್ಘ ಹೋರಾಟದಿಂದ ಅಲ್ಲಿಯೇ ವಾಸಿಸಲು ಸಾಧ್ಯವಾಗಿದೆ. ಆದರೆ, ಇದುವರೆಗೂ ಅವರಿಗೆ ಭೂಮಿಯ ದಾಖಲೆಗಳ ಸಮಸ್ಯೆಗಳು, ಆಡಳಿತಾತ್ಮಕ ತೊಡಕುಗಳು ಕಾಡುತ್ತಲೇ ಇವೆ.

ಇನ್ನು, ಹೇಗೋ ಸೂರು ಕಟ್ಟಿಕೊಂಡು ತಮ್ಮ ಮನೆಗಳಲ್ಲಿ ವಾಸಿಸುತ್ತಿದ್ದ ಹಾಲಹಳ್ಳಿ ಶ್ರಮಿಕನಗರದ ಜನರಿಗೆ ಹೊಸ ಮನೆಯ ಆಸೆ ಹುಟ್ಟಸಿ ಮನೆ ಖಾಲಿ ಮಾಡಿಸಿ, ಅವರ ಮನೆಗಳನ್ನೆಲ್ಲಾ ಕೆಡವಲಾಗಿದೆ. ಐದಾರು ವರ್ಷಗಳಿಂದ ಹೊಸ ಮನೆಗಳ ನಿರ್ಮಾಣ ಕಾರ್ಯ ನಡೆಯುತ್ತಲೇ ಇದೆ. ಎಳೆದೂ ಎಳೆದೂ ಒಂದಷ್ಟು ಮನೆಗಳು ನಿರ್ಮಾಣಗೊಂಡಿವೆ. ಆದರೆ, ಈಗ ಹೊಸ ತಗಾದೆ ತೆಗೆದು, ತಮ್ಮ ಹಳೆಯ ಮನೆಗಳನ್ನು ಕೆಡವುದಕ್ಕೂ ಮೊದಲು ಆ ಮನೆಗಳಲ್ಲಿ ತಾವೇ ಇದ್ದೆವು ಎಂದು ದಾಖಲೆ ತೋರಿಸಿ ಸಾಬೀತುಪಡಿಸಬೇಕು, ಇಲ್ಲದಿದ್ದರೆ ಹೊಸ ಮನೆ ಇಲ್ಲ ಎಂಬ ಆಷಾಢಭೂತಿತದ ಕ್ರೌರ್ಯವನ್ನು ಜಿಲ್ಲಾಡಳಿತ ತೋರುತ್ತಿದೆ.

ಹೀಗೆ, ಇಂದಿರಾ ಬಡಾವಣೆ, ನ್ಯೂ ತಮಿಳು ಕಾಲೋನಿ, ಗಾಡಿಕಾರ್ಖಾನೆ, ಹೊಸಹಳ್ಳಿ ಗುರುಮಠ, ಸ್ಲಾಟರ್‌ಹೌಸ್ ಶ್ರಮಿಕನಗರಗಳು ಸೇರಿದಂತೆ ಒಂದೊಂದು ಶ್ರಮಿಕ ನಗರಗಳಲ್ಲಿ ವಾಸಿಸುತ್ತಿರುವ ನಿವಾಸಿಗಳಿಗೆ ಇನ್ನೊಂದು, ಮತ್ತೊಂದು-ಮಗದೊಂದು ಎಂಬಂತೆ ಸಮಸ್ಯೆಗಳು ಕಾಡುತ್ತಲೇ ಇವೆ.

ತಮ್ಮ ಸಮಸ್ಯೆಗಳನ್ನು ಬಗೆಹರಿಸಿ, ತಮ್ಮ ಹಕ್ಕುಪತ್ರಗಳನ್ನು ಒದಗಿಸಬೇಕು ಎಂದು ಜಿಲ್ಲಾಡಳಿತದ ಮುಂದೆ ಹಲವು ಪ್ರತಿಭಟನೆಗಳು, ಐದು ವರ್ಷಕ್ಕೊಮ್ಮೆ ಗೆದ್ದು ಬರುವ ಶಾಸಕರು, ಸಂದರಿಗೆ ನೂರಾರು ಮನವಿ ಪತ್ರಗಳನ್ನು ಕೊಟ್ಟು ಸುಸ್ತಾಗಿರುವ ಶ್ರಮಿಕ ನಿವಾಸಿಗಳು ಅಂತಿಮವಾಗಿ ಸುದೀರ್ಘ ಸಂಘರ್ಷಕ್ಕಿಳಿದಿದ್ದಾರೆ.

ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳ ಧೋರಣೆಯ ವಿರುದ್ದ ಕುದಿಯುತ್ತಿದ್ದ ಶ್ರಮಿಕ ನಿವಾಸಿಗಳಿಗೆ ಸ್ಫ್ಪೂರ್ತಿಯಾಗಿ ಕಂಡದ್ದು ದೆಹಲಿ ರೈತ ಹೋರಾಟ. ರೈತರ ಯಶಸ್ವಿ ಹೋರಾಟದ ಸ್ಫ್ಪೂರ್ತಿ ಪಡೆದ ಶ್ರಮಿಕ ನಿವಾಸಿಗಳು, ಮಂಡ್ಯ ಜಿಲ್ಲಾ ಶ್ರಮಿಕ ನಗರ ನಿವಾಸಿಗಳ ಒಕ್ಕೂಟದ ನೇತೃತ್ವದಲ್ಲಿ ’ಮಾಡು ಇಲ್ಲವೇ ಮಡಿ’ ಎಂಬ ಧ್ಯೇಯದೊಂದಿಗೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಒಂದು ವಾರ ನಿರ್ಣಾಯಕ ಹೋರಾಟಕ್ಕಿಳಿದಿದ್ದರು.

ವಿವಿಧ ಹಕ್ಕೊತ್ತಾಯಗಳನ್ನು ಜಿಲ್ಲಾಡಳಿತದ ಮುಂದಿಟ್ಟಿದ್ದ ಶ್ರಮಿಕ ನಿವಾಸಿಗಳು, ಮಂಡ್ಯ ನಗರದಲ್ಲಿರುವ ಶ್ರಮಿಕ ನಗರ ನಿವಾಸಿಗಳ ಸಮಸ್ಯೆಗಳನ್ನು ಬಗೆಹರಿಸಬೇಕು, ಮಾತ್ರವಲ್ಲದೆ ಜಿಲ್ಲೆಯ ಎಲ್ಲಾ ಸ್ಲಂ ಜನರಿಗೆ ನ್ಯಾಯ ಒದಗಿಸಬೇಕು. ಅದಕ್ಕಾಗಿ ಉನ್ನತ ಮಟ್ಟದ ಸಮಿತಿ ರಚಿಸಬೇಕು. ಮದ್ದೂರಿನ ಶ್ರಮಿಕ ನಗರ ನಿವಾಸಿಗಳಿಗೆ ವಿವೇಶನ ಒದಗಿಸಬೇಕು, ಶ್ರೀರಂಗಪಟ್ಟಣದ ಮೊಗರಳ್ಳಿ ಮಂಟಿಯಿಂದ ಚನ್ನಹಳ್ಳಿಗೆ ಏಕಾಏಕಿ ಸ್ಥಳಾಂತರಿಸಲ್ಪಟ್ಟ ಹಕ್ಕಿ-ಪಿಕ್ಕಿ ಸಮುದಾಯದ ಜನರಿಗೆ ಭೂಮಿ ಮತ್ತು ವಸತಿ ಹಕ್ಕನ್ನು ನೀಡಬೇಕು. ನಾಗಮಂಗಲ ತಾಲೂಕಿನ ಶಿಕಾರಿಪುರ ಅಲೆಮಾರಿ ಆದಿವಾಸಿಗಳಿಗೆ ಅರಣ್ಯ ಇಲಾಖೆ ಮತ್ತು ಇತರ ಸರ್ಕಾರಿ ಇಲಾಖೆಗಳಿಂದ ಉಂಟಾಗುತ್ತಿರುವ ಭೂಮಿ ಹಕ್ಕಿನ ವಿಚಾರ ಇತ್ಯರ್ಥಪಡಿಸಬೇಕು. ಸರ್ಕಾರವೇ ಹೊರಡಿಸಿದ್ದ ಆದೇಶದಂತೆ ನಗರ ಪ್ರದೇಶಗಳ ಬಡವರಿಗೆ ಅಕ್ರಮ ಸಕ್ರಮದ ಅಡಿಯಲ್ಲಿ ಭೂಮಿ ಸೌಕರ್ಯ ಒದಗಿಸುವ ಸೌಲಭ್ಯದಡಿ 94ಸಿಸಿ ಅರ್ಜಿ ಸಲ್ಲಿಸಿರುವ ಜನರಿಗೆ ಅವರ ಭೂಮಿಯನ್ನು ಸಕ್ರಮಗೊಳಿಸಬೇಕು ಎಂದು ಒತ್ತಾಯಿಸಿ ಡಿ. 1ರಿಂದ ನಿರಂತರ ಪ್ರತಿಭಟನೆ ನಡೆಸಿದ್ದಾರೆ.

ಆರಂಭದಲ್ಲಿ ಎಂದಿನಂತೆ ನಿರ್ಲಕ್ಷ್ಯ ವಹಿಸಿದ ಜಿಲ್ಲಾಡಳಿತ, ಶ್ರಮಿಕ ನಗರ ನಿವಾಸಿಗಳ ಒಂದು ವಾರದ ನಿರಂತರ ಹೋರಾಟಕ್ಕೆ ಮಣಿದಿದೆ. ಭೂಮಿ ಸಮಸ್ಯೆಗಳ ಪರಿಹಾರಕ್ಕೆ ಉನ್ನತ ಹಂತದ ಸಮಿತಿ ರಚನೆ, ಭೂಮಂಜೂರಾತಿ ಸಮಿತಿಗಳ ರಚನೆ ಮಾಡುವುದಾಗಿ ಒಪ್ಪಿಕೊಂಡಿದೆ. ಮಾತ್ರವಲ್ಲದೆ, ಎಲ್ಲಾ ಹಕ್ಕೊತ್ತಾಯಗಳನ್ನೂ ಈಡೇರಿಸುವ ಭರವಸೆಯನ್ನೂ ನೀಡಿದೆ.

“ಇದು 20 ವರ್ಷಗಳ ಹೋರಾಟದ ಫಲ. ನಮ್ಮ ಹೋರಾಟದ ರೂಪ ಬದಲಾಗಬಹುದೇ ಹೊರತು, ಹೋರಾಟವು ನಿಲ್ಲುವುದಿಲ್ಲ. ಜಿಲ್ಲಾಡಳಿತವು ನಮ್ಮ ಹಕ್ಕೊತ್ತಾಯಗಳನ್ನು ಈಡೇರಿಸುವ ಭರವಸೆ ನೀಡಿದೆ. ಹೀಗಾಗಿ, ನಮ್ಮ ನಿರಂತರ ನಿರ್ಣಾಯಕ ಹೋರಾಟಕ್ಕೆ ತಾತ್ಕಾಲಿಕ ವಿರಾಮ ನೀಡಿದ್ದೇವೆ. ಆದಷ್ಟು ಬೇಗ ಜಿಲ್ಲಾಡಳಿತ ಈ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತವಾಗದಿದ್ದರೆ, ನಮ್ಮ ಹೋರಾಟ ಮುಂದುವರೆಯುತ್ತದೆ” ಎನ್ನುತ್ತಾರೆ ಶ್ರಮಿಕ ನಗರ ನಿವಾಸಿಗಳ ಒಕ್ಕೂಟದ ಸಂಚಾಲಕ ಸಿದ್ದರಾಜು.

“ದಮನಿತರು ಸಂಘಟಿತರಾದರೆ ಅವರ ದನಿಗೆ ಎಷ್ಟು ಗಟ್ಟಿತನ ಬರುತ್ತದೆಂಬುದಕ್ಕೆ ಶ್ರಮಿಕ ನಿವಾಸಿಗಳ ಸಂಘಟನೆ ಸಾಕ್ಷಿ. ಈ ಸಂಘಟನೆಯ ಎಲ್ಲಾ ಹೋರಾಟಗಳಲ್ಲೂ ನಾನು ಪಾಲ್ಗೊಂಡಿದ್ದೇನೆ. ಕಾನೂನು ಎಲ್ಲರಿಗೂ ಒಂದೇ. ನಾವು ಸಾಮಾನ್ಯರು, ಅದರ ಪ್ರಯೋಜನ ಪಡೆಯಬೇಕೆಂದರೆ ನಮ್ಮ ಸಂಘಟಿತ ಶಕ್ತಿಯಿಂದ ಮಾತ್ರ ಸಾಧ್ಯ ಎಂದು ಚಿಂತಕರೂ, ಹಿರಿಯ ವಕೀಲರೂ ಆದ ಬಿ.ಟಿ.ವಿಶ್ವನಾಥ್ ಹೇಳಿದ್ದಾರೆ.

“ದುಡಿಯುವ ಜನರ ಶಕ್ತಿಯನ್ನು ಅಧಿಕಾರಿಗಳು ಮತ್ತು ರಾಜಕಾರಣಿಗಳು ಕಡೆಗಣಿಸಬಾರದು. ಆ ರೀತಿ ಕಡೆಗಣಿಸಿದ ದೊಡ್ಡ ರಾಜಕಾರಣಿಗಳ ರಾಜಕೀಯ ಭವಿಷ್ಯವನ್ನೇ ಮೂಲೆಗುಂಪು ಮಾಡಿದ ಇತಿಹಾಸ ಈ
ಜನರಿಗಿದೆ” ಎನ್ನುತ್ತಾರೆ ಹೋರಾಟಗಾರ, ಪತ್ರಕರ್ತ ನಾಗೇಶ್.

ಜಿಲ್ಲಾಡಳಿತ ನೀಡಿರುವ ಭರವಸೆಗಳನ್ನು ಈಡೇರಿಸಿ, ಶ್ರಮಿಕ ನಗರ ನಿವಾಸಿಗಳ ಸಮಸ್ಯೆಗಳನ್ನು ನಿವಾರಿಸುವತ್ತ ಕಾರ್ಯಪ್ರವೃತ್ತರಾಗಬೇಕು ಎಂಬುದು ಈ ನಿರ್ಲಕ್ಷಿತ ಸಮುದಾಯಗಳ ಆಗ್ರಹ.


ಇದನ್ನೂ ಓದಿ: ರಾಜೇಶ್ವರಿ ತೇಜಸ್ವಿ ಸ್ಮರಣೆ; ಜೀವನ ಪ್ರೀತಿಯ ಹುಚ್ಚುತನವನ್ನು ಕಾಣಿಸಿದ ಲೇಖಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...