Homeಕರ್ನಾಟಕರಾಜ್ಯ ಸಾರಿಗೆಗೆ ಬಾಬಾಸಾಹೇಬ್ ಸಾರಿಗೆ ಸಂಸ್ಥೆ ಎಂದು ಮರುನಾಮಕರಣ ಮಾಡಲು ಸಂಸದೆ ಸುಮಲತಾ ಮನವಿ

ರಾಜ್ಯ ಸಾರಿಗೆಗೆ ಬಾಬಾಸಾಹೇಬ್ ಸಾರಿಗೆ ಸಂಸ್ಥೆ ಎಂದು ಮರುನಾಮಕರಣ ಮಾಡಲು ಸಂಸದೆ ಸುಮಲತಾ ಮನವಿ

- Advertisement -
- Advertisement -

ರಾಜ್ಯ ಸಾರಿಗೆಯ ‘ಕೆಎಸ್‌ಆರ್‌‌ಟಿಸಿ’ ಎಂಬ ಹೆಸರನ್ನು ಕರ್ನಾಟಕ ರಾಜ್ಯ ಸಾರಿಗೆ ನಿಗಮವು ಕಳೆದುಕೊಂಡಿದೆ. ಹಲವು ಮಂದಿ ಹೊಸ ಹೆಸರುಗಳನ್ನು ಸೂಚಿಸುತ್ತಿದ್ದು, ಸಂಸದೆ ಸುಮಲತಾ ಅಂಬರೀಶ್ ಸಂವಿಧಾನ ಶಿಲ್ಪಿಯ ನೆನಪಿನಲ್ಲಿ ’ಬಾಬಾಸಾಹೇಬ್ ಸಾರಿಗೆ ಸಂಸ್ಥೆ’ ಎಂದು ಮರುನಾಮಕರಣ ಮಾಡಲು ಮನವಿ ಮಾಡಿದ್ದಾರೆ.

ಕೇಂದ್ರ ಟ್ರೇಡ್ ಮಾರ್ಕ್ಸ್ ರಿಜಿಸ್ಟ್ರಿಯು ‘ಕೆಎಸ್‌ಆರ್‌ಟಿಸಿ’ ಹೆಸರು ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಸೇರಿದೆ ಎಂದು ತೀರ್ಪು ನೀಡಿರುವ ಹಿನ್ನೆಲೆ ಇನ್ನು ಮುಂದಕ್ಕೆ ಕರ್ನಾಟಕವು ‘ಕೆಎಸ್‌ಆರ್‌ಟಿಸಿ’ ಎಂಬ ಹೆಸರನ್ನು ಬಳಸುವಂತಿಲ್ಲ.

ಕರ್ನಾಟಕ ರಾಜ್ಯ ಸಾರಿಗೆಗೆ ಮುಂದೆ ಯಾವ ಹೆಸರಿಡಬೇಕೆಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆ ನಡೆಯುತ್ತಿದೆ. ಈ ವೇಳೆ ಹಲವು ಮಂದಿ ಕಡೆಗಣಿಸಲ್ಪಟ್ಟಿರುವ ಹಲವು ನಾಯಕರ ಹೆಸರನ್ನು ಸೂಚಿಸಿದ್ದಾರೆ. ಸಂಸದೆ ಸುಮಲತಾ ಅಂಬರೀಶ್, ಅಂಬೇಡ್ಕರ್​ ಅವರ ಸ್ಮರಣೆಯಲ್ಲಿ ಬಾಬಾ ಸಾಹೇಬ್​ ಸಾರಿಗೆ ಸಂಸ್ಥೆ ಎಂದು ಹೆಸರಿಡಬೇಕೆಂದು ಸಾರಿಗೆ ಸಚಿವರಿಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ: ಕನ್ನಡವನ್ನು ಕೊಳಕು ಭಾಷೆ ಎಂದು ತೋರಿಸಿದ್ದ ವೆಬ್‌ಸೈಟ್, ಕನ್ನಡಿಗರ ಆಕ್ರೋಶಕ್ಕೆ ಮಣಿದ ಗೂಗಲ್

 

ರಾಜ್ಯದ ಉಪ ಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವ ಲಕ್ಷ್ಮಣ್ ಸವದಿಗೆ ಪತ್ರ ಬರೆದಿರುವ ಸುಮಲತಾ, ರಾಜ್ಯದ ಮೂಲೆ ಮೂಲೆಗಳಿಗೆ ತಲುಪಿ ಪ್ರಯಾಣಿಕರನ್ನು ಒಂದೆಡೆಯಿಂದ ಮತ್ತೊಂದೆಡೆಗೆ ತಲುಪಿಸುವ ಕೆಎಸ್‌ಆರ್‌ಟಿಸಿ ಬಸ್‌ಗಳ ಸೇವೆಯ ಟ್ರೆಡ್ ಮಾರ್ಕ್ 27 ವರ್ಷಗಳ ಕಾನೂಣು ಹೋರಾಟದ ನಂತರ ಕೇರಳದ ಪಾಲಾಗಿದೆ. ಈ ಹಿನ್ನೆಲೆ ಕರ್ನಾಟಕ ಸಾರಿಗೆಗೆ ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್‌ ಅವರ ನೆನಪಿನಾರ್ಥವಾಗಿ ’ಬಾಬಾಸಾಹೇಬ್ ಸಾರಿಗೆ ಸಂಸ್ಥೆ’ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರವನ್ನು ಮನವಿ ಮಾಡಿಕೊಳ್ಳುತ್ತೇನೆ’ ಎಂದಿದ್ದಾರೆ.

ಕೇರಳ ಮತ್ತು ಕರ್ನಾಟಕದ ಸಾರಿಗೆ ಇಲಾಖೆಗಳ ನಡುವಿನ ಏಳು ವರ್ಷಗಳ ಕಾನೂನು ಹೋರಾಟದ ಅಂತಿಮ ತೀರ್ಪು ಬುಧವಾರ ಪ್ರಕಟವಾಗಿದ್ದು, ‘ಕೇಂದ್ರ ವ್ಯಾಪಾರ ಗುರುತು ನೋಂದಾವಣೆ’ಯು ‘ಕೆಎಸ್‌ಆರ್‌ಟಿಸಿ’ ಎಂಬ ಸಂಕ್ಷಿಪ್ತ ಹೆಸರು ಕೇರಳ ರಸ್ತೆ ಸಾರಿಗೆಗೆ ಸೇರಿದೆ ಎಂದು ಹೇಳಿದೆ.  ಇದರ ಜೊತೆಗೆ ಕೇರಳವು ‘ಆನವಂಡಿ’ ಎಂಬ ಬಸ್ ಸೇವೆಯ ಜನಪ್ರಿಯ ಅಡ್ಡಹೆಸರಿನ ಮಾಲೀಕತ್ವವನ್ನು ಪಡೆದುಕೊಂಡಿದೆ.


ಇದನ್ನೂ ಓದಿ: ‘ಕೆಎಸ್‌ಆರ್‌‌ಟಿಸಿ’ ಬ್ರಾಂಡ್‌ ನೇಮ್‌ ಕಳೆದುಕೊಂಡ ಕರ್ನಾಟಕ! ಸಾರಿಗೆ ಸಚಿವ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಈ ದೇಶಕ್ಕೆ ಬೃಹತ್ ಸಂವಿಧಾನ ನೀಡಿರುವ ಎಲ್ಲರ ಸಮಾನತೆ ಬಯಸಿದ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಸಾರಿಗೆ ಸಂಸ್ಥೆಗೆ ನಾಮಕರಣ ಮಾಡೋದು ಒಳ್ಳೆಯ ನಿರ್ಧಾರ. ಪ್ರತಿಯೊಬ್ಬರಿಗೂ ಸಂವಿಧಾನದ ಹಾಗೂ ಅಂಬೇಡ್ಕರ್ ರವರ ಮಹತ್ವ ಗೊತ್ತಾಗಲೀ …. ಬಿಕೆಕುಮಾರ್ ಬೆಳಕವಾಡಿ

  2. ಮಂಡ್ಯ ಸಂಸದೆ ಶ್ರೀಮತಿ ಸುಮಲತಾ ಅಂಬರೀಷ್ ರವರಿಗೆ ಕೋಟಿ ಧನ್ಯವಾದಗಳು

  3. ಹೌದು, ಇದೊಂದು ಅತ್ಯುತ್ತಮ ಸಲಹೆ ಮತ್ತು ಎರಡನೆಯ ಯೋಚನೆಯ ಅವಶ್ಯಕತೆ ಇಲ್ಲ.

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...