Homeಕರ್ನಾಟಕಮಂಡ್ಯ | ಮುಸ್ಲಿಂ ಯುವಕರನ್ನು ಸುತ್ತುವರೆದು 'ಜೈ ಶ್ರೀರಾಮ್' ಕೂಗುವಂತೆ ಒತ್ತಾಯಿಸಿದ ಬಜರಂಗದಳದ ದುಷ್ಕರ್ಮಿಗಳು

ಮಂಡ್ಯ | ಮುಸ್ಲಿಂ ಯುವಕರನ್ನು ಸುತ್ತುವರೆದು ‘ಜೈ ಶ್ರೀರಾಮ್’ ಕೂಗುವಂತೆ ಒತ್ತಾಯಿಸಿದ ಬಜರಂಗದಳದ ದುಷ್ಕರ್ಮಿಗಳು

- Advertisement -
- Advertisement -

ಬಿಜೆಪಿ ಮತ್ತು ಅದರ ಸಹಸಂಘಟನೆಗಳಾದ ಬಜರಂಗದಳದ ದುಷ್ಕರ್ಮಿಗಳು ಮೂವರು ಮುಸ್ಲಿಂ ಯುವಕರನ್ನು ಸುತ್ತುವರೆದು ‘ಜೈಶ್ರೀರಾಮ್’ ಹೇಳುವಂತೆ ಒತ್ತಾಯಿಸಿರುವ ಘಟನೆ ಮಂಡ್ಯದ ಸುಂಡಹಳ್ಳಿ ಪ್ರದೇಶದಲ್ಲಿ ಭಾನುವಾರ ನಡೆದಿದೆ ಎಂದು ವರದಿಯಾಗಿದೆ. ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದರೂ ಕರ್ನಾಟಕವು ಉತ್ತರ ಪ್ರದೇಶದಂತೆ ಆಗುತ್ತಿದೆ ಎಂದು ಸಾರ್ವಜನಿಕವಾಗಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಮಂಡ್ಯ

ಭಾನುವಾರ ಶ್ರೀರಂಗಪಟ್ಟಣದಲ್ಲಿ ನಡೆದ ಹನುಮ ಸಂಕೀರ್ತನ ಯಾತ್ರೆಗೆ ಹೊರಟಿದ್ದ ಬಿಜೆಪಿ ಸಂಘಟನೆಗಳ ಬೆಂಬಲಿಗ ಯುವಕರು ಈ ಕೃತ್ಯ ಎಸಗಿದ್ದಾರೆ. ಮಂಡ್ಯದ ಸುಂಡಹಳ್ಳಿ ಗ್ರಾಮದ ಬೆಂಗಳೂರು – ಮೈಸೂರು ಹೆದ್ದಾರಿಯ ಅಂಡರ್‌ಪಾಸ್‌ನ ಸರ್ವಿಸ್ ರಸ್ತೆಯ ಬಳಿ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ಮೂವರು ಮುಸ್ಲಿಂ ಯುವಕರನ್ನು ತಡೆದು, ಅವರನ್ನು ಸುತ್ತುವರೆದು ‘ಜೈಶ್ರೀರಾಮ್’ ಎಂದು ಕೂಗುವಂತೆ ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ಬಗ್ಗೆ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. 8-10 ಅಪರಿಚಿತರು ಕೃತ್ಯ ಎಸಗಿದ್ದಾಗಿ ಎಫ್‌ಐಆರ್‌ ಉಲ್ಲೇಖಿಸಿದೆ. “ಯುವಕರನ್ನು ಮುಂದೆ ಹೋಗದಂತೆ ಅಡ್ಡಗಟ್ಟಿ ನಿಲ್ಲಿಸಿಕೊಂಡು ಅವಹೇಳನಕಾರಿಯಾಗಿ ನಿಂದಿಸಿ ಅವರ ಧಾರ್ಮಿಕ ಭಾವನೆಗೆ ದಕ್ಕೆ ಉಂಟುಮಾಡಿ ಹಾಗೂ ಕೋಮು ಸೌಹಾರ್ದತೆಗೆ ಧಕ್ಕೆ ಉಂಟು ಮಾಡಿದ್ದಾರೆ” ಎಂದು ಎಫ್‌ಐಆರ್ ಹೇಳಿದೆ. ದುಷ್ಕರ್ಮಿಗಳ ವಿರುದ್ಧ ಬಿಎನ್‌ಎಸ್ ಅಡಿಯಲ್ಲಿ 189(2), 126(2), 196, 352, ರೆ.ವಿ. 190 ಪ್ರಕರಣ ದಾಖಲಾಗಿದೆ.

ಈ ಬಗ್ಗೆ ನಾನುಗೌರಿ.ಕಾಮ್ ಜೊತೆಗೆ ಮಾತನಾಡಿದ ಮಂಡ್ಯ ಗ್ರಾಮಾಂತರ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ರಸೂಲ್ ಸಾಬ್ ಗೌಂಡಿ ಅವರು, ಘಟನೆಗೆ ಸಂಬಂಧಪಟ್ಟಂತೆ ಮೂವರು ವ್ಯಕ್ತಿಗಳನ್ನು ಗುರುತಿಸಿದ್ದು ಅವರು ಮತ್ತು ತಂಡದ ಮೇಲೆ ಎಫ್‌ಐಆರ್‌ ದಾಖಲು ಮಾಡಿದ್ದೇವೆ. ಉಳಿದವರನ್ನು ಕಂಡುಹಿಡಿಯಲು ತಂಡ ರಚನೆ ಮಾಡಿದ್ದೇವೆ ಎಂದು ಹೇಳಿದ್ದಾರೆ. ಮಂಡ್ಯ

ಅಮಾಯಕ ಮುಸ್ಲಿಂ ಯುವಕರನ್ನು ಸುತ್ತುವರೆದು ಜೈಶ್ರೀರಾಮ್ ಎಂದು ಹೇಳಲು ಒತ್ತಾಯಿಸಿದ ಗೂಂಡಾಗಳನ್ನು ತಕ್ಷಣವೆ ಬಂಧಿಸಿ ಶಿಕ್ಷೆಗೆ ಒಳಪಡಿಸಬೇಕು ಎಂದು ಮಂಡ್ಯ ಜಿಲ್ಲಾ ಸಿಪಿಐ(ಎಂ) ಆಗ್ರಹಿಸಿದ್ದು, ಸಂಘಪರಿವಾರದ ಇಂತಹ ಆಚರಣೆಗಳಿಗೆ ಸರ್ಕಾರ ಅವಕಾಶ ನೀಡಬಾರದು ಎಂದು ಪಕ್ಷವು ಹೇಳಿದೆ.

ಘಟನೆ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಸಿಪಿಐ(ಎಂ) ಮಂಡ್ಯ ಜಿಲ್ಲಾ ಕಾರ್ಯದರ್ಶಿ ಟಿ.ಎಲ್. ಕೃಷ್ಣೇಗೌಡ ಅವರು, “ಯುಪಿ ಮಾದರಿಯಲ್ಲಿ ಕರ್ನಾಟಕವನ್ನು ಮಾಡಲು ಹೊರಟಿರುವ ಸಂಘಪರಿವಾರದ ಆಚರಣೆಗಳಿಗೆ ರಾಜ್ಯ ಸರ್ಕಾರ ಯಾವುದೆ ಅವಕಾಶ ನೀಡಬಾರದು. ಸರ್ಕಾರ ಅವಕಾಶ ಕೊಟ್ಟಿರುವುದಕ್ಕಾಗಿಯೆ ಅದನ್ನು ದುರುಪಯೋಗಪಡಿಸಿಕೊಂಡು ಈ ರೀತಿಯಾಗಿ ಗೂಂಡಾಗಿರಿ ಮಾಡಿದ್ದಾರೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸಂಘ ಪರಿವಾರದ ಹುನುಮ ಮಾಲೆಗೆ ಅವಕಾಶ ಕೊಡುತ್ತಾ ಇರುವುದರಿಂದ ಅವರು ಗೂಂಡಾಗಿರಿಗೆ ಇಳಿದಿದ್ದಾರೆ. ಈ ಬಗ್ಗೆ ಈಗಾಗಲೆ ಸಿಪಿಐ(ಎಂ) ಎಚ್ಚರಿಸಿದ್ದು, ಸರ್ಕಾರ ಅವಕಾಶ ಕೊಟ್ಟಿರುವುಕ್ಕಾಗೆ ಅವರು ಪುಂಡಾಟ ಮೆರೆಯುತ್ತಿದ್ದಾರೆ. ಆದ್ದರಿಂದ ಮುಂದಿನ ವರ್ಷದಿಂದ ಇಂತಹ ಹನುಮ ಮಾಲೆ ಯಾತ್ರೆಯನ್ನು ಸರ್ಕಾರ ರಾಜ್ಯದಾದ್ಯಂತ ನಿಷೇಧಿಸಬೇಕು” ಎಂದು ಕೃಷ್ಣೇಗೌಡ ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ದಲಿತ ಕಾನ್‌ಸ್ಟೆಬಲ್‌ ಮದುವೆ ಮೆರವಣಿಗೆ ಮೇಲೆ ಠಾಕೂರ್ ವ್ಯಕ್ತಿಗಳಿಂದ ದಾಳಿ

ಉತ್ತರ ಪ್ರದೇಶ: ದಲಿತ ಕಾನ್‌ಸ್ಟೆಬಲ್‌ ಮದುವೆ ಮೆರವಣಿಗೆ ಮೇಲೆ ಠಾಕೂರ್ ವ್ಯಕ್ತಿಗಳಿಂದ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...