Homeಕರ್ನಾಟಕಮಂಡ್ಯ | ಮುಸ್ಲಿಂ ಯುವಕರನ್ನು ಸುತ್ತುವರೆದು 'ಜೈ ಶ್ರೀರಾಮ್' ಕೂಗುವಂತೆ ಒತ್ತಾಯಿಸಿದ ಬಜರಂಗದಳದ ದುಷ್ಕರ್ಮಿಗಳು

ಮಂಡ್ಯ | ಮುಸ್ಲಿಂ ಯುವಕರನ್ನು ಸುತ್ತುವರೆದು ‘ಜೈ ಶ್ರೀರಾಮ್’ ಕೂಗುವಂತೆ ಒತ್ತಾಯಿಸಿದ ಬಜರಂಗದಳದ ದುಷ್ಕರ್ಮಿಗಳು

- Advertisement -
- Advertisement -

ಬಿಜೆಪಿ ಮತ್ತು ಅದರ ಸಹಸಂಘಟನೆಗಳಾದ ಬಜರಂಗದಳದ ದುಷ್ಕರ್ಮಿಗಳು ಮೂವರು ಮುಸ್ಲಿಂ ಯುವಕರನ್ನು ಸುತ್ತುವರೆದು ‘ಜೈಶ್ರೀರಾಮ್’ ಹೇಳುವಂತೆ ಒತ್ತಾಯಿಸಿರುವ ಘಟನೆ ಮಂಡ್ಯದ ಸುಂಡಹಳ್ಳಿ ಪ್ರದೇಶದಲ್ಲಿ ಭಾನುವಾರ ನಡೆದಿದೆ ಎಂದು ವರದಿಯಾಗಿದೆ. ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದರೂ ಕರ್ನಾಟಕವು ಉತ್ತರ ಪ್ರದೇಶದಂತೆ ಆಗುತ್ತಿದೆ ಎಂದು ಸಾರ್ವಜನಿಕವಾಗಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಮಂಡ್ಯ

ಭಾನುವಾರ ಶ್ರೀರಂಗಪಟ್ಟಣದಲ್ಲಿ ನಡೆದ ಹನುಮ ಸಂಕೀರ್ತನ ಯಾತ್ರೆಗೆ ಹೊರಟಿದ್ದ ಬಿಜೆಪಿ ಸಂಘಟನೆಗಳ ಬೆಂಬಲಿಗ ಯುವಕರು ಈ ಕೃತ್ಯ ಎಸಗಿದ್ದಾರೆ. ಮಂಡ್ಯದ ಸುಂಡಹಳ್ಳಿ ಗ್ರಾಮದ ಬೆಂಗಳೂರು – ಮೈಸೂರು ಹೆದ್ದಾರಿಯ ಅಂಡರ್‌ಪಾಸ್‌ನ ಸರ್ವಿಸ್ ರಸ್ತೆಯ ಬಳಿ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ಮೂವರು ಮುಸ್ಲಿಂ ಯುವಕರನ್ನು ತಡೆದು, ಅವರನ್ನು ಸುತ್ತುವರೆದು ‘ಜೈಶ್ರೀರಾಮ್’ ಎಂದು ಕೂಗುವಂತೆ ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ಬಗ್ಗೆ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. 8-10 ಅಪರಿಚಿತರು ಕೃತ್ಯ ಎಸಗಿದ್ದಾಗಿ ಎಫ್‌ಐಆರ್‌ ಉಲ್ಲೇಖಿಸಿದೆ. “ಯುವಕರನ್ನು ಮುಂದೆ ಹೋಗದಂತೆ ಅಡ್ಡಗಟ್ಟಿ ನಿಲ್ಲಿಸಿಕೊಂಡು ಅವಹೇಳನಕಾರಿಯಾಗಿ ನಿಂದಿಸಿ ಅವರ ಧಾರ್ಮಿಕ ಭಾವನೆಗೆ ದಕ್ಕೆ ಉಂಟುಮಾಡಿ ಹಾಗೂ ಕೋಮು ಸೌಹಾರ್ದತೆಗೆ ಧಕ್ಕೆ ಉಂಟು ಮಾಡಿದ್ದಾರೆ” ಎಂದು ಎಫ್‌ಐಆರ್ ಹೇಳಿದೆ. ದುಷ್ಕರ್ಮಿಗಳ ವಿರುದ್ಧ ಬಿಎನ್‌ಎಸ್ ಅಡಿಯಲ್ಲಿ 189(2), 126(2), 196, 352, ರೆ.ವಿ. 190 ಪ್ರಕರಣ ದಾಖಲಾಗಿದೆ.

ಈ ಬಗ್ಗೆ ನಾನುಗೌರಿ.ಕಾಮ್ ಜೊತೆಗೆ ಮಾತನಾಡಿದ ಮಂಡ್ಯ ಗ್ರಾಮಾಂತರ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ರಸೂಲ್ ಸಾಬ್ ಗೌಂಡಿ ಅವರು, ಘಟನೆಗೆ ಸಂಬಂಧಪಟ್ಟಂತೆ ಮೂವರು ವ್ಯಕ್ತಿಗಳನ್ನು ಗುರುತಿಸಿದ್ದು ಅವರು ಮತ್ತು ತಂಡದ ಮೇಲೆ ಎಫ್‌ಐಆರ್‌ ದಾಖಲು ಮಾಡಿದ್ದೇವೆ. ಉಳಿದವರನ್ನು ಕಂಡುಹಿಡಿಯಲು ತಂಡ ರಚನೆ ಮಾಡಿದ್ದೇವೆ ಎಂದು ಹೇಳಿದ್ದಾರೆ. ಮಂಡ್ಯ

ಅಮಾಯಕ ಮುಸ್ಲಿಂ ಯುವಕರನ್ನು ಸುತ್ತುವರೆದು ಜೈಶ್ರೀರಾಮ್ ಎಂದು ಹೇಳಲು ಒತ್ತಾಯಿಸಿದ ಗೂಂಡಾಗಳನ್ನು ತಕ್ಷಣವೆ ಬಂಧಿಸಿ ಶಿಕ್ಷೆಗೆ ಒಳಪಡಿಸಬೇಕು ಎಂದು ಮಂಡ್ಯ ಜಿಲ್ಲಾ ಸಿಪಿಐ(ಎಂ) ಆಗ್ರಹಿಸಿದ್ದು, ಸಂಘಪರಿವಾರದ ಇಂತಹ ಆಚರಣೆಗಳಿಗೆ ಸರ್ಕಾರ ಅವಕಾಶ ನೀಡಬಾರದು ಎಂದು ಪಕ್ಷವು ಹೇಳಿದೆ.

ಘಟನೆ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಸಿಪಿಐ(ಎಂ) ಮಂಡ್ಯ ಜಿಲ್ಲಾ ಕಾರ್ಯದರ್ಶಿ ಟಿ.ಎಲ್. ಕೃಷ್ಣೇಗೌಡ ಅವರು, “ಯುಪಿ ಮಾದರಿಯಲ್ಲಿ ಕರ್ನಾಟಕವನ್ನು ಮಾಡಲು ಹೊರಟಿರುವ ಸಂಘಪರಿವಾರದ ಆಚರಣೆಗಳಿಗೆ ರಾಜ್ಯ ಸರ್ಕಾರ ಯಾವುದೆ ಅವಕಾಶ ನೀಡಬಾರದು. ಸರ್ಕಾರ ಅವಕಾಶ ಕೊಟ್ಟಿರುವುದಕ್ಕಾಗಿಯೆ ಅದನ್ನು ದುರುಪಯೋಗಪಡಿಸಿಕೊಂಡು ಈ ರೀತಿಯಾಗಿ ಗೂಂಡಾಗಿರಿ ಮಾಡಿದ್ದಾರೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸಂಘ ಪರಿವಾರದ ಹುನುಮ ಮಾಲೆಗೆ ಅವಕಾಶ ಕೊಡುತ್ತಾ ಇರುವುದರಿಂದ ಅವರು ಗೂಂಡಾಗಿರಿಗೆ ಇಳಿದಿದ್ದಾರೆ. ಈ ಬಗ್ಗೆ ಈಗಾಗಲೆ ಸಿಪಿಐ(ಎಂ) ಎಚ್ಚರಿಸಿದ್ದು, ಸರ್ಕಾರ ಅವಕಾಶ ಕೊಟ್ಟಿರುವುಕ್ಕಾಗೆ ಅವರು ಪುಂಡಾಟ ಮೆರೆಯುತ್ತಿದ್ದಾರೆ. ಆದ್ದರಿಂದ ಮುಂದಿನ ವರ್ಷದಿಂದ ಇಂತಹ ಹನುಮ ಮಾಲೆ ಯಾತ್ರೆಯನ್ನು ಸರ್ಕಾರ ರಾಜ್ಯದಾದ್ಯಂತ ನಿಷೇಧಿಸಬೇಕು” ಎಂದು ಕೃಷ್ಣೇಗೌಡ ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ದಲಿತ ಕಾನ್‌ಸ್ಟೆಬಲ್‌ ಮದುವೆ ಮೆರವಣಿಗೆ ಮೇಲೆ ಠಾಕೂರ್ ವ್ಯಕ್ತಿಗಳಿಂದ ದಾಳಿ

ಉತ್ತರ ಪ್ರದೇಶ: ದಲಿತ ಕಾನ್‌ಸ್ಟೆಬಲ್‌ ಮದುವೆ ಮೆರವಣಿಗೆ ಮೇಲೆ ಠಾಕೂರ್ ವ್ಯಕ್ತಿಗಳಿಂದ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...