Homeಕರ್ನಾಟಕಮಂಡ್ಯ | ಮುಸ್ಲಿಂ ಯುವಕರನ್ನು ಸುತ್ತುವರೆದು 'ಜೈ ಶ್ರೀರಾಮ್' ಕೂಗುವಂತೆ ಒತ್ತಾಯಿಸಿದ ಬಜರಂಗದಳದ ದುಷ್ಕರ್ಮಿಗಳು

ಮಂಡ್ಯ | ಮುಸ್ಲಿಂ ಯುವಕರನ್ನು ಸುತ್ತುವರೆದು ‘ಜೈ ಶ್ರೀರಾಮ್’ ಕೂಗುವಂತೆ ಒತ್ತಾಯಿಸಿದ ಬಜರಂಗದಳದ ದುಷ್ಕರ್ಮಿಗಳು

- Advertisement -
- Advertisement -

ಬಿಜೆಪಿ ಮತ್ತು ಅದರ ಸಹಸಂಘಟನೆಗಳಾದ ಬಜರಂಗದಳದ ದುಷ್ಕರ್ಮಿಗಳು ಮೂವರು ಮುಸ್ಲಿಂ ಯುವಕರನ್ನು ಸುತ್ತುವರೆದು ‘ಜೈಶ್ರೀರಾಮ್’ ಹೇಳುವಂತೆ ಒತ್ತಾಯಿಸಿರುವ ಘಟನೆ ಮಂಡ್ಯದ ಸುಂಡಹಳ್ಳಿ ಪ್ರದೇಶದಲ್ಲಿ ಭಾನುವಾರ ನಡೆದಿದೆ ಎಂದು ವರದಿಯಾಗಿದೆ. ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದರೂ ಕರ್ನಾಟಕವು ಉತ್ತರ ಪ್ರದೇಶದಂತೆ ಆಗುತ್ತಿದೆ ಎಂದು ಸಾರ್ವಜನಿಕವಾಗಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಮಂಡ್ಯ

ಭಾನುವಾರ ಶ್ರೀರಂಗಪಟ್ಟಣದಲ್ಲಿ ನಡೆದ ಹನುಮ ಸಂಕೀರ್ತನ ಯಾತ್ರೆಗೆ ಹೊರಟಿದ್ದ ಬಿಜೆಪಿ ಸಂಘಟನೆಗಳ ಬೆಂಬಲಿಗ ಯುವಕರು ಈ ಕೃತ್ಯ ಎಸಗಿದ್ದಾರೆ. ಮಂಡ್ಯದ ಸುಂಡಹಳ್ಳಿ ಗ್ರಾಮದ ಬೆಂಗಳೂರು – ಮೈಸೂರು ಹೆದ್ದಾರಿಯ ಅಂಡರ್‌ಪಾಸ್‌ನ ಸರ್ವಿಸ್ ರಸ್ತೆಯ ಬಳಿ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ಮೂವರು ಮುಸ್ಲಿಂ ಯುವಕರನ್ನು ತಡೆದು, ಅವರನ್ನು ಸುತ್ತುವರೆದು ‘ಜೈಶ್ರೀರಾಮ್’ ಎಂದು ಕೂಗುವಂತೆ ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ಬಗ್ಗೆ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. 8-10 ಅಪರಿಚಿತರು ಕೃತ್ಯ ಎಸಗಿದ್ದಾಗಿ ಎಫ್‌ಐಆರ್‌ ಉಲ್ಲೇಖಿಸಿದೆ. “ಯುವಕರನ್ನು ಮುಂದೆ ಹೋಗದಂತೆ ಅಡ್ಡಗಟ್ಟಿ ನಿಲ್ಲಿಸಿಕೊಂಡು ಅವಹೇಳನಕಾರಿಯಾಗಿ ನಿಂದಿಸಿ ಅವರ ಧಾರ್ಮಿಕ ಭಾವನೆಗೆ ದಕ್ಕೆ ಉಂಟುಮಾಡಿ ಹಾಗೂ ಕೋಮು ಸೌಹಾರ್ದತೆಗೆ ಧಕ್ಕೆ ಉಂಟು ಮಾಡಿದ್ದಾರೆ” ಎಂದು ಎಫ್‌ಐಆರ್ ಹೇಳಿದೆ. ದುಷ್ಕರ್ಮಿಗಳ ವಿರುದ್ಧ ಬಿಎನ್‌ಎಸ್ ಅಡಿಯಲ್ಲಿ 189(2), 126(2), 196, 352, ರೆ.ವಿ. 190 ಪ್ರಕರಣ ದಾಖಲಾಗಿದೆ.

ಈ ಬಗ್ಗೆ ನಾನುಗೌರಿ.ಕಾಮ್ ಜೊತೆಗೆ ಮಾತನಾಡಿದ ಮಂಡ್ಯ ಗ್ರಾಮಾಂತರ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ರಸೂಲ್ ಸಾಬ್ ಗೌಂಡಿ ಅವರು, ಘಟನೆಗೆ ಸಂಬಂಧಪಟ್ಟಂತೆ ಮೂವರು ವ್ಯಕ್ತಿಗಳನ್ನು ಗುರುತಿಸಿದ್ದು ಅವರು ಮತ್ತು ತಂಡದ ಮೇಲೆ ಎಫ್‌ಐಆರ್‌ ದಾಖಲು ಮಾಡಿದ್ದೇವೆ. ಉಳಿದವರನ್ನು ಕಂಡುಹಿಡಿಯಲು ತಂಡ ರಚನೆ ಮಾಡಿದ್ದೇವೆ ಎಂದು ಹೇಳಿದ್ದಾರೆ. ಮಂಡ್ಯ

ಅಮಾಯಕ ಮುಸ್ಲಿಂ ಯುವಕರನ್ನು ಸುತ್ತುವರೆದು ಜೈಶ್ರೀರಾಮ್ ಎಂದು ಹೇಳಲು ಒತ್ತಾಯಿಸಿದ ಗೂಂಡಾಗಳನ್ನು ತಕ್ಷಣವೆ ಬಂಧಿಸಿ ಶಿಕ್ಷೆಗೆ ಒಳಪಡಿಸಬೇಕು ಎಂದು ಮಂಡ್ಯ ಜಿಲ್ಲಾ ಸಿಪಿಐ(ಎಂ) ಆಗ್ರಹಿಸಿದ್ದು, ಸಂಘಪರಿವಾರದ ಇಂತಹ ಆಚರಣೆಗಳಿಗೆ ಸರ್ಕಾರ ಅವಕಾಶ ನೀಡಬಾರದು ಎಂದು ಪಕ್ಷವು ಹೇಳಿದೆ.

ಘಟನೆ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಸಿಪಿಐ(ಎಂ) ಮಂಡ್ಯ ಜಿಲ್ಲಾ ಕಾರ್ಯದರ್ಶಿ ಟಿ.ಎಲ್. ಕೃಷ್ಣೇಗೌಡ ಅವರು, “ಯುಪಿ ಮಾದರಿಯಲ್ಲಿ ಕರ್ನಾಟಕವನ್ನು ಮಾಡಲು ಹೊರಟಿರುವ ಸಂಘಪರಿವಾರದ ಆಚರಣೆಗಳಿಗೆ ರಾಜ್ಯ ಸರ್ಕಾರ ಯಾವುದೆ ಅವಕಾಶ ನೀಡಬಾರದು. ಸರ್ಕಾರ ಅವಕಾಶ ಕೊಟ್ಟಿರುವುದಕ್ಕಾಗಿಯೆ ಅದನ್ನು ದುರುಪಯೋಗಪಡಿಸಿಕೊಂಡು ಈ ರೀತಿಯಾಗಿ ಗೂಂಡಾಗಿರಿ ಮಾಡಿದ್ದಾರೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸಂಘ ಪರಿವಾರದ ಹುನುಮ ಮಾಲೆಗೆ ಅವಕಾಶ ಕೊಡುತ್ತಾ ಇರುವುದರಿಂದ ಅವರು ಗೂಂಡಾಗಿರಿಗೆ ಇಳಿದಿದ್ದಾರೆ. ಈ ಬಗ್ಗೆ ಈಗಾಗಲೆ ಸಿಪಿಐ(ಎಂ) ಎಚ್ಚರಿಸಿದ್ದು, ಸರ್ಕಾರ ಅವಕಾಶ ಕೊಟ್ಟಿರುವುಕ್ಕಾಗೆ ಅವರು ಪುಂಡಾಟ ಮೆರೆಯುತ್ತಿದ್ದಾರೆ. ಆದ್ದರಿಂದ ಮುಂದಿನ ವರ್ಷದಿಂದ ಇಂತಹ ಹನುಮ ಮಾಲೆ ಯಾತ್ರೆಯನ್ನು ಸರ್ಕಾರ ರಾಜ್ಯದಾದ್ಯಂತ ನಿಷೇಧಿಸಬೇಕು” ಎಂದು ಕೃಷ್ಣೇಗೌಡ ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ದಲಿತ ಕಾನ್‌ಸ್ಟೆಬಲ್‌ ಮದುವೆ ಮೆರವಣಿಗೆ ಮೇಲೆ ಠಾಕೂರ್ ವ್ಯಕ್ತಿಗಳಿಂದ ದಾಳಿ

ಉತ್ತರ ಪ್ರದೇಶ: ದಲಿತ ಕಾನ್‌ಸ್ಟೆಬಲ್‌ ಮದುವೆ ಮೆರವಣಿಗೆ ಮೇಲೆ ಠಾಕೂರ್ ವ್ಯಕ್ತಿಗಳಿಂದ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...