Homeಕರ್ನಾಟಕಮಂಡ್ಯ | ಮುಸ್ಲಿಂ ಯುವಕರನ್ನು ಸುತ್ತುವರೆದು 'ಜೈ ಶ್ರೀರಾಮ್' ಕೂಗುವಂತೆ ಒತ್ತಾಯಿಸಿದ ಬಜರಂಗದಳದ ದುಷ್ಕರ್ಮಿಗಳು

ಮಂಡ್ಯ | ಮುಸ್ಲಿಂ ಯುವಕರನ್ನು ಸುತ್ತುವರೆದು ‘ಜೈ ಶ್ರೀರಾಮ್’ ಕೂಗುವಂತೆ ಒತ್ತಾಯಿಸಿದ ಬಜರಂಗದಳದ ದುಷ್ಕರ್ಮಿಗಳು

- Advertisement -
- Advertisement -

ಬಿಜೆಪಿ ಮತ್ತು ಅದರ ಸಹಸಂಘಟನೆಗಳಾದ ಬಜರಂಗದಳದ ದುಷ್ಕರ್ಮಿಗಳು ಮೂವರು ಮುಸ್ಲಿಂ ಯುವಕರನ್ನು ಸುತ್ತುವರೆದು ‘ಜೈಶ್ರೀರಾಮ್’ ಹೇಳುವಂತೆ ಒತ್ತಾಯಿಸಿರುವ ಘಟನೆ ಮಂಡ್ಯದ ಸುಂಡಹಳ್ಳಿ ಪ್ರದೇಶದಲ್ಲಿ ಭಾನುವಾರ ನಡೆದಿದೆ ಎಂದು ವರದಿಯಾಗಿದೆ. ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದರೂ ಕರ್ನಾಟಕವು ಉತ್ತರ ಪ್ರದೇಶದಂತೆ ಆಗುತ್ತಿದೆ ಎಂದು ಸಾರ್ವಜನಿಕವಾಗಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಮಂಡ್ಯ

ಭಾನುವಾರ ಶ್ರೀರಂಗಪಟ್ಟಣದಲ್ಲಿ ನಡೆದ ಹನುಮ ಸಂಕೀರ್ತನ ಯಾತ್ರೆಗೆ ಹೊರಟಿದ್ದ ಬಿಜೆಪಿ ಸಂಘಟನೆಗಳ ಬೆಂಬಲಿಗ ಯುವಕರು ಈ ಕೃತ್ಯ ಎಸಗಿದ್ದಾರೆ. ಮಂಡ್ಯದ ಸುಂಡಹಳ್ಳಿ ಗ್ರಾಮದ ಬೆಂಗಳೂರು – ಮೈಸೂರು ಹೆದ್ದಾರಿಯ ಅಂಡರ್‌ಪಾಸ್‌ನ ಸರ್ವಿಸ್ ರಸ್ತೆಯ ಬಳಿ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ಮೂವರು ಮುಸ್ಲಿಂ ಯುವಕರನ್ನು ತಡೆದು, ಅವರನ್ನು ಸುತ್ತುವರೆದು ‘ಜೈಶ್ರೀರಾಮ್’ ಎಂದು ಕೂಗುವಂತೆ ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ಬಗ್ಗೆ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. 8-10 ಅಪರಿಚಿತರು ಕೃತ್ಯ ಎಸಗಿದ್ದಾಗಿ ಎಫ್‌ಐಆರ್‌ ಉಲ್ಲೇಖಿಸಿದೆ. “ಯುವಕರನ್ನು ಮುಂದೆ ಹೋಗದಂತೆ ಅಡ್ಡಗಟ್ಟಿ ನಿಲ್ಲಿಸಿಕೊಂಡು ಅವಹೇಳನಕಾರಿಯಾಗಿ ನಿಂದಿಸಿ ಅವರ ಧಾರ್ಮಿಕ ಭಾವನೆಗೆ ದಕ್ಕೆ ಉಂಟುಮಾಡಿ ಹಾಗೂ ಕೋಮು ಸೌಹಾರ್ದತೆಗೆ ಧಕ್ಕೆ ಉಂಟು ಮಾಡಿದ್ದಾರೆ” ಎಂದು ಎಫ್‌ಐಆರ್ ಹೇಳಿದೆ. ದುಷ್ಕರ್ಮಿಗಳ ವಿರುದ್ಧ ಬಿಎನ್‌ಎಸ್ ಅಡಿಯಲ್ಲಿ 189(2), 126(2), 196, 352, ರೆ.ವಿ. 190 ಪ್ರಕರಣ ದಾಖಲಾಗಿದೆ.

ಈ ಬಗ್ಗೆ ನಾನುಗೌರಿ.ಕಾಮ್ ಜೊತೆಗೆ ಮಾತನಾಡಿದ ಮಂಡ್ಯ ಗ್ರಾಮಾಂತರ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ರಸೂಲ್ ಸಾಬ್ ಗೌಂಡಿ ಅವರು, ಘಟನೆಗೆ ಸಂಬಂಧಪಟ್ಟಂತೆ ಮೂವರು ವ್ಯಕ್ತಿಗಳನ್ನು ಗುರುತಿಸಿದ್ದು ಅವರು ಮತ್ತು ತಂಡದ ಮೇಲೆ ಎಫ್‌ಐಆರ್‌ ದಾಖಲು ಮಾಡಿದ್ದೇವೆ. ಉಳಿದವರನ್ನು ಕಂಡುಹಿಡಿಯಲು ತಂಡ ರಚನೆ ಮಾಡಿದ್ದೇವೆ ಎಂದು ಹೇಳಿದ್ದಾರೆ. ಮಂಡ್ಯ

ಅಮಾಯಕ ಮುಸ್ಲಿಂ ಯುವಕರನ್ನು ಸುತ್ತುವರೆದು ಜೈಶ್ರೀರಾಮ್ ಎಂದು ಹೇಳಲು ಒತ್ತಾಯಿಸಿದ ಗೂಂಡಾಗಳನ್ನು ತಕ್ಷಣವೆ ಬಂಧಿಸಿ ಶಿಕ್ಷೆಗೆ ಒಳಪಡಿಸಬೇಕು ಎಂದು ಮಂಡ್ಯ ಜಿಲ್ಲಾ ಸಿಪಿಐ(ಎಂ) ಆಗ್ರಹಿಸಿದ್ದು, ಸಂಘಪರಿವಾರದ ಇಂತಹ ಆಚರಣೆಗಳಿಗೆ ಸರ್ಕಾರ ಅವಕಾಶ ನೀಡಬಾರದು ಎಂದು ಪಕ್ಷವು ಹೇಳಿದೆ.

ಘಟನೆ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಸಿಪಿಐ(ಎಂ) ಮಂಡ್ಯ ಜಿಲ್ಲಾ ಕಾರ್ಯದರ್ಶಿ ಟಿ.ಎಲ್. ಕೃಷ್ಣೇಗೌಡ ಅವರು, “ಯುಪಿ ಮಾದರಿಯಲ್ಲಿ ಕರ್ನಾಟಕವನ್ನು ಮಾಡಲು ಹೊರಟಿರುವ ಸಂಘಪರಿವಾರದ ಆಚರಣೆಗಳಿಗೆ ರಾಜ್ಯ ಸರ್ಕಾರ ಯಾವುದೆ ಅವಕಾಶ ನೀಡಬಾರದು. ಸರ್ಕಾರ ಅವಕಾಶ ಕೊಟ್ಟಿರುವುದಕ್ಕಾಗಿಯೆ ಅದನ್ನು ದುರುಪಯೋಗಪಡಿಸಿಕೊಂಡು ಈ ರೀತಿಯಾಗಿ ಗೂಂಡಾಗಿರಿ ಮಾಡಿದ್ದಾರೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸಂಘ ಪರಿವಾರದ ಹುನುಮ ಮಾಲೆಗೆ ಅವಕಾಶ ಕೊಡುತ್ತಾ ಇರುವುದರಿಂದ ಅವರು ಗೂಂಡಾಗಿರಿಗೆ ಇಳಿದಿದ್ದಾರೆ. ಈ ಬಗ್ಗೆ ಈಗಾಗಲೆ ಸಿಪಿಐ(ಎಂ) ಎಚ್ಚರಿಸಿದ್ದು, ಸರ್ಕಾರ ಅವಕಾಶ ಕೊಟ್ಟಿರುವುಕ್ಕಾಗೆ ಅವರು ಪುಂಡಾಟ ಮೆರೆಯುತ್ತಿದ್ದಾರೆ. ಆದ್ದರಿಂದ ಮುಂದಿನ ವರ್ಷದಿಂದ ಇಂತಹ ಹನುಮ ಮಾಲೆ ಯಾತ್ರೆಯನ್ನು ಸರ್ಕಾರ ರಾಜ್ಯದಾದ್ಯಂತ ನಿಷೇಧಿಸಬೇಕು” ಎಂದು ಕೃಷ್ಣೇಗೌಡ ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ದಲಿತ ಕಾನ್‌ಸ್ಟೆಬಲ್‌ ಮದುವೆ ಮೆರವಣಿಗೆ ಮೇಲೆ ಠಾಕೂರ್ ವ್ಯಕ್ತಿಗಳಿಂದ ದಾಳಿ

ಉತ್ತರ ಪ್ರದೇಶ: ದಲಿತ ಕಾನ್‌ಸ್ಟೆಬಲ್‌ ಮದುವೆ ಮೆರವಣಿಗೆ ಮೇಲೆ ಠಾಕೂರ್ ವ್ಯಕ್ತಿಗಳಿಂದ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...