Homeಅಂಕಣಗಳುಕರ್ನಾಟಕ ವಿಧಾನಸಭಾ ಕ್ಷೇತ್ರಗಳ ಸಮೀಕ್ಷೆ:ಮಂಡ್ಯ: ಕಾರ್ಯಕರ್ತರಿಗಿಲ್ಲ ಬಿಜೆಪಿ ಟಿಕೆಟ್, ಪಕ್ಷಾಂತರಿಗಳಿಗೆ ಮಣೆ

ಮಂಡ್ಯ: ಕಾರ್ಯಕರ್ತರಿಗಿಲ್ಲ ಬಿಜೆಪಿ ಟಿಕೆಟ್, ಪಕ್ಷಾಂತರಿಗಳಿಗೆ ಮಣೆ

- Advertisement -
- Advertisement -

ಮಂಡ್ಯ ಜಿಲ್ಲೆಯಲ್ಲಿ ಸಾಮಾನ್ಯ ಕಾರ್ಯಕರ್ತರಿಗೆ ಬಿಜೆಪಿ ಟಿಕೆಟ್ ನೀಡುತ್ತೇವೆ ಎಂದು ಹಿರಿಯ ಮುಖಂಡರು ಘೋಷಿಸಿದ್ದರು. ಆದರೆ ಸದ್ಯ ಬಿಡುಗಡೆಯಾಗಿರುವ ಬಿಜೆಪಿಯ ಮೊದಲ 189 ಅಭ್ಯರ್ಥಿಗಳ ಪಟ್ಟಿಯಲ್ಲಿ ಜಿಲ್ಲೆ ಏಳು ವಿಧಾನಸಭಾ ಕ್ಷೇತ್ರಗಳಿಗೂ ಟಿಕೆಟ್ ಘೋಷಿಸಿದ್ದು ಅದರಲ್ಲಿ ಸಾಮಾನ್ಯ ಕಾರ್ಯಕರ್ತರ ಹೆಸರು ಮಿಸ್ ಆಗಿದ್ದು, ಬೇರೆ ಪಕ್ಷಗಳಿಂದ ವಲಸೆ ಬಂದವರಿಗೆ ಮಣೆ ಹಾಕಿರುವುದು ಸ್ಪಷ್ಟವಾಗಿದೆ.

ಮಂಡ್ಯ, ನಾಗಮಂಗಲ, ಕೆ.ಆರ್ ಪೇಟೆ ಮತ್ತು ಮದ್ದೂರಿನಲ್ಲಿ ಜೆಡಿಎಸ್‌ನಿಂದ ವಲಸೆ ಬಂದವರಿಗೆ ಹಾಗೂ ಶ್ರೀರಂಗಪಟ್ಟಣದಲ್ಲಿ ಕಾಂಗ್ರೆಸ್‌ನಿಂದ ಬಂದವರಿಗೆ ಬಿಜೆಪಿ ಟಿಕೆಟ್ ನೀಡಿದೆ.

ಮಂಡ್ಯ: ಅಶೋಕ್ ಎಸ್‌.ಡಿ ಜಯರಾಂ

ಅಶೋಕ್ ಎಸ್‌.ಡಿ ಜಯರಾಂರವರು ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. 2013ರ ಚುನಾವಣೆ ವೇಳೆಗೆ ಮಂಡ್ಯದಲ್ಲಿ ಹಾಲಿ ಶಾಸಕ ಎಂ.ಶ್ರೀನಿವಾಸ್ ಜೆಡಿಎಸ್‌ನಿಂದ ಕಣಕ್ಕಿಳಿಯುತ್ತಾರೆ. ಜೆಡಿಎಸ್ ಟಿಕೆಟ್ ಸಿಗದಿದ್ದರಿಂದ ಅಶೋಕ್ ಜಯರಾಂ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಾರೆ. ಕೊನೆ ಕ್ಷಣದಲ್ಲಿ ಜೆಡಿಎಸ್ ಪಕ್ಷವು ಎಸ್.ಡಿ ಜಯರಾಂರವರನ್ನು ಸಮಾಧಾನ ಪಡಿಸಿ ಚುನಾವಣಾ ಕಣದಿಂದ ನಿವೃತ್ತಿ ಘೋಷಿಸುವಂತೆ ಮಾಡುತ್ತದೆ. ಇನ್ನು 2018ರಲ್ಲಿಯೂ ಎಂ.ಶ್ರೀನಿವಾಸ್‌ರವರಿಗೆ ಜೆಡಿಎಸ್ ಟಿಕೆಟ್ ಘೋಷಿಸಿದ್ದರಿಂದ ಬೇಸೆತ್ತ ಅವರು ಬಿಜೆಪಿ ಸೇರಿದ್ದಾರೆ.

ಮದ್ದೂರು – ಎಸ್‌.ಪಿ ಸ್ವಾಮಿ

ಮದ್ದೂರಿನಲ್ಲಿ ಜೆಡಿಎಸ್ ಟಿಕೆಟ್ ಸಿಗುವುದಿಲ್ಲ ಎಂಬುದನ್ನು ಅರಿತು ಪಕ್ಷ ತೊರೆದು ಬಿಜೆಪಿ ಸೇರಿರುವ ಮುನ್ಮುಲ್ ನಿರ್ದೇಶಕ ಎಸ್.ಪಿ ಸ್ವಾಮಿಯವರು ಬಿಜೆಪಿ ಟಿಕೆಟ್ ಘೋಷಿಸಿದೆ. ಇದು ಅವರ ಮೊದಲ ವಿಧಾನಸಭಾ ಚುನಾವಣೆಯಾಗಿದೆ. ಮಂಡ್ಯ ಜಿ.ಪಂ ಅಧ್ಯಕ್ಷರಾಗಿದ್ದ ಅವರ ಪತ್ನಿ ನಾಗರತ್ನರವರ ಜೊತೆಗೂಡಿ ನಾಲ್ಕು ಜಿ.ಪಂ ಸದಸ್ಯರು ಇವರೊಡನೆ ಬಿಜೆಪಿ ಸೇರಿದ್ದಾರೆ.

ಶ್ರೀರಂಗಪಟ್ಟಣ – ಸಚ್ಚಿದಾನಂದ

2013 ರಲ್ಲಿ ಶ್ರೀರಂಗಪಟ್ಟಣದ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಎಸ್.ಎಲ್ ಲಿಂಗರಾಜುರವರ ಅಳಿಯ, ಕೆಪಿಸಿಸಿ ಸದಸ್ಯರಾಗಿದ್ದ ಸಚ್ಚಿದಾನಂದ ಇತ್ತೀಚೆಗೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿ ಅಭ್ಯರ್ಥಿಯಾಗಿದ್ದಾರೆ.

ನಾಗಮಂಗಲ – ಸುಧಾ ಶಿವರಾಮೇಗೌಡ

ಎರಡು ಸಲ ಶಾಸಕರಾಗಿದ್ದ ಎಲ್.ಆರ್ ಶಿವರಾಮೇಗೌಡರು 2018ರಲ್ಲಿ ಮಂಡ್ಯ ಲೋಕಸಭಾ ಉಪಚುನಾವಣೆಯಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿ ಜಯ ಗಳಿಸಿದ್ದರು. ಆದರೆ ಅವರು ಕಳೆದ ವರ್ಷ ಜಿ.ಮಾದೇಗೌಡರ ವಿರುದ್ಧ ಹಗುರವಾಗಿ ಮಾತನಾಡಿದ ಕಾರಣದಿಂದ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟಿಸಲಾಗಿತ್ತು. ಅವರು ಕಳೆದ ವಾರದಲ್ಲಿ ಬಿಜೆಪಿ ಸೇರಿದ್ದರು. ಅವರೇ ಅಭ್ಯರ್ಥಿ ಎನ್ನಲಾಗುತ್ತಿತ್ತು. ಆದರೆ ಅವರು ತಮ್ಮ ಪತ್ನಿ ಸುಧಾ ಶಿವರಾಮೇಗೌಡರಿಗೆ ಟಿಕೆಟ್ ತಂದಿದ್ದಾರೆ.

ಕೆ.ಆರ್ ಪೇಟೆ – ಕೆ.ಸಿ ನಾರಾಯಣಗೌಡ

ನಾರಾಯಣಗೌಡರು 2008ರಲ್ಲಿ ಕೆ.ಆರ್ ಪೇಟೆಯಲ್ಲಿ ಬಿಎಸ್‌ಪಿಯಿಂದ ಸ್ಪರ್ಧಿಸಿ ಸೋತಿದ್ದರು. ಆನಂತರ ಜೆಡಿಎಸ್ ಸೇರಿ 2013, 2018ರಲ್ಲಿ ಗೆಲುವು ಸಾಧಿಸಿದ್ದರು. ಆದರೆ 2019 ರಲ್ಲಿ ಆಪರೇಷನ್ ಕಮಲಕ್ಕೆ ಒಳಗಾಗಿ ಬಿಜೆಪಿ ಸೇರಿ ಉಪಚುನಾವಣೆಯಲ್ಲಿ ಜಯ ಕಂಡಿದ್ದರು. ಅವರಿಗೆ ಈ ಬಾರಿಯೂ ಬಿಜೆಪಿ ಟಿಕೆಟ್ ನೀಡಿದೆ.

ಮೇಲುಕೋಟೆ – ಡಾ.ಇಂದ್ರೇಶ್ ಕುಮಾರ್

ಮೇಲುಕೋಟೆಯಲ್ಲಿ ಬಿಜೆಪಿಗೆ ನೆಲೆ ಇಲ್ಲ. ಆದರೂ ಒಂದಷ್ಟು ಸಂಖ್ಯೆಯ ಓಟುಗಳನ್ನು ಪಡೆದು ತಾವೂ ನೆಲೆ ಕಂಡು, ಪಕ್ಷಕ್ಕೂ ನೆಲೆ ಕಾಣಿಸಲು ಡಾ.ಇಂದ್ರೇಶ್‌ ಕುಮಾರ್ ಮುಂದಾಗಿದ್ದಾರೆ. ಔಷಧಿ ಕಂಪನಿ ನಡೆಸುವ ಅವರಿಗೆ ಬಿಜೆಪಿ ಟಿಕೆಟ್ ಲಭಿಸಿದೆ.

ಮಳವಳ್ಳಿ – ಮುನಿರಾಜು

ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾದ ಮಳವಳ್ಳಿಯಲ್ಲಿ ಭೋವಿ ಸಮುದಾಯದ ಜಿ.ಮುನಿರಾಜುರವರು 2013ರಲ್ಲಿ ಕೆಜೆಪಿಯಿಂದ ಸ್ಪರ್ಧಿಸಿ 26,397 ಮತಗಳನ್ನು ಪಡೆದಿದ್ದರು. ಆದರೆ ಕಳೆದ ಚುನಾವಣೆಯ ಸಮಯದಲ್ಲಿ ಮಾಯವಾಗಿದ್ದ ಅವರು ಇತ್ತೀಚೆಗೆ ಮತ್ತೆ ಪ್ರತ್ಯಕ್ಷರಾಗಿದ್ದು ಸಮಾಜಸೇವೆ ಕೆಲಸಗಳಲ್ಲಿ ಗುರುತಿಸಿಕೊಂಡಿದ್ದರು. ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಆದರೆ ಅವರು ಮೂಲ ಮಳವಳ್ಳಿಯವರಲ್ಲ, ಬೆಂಗಳೂರಿನ ಕೆಂಗೇರಿಯವರು ಎಂದು ಕೆಲವರು ಆರೋಪ ಮಾಡುತ್ತಾರೆ.

ಇದನ್ನೂ ಓದಿ; 8 ಜನ ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಿದ ಬಿಜೆಪಿ: ಇಲ್ಲಿದೆ ಪಟ್ಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...