Homeಅಂಕಣಗಳುಕರ್ನಾಟಕ ವಿಧಾನಸಭಾ ಕ್ಷೇತ್ರಗಳ ಸಮೀಕ್ಷೆ:ಮಂಡ್ಯ: ಕಾರ್ಯಕರ್ತರಿಗಿಲ್ಲ ಬಿಜೆಪಿ ಟಿಕೆಟ್, ಪಕ್ಷಾಂತರಿಗಳಿಗೆ ಮಣೆ

ಮಂಡ್ಯ: ಕಾರ್ಯಕರ್ತರಿಗಿಲ್ಲ ಬಿಜೆಪಿ ಟಿಕೆಟ್, ಪಕ್ಷಾಂತರಿಗಳಿಗೆ ಮಣೆ

- Advertisement -
- Advertisement -

ಮಂಡ್ಯ ಜಿಲ್ಲೆಯಲ್ಲಿ ಸಾಮಾನ್ಯ ಕಾರ್ಯಕರ್ತರಿಗೆ ಬಿಜೆಪಿ ಟಿಕೆಟ್ ನೀಡುತ್ತೇವೆ ಎಂದು ಹಿರಿಯ ಮುಖಂಡರು ಘೋಷಿಸಿದ್ದರು. ಆದರೆ ಸದ್ಯ ಬಿಡುಗಡೆಯಾಗಿರುವ ಬಿಜೆಪಿಯ ಮೊದಲ 189 ಅಭ್ಯರ್ಥಿಗಳ ಪಟ್ಟಿಯಲ್ಲಿ ಜಿಲ್ಲೆ ಏಳು ವಿಧಾನಸಭಾ ಕ್ಷೇತ್ರಗಳಿಗೂ ಟಿಕೆಟ್ ಘೋಷಿಸಿದ್ದು ಅದರಲ್ಲಿ ಸಾಮಾನ್ಯ ಕಾರ್ಯಕರ್ತರ ಹೆಸರು ಮಿಸ್ ಆಗಿದ್ದು, ಬೇರೆ ಪಕ್ಷಗಳಿಂದ ವಲಸೆ ಬಂದವರಿಗೆ ಮಣೆ ಹಾಕಿರುವುದು ಸ್ಪಷ್ಟವಾಗಿದೆ.

ಮಂಡ್ಯ, ನಾಗಮಂಗಲ, ಕೆ.ಆರ್ ಪೇಟೆ ಮತ್ತು ಮದ್ದೂರಿನಲ್ಲಿ ಜೆಡಿಎಸ್‌ನಿಂದ ವಲಸೆ ಬಂದವರಿಗೆ ಹಾಗೂ ಶ್ರೀರಂಗಪಟ್ಟಣದಲ್ಲಿ ಕಾಂಗ್ರೆಸ್‌ನಿಂದ ಬಂದವರಿಗೆ ಬಿಜೆಪಿ ಟಿಕೆಟ್ ನೀಡಿದೆ.

ಮಂಡ್ಯ: ಅಶೋಕ್ ಎಸ್‌.ಡಿ ಜಯರಾಂ

ಅಶೋಕ್ ಎಸ್‌.ಡಿ ಜಯರಾಂರವರು ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. 2013ರ ಚುನಾವಣೆ ವೇಳೆಗೆ ಮಂಡ್ಯದಲ್ಲಿ ಹಾಲಿ ಶಾಸಕ ಎಂ.ಶ್ರೀನಿವಾಸ್ ಜೆಡಿಎಸ್‌ನಿಂದ ಕಣಕ್ಕಿಳಿಯುತ್ತಾರೆ. ಜೆಡಿಎಸ್ ಟಿಕೆಟ್ ಸಿಗದಿದ್ದರಿಂದ ಅಶೋಕ್ ಜಯರಾಂ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಾರೆ. ಕೊನೆ ಕ್ಷಣದಲ್ಲಿ ಜೆಡಿಎಸ್ ಪಕ್ಷವು ಎಸ್.ಡಿ ಜಯರಾಂರವರನ್ನು ಸಮಾಧಾನ ಪಡಿಸಿ ಚುನಾವಣಾ ಕಣದಿಂದ ನಿವೃತ್ತಿ ಘೋಷಿಸುವಂತೆ ಮಾಡುತ್ತದೆ. ಇನ್ನು 2018ರಲ್ಲಿಯೂ ಎಂ.ಶ್ರೀನಿವಾಸ್‌ರವರಿಗೆ ಜೆಡಿಎಸ್ ಟಿಕೆಟ್ ಘೋಷಿಸಿದ್ದರಿಂದ ಬೇಸೆತ್ತ ಅವರು ಬಿಜೆಪಿ ಸೇರಿದ್ದಾರೆ.

ಮದ್ದೂರು – ಎಸ್‌.ಪಿ ಸ್ವಾಮಿ

ಮದ್ದೂರಿನಲ್ಲಿ ಜೆಡಿಎಸ್ ಟಿಕೆಟ್ ಸಿಗುವುದಿಲ್ಲ ಎಂಬುದನ್ನು ಅರಿತು ಪಕ್ಷ ತೊರೆದು ಬಿಜೆಪಿ ಸೇರಿರುವ ಮುನ್ಮುಲ್ ನಿರ್ದೇಶಕ ಎಸ್.ಪಿ ಸ್ವಾಮಿಯವರು ಬಿಜೆಪಿ ಟಿಕೆಟ್ ಘೋಷಿಸಿದೆ. ಇದು ಅವರ ಮೊದಲ ವಿಧಾನಸಭಾ ಚುನಾವಣೆಯಾಗಿದೆ. ಮಂಡ್ಯ ಜಿ.ಪಂ ಅಧ್ಯಕ್ಷರಾಗಿದ್ದ ಅವರ ಪತ್ನಿ ನಾಗರತ್ನರವರ ಜೊತೆಗೂಡಿ ನಾಲ್ಕು ಜಿ.ಪಂ ಸದಸ್ಯರು ಇವರೊಡನೆ ಬಿಜೆಪಿ ಸೇರಿದ್ದಾರೆ.

ಶ್ರೀರಂಗಪಟ್ಟಣ – ಸಚ್ಚಿದಾನಂದ

2013 ರಲ್ಲಿ ಶ್ರೀರಂಗಪಟ್ಟಣದ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಎಸ್.ಎಲ್ ಲಿಂಗರಾಜುರವರ ಅಳಿಯ, ಕೆಪಿಸಿಸಿ ಸದಸ್ಯರಾಗಿದ್ದ ಸಚ್ಚಿದಾನಂದ ಇತ್ತೀಚೆಗೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿ ಅಭ್ಯರ್ಥಿಯಾಗಿದ್ದಾರೆ.

ನಾಗಮಂಗಲ – ಸುಧಾ ಶಿವರಾಮೇಗೌಡ

ಎರಡು ಸಲ ಶಾಸಕರಾಗಿದ್ದ ಎಲ್.ಆರ್ ಶಿವರಾಮೇಗೌಡರು 2018ರಲ್ಲಿ ಮಂಡ್ಯ ಲೋಕಸಭಾ ಉಪಚುನಾವಣೆಯಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿ ಜಯ ಗಳಿಸಿದ್ದರು. ಆದರೆ ಅವರು ಕಳೆದ ವರ್ಷ ಜಿ.ಮಾದೇಗೌಡರ ವಿರುದ್ಧ ಹಗುರವಾಗಿ ಮಾತನಾಡಿದ ಕಾರಣದಿಂದ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟಿಸಲಾಗಿತ್ತು. ಅವರು ಕಳೆದ ವಾರದಲ್ಲಿ ಬಿಜೆಪಿ ಸೇರಿದ್ದರು. ಅವರೇ ಅಭ್ಯರ್ಥಿ ಎನ್ನಲಾಗುತ್ತಿತ್ತು. ಆದರೆ ಅವರು ತಮ್ಮ ಪತ್ನಿ ಸುಧಾ ಶಿವರಾಮೇಗೌಡರಿಗೆ ಟಿಕೆಟ್ ತಂದಿದ್ದಾರೆ.

ಕೆ.ಆರ್ ಪೇಟೆ – ಕೆ.ಸಿ ನಾರಾಯಣಗೌಡ

ನಾರಾಯಣಗೌಡರು 2008ರಲ್ಲಿ ಕೆ.ಆರ್ ಪೇಟೆಯಲ್ಲಿ ಬಿಎಸ್‌ಪಿಯಿಂದ ಸ್ಪರ್ಧಿಸಿ ಸೋತಿದ್ದರು. ಆನಂತರ ಜೆಡಿಎಸ್ ಸೇರಿ 2013, 2018ರಲ್ಲಿ ಗೆಲುವು ಸಾಧಿಸಿದ್ದರು. ಆದರೆ 2019 ರಲ್ಲಿ ಆಪರೇಷನ್ ಕಮಲಕ್ಕೆ ಒಳಗಾಗಿ ಬಿಜೆಪಿ ಸೇರಿ ಉಪಚುನಾವಣೆಯಲ್ಲಿ ಜಯ ಕಂಡಿದ್ದರು. ಅವರಿಗೆ ಈ ಬಾರಿಯೂ ಬಿಜೆಪಿ ಟಿಕೆಟ್ ನೀಡಿದೆ.

ಮೇಲುಕೋಟೆ – ಡಾ.ಇಂದ್ರೇಶ್ ಕುಮಾರ್

ಮೇಲುಕೋಟೆಯಲ್ಲಿ ಬಿಜೆಪಿಗೆ ನೆಲೆ ಇಲ್ಲ. ಆದರೂ ಒಂದಷ್ಟು ಸಂಖ್ಯೆಯ ಓಟುಗಳನ್ನು ಪಡೆದು ತಾವೂ ನೆಲೆ ಕಂಡು, ಪಕ್ಷಕ್ಕೂ ನೆಲೆ ಕಾಣಿಸಲು ಡಾ.ಇಂದ್ರೇಶ್‌ ಕುಮಾರ್ ಮುಂದಾಗಿದ್ದಾರೆ. ಔಷಧಿ ಕಂಪನಿ ನಡೆಸುವ ಅವರಿಗೆ ಬಿಜೆಪಿ ಟಿಕೆಟ್ ಲಭಿಸಿದೆ.

ಮಳವಳ್ಳಿ – ಮುನಿರಾಜು

ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾದ ಮಳವಳ್ಳಿಯಲ್ಲಿ ಭೋವಿ ಸಮುದಾಯದ ಜಿ.ಮುನಿರಾಜುರವರು 2013ರಲ್ಲಿ ಕೆಜೆಪಿಯಿಂದ ಸ್ಪರ್ಧಿಸಿ 26,397 ಮತಗಳನ್ನು ಪಡೆದಿದ್ದರು. ಆದರೆ ಕಳೆದ ಚುನಾವಣೆಯ ಸಮಯದಲ್ಲಿ ಮಾಯವಾಗಿದ್ದ ಅವರು ಇತ್ತೀಚೆಗೆ ಮತ್ತೆ ಪ್ರತ್ಯಕ್ಷರಾಗಿದ್ದು ಸಮಾಜಸೇವೆ ಕೆಲಸಗಳಲ್ಲಿ ಗುರುತಿಸಿಕೊಂಡಿದ್ದರು. ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಆದರೆ ಅವರು ಮೂಲ ಮಳವಳ್ಳಿಯವರಲ್ಲ, ಬೆಂಗಳೂರಿನ ಕೆಂಗೇರಿಯವರು ಎಂದು ಕೆಲವರು ಆರೋಪ ಮಾಡುತ್ತಾರೆ.

ಇದನ್ನೂ ಓದಿ; 8 ಜನ ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಿದ ಬಿಜೆಪಿ: ಇಲ್ಲಿದೆ ಪಟ್ಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...