Homeಅಂಕಣಗಳುಕರ್ನಾಟಕ ವಿಧಾನಸಭಾ ಕ್ಷೇತ್ರಗಳ ಸಮೀಕ್ಷೆ:ಮಂಡ್ಯ: ಕಾರ್ಯಕರ್ತರಿಗಿಲ್ಲ ಬಿಜೆಪಿ ಟಿಕೆಟ್, ಪಕ್ಷಾಂತರಿಗಳಿಗೆ ಮಣೆ

ಮಂಡ್ಯ: ಕಾರ್ಯಕರ್ತರಿಗಿಲ್ಲ ಬಿಜೆಪಿ ಟಿಕೆಟ್, ಪಕ್ಷಾಂತರಿಗಳಿಗೆ ಮಣೆ

- Advertisement -
- Advertisement -

ಮಂಡ್ಯ ಜಿಲ್ಲೆಯಲ್ಲಿ ಸಾಮಾನ್ಯ ಕಾರ್ಯಕರ್ತರಿಗೆ ಬಿಜೆಪಿ ಟಿಕೆಟ್ ನೀಡುತ್ತೇವೆ ಎಂದು ಹಿರಿಯ ಮುಖಂಡರು ಘೋಷಿಸಿದ್ದರು. ಆದರೆ ಸದ್ಯ ಬಿಡುಗಡೆಯಾಗಿರುವ ಬಿಜೆಪಿಯ ಮೊದಲ 189 ಅಭ್ಯರ್ಥಿಗಳ ಪಟ್ಟಿಯಲ್ಲಿ ಜಿಲ್ಲೆ ಏಳು ವಿಧಾನಸಭಾ ಕ್ಷೇತ್ರಗಳಿಗೂ ಟಿಕೆಟ್ ಘೋಷಿಸಿದ್ದು ಅದರಲ್ಲಿ ಸಾಮಾನ್ಯ ಕಾರ್ಯಕರ್ತರ ಹೆಸರು ಮಿಸ್ ಆಗಿದ್ದು, ಬೇರೆ ಪಕ್ಷಗಳಿಂದ ವಲಸೆ ಬಂದವರಿಗೆ ಮಣೆ ಹಾಕಿರುವುದು ಸ್ಪಷ್ಟವಾಗಿದೆ.

ಮಂಡ್ಯ, ನಾಗಮಂಗಲ, ಕೆ.ಆರ್ ಪೇಟೆ ಮತ್ತು ಮದ್ದೂರಿನಲ್ಲಿ ಜೆಡಿಎಸ್‌ನಿಂದ ವಲಸೆ ಬಂದವರಿಗೆ ಹಾಗೂ ಶ್ರೀರಂಗಪಟ್ಟಣದಲ್ಲಿ ಕಾಂಗ್ರೆಸ್‌ನಿಂದ ಬಂದವರಿಗೆ ಬಿಜೆಪಿ ಟಿಕೆಟ್ ನೀಡಿದೆ.

ಮಂಡ್ಯ: ಅಶೋಕ್ ಎಸ್‌.ಡಿ ಜಯರಾಂ

ಅಶೋಕ್ ಎಸ್‌.ಡಿ ಜಯರಾಂರವರು ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. 2013ರ ಚುನಾವಣೆ ವೇಳೆಗೆ ಮಂಡ್ಯದಲ್ಲಿ ಹಾಲಿ ಶಾಸಕ ಎಂ.ಶ್ರೀನಿವಾಸ್ ಜೆಡಿಎಸ್‌ನಿಂದ ಕಣಕ್ಕಿಳಿಯುತ್ತಾರೆ. ಜೆಡಿಎಸ್ ಟಿಕೆಟ್ ಸಿಗದಿದ್ದರಿಂದ ಅಶೋಕ್ ಜಯರಾಂ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಾರೆ. ಕೊನೆ ಕ್ಷಣದಲ್ಲಿ ಜೆಡಿಎಸ್ ಪಕ್ಷವು ಎಸ್.ಡಿ ಜಯರಾಂರವರನ್ನು ಸಮಾಧಾನ ಪಡಿಸಿ ಚುನಾವಣಾ ಕಣದಿಂದ ನಿವೃತ್ತಿ ಘೋಷಿಸುವಂತೆ ಮಾಡುತ್ತದೆ. ಇನ್ನು 2018ರಲ್ಲಿಯೂ ಎಂ.ಶ್ರೀನಿವಾಸ್‌ರವರಿಗೆ ಜೆಡಿಎಸ್ ಟಿಕೆಟ್ ಘೋಷಿಸಿದ್ದರಿಂದ ಬೇಸೆತ್ತ ಅವರು ಬಿಜೆಪಿ ಸೇರಿದ್ದಾರೆ.

ಮದ್ದೂರು – ಎಸ್‌.ಪಿ ಸ್ವಾಮಿ

ಮದ್ದೂರಿನಲ್ಲಿ ಜೆಡಿಎಸ್ ಟಿಕೆಟ್ ಸಿಗುವುದಿಲ್ಲ ಎಂಬುದನ್ನು ಅರಿತು ಪಕ್ಷ ತೊರೆದು ಬಿಜೆಪಿ ಸೇರಿರುವ ಮುನ್ಮುಲ್ ನಿರ್ದೇಶಕ ಎಸ್.ಪಿ ಸ್ವಾಮಿಯವರು ಬಿಜೆಪಿ ಟಿಕೆಟ್ ಘೋಷಿಸಿದೆ. ಇದು ಅವರ ಮೊದಲ ವಿಧಾನಸಭಾ ಚುನಾವಣೆಯಾಗಿದೆ. ಮಂಡ್ಯ ಜಿ.ಪಂ ಅಧ್ಯಕ್ಷರಾಗಿದ್ದ ಅವರ ಪತ್ನಿ ನಾಗರತ್ನರವರ ಜೊತೆಗೂಡಿ ನಾಲ್ಕು ಜಿ.ಪಂ ಸದಸ್ಯರು ಇವರೊಡನೆ ಬಿಜೆಪಿ ಸೇರಿದ್ದಾರೆ.

ಶ್ರೀರಂಗಪಟ್ಟಣ – ಸಚ್ಚಿದಾನಂದ

2013 ರಲ್ಲಿ ಶ್ರೀರಂಗಪಟ್ಟಣದ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಎಸ್.ಎಲ್ ಲಿಂಗರಾಜುರವರ ಅಳಿಯ, ಕೆಪಿಸಿಸಿ ಸದಸ್ಯರಾಗಿದ್ದ ಸಚ್ಚಿದಾನಂದ ಇತ್ತೀಚೆಗೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿ ಅಭ್ಯರ್ಥಿಯಾಗಿದ್ದಾರೆ.

ನಾಗಮಂಗಲ – ಸುಧಾ ಶಿವರಾಮೇಗೌಡ

ಎರಡು ಸಲ ಶಾಸಕರಾಗಿದ್ದ ಎಲ್.ಆರ್ ಶಿವರಾಮೇಗೌಡರು 2018ರಲ್ಲಿ ಮಂಡ್ಯ ಲೋಕಸಭಾ ಉಪಚುನಾವಣೆಯಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿ ಜಯ ಗಳಿಸಿದ್ದರು. ಆದರೆ ಅವರು ಕಳೆದ ವರ್ಷ ಜಿ.ಮಾದೇಗೌಡರ ವಿರುದ್ಧ ಹಗುರವಾಗಿ ಮಾತನಾಡಿದ ಕಾರಣದಿಂದ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟಿಸಲಾಗಿತ್ತು. ಅವರು ಕಳೆದ ವಾರದಲ್ಲಿ ಬಿಜೆಪಿ ಸೇರಿದ್ದರು. ಅವರೇ ಅಭ್ಯರ್ಥಿ ಎನ್ನಲಾಗುತ್ತಿತ್ತು. ಆದರೆ ಅವರು ತಮ್ಮ ಪತ್ನಿ ಸುಧಾ ಶಿವರಾಮೇಗೌಡರಿಗೆ ಟಿಕೆಟ್ ತಂದಿದ್ದಾರೆ.

ಕೆ.ಆರ್ ಪೇಟೆ – ಕೆ.ಸಿ ನಾರಾಯಣಗೌಡ

ನಾರಾಯಣಗೌಡರು 2008ರಲ್ಲಿ ಕೆ.ಆರ್ ಪೇಟೆಯಲ್ಲಿ ಬಿಎಸ್‌ಪಿಯಿಂದ ಸ್ಪರ್ಧಿಸಿ ಸೋತಿದ್ದರು. ಆನಂತರ ಜೆಡಿಎಸ್ ಸೇರಿ 2013, 2018ರಲ್ಲಿ ಗೆಲುವು ಸಾಧಿಸಿದ್ದರು. ಆದರೆ 2019 ರಲ್ಲಿ ಆಪರೇಷನ್ ಕಮಲಕ್ಕೆ ಒಳಗಾಗಿ ಬಿಜೆಪಿ ಸೇರಿ ಉಪಚುನಾವಣೆಯಲ್ಲಿ ಜಯ ಕಂಡಿದ್ದರು. ಅವರಿಗೆ ಈ ಬಾರಿಯೂ ಬಿಜೆಪಿ ಟಿಕೆಟ್ ನೀಡಿದೆ.

ಮೇಲುಕೋಟೆ – ಡಾ.ಇಂದ್ರೇಶ್ ಕುಮಾರ್

ಮೇಲುಕೋಟೆಯಲ್ಲಿ ಬಿಜೆಪಿಗೆ ನೆಲೆ ಇಲ್ಲ. ಆದರೂ ಒಂದಷ್ಟು ಸಂಖ್ಯೆಯ ಓಟುಗಳನ್ನು ಪಡೆದು ತಾವೂ ನೆಲೆ ಕಂಡು, ಪಕ್ಷಕ್ಕೂ ನೆಲೆ ಕಾಣಿಸಲು ಡಾ.ಇಂದ್ರೇಶ್‌ ಕುಮಾರ್ ಮುಂದಾಗಿದ್ದಾರೆ. ಔಷಧಿ ಕಂಪನಿ ನಡೆಸುವ ಅವರಿಗೆ ಬಿಜೆಪಿ ಟಿಕೆಟ್ ಲಭಿಸಿದೆ.

ಮಳವಳ್ಳಿ – ಮುನಿರಾಜು

ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾದ ಮಳವಳ್ಳಿಯಲ್ಲಿ ಭೋವಿ ಸಮುದಾಯದ ಜಿ.ಮುನಿರಾಜುರವರು 2013ರಲ್ಲಿ ಕೆಜೆಪಿಯಿಂದ ಸ್ಪರ್ಧಿಸಿ 26,397 ಮತಗಳನ್ನು ಪಡೆದಿದ್ದರು. ಆದರೆ ಕಳೆದ ಚುನಾವಣೆಯ ಸಮಯದಲ್ಲಿ ಮಾಯವಾಗಿದ್ದ ಅವರು ಇತ್ತೀಚೆಗೆ ಮತ್ತೆ ಪ್ರತ್ಯಕ್ಷರಾಗಿದ್ದು ಸಮಾಜಸೇವೆ ಕೆಲಸಗಳಲ್ಲಿ ಗುರುತಿಸಿಕೊಂಡಿದ್ದರು. ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಆದರೆ ಅವರು ಮೂಲ ಮಳವಳ್ಳಿಯವರಲ್ಲ, ಬೆಂಗಳೂರಿನ ಕೆಂಗೇರಿಯವರು ಎಂದು ಕೆಲವರು ಆರೋಪ ಮಾಡುತ್ತಾರೆ.

ಇದನ್ನೂ ಓದಿ; 8 ಜನ ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಿದ ಬಿಜೆಪಿ: ಇಲ್ಲಿದೆ ಪಟ್ಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...