Homeಅಂಕಣಗಳುಕರ್ನಾಟಕ ವಿಧಾನಸಭಾ ಕ್ಷೇತ್ರಗಳ ಸಮೀಕ್ಷೆ:ಮಂಡ್ಯ: ಕಾರ್ಯಕರ್ತರಿಗಿಲ್ಲ ಬಿಜೆಪಿ ಟಿಕೆಟ್, ಪಕ್ಷಾಂತರಿಗಳಿಗೆ ಮಣೆ

ಮಂಡ್ಯ: ಕಾರ್ಯಕರ್ತರಿಗಿಲ್ಲ ಬಿಜೆಪಿ ಟಿಕೆಟ್, ಪಕ್ಷಾಂತರಿಗಳಿಗೆ ಮಣೆ

- Advertisement -
- Advertisement -

ಮಂಡ್ಯ ಜಿಲ್ಲೆಯಲ್ಲಿ ಸಾಮಾನ್ಯ ಕಾರ್ಯಕರ್ತರಿಗೆ ಬಿಜೆಪಿ ಟಿಕೆಟ್ ನೀಡುತ್ತೇವೆ ಎಂದು ಹಿರಿಯ ಮುಖಂಡರು ಘೋಷಿಸಿದ್ದರು. ಆದರೆ ಸದ್ಯ ಬಿಡುಗಡೆಯಾಗಿರುವ ಬಿಜೆಪಿಯ ಮೊದಲ 189 ಅಭ್ಯರ್ಥಿಗಳ ಪಟ್ಟಿಯಲ್ಲಿ ಜಿಲ್ಲೆ ಏಳು ವಿಧಾನಸಭಾ ಕ್ಷೇತ್ರಗಳಿಗೂ ಟಿಕೆಟ್ ಘೋಷಿಸಿದ್ದು ಅದರಲ್ಲಿ ಸಾಮಾನ್ಯ ಕಾರ್ಯಕರ್ತರ ಹೆಸರು ಮಿಸ್ ಆಗಿದ್ದು, ಬೇರೆ ಪಕ್ಷಗಳಿಂದ ವಲಸೆ ಬಂದವರಿಗೆ ಮಣೆ ಹಾಕಿರುವುದು ಸ್ಪಷ್ಟವಾಗಿದೆ.

ಮಂಡ್ಯ, ನಾಗಮಂಗಲ, ಕೆ.ಆರ್ ಪೇಟೆ ಮತ್ತು ಮದ್ದೂರಿನಲ್ಲಿ ಜೆಡಿಎಸ್‌ನಿಂದ ವಲಸೆ ಬಂದವರಿಗೆ ಹಾಗೂ ಶ್ರೀರಂಗಪಟ್ಟಣದಲ್ಲಿ ಕಾಂಗ್ರೆಸ್‌ನಿಂದ ಬಂದವರಿಗೆ ಬಿಜೆಪಿ ಟಿಕೆಟ್ ನೀಡಿದೆ.

ಮಂಡ್ಯ: ಅಶೋಕ್ ಎಸ್‌.ಡಿ ಜಯರಾಂ

ಅಶೋಕ್ ಎಸ್‌.ಡಿ ಜಯರಾಂರವರು ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. 2013ರ ಚುನಾವಣೆ ವೇಳೆಗೆ ಮಂಡ್ಯದಲ್ಲಿ ಹಾಲಿ ಶಾಸಕ ಎಂ.ಶ್ರೀನಿವಾಸ್ ಜೆಡಿಎಸ್‌ನಿಂದ ಕಣಕ್ಕಿಳಿಯುತ್ತಾರೆ. ಜೆಡಿಎಸ್ ಟಿಕೆಟ್ ಸಿಗದಿದ್ದರಿಂದ ಅಶೋಕ್ ಜಯರಾಂ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಾರೆ. ಕೊನೆ ಕ್ಷಣದಲ್ಲಿ ಜೆಡಿಎಸ್ ಪಕ್ಷವು ಎಸ್.ಡಿ ಜಯರಾಂರವರನ್ನು ಸಮಾಧಾನ ಪಡಿಸಿ ಚುನಾವಣಾ ಕಣದಿಂದ ನಿವೃತ್ತಿ ಘೋಷಿಸುವಂತೆ ಮಾಡುತ್ತದೆ. ಇನ್ನು 2018ರಲ್ಲಿಯೂ ಎಂ.ಶ್ರೀನಿವಾಸ್‌ರವರಿಗೆ ಜೆಡಿಎಸ್ ಟಿಕೆಟ್ ಘೋಷಿಸಿದ್ದರಿಂದ ಬೇಸೆತ್ತ ಅವರು ಬಿಜೆಪಿ ಸೇರಿದ್ದಾರೆ.

ಮದ್ದೂರು – ಎಸ್‌.ಪಿ ಸ್ವಾಮಿ

ಮದ್ದೂರಿನಲ್ಲಿ ಜೆಡಿಎಸ್ ಟಿಕೆಟ್ ಸಿಗುವುದಿಲ್ಲ ಎಂಬುದನ್ನು ಅರಿತು ಪಕ್ಷ ತೊರೆದು ಬಿಜೆಪಿ ಸೇರಿರುವ ಮುನ್ಮುಲ್ ನಿರ್ದೇಶಕ ಎಸ್.ಪಿ ಸ್ವಾಮಿಯವರು ಬಿಜೆಪಿ ಟಿಕೆಟ್ ಘೋಷಿಸಿದೆ. ಇದು ಅವರ ಮೊದಲ ವಿಧಾನಸಭಾ ಚುನಾವಣೆಯಾಗಿದೆ. ಮಂಡ್ಯ ಜಿ.ಪಂ ಅಧ್ಯಕ್ಷರಾಗಿದ್ದ ಅವರ ಪತ್ನಿ ನಾಗರತ್ನರವರ ಜೊತೆಗೂಡಿ ನಾಲ್ಕು ಜಿ.ಪಂ ಸದಸ್ಯರು ಇವರೊಡನೆ ಬಿಜೆಪಿ ಸೇರಿದ್ದಾರೆ.

ಶ್ರೀರಂಗಪಟ್ಟಣ – ಸಚ್ಚಿದಾನಂದ

2013 ರಲ್ಲಿ ಶ್ರೀರಂಗಪಟ್ಟಣದ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಎಸ್.ಎಲ್ ಲಿಂಗರಾಜುರವರ ಅಳಿಯ, ಕೆಪಿಸಿಸಿ ಸದಸ್ಯರಾಗಿದ್ದ ಸಚ್ಚಿದಾನಂದ ಇತ್ತೀಚೆಗೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿ ಅಭ್ಯರ್ಥಿಯಾಗಿದ್ದಾರೆ.

ನಾಗಮಂಗಲ – ಸುಧಾ ಶಿವರಾಮೇಗೌಡ

ಎರಡು ಸಲ ಶಾಸಕರಾಗಿದ್ದ ಎಲ್.ಆರ್ ಶಿವರಾಮೇಗೌಡರು 2018ರಲ್ಲಿ ಮಂಡ್ಯ ಲೋಕಸಭಾ ಉಪಚುನಾವಣೆಯಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿ ಜಯ ಗಳಿಸಿದ್ದರು. ಆದರೆ ಅವರು ಕಳೆದ ವರ್ಷ ಜಿ.ಮಾದೇಗೌಡರ ವಿರುದ್ಧ ಹಗುರವಾಗಿ ಮಾತನಾಡಿದ ಕಾರಣದಿಂದ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟಿಸಲಾಗಿತ್ತು. ಅವರು ಕಳೆದ ವಾರದಲ್ಲಿ ಬಿಜೆಪಿ ಸೇರಿದ್ದರು. ಅವರೇ ಅಭ್ಯರ್ಥಿ ಎನ್ನಲಾಗುತ್ತಿತ್ತು. ಆದರೆ ಅವರು ತಮ್ಮ ಪತ್ನಿ ಸುಧಾ ಶಿವರಾಮೇಗೌಡರಿಗೆ ಟಿಕೆಟ್ ತಂದಿದ್ದಾರೆ.

ಕೆ.ಆರ್ ಪೇಟೆ – ಕೆ.ಸಿ ನಾರಾಯಣಗೌಡ

ನಾರಾಯಣಗೌಡರು 2008ರಲ್ಲಿ ಕೆ.ಆರ್ ಪೇಟೆಯಲ್ಲಿ ಬಿಎಸ್‌ಪಿಯಿಂದ ಸ್ಪರ್ಧಿಸಿ ಸೋತಿದ್ದರು. ಆನಂತರ ಜೆಡಿಎಸ್ ಸೇರಿ 2013, 2018ರಲ್ಲಿ ಗೆಲುವು ಸಾಧಿಸಿದ್ದರು. ಆದರೆ 2019 ರಲ್ಲಿ ಆಪರೇಷನ್ ಕಮಲಕ್ಕೆ ಒಳಗಾಗಿ ಬಿಜೆಪಿ ಸೇರಿ ಉಪಚುನಾವಣೆಯಲ್ಲಿ ಜಯ ಕಂಡಿದ್ದರು. ಅವರಿಗೆ ಈ ಬಾರಿಯೂ ಬಿಜೆಪಿ ಟಿಕೆಟ್ ನೀಡಿದೆ.

ಮೇಲುಕೋಟೆ – ಡಾ.ಇಂದ್ರೇಶ್ ಕುಮಾರ್

ಮೇಲುಕೋಟೆಯಲ್ಲಿ ಬಿಜೆಪಿಗೆ ನೆಲೆ ಇಲ್ಲ. ಆದರೂ ಒಂದಷ್ಟು ಸಂಖ್ಯೆಯ ಓಟುಗಳನ್ನು ಪಡೆದು ತಾವೂ ನೆಲೆ ಕಂಡು, ಪಕ್ಷಕ್ಕೂ ನೆಲೆ ಕಾಣಿಸಲು ಡಾ.ಇಂದ್ರೇಶ್‌ ಕುಮಾರ್ ಮುಂದಾಗಿದ್ದಾರೆ. ಔಷಧಿ ಕಂಪನಿ ನಡೆಸುವ ಅವರಿಗೆ ಬಿಜೆಪಿ ಟಿಕೆಟ್ ಲಭಿಸಿದೆ.

ಮಳವಳ್ಳಿ – ಮುನಿರಾಜು

ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾದ ಮಳವಳ್ಳಿಯಲ್ಲಿ ಭೋವಿ ಸಮುದಾಯದ ಜಿ.ಮುನಿರಾಜುರವರು 2013ರಲ್ಲಿ ಕೆಜೆಪಿಯಿಂದ ಸ್ಪರ್ಧಿಸಿ 26,397 ಮತಗಳನ್ನು ಪಡೆದಿದ್ದರು. ಆದರೆ ಕಳೆದ ಚುನಾವಣೆಯ ಸಮಯದಲ್ಲಿ ಮಾಯವಾಗಿದ್ದ ಅವರು ಇತ್ತೀಚೆಗೆ ಮತ್ತೆ ಪ್ರತ್ಯಕ್ಷರಾಗಿದ್ದು ಸಮಾಜಸೇವೆ ಕೆಲಸಗಳಲ್ಲಿ ಗುರುತಿಸಿಕೊಂಡಿದ್ದರು. ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಆದರೆ ಅವರು ಮೂಲ ಮಳವಳ್ಳಿಯವರಲ್ಲ, ಬೆಂಗಳೂರಿನ ಕೆಂಗೇರಿಯವರು ಎಂದು ಕೆಲವರು ಆರೋಪ ಮಾಡುತ್ತಾರೆ.

ಇದನ್ನೂ ಓದಿ; 8 ಜನ ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಿದ ಬಿಜೆಪಿ: ಇಲ್ಲಿದೆ ಪಟ್ಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...