Homeಚಳವಳಿಹಕ್ಕುಪತ್ರ ನೀಡಿ, ತುಂಡು ಭೂಮಿ ಉಳಿಸಿಕೊಡಿ: ಸಿಎಂಗೆ ಮನವಿ ಸಲ್ಲಿಸಲು ಪಾದಯಾತ್ರೆ ಹೊರಟ ಮಂಡ್ಯದ ಶ್ರಮಿಕರು

ಹಕ್ಕುಪತ್ರ ನೀಡಿ, ತುಂಡು ಭೂಮಿ ಉಳಿಸಿಕೊಡಿ: ಸಿಎಂಗೆ ಮನವಿ ಸಲ್ಲಿಸಲು ಪಾದಯಾತ್ರೆ ಹೊರಟ ಮಂಡ್ಯದ ಶ್ರಮಿಕರು

ರಾಜ್ಯದ ಮುಖ್ಯಮಂತ್ರಿಯವರೆ, ಶ್ರೀಮಂತರ ಹೆಲಿಪ್ಯಾಡ್‌ಗೆ ಶಂಕುಸ್ಥಾಪನೆ ಮಾಡುತ್ತಿದ್ದೀರಿ, ಬಡವರ ಮನೆಗಳಿಗೆ ಯಾವಾಗ ಶಂಕು ಸ್ಥಾಪನೆ ಮಾಡುತ್ತೀರಿ? ಎಂದು ಜನತೆ ಪ್ರಶ್ನಿಸುತ್ತಿದ್ದಾರೆ.

- Advertisement -
- Advertisement -

ಮಂಡ್ಯ ನಗರವನ್ನು ಕಟ್ಟಿದ, ಅದನ್ನು ಪ್ರತಿನಿತ್ಯ ಸ್ವಚ್ಛವಾಗಿಡುತ್ತಿರುವ ಶ್ರಮಿಕ ನಿವಾಸಿಗಳು ಕಳೆದ 5 ದಿನಗಳಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ 15 ವರ್ಷಗಳಿಂದ ಇಂತಹ ನೂರಾರು ಹೋರಾಟಗಳನ್ನು ಮಾಡಿದರೂ ಅವರಿಗೆ ಹಕ್ಕುಪತ್ರಗಳು ಸಿಕ್ಕಿಲ್ಲ. ಅಲ್ಲದೆ ಅವರು ವಾಸಿಸುತ್ತಿರುವ ತುಂಡು ಭೂಮಿಯನ್ನು ಆಕ್ರಮಿಸಿಕೊಳ್ಳಲು ಹಲವಾರು ಜನ ಹೊಂಚು ಹಾಕುತ್ತಿದ್ದಾರೆ. ಇದರಿಂದ ಆತಂಕಿತಗೊಂಡಿರುವ ಅಲ್ಲಿನ ಶ್ರಮಿಕ ನಿವಾಸಿಗಳು ಈಗ ನೇರವಾಗಿ ಸಿಎಂ ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಿ, ತಮ್ಮ ಸಂಕಷ್ಟ ಹೇಳಿಕೊಳ್ಳಲು ಪಾದಯಾತ್ರೆ ಹೊರಟಿದ್ದಾರೆ. ರಾಜ್ಯದ ಮುಖ್ಯಮಂತ್ರಿಯವರೆ, ಶ್ರೀಮಂತರ ಹೆಲಿಪ್ಯಾಡ್‌ಗೆ ಶಂಕುಸ್ಥಾಪನೆ ಮಾಡುತ್ತಿದ್ದೀರಿ…. ಬಡವರ ಮನೆಗಳಿಗೆ ಯಾವಾಗ ಶಂಕು ಸ್ಥಾಪನೆ ಮಾಡುತ್ತೀರಿ? ಎಂದು ಜನತೆ ಪ್ರಶ್ನಿಸುತ್ತಿದ್ದಾರೆ.

ಮಂಡ್ಯದ ಜಿಲ್ಲಾಧಿಕಾರಿಗಳ ಕಚೇರಿ ಸೇರಿದಂತೆ ಹಲವಾರು ದೊಡ್ಡ ದೊಡ್ಡ ಕಟ್ಟಡಗಳನ್ನು ಕಟ್ಟಿದ ಶ್ರಮಿಕ ನಿವಾಸಿಗಳು ಅಲ್ಲೆ ಪಕ್ಕದಲ್ಲಿ, ಸುತ್ತಾ ಮುತ್ತಾ ನೂರಾರು ವರ್ಷಗಳಿಂದ ವಾಸವಾಗಿದ್ದಾರೆ. ಆರ್‌ಟಿಓ ಕಚೇರಿ ಎದುರು 80 ಕುಟುಂಬಗಳು ಗುಡಿಸಲು ಹಾಕಿಕೊಂಡು ವಾಸ ಮಾಡುತ್ತಾ ಬಂದಿದ್ದಾರೆ. ಕಾಳಪ್ಪ ಬಡಾವಣೆ ಎಂದು ಹೆಸರು ಇಟ್ಟುಕೊಂಡಿರುವ ಇಲ್ಲಿನ ಶ್ರಮಿಕರು ಬಹುತೇಕ ಪೌರಕಾರ್ಮಿಕ ಕೆಲಸ ಮಾಡುತ್ತಾರೆ. ಅಲ್ಲದೆ ದಿನಗೂಲಿ ಕಾರ್ಮಿಕರಾಗಿ, ಮೂಟೆಹೊರುವ ಕಾರ್ಮಿಕರಾಗಿ, ಮನೆಕಟ್ಟುವವರಾಗಿ, ಮನೆಕೆಲಸಕ್ಕೆ ನೆರವಾಗುವವರಾಗಿ ಹತ್ತುಹಲವು ರೀತಿಗಳಲ್ಲಿ ಈ ನಗರವನ್ನು ಸ್ವಚ್ಛವಾಗಿಡುತ್ತಿದ್ದಾರೆ. ಅವರ ಹಕ್ಕೊತ್ತಾಯ ಒಂದೇ. ಅದು ಅವರು 50 ವರ್ಷಗಳಿಂದ ವಾಸಿಸುತ್ತಿರುವ ಜಾಗವನ್ನು ಸ್ಲಂ ಎಂದು ಘೋಷಿಸಿ ಅವರಿಗೆ ಹಕ್ಕುಪತ್ರ ನೀಡಬೇಕು. ಸರ್ಕಾರ ಮನೆಗಳನ್ನು ಕಟ್ಟಿಕೊಡಬೇಕು ಎಂಬುದಾಗಿದೆ.

ಈ ವಿಚಾರದಲ್ಲಿ ಹಲವಾರು ಹೋರಾಟಗಳು ನಡೆದು 2007ರಲ್ಲಿ ಈ ಪ್ರದೇಶವನ್ನು ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿಯಿಂದ ಸ್ಲಂ ಎಂದು ಘೋಷಣೆ ಮಾಡಲಾಗಿತ್ತು. ಸರ್ಕಾರ ವಾಂಬೆ ಯೋಜನೆಯಡಿಯಲ್ಲಿ 80 ಮನೆಗಳನ್ನು ನಿರ್ಮಾಣ ಮಾಡಿಕೊಡಲು ಕಾಮಗಾರಿ ಪ್ರಾರಂಭಿಸಿತ್ತು. ಆದರೆ, ಪಟ್ಟಭದ್ರ ಹಿತಾಸಕ್ತಿಗಳು ಆ ಜಾಗವನ್ನು ಲಪಟಾಯಿಸಲು ಹುನ್ನಾರ ಮಾಡಿ ಅಲ್ಲಿನ ಜನರಿಗೆ ಹಕ್ಕುಪತ್ರಗಳು ಸಿಗದ ಹಾಗೆ ನೋಡಿಕೊಂಡಿದ್ದಾರೆ. ಇದರಿಂದಾಗಿ ಅಲ್ಲಿಯ ನಿವಾಸಿಗಳಿಗೆ ಹಕ್ಕು ಪತ್ರಗಳು ಇಲ್ಲದೆ, ಯಾವ ಯೋಜನೆಯ ಅಡಿಯಲ್ಲೂ ವಸತಿಯನ್ನು ನಿರ್ಮಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಮನೆಗಳೆ ಇಲ್ಲ ಎಂದ ಮೇಲೆ ಮೂಲಭೂತ ಸೌಲಭ್ಯಗಳು ದೂರದ ಮಾತು.

ಈಗ ಅದೇ ಜಾಗದಲ್ಲಿ ಹಲವು ನೌಕರರ ಸಂಘಟನೆಗಳು ತಮ್ಮ ಕಚೇರಿಗಳನ್ನು ಸ್ಥಾಪಿಸಿಕೊಳ್ಳಲು ಮುಂದಾಗಿವೆ. ಶ್ರಮಿಕನಿವಾಸಿಗಳು ಬಳಸುತ್ತಿದ್ದ ಶೌಚಾಲಯವನ್ನು ಕೆಡವಿಹಾಕಿವೆ. ಇದರಿಂದ ಆತಂಕಿತರಾಗಿರುವ ಅಲ್ಲಿನ ನಿವಾಸಿಗಳು ಮಂಡ್ಯದ ಇತರ ಶ್ರಮಿಕ ನಿವಾಸಿಗಳ ಜೊತೆಗೂಡಿ ಹೋರಾಟ ಆರಂಭಿಸಿದ್ದಾರೆ. ಕಾಳಪ್ಪ ಬಡಾವಣೆಯನ್ನು ಸ್ಲಂ ಎಂದು ಅಂತಿಮ ಡಿಕ್ಲೆರೇಶನ್ ಕೂಡಲೇ ಹೊರಡಿಸಬೇಕು ಮತ್ತು ಹಕ್ಕು ಪತ್ರ ಒದಗಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರೂ ಜಿಲ್ಲಾಧಿಕಾರಿಯಾಗಲಿ, ಇತರ ಅಧಿಕಾರಿಗಳಾಗಲಿ ಸ್ಪಂದಿಸಿಲ್ಲ. ಹಾಗಾಗಿ ಜುಲೈ 21 ರಂದು ಜಿಲ್ಲೆ ಕೆ.ಆರ್‌ ಪೇಟೆಯಲ್ಲಿ ಹೆಲಿಪ್ಯಾಡ್ ಉದ್ಘಾಟನೆ ಮಾಡಲು ಆಗಮಿಸುತ್ತಿರುವ ಸಿಎಂ ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಿ ತಮ್ಮ ಸಮಸ್ಯೆ ಹೇಳಿಕೊಳ್ಳಲು ಸ್ಲಂ ನಿವಾಸಿಗಳು ಮುಂದಾಗಿದ್ದಾರೆ. ಅದಕ್ಕಾಗಿ ಕೆ.ಆರ್‌ ಪೇಟೆ ಪಾದಯಾತ್ರೆ ಆರಂಭಿಸಿದ್ದಾರೆ.

ಮಂಡ್ಯ ಜಿಲ್ಲಾ ಶ್ರಮಿಕನಗರ ನಿವಾಸಿಗಳ ಒಕ್ಕೂಟ, ಕರ್ನಾಟಕ ಜನಶಕ್ತಿ ಹಾಗೂ ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ನೇತೃತ್ವದಲ್ಲಿ ಹೋರಾಟ ನಡೆಯುತ್ತಿದೆ. ಪಾದಯಾತ್ರೆ ಉದ್ದೇಶಿಸಿ ಮಾತನಾಡಿದ ಜಿಲ್ಲಾ ಕಾರ್ಯದರ್ಶಿ ಸಿದ್ದರಾಜುರವರು, “ಈ ನಮ್ಮ ತುಂಡು ಭೂಮಿಯನ್ನು ಉಳಿಸಿಕೊಳ್ಳಲು ಕಳೆದ 20 ವರ್ಷಗಳಿಂದ ಹೋರಾಡುತ್ತಿದ್ದೇವೆ. 2007ರಲ್ಲಿಯೇ ಸ್ಲಂ ಎಂದು ಘೋಷಿಸಿದರೂ ಹಕ್ಕುಪತ್ರ ನೀಡದೆ ನಮ್ಮನ್ನು ವಂಚಿಸಲಾಗುತ್ತಿದೆ. ಮಂಡ್ಯದ ಪ್ರತಿ ಸ್ಲಂನಲ್ಲಿಯೂ ಇದೇ ಸಮಸ್ಯೆ ಎದುರಿಸಲಾಗುತ್ತಿದೆ. ಭೂಗಳ್ಳಲು ನೂರಾರು ಎಕರೆ ನುಂಗುತ್ತಿದ್ದಾರೆ. ಆದರೆ ಇಲ್ಲಿ ನಮಗೆ ಅಂಗೈ ಅಗಲ ಜಾಗ ನೀಡುತ್ತಿಲ್ಲ. ಜಿಲ್ಲಾಡಳಿತದ ನಿರ್ಲಕ್ಷ್ಯದಿಂದಾಗಿ ನಮಗೆ ಶಾಶ್ವತ ಪರಿಹಾರ ಸಿಕ್ಕಿಲ್ಲ. ಈಗ ನಮ್ಮ ಭೂಮಿಯನ್ನು ಬೇರೆಯವರು ಕಬಳಿಸಲು ಬರುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸ್ಲಂ ಎಂದು ಅಂತಿಮ ಘೋಷಣೆ ಮಾಡದೆ ಅನ್ಯಾಯ ಮಾಡಲಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಮಂಡ್ಯದ ಎಲ್ಲಾ ಸ್ಲಂ ನಿವಾಸಿಗಳು ಮತ್ತು ಕಾಳಪ್ಪ ಬಡಾವಣೆಯ ನಿವಾಸಿಗಳು ಈಗ ಸಿಎಂ ಬಸವರಾಜ ಬೊಮ್ಮಾಯಿಯವರನ್ನು ನೋಡಲು ಕೆ.ಆರ್ ಪೇಟೆಗೆ ಪಾದಯಾತ್ರೆ ಹೊರಡುತ್ತಿದ್ದೇವೆ. ನಮ್ಮ ಸಮಸ್ಯೆಯನ್ನು ಮನವರಿಕೆ ಮಾಡಿಕೊಟ್ಟು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ. ಒಂದು ವೇಳೆ ನಮಗೆ ಹಕ್ಕುಪತ್ರಗಳು ಸಿಗದಿದ್ದರೆ ಮಂಡ್ಯದ 23 ಸ್ಲಂ ಜನರು ಒಟ್ಟುಗೂಡಿ ಮುಂದಿನ ಎಲ್ಲಾ ಚುನಾವಣೆಗಳನ್ನು ಬಹಿಷ್ಕಾರ ಹಾಕುತ್ತೇವೆ” ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಮಂಡ್ಯ: ನೆತ್ತಿಯ ಮೇಲಿನ ಸೂರಿಗಾಗಿ, ಭೂಮಿಯ ಹಕ್ಕಿಗಾಗಿ ಶ್ರಮಿಕರ ಪಟ್ಟುಬಿಡದ ಹೋರಾಟ

ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷರಾದ ಕುಮಾರ್ ಸಮತಳರವರು ಮಾತನಾಡಿ, “ಮಂಡ್ಯದ ಸ್ಲಂ ಜನರಿಗೆ ಹಕ್ಕುಪತ್ರ ಸಿಗಬೇಕೆಂದು ಇದುವರೆಗೂ ನೂರಾರು ಬಾರಿ ಮನವಿ ಪತ್ರಗಳನ್ನು ನೀಡಲಾಗಿದೆ. ಆದರೆ ಸರ್ಕಾರ ಸ್ಪಂದಿಸುತ್ತಿಲ್ಲ. ಇದರಿಂದಾಗಿ ಸ್ಲಂ ಜನರು ಮೂಲಭೂತ ಸೌಲಭ್ಯಗಳಿಲ್ಲದೆ ತೊಂದರೆಯಲ್ಲಿದ್ದಾರೆ. ಹಾಗಾಗಿ ರಾಜ್ಯದ ಮುಖ್ಯಮಂತ್ರಿಗಳನ್ನು ನೋಡಲು ಹೊರಟಿದ್ದೇವೆ. ಅವರು ಪತ್ರಿಕೆಗಳಲ್ಲಿ ಜನರಿಗೆ ಮನೆ ನೀಡಿದ್ದೇವೆ ಎಂದು ಪುಟಗಟ್ಟಲೇ ಜಾಹೀರಾತು ನೀಡುತ್ತಿದ್ದಾರೆ. ಆದರೆ ನಮಗೆ ಮನೆ ಇರಲಿ, ಹಕ್ಕುಪತ್ರಗಳೇ ಸಿಕ್ಕಿಲ್ಲ. ಹಾಗಾಗಿ ಮಂಡ್ಯದ ಎಲ್ಲಾ ಸ್ಲಂ ಜನರು ಪಾದಯಾತ್ರೆ ಹೊರಟಿದ್ದೇವೆ” ಎಂದರು.

ಮಂಡ್ಯದಲ್ಲಿ ಕೇವಲ ಆರ್‌ಟಿಓ ಕಾಳಪ್ಪ ಬಡಾವಣೆ ಮಾತ್ರವಲ್ಲದೆ ಕಾಳಿಕಾಂಭ, ನ್ಯೂ ತಮಿಳು ಕಾಲನಿ, ಹಾಲಹಳ್ಳಿ ಸ್ಲಂ ಬೋರ್ಡ್ ಮುಂತಾದ ಬಹುತೇಕ ಶ್ರಮಿಕ ನಗರಗಳಲ್ಲಿ ಜನರನ್ನು ವಂಚಿಸುವ ಕೆಲಸ ನಿರಂತರವಾಗಿ ನಡೆದಿದೆ. ಅಲ್ಲಿನ ಜನರಿಗೂ ಸಹ ಹಕ್ಕುಪತ್ರ, ಮನೆಗಳು ಸಿಕ್ಕಿಲ್ಲ. ಈವರೆಗೂ ಅದನ್ನು ಸರಿಪಡಿಸುವ ಕೆಲಸವನ್ನು ನಗರಸಭಾ ಸದಸ್ಯರಾಗಲೀ ಇನ್ನಿತರ ಜನಪ್ರತಿನಿಧಿಗಳಾಗಲೀ ಮುತುವರ್ಜಿ ವಹಿಸಿ ಮಾಡಿಲ್ಲ. ಈ ಎಲ್ಲಾ ವಿಚಾರಗಳನ್ನು ಸಿಎಂ ಗಮನಕ್ಕೆ ತರಲಾಗುತ್ತದೆ ಎಂದು ಅವರು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...