Homeಚಳವಳಿಹಕ್ಕುಪತ್ರ ನೀಡಿ, ತುಂಡು ಭೂಮಿ ಉಳಿಸಿಕೊಡಿ: ಸಿಎಂಗೆ ಮನವಿ ಸಲ್ಲಿಸಲು ಪಾದಯಾತ್ರೆ ಹೊರಟ ಮಂಡ್ಯದ ಶ್ರಮಿಕರು

ಹಕ್ಕುಪತ್ರ ನೀಡಿ, ತುಂಡು ಭೂಮಿ ಉಳಿಸಿಕೊಡಿ: ಸಿಎಂಗೆ ಮನವಿ ಸಲ್ಲಿಸಲು ಪಾದಯಾತ್ರೆ ಹೊರಟ ಮಂಡ್ಯದ ಶ್ರಮಿಕರು

ರಾಜ್ಯದ ಮುಖ್ಯಮಂತ್ರಿಯವರೆ, ಶ್ರೀಮಂತರ ಹೆಲಿಪ್ಯಾಡ್‌ಗೆ ಶಂಕುಸ್ಥಾಪನೆ ಮಾಡುತ್ತಿದ್ದೀರಿ, ಬಡವರ ಮನೆಗಳಿಗೆ ಯಾವಾಗ ಶಂಕು ಸ್ಥಾಪನೆ ಮಾಡುತ್ತೀರಿ? ಎಂದು ಜನತೆ ಪ್ರಶ್ನಿಸುತ್ತಿದ್ದಾರೆ.

- Advertisement -
- Advertisement -

ಮಂಡ್ಯ ನಗರವನ್ನು ಕಟ್ಟಿದ, ಅದನ್ನು ಪ್ರತಿನಿತ್ಯ ಸ್ವಚ್ಛವಾಗಿಡುತ್ತಿರುವ ಶ್ರಮಿಕ ನಿವಾಸಿಗಳು ಕಳೆದ 5 ದಿನಗಳಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ 15 ವರ್ಷಗಳಿಂದ ಇಂತಹ ನೂರಾರು ಹೋರಾಟಗಳನ್ನು ಮಾಡಿದರೂ ಅವರಿಗೆ ಹಕ್ಕುಪತ್ರಗಳು ಸಿಕ್ಕಿಲ್ಲ. ಅಲ್ಲದೆ ಅವರು ವಾಸಿಸುತ್ತಿರುವ ತುಂಡು ಭೂಮಿಯನ್ನು ಆಕ್ರಮಿಸಿಕೊಳ್ಳಲು ಹಲವಾರು ಜನ ಹೊಂಚು ಹಾಕುತ್ತಿದ್ದಾರೆ. ಇದರಿಂದ ಆತಂಕಿತಗೊಂಡಿರುವ ಅಲ್ಲಿನ ಶ್ರಮಿಕ ನಿವಾಸಿಗಳು ಈಗ ನೇರವಾಗಿ ಸಿಎಂ ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಿ, ತಮ್ಮ ಸಂಕಷ್ಟ ಹೇಳಿಕೊಳ್ಳಲು ಪಾದಯಾತ್ರೆ ಹೊರಟಿದ್ದಾರೆ. ರಾಜ್ಯದ ಮುಖ್ಯಮಂತ್ರಿಯವರೆ, ಶ್ರೀಮಂತರ ಹೆಲಿಪ್ಯಾಡ್‌ಗೆ ಶಂಕುಸ್ಥಾಪನೆ ಮಾಡುತ್ತಿದ್ದೀರಿ…. ಬಡವರ ಮನೆಗಳಿಗೆ ಯಾವಾಗ ಶಂಕು ಸ್ಥಾಪನೆ ಮಾಡುತ್ತೀರಿ? ಎಂದು ಜನತೆ ಪ್ರಶ್ನಿಸುತ್ತಿದ್ದಾರೆ.

ಮಂಡ್ಯದ ಜಿಲ್ಲಾಧಿಕಾರಿಗಳ ಕಚೇರಿ ಸೇರಿದಂತೆ ಹಲವಾರು ದೊಡ್ಡ ದೊಡ್ಡ ಕಟ್ಟಡಗಳನ್ನು ಕಟ್ಟಿದ ಶ್ರಮಿಕ ನಿವಾಸಿಗಳು ಅಲ್ಲೆ ಪಕ್ಕದಲ್ಲಿ, ಸುತ್ತಾ ಮುತ್ತಾ ನೂರಾರು ವರ್ಷಗಳಿಂದ ವಾಸವಾಗಿದ್ದಾರೆ. ಆರ್‌ಟಿಓ ಕಚೇರಿ ಎದುರು 80 ಕುಟುಂಬಗಳು ಗುಡಿಸಲು ಹಾಕಿಕೊಂಡು ವಾಸ ಮಾಡುತ್ತಾ ಬಂದಿದ್ದಾರೆ. ಕಾಳಪ್ಪ ಬಡಾವಣೆ ಎಂದು ಹೆಸರು ಇಟ್ಟುಕೊಂಡಿರುವ ಇಲ್ಲಿನ ಶ್ರಮಿಕರು ಬಹುತೇಕ ಪೌರಕಾರ್ಮಿಕ ಕೆಲಸ ಮಾಡುತ್ತಾರೆ. ಅಲ್ಲದೆ ದಿನಗೂಲಿ ಕಾರ್ಮಿಕರಾಗಿ, ಮೂಟೆಹೊರುವ ಕಾರ್ಮಿಕರಾಗಿ, ಮನೆಕಟ್ಟುವವರಾಗಿ, ಮನೆಕೆಲಸಕ್ಕೆ ನೆರವಾಗುವವರಾಗಿ ಹತ್ತುಹಲವು ರೀತಿಗಳಲ್ಲಿ ಈ ನಗರವನ್ನು ಸ್ವಚ್ಛವಾಗಿಡುತ್ತಿದ್ದಾರೆ. ಅವರ ಹಕ್ಕೊತ್ತಾಯ ಒಂದೇ. ಅದು ಅವರು 50 ವರ್ಷಗಳಿಂದ ವಾಸಿಸುತ್ತಿರುವ ಜಾಗವನ್ನು ಸ್ಲಂ ಎಂದು ಘೋಷಿಸಿ ಅವರಿಗೆ ಹಕ್ಕುಪತ್ರ ನೀಡಬೇಕು. ಸರ್ಕಾರ ಮನೆಗಳನ್ನು ಕಟ್ಟಿಕೊಡಬೇಕು ಎಂಬುದಾಗಿದೆ.

ಈ ವಿಚಾರದಲ್ಲಿ ಹಲವಾರು ಹೋರಾಟಗಳು ನಡೆದು 2007ರಲ್ಲಿ ಈ ಪ್ರದೇಶವನ್ನು ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿಯಿಂದ ಸ್ಲಂ ಎಂದು ಘೋಷಣೆ ಮಾಡಲಾಗಿತ್ತು. ಸರ್ಕಾರ ವಾಂಬೆ ಯೋಜನೆಯಡಿಯಲ್ಲಿ 80 ಮನೆಗಳನ್ನು ನಿರ್ಮಾಣ ಮಾಡಿಕೊಡಲು ಕಾಮಗಾರಿ ಪ್ರಾರಂಭಿಸಿತ್ತು. ಆದರೆ, ಪಟ್ಟಭದ್ರ ಹಿತಾಸಕ್ತಿಗಳು ಆ ಜಾಗವನ್ನು ಲಪಟಾಯಿಸಲು ಹುನ್ನಾರ ಮಾಡಿ ಅಲ್ಲಿನ ಜನರಿಗೆ ಹಕ್ಕುಪತ್ರಗಳು ಸಿಗದ ಹಾಗೆ ನೋಡಿಕೊಂಡಿದ್ದಾರೆ. ಇದರಿಂದಾಗಿ ಅಲ್ಲಿಯ ನಿವಾಸಿಗಳಿಗೆ ಹಕ್ಕು ಪತ್ರಗಳು ಇಲ್ಲದೆ, ಯಾವ ಯೋಜನೆಯ ಅಡಿಯಲ್ಲೂ ವಸತಿಯನ್ನು ನಿರ್ಮಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಮನೆಗಳೆ ಇಲ್ಲ ಎಂದ ಮೇಲೆ ಮೂಲಭೂತ ಸೌಲಭ್ಯಗಳು ದೂರದ ಮಾತು.

ಈಗ ಅದೇ ಜಾಗದಲ್ಲಿ ಹಲವು ನೌಕರರ ಸಂಘಟನೆಗಳು ತಮ್ಮ ಕಚೇರಿಗಳನ್ನು ಸ್ಥಾಪಿಸಿಕೊಳ್ಳಲು ಮುಂದಾಗಿವೆ. ಶ್ರಮಿಕನಿವಾಸಿಗಳು ಬಳಸುತ್ತಿದ್ದ ಶೌಚಾಲಯವನ್ನು ಕೆಡವಿಹಾಕಿವೆ. ಇದರಿಂದ ಆತಂಕಿತರಾಗಿರುವ ಅಲ್ಲಿನ ನಿವಾಸಿಗಳು ಮಂಡ್ಯದ ಇತರ ಶ್ರಮಿಕ ನಿವಾಸಿಗಳ ಜೊತೆಗೂಡಿ ಹೋರಾಟ ಆರಂಭಿಸಿದ್ದಾರೆ. ಕಾಳಪ್ಪ ಬಡಾವಣೆಯನ್ನು ಸ್ಲಂ ಎಂದು ಅಂತಿಮ ಡಿಕ್ಲೆರೇಶನ್ ಕೂಡಲೇ ಹೊರಡಿಸಬೇಕು ಮತ್ತು ಹಕ್ಕು ಪತ್ರ ಒದಗಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರೂ ಜಿಲ್ಲಾಧಿಕಾರಿಯಾಗಲಿ, ಇತರ ಅಧಿಕಾರಿಗಳಾಗಲಿ ಸ್ಪಂದಿಸಿಲ್ಲ. ಹಾಗಾಗಿ ಜುಲೈ 21 ರಂದು ಜಿಲ್ಲೆ ಕೆ.ಆರ್‌ ಪೇಟೆಯಲ್ಲಿ ಹೆಲಿಪ್ಯಾಡ್ ಉದ್ಘಾಟನೆ ಮಾಡಲು ಆಗಮಿಸುತ್ತಿರುವ ಸಿಎಂ ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಿ ತಮ್ಮ ಸಮಸ್ಯೆ ಹೇಳಿಕೊಳ್ಳಲು ಸ್ಲಂ ನಿವಾಸಿಗಳು ಮುಂದಾಗಿದ್ದಾರೆ. ಅದಕ್ಕಾಗಿ ಕೆ.ಆರ್‌ ಪೇಟೆ ಪಾದಯಾತ್ರೆ ಆರಂಭಿಸಿದ್ದಾರೆ.

ಮಂಡ್ಯ ಜಿಲ್ಲಾ ಶ್ರಮಿಕನಗರ ನಿವಾಸಿಗಳ ಒಕ್ಕೂಟ, ಕರ್ನಾಟಕ ಜನಶಕ್ತಿ ಹಾಗೂ ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ನೇತೃತ್ವದಲ್ಲಿ ಹೋರಾಟ ನಡೆಯುತ್ತಿದೆ. ಪಾದಯಾತ್ರೆ ಉದ್ದೇಶಿಸಿ ಮಾತನಾಡಿದ ಜಿಲ್ಲಾ ಕಾರ್ಯದರ್ಶಿ ಸಿದ್ದರಾಜುರವರು, “ಈ ನಮ್ಮ ತುಂಡು ಭೂಮಿಯನ್ನು ಉಳಿಸಿಕೊಳ್ಳಲು ಕಳೆದ 20 ವರ್ಷಗಳಿಂದ ಹೋರಾಡುತ್ತಿದ್ದೇವೆ. 2007ರಲ್ಲಿಯೇ ಸ್ಲಂ ಎಂದು ಘೋಷಿಸಿದರೂ ಹಕ್ಕುಪತ್ರ ನೀಡದೆ ನಮ್ಮನ್ನು ವಂಚಿಸಲಾಗುತ್ತಿದೆ. ಮಂಡ್ಯದ ಪ್ರತಿ ಸ್ಲಂನಲ್ಲಿಯೂ ಇದೇ ಸಮಸ್ಯೆ ಎದುರಿಸಲಾಗುತ್ತಿದೆ. ಭೂಗಳ್ಳಲು ನೂರಾರು ಎಕರೆ ನುಂಗುತ್ತಿದ್ದಾರೆ. ಆದರೆ ಇಲ್ಲಿ ನಮಗೆ ಅಂಗೈ ಅಗಲ ಜಾಗ ನೀಡುತ್ತಿಲ್ಲ. ಜಿಲ್ಲಾಡಳಿತದ ನಿರ್ಲಕ್ಷ್ಯದಿಂದಾಗಿ ನಮಗೆ ಶಾಶ್ವತ ಪರಿಹಾರ ಸಿಕ್ಕಿಲ್ಲ. ಈಗ ನಮ್ಮ ಭೂಮಿಯನ್ನು ಬೇರೆಯವರು ಕಬಳಿಸಲು ಬರುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸ್ಲಂ ಎಂದು ಅಂತಿಮ ಘೋಷಣೆ ಮಾಡದೆ ಅನ್ಯಾಯ ಮಾಡಲಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಮಂಡ್ಯದ ಎಲ್ಲಾ ಸ್ಲಂ ನಿವಾಸಿಗಳು ಮತ್ತು ಕಾಳಪ್ಪ ಬಡಾವಣೆಯ ನಿವಾಸಿಗಳು ಈಗ ಸಿಎಂ ಬಸವರಾಜ ಬೊಮ್ಮಾಯಿಯವರನ್ನು ನೋಡಲು ಕೆ.ಆರ್ ಪೇಟೆಗೆ ಪಾದಯಾತ್ರೆ ಹೊರಡುತ್ತಿದ್ದೇವೆ. ನಮ್ಮ ಸಮಸ್ಯೆಯನ್ನು ಮನವರಿಕೆ ಮಾಡಿಕೊಟ್ಟು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ. ಒಂದು ವೇಳೆ ನಮಗೆ ಹಕ್ಕುಪತ್ರಗಳು ಸಿಗದಿದ್ದರೆ ಮಂಡ್ಯದ 23 ಸ್ಲಂ ಜನರು ಒಟ್ಟುಗೂಡಿ ಮುಂದಿನ ಎಲ್ಲಾ ಚುನಾವಣೆಗಳನ್ನು ಬಹಿಷ್ಕಾರ ಹಾಕುತ್ತೇವೆ” ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಮಂಡ್ಯ: ನೆತ್ತಿಯ ಮೇಲಿನ ಸೂರಿಗಾಗಿ, ಭೂಮಿಯ ಹಕ್ಕಿಗಾಗಿ ಶ್ರಮಿಕರ ಪಟ್ಟುಬಿಡದ ಹೋರಾಟ

ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷರಾದ ಕುಮಾರ್ ಸಮತಳರವರು ಮಾತನಾಡಿ, “ಮಂಡ್ಯದ ಸ್ಲಂ ಜನರಿಗೆ ಹಕ್ಕುಪತ್ರ ಸಿಗಬೇಕೆಂದು ಇದುವರೆಗೂ ನೂರಾರು ಬಾರಿ ಮನವಿ ಪತ್ರಗಳನ್ನು ನೀಡಲಾಗಿದೆ. ಆದರೆ ಸರ್ಕಾರ ಸ್ಪಂದಿಸುತ್ತಿಲ್ಲ. ಇದರಿಂದಾಗಿ ಸ್ಲಂ ಜನರು ಮೂಲಭೂತ ಸೌಲಭ್ಯಗಳಿಲ್ಲದೆ ತೊಂದರೆಯಲ್ಲಿದ್ದಾರೆ. ಹಾಗಾಗಿ ರಾಜ್ಯದ ಮುಖ್ಯಮಂತ್ರಿಗಳನ್ನು ನೋಡಲು ಹೊರಟಿದ್ದೇವೆ. ಅವರು ಪತ್ರಿಕೆಗಳಲ್ಲಿ ಜನರಿಗೆ ಮನೆ ನೀಡಿದ್ದೇವೆ ಎಂದು ಪುಟಗಟ್ಟಲೇ ಜಾಹೀರಾತು ನೀಡುತ್ತಿದ್ದಾರೆ. ಆದರೆ ನಮಗೆ ಮನೆ ಇರಲಿ, ಹಕ್ಕುಪತ್ರಗಳೇ ಸಿಕ್ಕಿಲ್ಲ. ಹಾಗಾಗಿ ಮಂಡ್ಯದ ಎಲ್ಲಾ ಸ್ಲಂ ಜನರು ಪಾದಯಾತ್ರೆ ಹೊರಟಿದ್ದೇವೆ” ಎಂದರು.

ಮಂಡ್ಯದಲ್ಲಿ ಕೇವಲ ಆರ್‌ಟಿಓ ಕಾಳಪ್ಪ ಬಡಾವಣೆ ಮಾತ್ರವಲ್ಲದೆ ಕಾಳಿಕಾಂಭ, ನ್ಯೂ ತಮಿಳು ಕಾಲನಿ, ಹಾಲಹಳ್ಳಿ ಸ್ಲಂ ಬೋರ್ಡ್ ಮುಂತಾದ ಬಹುತೇಕ ಶ್ರಮಿಕ ನಗರಗಳಲ್ಲಿ ಜನರನ್ನು ವಂಚಿಸುವ ಕೆಲಸ ನಿರಂತರವಾಗಿ ನಡೆದಿದೆ. ಅಲ್ಲಿನ ಜನರಿಗೂ ಸಹ ಹಕ್ಕುಪತ್ರ, ಮನೆಗಳು ಸಿಕ್ಕಿಲ್ಲ. ಈವರೆಗೂ ಅದನ್ನು ಸರಿಪಡಿಸುವ ಕೆಲಸವನ್ನು ನಗರಸಭಾ ಸದಸ್ಯರಾಗಲೀ ಇನ್ನಿತರ ಜನಪ್ರತಿನಿಧಿಗಳಾಗಲೀ ಮುತುವರ್ಜಿ ವಹಿಸಿ ಮಾಡಿಲ್ಲ. ಈ ಎಲ್ಲಾ ವಿಚಾರಗಳನ್ನು ಸಿಎಂ ಗಮನಕ್ಕೆ ತರಲಾಗುತ್ತದೆ ಎಂದು ಅವರು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...