Homeಚಳವಳಿಹಕ್ಕುಪತ್ರ ನೀಡಿ, ತುಂಡು ಭೂಮಿ ಉಳಿಸಿಕೊಡಿ: ಸಿಎಂಗೆ ಮನವಿ ಸಲ್ಲಿಸಲು ಪಾದಯಾತ್ರೆ ಹೊರಟ ಮಂಡ್ಯದ ಶ್ರಮಿಕರು

ಹಕ್ಕುಪತ್ರ ನೀಡಿ, ತುಂಡು ಭೂಮಿ ಉಳಿಸಿಕೊಡಿ: ಸಿಎಂಗೆ ಮನವಿ ಸಲ್ಲಿಸಲು ಪಾದಯಾತ್ರೆ ಹೊರಟ ಮಂಡ್ಯದ ಶ್ರಮಿಕರು

ರಾಜ್ಯದ ಮುಖ್ಯಮಂತ್ರಿಯವರೆ, ಶ್ರೀಮಂತರ ಹೆಲಿಪ್ಯಾಡ್‌ಗೆ ಶಂಕುಸ್ಥಾಪನೆ ಮಾಡುತ್ತಿದ್ದೀರಿ, ಬಡವರ ಮನೆಗಳಿಗೆ ಯಾವಾಗ ಶಂಕು ಸ್ಥಾಪನೆ ಮಾಡುತ್ತೀರಿ? ಎಂದು ಜನತೆ ಪ್ರಶ್ನಿಸುತ್ತಿದ್ದಾರೆ.

- Advertisement -
- Advertisement -

ಮಂಡ್ಯ ನಗರವನ್ನು ಕಟ್ಟಿದ, ಅದನ್ನು ಪ್ರತಿನಿತ್ಯ ಸ್ವಚ್ಛವಾಗಿಡುತ್ತಿರುವ ಶ್ರಮಿಕ ನಿವಾಸಿಗಳು ಕಳೆದ 5 ದಿನಗಳಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ 15 ವರ್ಷಗಳಿಂದ ಇಂತಹ ನೂರಾರು ಹೋರಾಟಗಳನ್ನು ಮಾಡಿದರೂ ಅವರಿಗೆ ಹಕ್ಕುಪತ್ರಗಳು ಸಿಕ್ಕಿಲ್ಲ. ಅಲ್ಲದೆ ಅವರು ವಾಸಿಸುತ್ತಿರುವ ತುಂಡು ಭೂಮಿಯನ್ನು ಆಕ್ರಮಿಸಿಕೊಳ್ಳಲು ಹಲವಾರು ಜನ ಹೊಂಚು ಹಾಕುತ್ತಿದ್ದಾರೆ. ಇದರಿಂದ ಆತಂಕಿತಗೊಂಡಿರುವ ಅಲ್ಲಿನ ಶ್ರಮಿಕ ನಿವಾಸಿಗಳು ಈಗ ನೇರವಾಗಿ ಸಿಎಂ ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಿ, ತಮ್ಮ ಸಂಕಷ್ಟ ಹೇಳಿಕೊಳ್ಳಲು ಪಾದಯಾತ್ರೆ ಹೊರಟಿದ್ದಾರೆ. ರಾಜ್ಯದ ಮುಖ್ಯಮಂತ್ರಿಯವರೆ, ಶ್ರೀಮಂತರ ಹೆಲಿಪ್ಯಾಡ್‌ಗೆ ಶಂಕುಸ್ಥಾಪನೆ ಮಾಡುತ್ತಿದ್ದೀರಿ…. ಬಡವರ ಮನೆಗಳಿಗೆ ಯಾವಾಗ ಶಂಕು ಸ್ಥಾಪನೆ ಮಾಡುತ್ತೀರಿ? ಎಂದು ಜನತೆ ಪ್ರಶ್ನಿಸುತ್ತಿದ್ದಾರೆ.

ಮಂಡ್ಯದ ಜಿಲ್ಲಾಧಿಕಾರಿಗಳ ಕಚೇರಿ ಸೇರಿದಂತೆ ಹಲವಾರು ದೊಡ್ಡ ದೊಡ್ಡ ಕಟ್ಟಡಗಳನ್ನು ಕಟ್ಟಿದ ಶ್ರಮಿಕ ನಿವಾಸಿಗಳು ಅಲ್ಲೆ ಪಕ್ಕದಲ್ಲಿ, ಸುತ್ತಾ ಮುತ್ತಾ ನೂರಾರು ವರ್ಷಗಳಿಂದ ವಾಸವಾಗಿದ್ದಾರೆ. ಆರ್‌ಟಿಓ ಕಚೇರಿ ಎದುರು 80 ಕುಟುಂಬಗಳು ಗುಡಿಸಲು ಹಾಕಿಕೊಂಡು ವಾಸ ಮಾಡುತ್ತಾ ಬಂದಿದ್ದಾರೆ. ಕಾಳಪ್ಪ ಬಡಾವಣೆ ಎಂದು ಹೆಸರು ಇಟ್ಟುಕೊಂಡಿರುವ ಇಲ್ಲಿನ ಶ್ರಮಿಕರು ಬಹುತೇಕ ಪೌರಕಾರ್ಮಿಕ ಕೆಲಸ ಮಾಡುತ್ತಾರೆ. ಅಲ್ಲದೆ ದಿನಗೂಲಿ ಕಾರ್ಮಿಕರಾಗಿ, ಮೂಟೆಹೊರುವ ಕಾರ್ಮಿಕರಾಗಿ, ಮನೆಕಟ್ಟುವವರಾಗಿ, ಮನೆಕೆಲಸಕ್ಕೆ ನೆರವಾಗುವವರಾಗಿ ಹತ್ತುಹಲವು ರೀತಿಗಳಲ್ಲಿ ಈ ನಗರವನ್ನು ಸ್ವಚ್ಛವಾಗಿಡುತ್ತಿದ್ದಾರೆ. ಅವರ ಹಕ್ಕೊತ್ತಾಯ ಒಂದೇ. ಅದು ಅವರು 50 ವರ್ಷಗಳಿಂದ ವಾಸಿಸುತ್ತಿರುವ ಜಾಗವನ್ನು ಸ್ಲಂ ಎಂದು ಘೋಷಿಸಿ ಅವರಿಗೆ ಹಕ್ಕುಪತ್ರ ನೀಡಬೇಕು. ಸರ್ಕಾರ ಮನೆಗಳನ್ನು ಕಟ್ಟಿಕೊಡಬೇಕು ಎಂಬುದಾಗಿದೆ.

ಈ ವಿಚಾರದಲ್ಲಿ ಹಲವಾರು ಹೋರಾಟಗಳು ನಡೆದು 2007ರಲ್ಲಿ ಈ ಪ್ರದೇಶವನ್ನು ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿಯಿಂದ ಸ್ಲಂ ಎಂದು ಘೋಷಣೆ ಮಾಡಲಾಗಿತ್ತು. ಸರ್ಕಾರ ವಾಂಬೆ ಯೋಜನೆಯಡಿಯಲ್ಲಿ 80 ಮನೆಗಳನ್ನು ನಿರ್ಮಾಣ ಮಾಡಿಕೊಡಲು ಕಾಮಗಾರಿ ಪ್ರಾರಂಭಿಸಿತ್ತು. ಆದರೆ, ಪಟ್ಟಭದ್ರ ಹಿತಾಸಕ್ತಿಗಳು ಆ ಜಾಗವನ್ನು ಲಪಟಾಯಿಸಲು ಹುನ್ನಾರ ಮಾಡಿ ಅಲ್ಲಿನ ಜನರಿಗೆ ಹಕ್ಕುಪತ್ರಗಳು ಸಿಗದ ಹಾಗೆ ನೋಡಿಕೊಂಡಿದ್ದಾರೆ. ಇದರಿಂದಾಗಿ ಅಲ್ಲಿಯ ನಿವಾಸಿಗಳಿಗೆ ಹಕ್ಕು ಪತ್ರಗಳು ಇಲ್ಲದೆ, ಯಾವ ಯೋಜನೆಯ ಅಡಿಯಲ್ಲೂ ವಸತಿಯನ್ನು ನಿರ್ಮಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಮನೆಗಳೆ ಇಲ್ಲ ಎಂದ ಮೇಲೆ ಮೂಲಭೂತ ಸೌಲಭ್ಯಗಳು ದೂರದ ಮಾತು.

ಈಗ ಅದೇ ಜಾಗದಲ್ಲಿ ಹಲವು ನೌಕರರ ಸಂಘಟನೆಗಳು ತಮ್ಮ ಕಚೇರಿಗಳನ್ನು ಸ್ಥಾಪಿಸಿಕೊಳ್ಳಲು ಮುಂದಾಗಿವೆ. ಶ್ರಮಿಕನಿವಾಸಿಗಳು ಬಳಸುತ್ತಿದ್ದ ಶೌಚಾಲಯವನ್ನು ಕೆಡವಿಹಾಕಿವೆ. ಇದರಿಂದ ಆತಂಕಿತರಾಗಿರುವ ಅಲ್ಲಿನ ನಿವಾಸಿಗಳು ಮಂಡ್ಯದ ಇತರ ಶ್ರಮಿಕ ನಿವಾಸಿಗಳ ಜೊತೆಗೂಡಿ ಹೋರಾಟ ಆರಂಭಿಸಿದ್ದಾರೆ. ಕಾಳಪ್ಪ ಬಡಾವಣೆಯನ್ನು ಸ್ಲಂ ಎಂದು ಅಂತಿಮ ಡಿಕ್ಲೆರೇಶನ್ ಕೂಡಲೇ ಹೊರಡಿಸಬೇಕು ಮತ್ತು ಹಕ್ಕು ಪತ್ರ ಒದಗಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರೂ ಜಿಲ್ಲಾಧಿಕಾರಿಯಾಗಲಿ, ಇತರ ಅಧಿಕಾರಿಗಳಾಗಲಿ ಸ್ಪಂದಿಸಿಲ್ಲ. ಹಾಗಾಗಿ ಜುಲೈ 21 ರಂದು ಜಿಲ್ಲೆ ಕೆ.ಆರ್‌ ಪೇಟೆಯಲ್ಲಿ ಹೆಲಿಪ್ಯಾಡ್ ಉದ್ಘಾಟನೆ ಮಾಡಲು ಆಗಮಿಸುತ್ತಿರುವ ಸಿಎಂ ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಿ ತಮ್ಮ ಸಮಸ್ಯೆ ಹೇಳಿಕೊಳ್ಳಲು ಸ್ಲಂ ನಿವಾಸಿಗಳು ಮುಂದಾಗಿದ್ದಾರೆ. ಅದಕ್ಕಾಗಿ ಕೆ.ಆರ್‌ ಪೇಟೆ ಪಾದಯಾತ್ರೆ ಆರಂಭಿಸಿದ್ದಾರೆ.

ಮಂಡ್ಯ ಜಿಲ್ಲಾ ಶ್ರಮಿಕನಗರ ನಿವಾಸಿಗಳ ಒಕ್ಕೂಟ, ಕರ್ನಾಟಕ ಜನಶಕ್ತಿ ಹಾಗೂ ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ನೇತೃತ್ವದಲ್ಲಿ ಹೋರಾಟ ನಡೆಯುತ್ತಿದೆ. ಪಾದಯಾತ್ರೆ ಉದ್ದೇಶಿಸಿ ಮಾತನಾಡಿದ ಜಿಲ್ಲಾ ಕಾರ್ಯದರ್ಶಿ ಸಿದ್ದರಾಜುರವರು, “ಈ ನಮ್ಮ ತುಂಡು ಭೂಮಿಯನ್ನು ಉಳಿಸಿಕೊಳ್ಳಲು ಕಳೆದ 20 ವರ್ಷಗಳಿಂದ ಹೋರಾಡುತ್ತಿದ್ದೇವೆ. 2007ರಲ್ಲಿಯೇ ಸ್ಲಂ ಎಂದು ಘೋಷಿಸಿದರೂ ಹಕ್ಕುಪತ್ರ ನೀಡದೆ ನಮ್ಮನ್ನು ವಂಚಿಸಲಾಗುತ್ತಿದೆ. ಮಂಡ್ಯದ ಪ್ರತಿ ಸ್ಲಂನಲ್ಲಿಯೂ ಇದೇ ಸಮಸ್ಯೆ ಎದುರಿಸಲಾಗುತ್ತಿದೆ. ಭೂಗಳ್ಳಲು ನೂರಾರು ಎಕರೆ ನುಂಗುತ್ತಿದ್ದಾರೆ. ಆದರೆ ಇಲ್ಲಿ ನಮಗೆ ಅಂಗೈ ಅಗಲ ಜಾಗ ನೀಡುತ್ತಿಲ್ಲ. ಜಿಲ್ಲಾಡಳಿತದ ನಿರ್ಲಕ್ಷ್ಯದಿಂದಾಗಿ ನಮಗೆ ಶಾಶ್ವತ ಪರಿಹಾರ ಸಿಕ್ಕಿಲ್ಲ. ಈಗ ನಮ್ಮ ಭೂಮಿಯನ್ನು ಬೇರೆಯವರು ಕಬಳಿಸಲು ಬರುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸ್ಲಂ ಎಂದು ಅಂತಿಮ ಘೋಷಣೆ ಮಾಡದೆ ಅನ್ಯಾಯ ಮಾಡಲಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಮಂಡ್ಯದ ಎಲ್ಲಾ ಸ್ಲಂ ನಿವಾಸಿಗಳು ಮತ್ತು ಕಾಳಪ್ಪ ಬಡಾವಣೆಯ ನಿವಾಸಿಗಳು ಈಗ ಸಿಎಂ ಬಸವರಾಜ ಬೊಮ್ಮಾಯಿಯವರನ್ನು ನೋಡಲು ಕೆ.ಆರ್ ಪೇಟೆಗೆ ಪಾದಯಾತ್ರೆ ಹೊರಡುತ್ತಿದ್ದೇವೆ. ನಮ್ಮ ಸಮಸ್ಯೆಯನ್ನು ಮನವರಿಕೆ ಮಾಡಿಕೊಟ್ಟು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ. ಒಂದು ವೇಳೆ ನಮಗೆ ಹಕ್ಕುಪತ್ರಗಳು ಸಿಗದಿದ್ದರೆ ಮಂಡ್ಯದ 23 ಸ್ಲಂ ಜನರು ಒಟ್ಟುಗೂಡಿ ಮುಂದಿನ ಎಲ್ಲಾ ಚುನಾವಣೆಗಳನ್ನು ಬಹಿಷ್ಕಾರ ಹಾಕುತ್ತೇವೆ” ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಮಂಡ್ಯ: ನೆತ್ತಿಯ ಮೇಲಿನ ಸೂರಿಗಾಗಿ, ಭೂಮಿಯ ಹಕ್ಕಿಗಾಗಿ ಶ್ರಮಿಕರ ಪಟ್ಟುಬಿಡದ ಹೋರಾಟ

ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷರಾದ ಕುಮಾರ್ ಸಮತಳರವರು ಮಾತನಾಡಿ, “ಮಂಡ್ಯದ ಸ್ಲಂ ಜನರಿಗೆ ಹಕ್ಕುಪತ್ರ ಸಿಗಬೇಕೆಂದು ಇದುವರೆಗೂ ನೂರಾರು ಬಾರಿ ಮನವಿ ಪತ್ರಗಳನ್ನು ನೀಡಲಾಗಿದೆ. ಆದರೆ ಸರ್ಕಾರ ಸ್ಪಂದಿಸುತ್ತಿಲ್ಲ. ಇದರಿಂದಾಗಿ ಸ್ಲಂ ಜನರು ಮೂಲಭೂತ ಸೌಲಭ್ಯಗಳಿಲ್ಲದೆ ತೊಂದರೆಯಲ್ಲಿದ್ದಾರೆ. ಹಾಗಾಗಿ ರಾಜ್ಯದ ಮುಖ್ಯಮಂತ್ರಿಗಳನ್ನು ನೋಡಲು ಹೊರಟಿದ್ದೇವೆ. ಅವರು ಪತ್ರಿಕೆಗಳಲ್ಲಿ ಜನರಿಗೆ ಮನೆ ನೀಡಿದ್ದೇವೆ ಎಂದು ಪುಟಗಟ್ಟಲೇ ಜಾಹೀರಾತು ನೀಡುತ್ತಿದ್ದಾರೆ. ಆದರೆ ನಮಗೆ ಮನೆ ಇರಲಿ, ಹಕ್ಕುಪತ್ರಗಳೇ ಸಿಕ್ಕಿಲ್ಲ. ಹಾಗಾಗಿ ಮಂಡ್ಯದ ಎಲ್ಲಾ ಸ್ಲಂ ಜನರು ಪಾದಯಾತ್ರೆ ಹೊರಟಿದ್ದೇವೆ” ಎಂದರು.

ಮಂಡ್ಯದಲ್ಲಿ ಕೇವಲ ಆರ್‌ಟಿಓ ಕಾಳಪ್ಪ ಬಡಾವಣೆ ಮಾತ್ರವಲ್ಲದೆ ಕಾಳಿಕಾಂಭ, ನ್ಯೂ ತಮಿಳು ಕಾಲನಿ, ಹಾಲಹಳ್ಳಿ ಸ್ಲಂ ಬೋರ್ಡ್ ಮುಂತಾದ ಬಹುತೇಕ ಶ್ರಮಿಕ ನಗರಗಳಲ್ಲಿ ಜನರನ್ನು ವಂಚಿಸುವ ಕೆಲಸ ನಿರಂತರವಾಗಿ ನಡೆದಿದೆ. ಅಲ್ಲಿನ ಜನರಿಗೂ ಸಹ ಹಕ್ಕುಪತ್ರ, ಮನೆಗಳು ಸಿಕ್ಕಿಲ್ಲ. ಈವರೆಗೂ ಅದನ್ನು ಸರಿಪಡಿಸುವ ಕೆಲಸವನ್ನು ನಗರಸಭಾ ಸದಸ್ಯರಾಗಲೀ ಇನ್ನಿತರ ಜನಪ್ರತಿನಿಧಿಗಳಾಗಲೀ ಮುತುವರ್ಜಿ ವಹಿಸಿ ಮಾಡಿಲ್ಲ. ಈ ಎಲ್ಲಾ ವಿಚಾರಗಳನ್ನು ಸಿಎಂ ಗಮನಕ್ಕೆ ತರಲಾಗುತ್ತದೆ ಎಂದು ಅವರು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...