Homeಕರ್ನಾಟಕಮಂಡ್ಯ: ಉಪನ್ಯಾಸಕ ಕೆ.ಎಂ.ವಾಸುದೇವರವರ ವರ್ಗಾವಣೆ ರದ್ದುಪಡಿಸುವಂತೆ ವಿದ್ಯಾರ್ಥಿಗಳ ಮನವಿ

ಮಂಡ್ಯ: ಉಪನ್ಯಾಸಕ ಕೆ.ಎಂ.ವಾಸುದೇವರವರ ವರ್ಗಾವಣೆ ರದ್ದುಪಡಿಸುವಂತೆ ವಿದ್ಯಾರ್ಥಿಗಳ ಮನವಿ

ಶೀಳನೆರೆಯ ಗ್ರಾಮಸ್ಥರು, ಕಾಲೇಜಿನ ವಿದ್ಯಾರ್ಥಿಗಳು, ಹಳೆಯ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಮೂಲಕ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ.

- Advertisement -
- Advertisement -

ಮಂಡ್ಯ ಜಿಲ್ಲೆಯ ಕೆ.ಆರ್‌.ಪೇಟೆ ತಾಲೂಕಿನ ಶೀಳನೆರೆ ಪದವಿ ಪೂರ್ವ ಕಾಲೇಜಿನಲ್ಲಿ ಇಂಗ್ಲಿಷ್ ಭಾಷೆಯ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಕೆ.ಎಂ.ವಾಸುದೇವ ಅವರ ವರ್ಗಾವಣೆ  ರದ್ದುಪಡಿಸುವಂತೆ ಕೋರಿ ಕಾಲೇಜಿನ ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ.

ಉಪನ್ಯಾಸಕ ಕೆ.ಎಂ.ವಾಸುದೇವ ಮೇಲೆ ಸಾಕ್ಷಾಧಾರವಿಲ್ಲದ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುರ್ನಾಡ ಮುಡಿಪು ಪದವಿ ಪೂರ್ವ ಕಾಲೇಜಿಗೆ ವರ್ಗಾವಣೆ ಮಾಡಲಾಗಿದೆ. ವಿಷಯ ತಿಳಿದ ಹಳೆಯ ವಿದ್ಯಾರ್ಥಿಗಳು ಮತ್ತು ಹಾಲಿ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳ ಮೂಲಕ ಪ್ರಾಥಮಿಕ ಮತ್ತುಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್‌ಗೆ ಮನವಿ ಸಲ್ಲಿಸಿದ್ದಾರೆ.

’ವರ್ಗಾವಣೆಯ ವಿಚಾರದಲ್ಲಿ ವಿದ್ಯಾರ್ಥಿಗಳು, ಸ್ಥಳೀಯರು, ಹಳೆಯ ವಿದ್ಯಾರ್ಥಿಗಳ ಅಭಿಪ್ರಾಯಗಳನ್ನು ಗಣನೆಗೆ ತೆಗದುಕೊಳ್ಳಬೇಕು ಎಂದು ನಾವು ಒತ್ತಾಯಿಸುತ್ತೇವೆ. ಕೆ.ಎಂ.ವಾಸುದೇವ ಅವರು ಶೀಳನೆರೆಯ ಕಾಲೇಜಿಗೆ ಬಂದ ನಂತರ ಕಾಲೇಜು ಹಾಗೂ ವಿದ್ಯಾರ್ಥಿಗಳ ಸಾಮರ್ಥ್ಯಾಭಿವೃದ್ದಿಗಾಗಿ ಬಹಳಷ್ಟು ಶ್ರಮಿಸಿದ್ದಾರೆ’ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ರೈತ ಹೋರಾಟ: 24 ವರ್ಷದ ಯುವಕ ಬಲ್ಜಿತ್ ಸಿಂಗ್ ಅವಿರೋಧವಾಗಿ ಸರ್‌ಪಂಚ್‌ ಆದ ಕಥೆ

ಕೆ.ಎಂ.ವಾಸುದೇವ ಅವರು ಈ ಕಾಲೇಜಿನ ಉಪನ್ಯಾಸಕರಾದಾಗಿನಿಂದ ಇಲ್ಲಿಯವರೆಗೂ ಪ್ರತಿ ಶೈಕ್ಷಣಿಕ ವರ್ಷದಲ್ಲಿಯು ಫಲಿತಾಂಶ ಉತ್ತಮ ರೀತಿಯಲ್ಲಿದೆ. ಅಲ್ಲದೆ, ವಿದ್ಯಾರ್ಥಿಗಳ ಬೌದ್ಧಿಕ ಸಾಮರ್ಥ್ಯದಲ್ಲಿ, ವಿಶೇಷವಾಗಿ ಇಂಗ್ಲಿಷ್ ವಿಷಯದಲ್ಲಿ ವಿದ್ಯಾರ್ಥಿಗಳ ಕಲಿಕೆ ಬಹಳಷ್ಟು ಸುಧಾರಿಸಿದೆ. ಸಮಯವನ್ನು ಲೆಕ್ಕಿಸದೆ ವಿದ್ಯಾರ್ಥಿಗಳಿಗೆ ಭೋಧನೆಯನ್ನು ಮಾಡುವ ಮೂಲಕ ವಿದ್ಯಾರ್ಥಿಗಳ ಹಾಗೂ ಕಾಲೇಜಿನ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಅವರ ಬಿಡುವಿನ ಸಮಯವನ್ನೂ ಕೂಡ ಸರ್ಕಾರಿ ಶಾಲಾ-ಕಾಲೇಜುಗಳ ಅಭಿವೃದ್ಧಿಗಾಗಿ ಮೀಸಲಿಟ್ಟು, ದುಡಿದಿದ್ದಾರೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.

ಇನ್ನು, ಕೆ.ಆರ್.ಪೇಟೆಯಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆ (ಶತಮಾನದ ಶಾಲೆ)ಯನ್ನು ಅಭಿವೃದ್ಧಿಗೊಳಿಸಲು ಕೆ.ಎಂ.ವಾಸುದೇವ ಅವರು ಸಾಕಷ್ಟು ಶ್ರಮಿಸಿದ್ದಾರೆ. ಅಲ್ಲದೆ, ಅದೇ ಶಾಲೆಗೆ ತಮ್ಮ ಮಗನಾದ ಬುದ್ದದಾಸ್ ಅವರನ್ನು ಸೇರಿಸಿದ್ದು, ಸರ್ಕಾರಿ ನೌಕರರಿಗೆ ಮಾದರಿಯಾಗಿದ್ದಾರೆ. ಶೀಳನೆರೆಯಲ್ಲಿರುವ ಸರ್ಕಾರಿ ಪ್ರಥಾಮಿಕ ಶಾಲೆಯಲ್ಲಿ ಮಕ್ಕಳ ಮನೆ ( ಎಲ್.ಕೆ.ಜಿ. & ಯು.ಕೆ.ಜಿ) ತರಗತಿಗಳನ್ನ ತೆರೆಯುವುದರಲ್ಲಿ ಯಶಸ್ವಿಯಾಗಿದ್ದಾರೆ.

ಅವರ ಸೇವೆಯನ್ನು ಸಹಿಸದ ಕೆಲವು ತಿಳಿಗೇಡಿ-ಭ್ರಷ್ಟ ವ್ಯಕ್ತಿಗಳು ವಾಸುದೇವ ಅವರ ವಿರುದ್ಧ ಪದೇ-ಪದೇ ಮೂಗರ್ಜಿಗಳನ್ನು ಬರೆದಿದ್ದಾರೆ. ಯಾರೋ ಒಬ್ಬರು ದುರುದ್ದೇಶಗಳಿಂದ ಬರೆದ ಅರ್ಜಿಗೆ ಸಂಬಂಧಿಸಿದಂತೆ ಕಾಲೇಜಿನಿಂದಾಗಲಿ, ವಿದ್ಯಾರ್ಥಿಗಳಿಂದಾಗಲಿ ಅಥವಾ ಗ್ರಾಮಸ್ಥರಿಂದಾಗಲಿ ಮಾಹಿತಿಗಳನ್ನು ಪಡೆಯದೆ, ಸಮರ್ಪಕ ವಿಚಾರಣೆ ನಡೆಸದೆ ಕ್ರಮ ವಹಿಸಿರುವುದು ನಮಗೆಲ್ಲ ನೋವುಂಟುಮಾಡಿದೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.

ಅಲ್ಲದೆ, ಇತ್ತೀಚಿಗೆ ಸರ್ಕಾರಿ ಗ್ರಾಮೀಣ ಕಾಲೇಜುಗಳು ವಿದ್ಯಾರ್ಥಿಗಳ ಕೊರತೆಯಿಂದ ಮುಚ್ಚುತ್ತಿರುವ ಈ ಸಂಧರ್ಭದಲ್ಲಿ ಕೆ.ಎಂ. ವಾಸುದೇವ ಅವರು ನಮ್ಮೂರಿನಿಂದ ವರ್ಗಾಗೊಂಡರೆ, ಉಪನ್ಯಾಸಕರಿಲ್ಲದ ಕಾರಣ ಈ ನಮ್ಮ ಕಾಲೇಜು ಕೂಡ ಮುಂದಿನ ವರ್ಷಗಳಲ್ಲಿ ಮುಚ್ಚುವ ಸ್ಥಿತಿಗೆ ತಲುಪುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇಂತಹ ಒಬ್ಬ ಉತ್ತಮ ಉಪನ್ಯಾಸಕ ವಾಸುದೇವ ಅವರನ್ನು ಯಾವುದೋ ಒಂದು ಅನಗತ್ಯ ಆರೋಪದ ಮೇಲೆ ವರ್ಗಾವಣೆ ಮಾಡಿರುವುದು ಸರ್ಕಾರದ ತಪ್ಪು ನಡೆಯಾಗಿದ್ದು, ಅವರ ವರ್ಗಾವಣೆಯನ್ನು ರದ್ದುಪಡಿಸಿ, ಶೀಳನೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿಯೇ ಸೇವೆಯನ್ನು ಮುಂದುವರೆಸಲು ಅನುವು ಮಾಡಿಕೊಡಬೇಕೆಂದು ನಾವು ಕೇಳಿಕೊಳ್ಳುತ್ತಿದ್ದೇವೆ ಎಂದು ಮಂಡ್ಯ ಜಿಲ್ಲಾಧಿಕಾರಿಗಳ ಮೂಲಕ ಸಚಿವರಿಗೆ ಮನವಿ ಸಲ್ಲಿಸಲಾಗಿದೆ.


ಇದನ್ನೂ ಓದಿ: 3 ತಿಂಗಳಿನಿಂದ ಒಂದು ದಿನವೂ ರಜೆಯಿಲ್ಲ: ಪ್ರತಿದಿನವೂ ರೈತ ಹೋರಾಟದ ಕ್ಷಣ ಕ್ಷಣದ ಮಾಹಿತಿ ನೀಡುತ್ತಿರುವ ಯುವಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...