Homeಕರ್ನಾಟಕಮಂಡ್ಯ: ಉಪನ್ಯಾಸಕ ಕೆ.ಎಂ.ವಾಸುದೇವರವರ ವರ್ಗಾವಣೆ ರದ್ದುಪಡಿಸುವಂತೆ ವಿದ್ಯಾರ್ಥಿಗಳ ಮನವಿ

ಮಂಡ್ಯ: ಉಪನ್ಯಾಸಕ ಕೆ.ಎಂ.ವಾಸುದೇವರವರ ವರ್ಗಾವಣೆ ರದ್ದುಪಡಿಸುವಂತೆ ವಿದ್ಯಾರ್ಥಿಗಳ ಮನವಿ

ಶೀಳನೆರೆಯ ಗ್ರಾಮಸ್ಥರು, ಕಾಲೇಜಿನ ವಿದ್ಯಾರ್ಥಿಗಳು, ಹಳೆಯ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಮೂಲಕ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ.

- Advertisement -
- Advertisement -

ಮಂಡ್ಯ ಜಿಲ್ಲೆಯ ಕೆ.ಆರ್‌.ಪೇಟೆ ತಾಲೂಕಿನ ಶೀಳನೆರೆ ಪದವಿ ಪೂರ್ವ ಕಾಲೇಜಿನಲ್ಲಿ ಇಂಗ್ಲಿಷ್ ಭಾಷೆಯ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಕೆ.ಎಂ.ವಾಸುದೇವ ಅವರ ವರ್ಗಾವಣೆ  ರದ್ದುಪಡಿಸುವಂತೆ ಕೋರಿ ಕಾಲೇಜಿನ ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ.

ಉಪನ್ಯಾಸಕ ಕೆ.ಎಂ.ವಾಸುದೇವ ಮೇಲೆ ಸಾಕ್ಷಾಧಾರವಿಲ್ಲದ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುರ್ನಾಡ ಮುಡಿಪು ಪದವಿ ಪೂರ್ವ ಕಾಲೇಜಿಗೆ ವರ್ಗಾವಣೆ ಮಾಡಲಾಗಿದೆ. ವಿಷಯ ತಿಳಿದ ಹಳೆಯ ವಿದ್ಯಾರ್ಥಿಗಳು ಮತ್ತು ಹಾಲಿ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳ ಮೂಲಕ ಪ್ರಾಥಮಿಕ ಮತ್ತುಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್‌ಗೆ ಮನವಿ ಸಲ್ಲಿಸಿದ್ದಾರೆ.

’ವರ್ಗಾವಣೆಯ ವಿಚಾರದಲ್ಲಿ ವಿದ್ಯಾರ್ಥಿಗಳು, ಸ್ಥಳೀಯರು, ಹಳೆಯ ವಿದ್ಯಾರ್ಥಿಗಳ ಅಭಿಪ್ರಾಯಗಳನ್ನು ಗಣನೆಗೆ ತೆಗದುಕೊಳ್ಳಬೇಕು ಎಂದು ನಾವು ಒತ್ತಾಯಿಸುತ್ತೇವೆ. ಕೆ.ಎಂ.ವಾಸುದೇವ ಅವರು ಶೀಳನೆರೆಯ ಕಾಲೇಜಿಗೆ ಬಂದ ನಂತರ ಕಾಲೇಜು ಹಾಗೂ ವಿದ್ಯಾರ್ಥಿಗಳ ಸಾಮರ್ಥ್ಯಾಭಿವೃದ್ದಿಗಾಗಿ ಬಹಳಷ್ಟು ಶ್ರಮಿಸಿದ್ದಾರೆ’ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ರೈತ ಹೋರಾಟ: 24 ವರ್ಷದ ಯುವಕ ಬಲ್ಜಿತ್ ಸಿಂಗ್ ಅವಿರೋಧವಾಗಿ ಸರ್‌ಪಂಚ್‌ ಆದ ಕಥೆ

ಕೆ.ಎಂ.ವಾಸುದೇವ ಅವರು ಈ ಕಾಲೇಜಿನ ಉಪನ್ಯಾಸಕರಾದಾಗಿನಿಂದ ಇಲ್ಲಿಯವರೆಗೂ ಪ್ರತಿ ಶೈಕ್ಷಣಿಕ ವರ್ಷದಲ್ಲಿಯು ಫಲಿತಾಂಶ ಉತ್ತಮ ರೀತಿಯಲ್ಲಿದೆ. ಅಲ್ಲದೆ, ವಿದ್ಯಾರ್ಥಿಗಳ ಬೌದ್ಧಿಕ ಸಾಮರ್ಥ್ಯದಲ್ಲಿ, ವಿಶೇಷವಾಗಿ ಇಂಗ್ಲಿಷ್ ವಿಷಯದಲ್ಲಿ ವಿದ್ಯಾರ್ಥಿಗಳ ಕಲಿಕೆ ಬಹಳಷ್ಟು ಸುಧಾರಿಸಿದೆ. ಸಮಯವನ್ನು ಲೆಕ್ಕಿಸದೆ ವಿದ್ಯಾರ್ಥಿಗಳಿಗೆ ಭೋಧನೆಯನ್ನು ಮಾಡುವ ಮೂಲಕ ವಿದ್ಯಾರ್ಥಿಗಳ ಹಾಗೂ ಕಾಲೇಜಿನ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಅವರ ಬಿಡುವಿನ ಸಮಯವನ್ನೂ ಕೂಡ ಸರ್ಕಾರಿ ಶಾಲಾ-ಕಾಲೇಜುಗಳ ಅಭಿವೃದ್ಧಿಗಾಗಿ ಮೀಸಲಿಟ್ಟು, ದುಡಿದಿದ್ದಾರೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.

ಇನ್ನು, ಕೆ.ಆರ್.ಪೇಟೆಯಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆ (ಶತಮಾನದ ಶಾಲೆ)ಯನ್ನು ಅಭಿವೃದ್ಧಿಗೊಳಿಸಲು ಕೆ.ಎಂ.ವಾಸುದೇವ ಅವರು ಸಾಕಷ್ಟು ಶ್ರಮಿಸಿದ್ದಾರೆ. ಅಲ್ಲದೆ, ಅದೇ ಶಾಲೆಗೆ ತಮ್ಮ ಮಗನಾದ ಬುದ್ದದಾಸ್ ಅವರನ್ನು ಸೇರಿಸಿದ್ದು, ಸರ್ಕಾರಿ ನೌಕರರಿಗೆ ಮಾದರಿಯಾಗಿದ್ದಾರೆ. ಶೀಳನೆರೆಯಲ್ಲಿರುವ ಸರ್ಕಾರಿ ಪ್ರಥಾಮಿಕ ಶಾಲೆಯಲ್ಲಿ ಮಕ್ಕಳ ಮನೆ ( ಎಲ್.ಕೆ.ಜಿ. & ಯು.ಕೆ.ಜಿ) ತರಗತಿಗಳನ್ನ ತೆರೆಯುವುದರಲ್ಲಿ ಯಶಸ್ವಿಯಾಗಿದ್ದಾರೆ.

ಅವರ ಸೇವೆಯನ್ನು ಸಹಿಸದ ಕೆಲವು ತಿಳಿಗೇಡಿ-ಭ್ರಷ್ಟ ವ್ಯಕ್ತಿಗಳು ವಾಸುದೇವ ಅವರ ವಿರುದ್ಧ ಪದೇ-ಪದೇ ಮೂಗರ್ಜಿಗಳನ್ನು ಬರೆದಿದ್ದಾರೆ. ಯಾರೋ ಒಬ್ಬರು ದುರುದ್ದೇಶಗಳಿಂದ ಬರೆದ ಅರ್ಜಿಗೆ ಸಂಬಂಧಿಸಿದಂತೆ ಕಾಲೇಜಿನಿಂದಾಗಲಿ, ವಿದ್ಯಾರ್ಥಿಗಳಿಂದಾಗಲಿ ಅಥವಾ ಗ್ರಾಮಸ್ಥರಿಂದಾಗಲಿ ಮಾಹಿತಿಗಳನ್ನು ಪಡೆಯದೆ, ಸಮರ್ಪಕ ವಿಚಾರಣೆ ನಡೆಸದೆ ಕ್ರಮ ವಹಿಸಿರುವುದು ನಮಗೆಲ್ಲ ನೋವುಂಟುಮಾಡಿದೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.

ಅಲ್ಲದೆ, ಇತ್ತೀಚಿಗೆ ಸರ್ಕಾರಿ ಗ್ರಾಮೀಣ ಕಾಲೇಜುಗಳು ವಿದ್ಯಾರ್ಥಿಗಳ ಕೊರತೆಯಿಂದ ಮುಚ್ಚುತ್ತಿರುವ ಈ ಸಂಧರ್ಭದಲ್ಲಿ ಕೆ.ಎಂ. ವಾಸುದೇವ ಅವರು ನಮ್ಮೂರಿನಿಂದ ವರ್ಗಾಗೊಂಡರೆ, ಉಪನ್ಯಾಸಕರಿಲ್ಲದ ಕಾರಣ ಈ ನಮ್ಮ ಕಾಲೇಜು ಕೂಡ ಮುಂದಿನ ವರ್ಷಗಳಲ್ಲಿ ಮುಚ್ಚುವ ಸ್ಥಿತಿಗೆ ತಲುಪುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇಂತಹ ಒಬ್ಬ ಉತ್ತಮ ಉಪನ್ಯಾಸಕ ವಾಸುದೇವ ಅವರನ್ನು ಯಾವುದೋ ಒಂದು ಅನಗತ್ಯ ಆರೋಪದ ಮೇಲೆ ವರ್ಗಾವಣೆ ಮಾಡಿರುವುದು ಸರ್ಕಾರದ ತಪ್ಪು ನಡೆಯಾಗಿದ್ದು, ಅವರ ವರ್ಗಾವಣೆಯನ್ನು ರದ್ದುಪಡಿಸಿ, ಶೀಳನೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿಯೇ ಸೇವೆಯನ್ನು ಮುಂದುವರೆಸಲು ಅನುವು ಮಾಡಿಕೊಡಬೇಕೆಂದು ನಾವು ಕೇಳಿಕೊಳ್ಳುತ್ತಿದ್ದೇವೆ ಎಂದು ಮಂಡ್ಯ ಜಿಲ್ಲಾಧಿಕಾರಿಗಳ ಮೂಲಕ ಸಚಿವರಿಗೆ ಮನವಿ ಸಲ್ಲಿಸಲಾಗಿದೆ.


ಇದನ್ನೂ ಓದಿ: 3 ತಿಂಗಳಿನಿಂದ ಒಂದು ದಿನವೂ ರಜೆಯಿಲ್ಲ: ಪ್ರತಿದಿನವೂ ರೈತ ಹೋರಾಟದ ಕ್ಷಣ ಕ್ಷಣದ ಮಾಹಿತಿ ನೀಡುತ್ತಿರುವ ಯುವಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...