Homeಕರ್ನಾಟಕಮಂಡ್ಯ ಸಾಹಿತ್ಯ ಸಮ್ಮೇಳನದಲ್ಲೂ ಬಿಜೆಪಿಯ ಸಿ.ಟಿ. ರವಿ ವಿರುದ್ಧ ಪ್ರತಿಭಟನೆ!

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲೂ ಬಿಜೆಪಿಯ ಸಿ.ಟಿ. ರವಿ ವಿರುದ್ಧ ಪ್ರತಿಭಟನೆ!

- Advertisement -
- Advertisement -

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಅಶ್ಲೀಲವಾಗಿ ನಿಂದಿಸಿದ ಬಿಜೆಪಿ ಎಮ್‌ಎಲ್‌ಸಿ ಸಿಟಿ ರವಿ ವಿರುದ್ಧ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲೂ ಆಕ್ರೋಶ ವ್ಯಕ್ತವಾಗಿದೆ. ಸಾಹಿತ್ಯ ಸಮ್ಮೇಳನದಲ್ಲಿ ಮುಖ್ಯ ಮಹಾದ್ವಾರದ ಬಳಿ ಶನಿವಾರ ಜಮಾಯಿಸಿದ ವಿವಿಧ ಮಹಿಳಾ ಸಂಘಟನೆಗಳ ಹಾಗೂ ಪ್ರಗತಿಪರ ಸಂಘಟನೆಗಳ ಮುಖಂಡರು ‘‘ಗೋ ಬ್ಯಾಕ್ ಸಿ.ಟಿ.ರವಿ’’ ಘೋಷಣೆ ಕೂಗಿ, ಮಹಿಳಾ ಪೀಡಕರಿಗೆ ಸಾಹಿತ್ಯ ಸಮ್ಮೇಳನದ ವೇದಿಕೆಯಲ್ಲಿ ಅವಕಾಶ ಕಲ್ಪಿಸಬಾರದು ಎಂದು ಆಗ್ರಹಿಸಿದ್ದಾರೆ. ಮಂಡ್ಯ ಸಾಹಿತ್ಯ

ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಎರಡನೇ ದಿನವಾದ ಶನಿವಾರ ಬೆಳಿಗ್ಗೆ 11 ಗಂಟೆಗೆ ಪ್ರಧಾನ ವೇದಿಕೆಯಲ್ಲಿ ನಡೆಯಲಿರುವ ‘‘ಸಾಹಿತ್ಯದಲ್ಲಿ ರಾಜಕೀಯ; ರಾಜಕೀಯದಲ್ಲಿ ಸಾಹಿತ್ಯ’’ ಗೋಷ್ಠಿಯಲ್ಲಿ ಸಿ.ಟಿ. ರವಿ ಮಾತನಾಡಬೇಕಿತ್ತು. ಆದರೆ  ಇದನ್ನು ವಿವಿಧ ಸಂಘಟನೆಗಳು ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ. ಮಂಡ್ಯ ಸಾಹಿತ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರತಿಭಟನಾಕಾರರು ಸಾಹಿತ್ಯ ಸಮ್ಮೇಳನದಲ್ಲಿ ಸಿ.ಟಿ. ರವಿ ಪ್ರಬಂಧ ಮಂಡಿಸಲು ಅವಕಾಶ ನೀಡಬಾರದು ಎಂದು ಒತ್ತಾಯಿಸಿದ್ದಾರೆ. ಗೋಷ್ಠಿಯ ಅಧ್ಯಕ್ಷತೆಯನ್ನು ಕಾನೂನು ಸಚಿವ ಎಚ್‌.ಕೆ. ಪಾಟೀಲ್‌ ವಹಿಸಲಿದ್ದು, ಬಿ.ಎಲ್. ಶಂಕರ್ ಆಶಯ ಭಾಷಣ ಮಾಡಲಿದ್ದರು. ಪ್ರತಿಭಟನೆ ಕಾವಿಗೆ ಮಧ್ಯಾಹ್ನವಾದರೂ ಸಿ.ಟಿ.ರವಿ ಗೋಷ್ಠಿಯಲ್ಲಿ  ಭಾಗವಹಿಸಿರಲಿಲ್ಲ ಎಂದು ವರದಿಯಾಗಿವೆ.

ಈ ಸಂದರ್ಭದಲ್ಲಿ ಕರ್ನಾಟಕ ಜನಶಕ್ತಿಯ ರಾಜ್ಯ ಕಾರ್ಯದರ್ಶಿ ಪೂರ್ಣಿಮಾ ಮಾತನಾಡಿ, “ಸಂವಿಧಾನ ವಿರೋಧಿ ಹೇಳಿಕೆಯನ್ನು ಸಮರ್ಥಿಸಿಕೊಂಡು ಅದನ್ನು ವಿರೋಧಿಸಿದ ಮಹಿಳೆಯನ್ನು ಸಿ.ಟಿ. ರವಿ ಅಶ್ಲೀಲ ಪದಗಳಿಂದ ನಿಂದಿಸಿದ್ದಾರೆ. ಅವರನ್ನು ಮಂಡ್ಯದ ಕನ್ನಡ ಸಾಹಿತ್ಯ ಸಮ್ಮೇಳನದ ಅತಿಥಿಯಾಗಿ ಭಾಷಣ ಮಾಡುವುದನ್ನು ಕೇಳಿಸಿಕೊಳ್ಳಲು ಮಂಡ್ಯದ ಜನ ಕಾದು ಕೂತಿಲ್ಲ. ಅವರ ಭಾಷಣ ಸಾಹಿತ್ಯಾಸಕ್ತರಿಗೆ ಅಗತ್ಯವಿಲ್ಲ’’ ಎಂದು ಕಿಡಿಕಾರಿದ್ದಾರೆ.

ಮಂಡ್ಯ ಹಲವು ದಾರ್ಶನಿಕರು ಮಹನೀಯರನ್ನು ಕಂಡ ಜಿಲ್ಲೆ ಕುವೆಂಪು ಅವರ ವೈಚಾರಿಕತೆ, ಸಾಮರಸ್ಯವನ್ನು ಮೈಗೂಡಿಸಿಕೊಂಡು ಸಮಸಮಾಜವನ್ನು ಕಟ್ಟಬೇಕೆಂಬ ಕನಸು ಹೊತ್ತು ಪ್ರೀತಿ ಮಾನವತೆಗಳನ್ನು ಹಂಚುತ್ತಾ ಹೆಸರಾಗಿರುವ ಜಿಲ್ಲೆ. ಅಂಬೇಡ್ಕರ್ ಎಂದರೆ ಈ ನೆಲದ ಉಸಿರು, ಅಸ್ತಿತ್ವ ಎಂದು ಧ್ವನಿ ಎತ್ತುವ ಜಿಲ್ಲೆಯಾಗಿದ್ದು, ಇಂತಹ ಜಾಗಕ್ಕೆ ಕೋಮುಕ್ರಿಮಿ, ಸಂವಿಧಾನ ವಿರೋಧಿ, ಅದರಲ್ಲೂ ಮಹಿಳಾ ವಿರೋಧಿ ಮಾತುಗಳನ್ನಾಡುತ್ತಿರುವ ರವಿಗೆ ಮಂಡ್ಯದ ಸಾಹಿತ್ಯ ಸಮ್ಮೇಳನಕ್ಕೆ ಬರಲು ಅವಕಾಶ ಕೊಡುವುದಿಲ್ಲ. ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲು ಮಂಡ್ಯದ ಸಂವಿಧಾನ ಪರ ಮತ್ತು ಮಹಿಳಾ ಪರ ಮನಸ್ಸುಗಳು ಅವಕಾಶ ಕೊಡುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೇರಳದಲ್ಲಿ ಸದ್ದು ಮಾಡಿದ ‘MEC-7’ : ಚರ್ಚೆಗೆ ಕಾರಣವಾದ ಸಿಪಿಐ(ಎಂ) ನಾಯಕನ ಹೇಳಿಕೆ

ಕೇರಳದಲ್ಲಿ ಸದ್ದು ಮಾಡಿದ ‘MEC-7’ : ಚರ್ಚೆಗೆ ಕಾರಣವಾದ ಸಿಪಿಐ(ಎಂ) ನಾಯಕನ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...