Homeಕರ್ನಾಟಕಮಂಡ್ಯ ಸಾಹಿತ್ಯ ಸಮ್ಮೇಳನದಲ್ಲೂ ಬಿಜೆಪಿಯ ಸಿ.ಟಿ. ರವಿ ವಿರುದ್ಧ ಪ್ರತಿಭಟನೆ!

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲೂ ಬಿಜೆಪಿಯ ಸಿ.ಟಿ. ರವಿ ವಿರುದ್ಧ ಪ್ರತಿಭಟನೆ!

- Advertisement -
- Advertisement -

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಅಶ್ಲೀಲವಾಗಿ ನಿಂದಿಸಿದ ಬಿಜೆಪಿ ಎಮ್‌ಎಲ್‌ಸಿ ಸಿಟಿ ರವಿ ವಿರುದ್ಧ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲೂ ಆಕ್ರೋಶ ವ್ಯಕ್ತವಾಗಿದೆ. ಸಾಹಿತ್ಯ ಸಮ್ಮೇಳನದಲ್ಲಿ ಮುಖ್ಯ ಮಹಾದ್ವಾರದ ಬಳಿ ಶನಿವಾರ ಜಮಾಯಿಸಿದ ವಿವಿಧ ಮಹಿಳಾ ಸಂಘಟನೆಗಳ ಹಾಗೂ ಪ್ರಗತಿಪರ ಸಂಘಟನೆಗಳ ಮುಖಂಡರು ‘‘ಗೋ ಬ್ಯಾಕ್ ಸಿ.ಟಿ.ರವಿ’’ ಘೋಷಣೆ ಕೂಗಿ, ಮಹಿಳಾ ಪೀಡಕರಿಗೆ ಸಾಹಿತ್ಯ ಸಮ್ಮೇಳನದ ವೇದಿಕೆಯಲ್ಲಿ ಅವಕಾಶ ಕಲ್ಪಿಸಬಾರದು ಎಂದು ಆಗ್ರಹಿಸಿದ್ದಾರೆ. ಮಂಡ್ಯ ಸಾಹಿತ್ಯ

ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಎರಡನೇ ದಿನವಾದ ಶನಿವಾರ ಬೆಳಿಗ್ಗೆ 11 ಗಂಟೆಗೆ ಪ್ರಧಾನ ವೇದಿಕೆಯಲ್ಲಿ ನಡೆಯಲಿರುವ ‘‘ಸಾಹಿತ್ಯದಲ್ಲಿ ರಾಜಕೀಯ; ರಾಜಕೀಯದಲ್ಲಿ ಸಾಹಿತ್ಯ’’ ಗೋಷ್ಠಿಯಲ್ಲಿ ಸಿ.ಟಿ. ರವಿ ಮಾತನಾಡಬೇಕಿತ್ತು. ಆದರೆ  ಇದನ್ನು ವಿವಿಧ ಸಂಘಟನೆಗಳು ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ. ಮಂಡ್ಯ ಸಾಹಿತ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರತಿಭಟನಾಕಾರರು ಸಾಹಿತ್ಯ ಸಮ್ಮೇಳನದಲ್ಲಿ ಸಿ.ಟಿ. ರವಿ ಪ್ರಬಂಧ ಮಂಡಿಸಲು ಅವಕಾಶ ನೀಡಬಾರದು ಎಂದು ಒತ್ತಾಯಿಸಿದ್ದಾರೆ. ಗೋಷ್ಠಿಯ ಅಧ್ಯಕ್ಷತೆಯನ್ನು ಕಾನೂನು ಸಚಿವ ಎಚ್‌.ಕೆ. ಪಾಟೀಲ್‌ ವಹಿಸಲಿದ್ದು, ಬಿ.ಎಲ್. ಶಂಕರ್ ಆಶಯ ಭಾಷಣ ಮಾಡಲಿದ್ದರು. ಪ್ರತಿಭಟನೆ ಕಾವಿಗೆ ಮಧ್ಯಾಹ್ನವಾದರೂ ಸಿ.ಟಿ.ರವಿ ಗೋಷ್ಠಿಯಲ್ಲಿ  ಭಾಗವಹಿಸಿರಲಿಲ್ಲ ಎಂದು ವರದಿಯಾಗಿವೆ.

ಈ ಸಂದರ್ಭದಲ್ಲಿ ಕರ್ನಾಟಕ ಜನಶಕ್ತಿಯ ರಾಜ್ಯ ಕಾರ್ಯದರ್ಶಿ ಪೂರ್ಣಿಮಾ ಮಾತನಾಡಿ, “ಸಂವಿಧಾನ ವಿರೋಧಿ ಹೇಳಿಕೆಯನ್ನು ಸಮರ್ಥಿಸಿಕೊಂಡು ಅದನ್ನು ವಿರೋಧಿಸಿದ ಮಹಿಳೆಯನ್ನು ಸಿ.ಟಿ. ರವಿ ಅಶ್ಲೀಲ ಪದಗಳಿಂದ ನಿಂದಿಸಿದ್ದಾರೆ. ಅವರನ್ನು ಮಂಡ್ಯದ ಕನ್ನಡ ಸಾಹಿತ್ಯ ಸಮ್ಮೇಳನದ ಅತಿಥಿಯಾಗಿ ಭಾಷಣ ಮಾಡುವುದನ್ನು ಕೇಳಿಸಿಕೊಳ್ಳಲು ಮಂಡ್ಯದ ಜನ ಕಾದು ಕೂತಿಲ್ಲ. ಅವರ ಭಾಷಣ ಸಾಹಿತ್ಯಾಸಕ್ತರಿಗೆ ಅಗತ್ಯವಿಲ್ಲ’’ ಎಂದು ಕಿಡಿಕಾರಿದ್ದಾರೆ.

ಮಂಡ್ಯ ಹಲವು ದಾರ್ಶನಿಕರು ಮಹನೀಯರನ್ನು ಕಂಡ ಜಿಲ್ಲೆ ಕುವೆಂಪು ಅವರ ವೈಚಾರಿಕತೆ, ಸಾಮರಸ್ಯವನ್ನು ಮೈಗೂಡಿಸಿಕೊಂಡು ಸಮಸಮಾಜವನ್ನು ಕಟ್ಟಬೇಕೆಂಬ ಕನಸು ಹೊತ್ತು ಪ್ರೀತಿ ಮಾನವತೆಗಳನ್ನು ಹಂಚುತ್ತಾ ಹೆಸರಾಗಿರುವ ಜಿಲ್ಲೆ. ಅಂಬೇಡ್ಕರ್ ಎಂದರೆ ಈ ನೆಲದ ಉಸಿರು, ಅಸ್ತಿತ್ವ ಎಂದು ಧ್ವನಿ ಎತ್ತುವ ಜಿಲ್ಲೆಯಾಗಿದ್ದು, ಇಂತಹ ಜಾಗಕ್ಕೆ ಕೋಮುಕ್ರಿಮಿ, ಸಂವಿಧಾನ ವಿರೋಧಿ, ಅದರಲ್ಲೂ ಮಹಿಳಾ ವಿರೋಧಿ ಮಾತುಗಳನ್ನಾಡುತ್ತಿರುವ ರವಿಗೆ ಮಂಡ್ಯದ ಸಾಹಿತ್ಯ ಸಮ್ಮೇಳನಕ್ಕೆ ಬರಲು ಅವಕಾಶ ಕೊಡುವುದಿಲ್ಲ. ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲು ಮಂಡ್ಯದ ಸಂವಿಧಾನ ಪರ ಮತ್ತು ಮಹಿಳಾ ಪರ ಮನಸ್ಸುಗಳು ಅವಕಾಶ ಕೊಡುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೇರಳದಲ್ಲಿ ಸದ್ದು ಮಾಡಿದ ‘MEC-7’ : ಚರ್ಚೆಗೆ ಕಾರಣವಾದ ಸಿಪಿಐ(ಎಂ) ನಾಯಕನ ಹೇಳಿಕೆ

ಕೇರಳದಲ್ಲಿ ಸದ್ದು ಮಾಡಿದ ‘MEC-7’ : ಚರ್ಚೆಗೆ ಕಾರಣವಾದ ಸಿಪಿಐ(ಎಂ) ನಾಯಕನ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...